Homeಮುಖಪುಟಉತ್ತರ ಪ್ರದೇಶ | 180 ವರ್ಷ ಹಳೆಯ ಮಸೀದಿಯನ್ನು ಭಾಗಶಃ ಕೆಡವಿದ ಜಿಲ್ಲಾಡಳಿತ

ಉತ್ತರ ಪ್ರದೇಶ | 180 ವರ್ಷ ಹಳೆಯ ಮಸೀದಿಯನ್ನು ಭಾಗಶಃ ಕೆಡವಿದ ಜಿಲ್ಲಾಡಳಿತ

- Advertisement -
- Advertisement -

ಉತ್ತರ ಪ್ರದೇಶದ ಫತೇಪುರ್‌ನಲ್ಲಿರುವ ಸುಮಾರು 180 ವರ್ಷ ಹಳೆಯ ನೂರಿ ಜಾಮಾ ಮಸೀದಿಯ ಒಂದು ಭಾಗವನ್ನು ಮಂಗಳವಾರ (ಡಿ.10) ಜಿಲ್ಲಾಡಳಿತ ಕೆಡವಿದೆ.

ಮಸೀದಿಯು ಪಕ್ಕದ ಬಂದಾ-ಫತೇಪುರ್ ರಸ್ತೆಯನ್ನು ಆಕ್ರಮಿಸಿಕೊಂಡಿತ್ತು. ಭಾಗಶಃ ಕೆಡವುವ ಮುನ್ನ ನೋಟಿಸ್ ನೀಡಲಾಗಿದೆ ಎಂದು ಅಧಿಕಾರಿಗಳು ಸಮರ್ಥಿಸಿಕೊಂಡಿದ್ದಾರೆ. ತೆರವು ಕಾರ್ಯಾಚರಣೆ ವಿರುದ್ದ ಮಸೀದಿ ಸಮಿತಿ ಅಲಹಾಬಾದ್ ಹೈಕೋರ್ಟ್ ಮೆಟ್ಟಿಲೇರಿದ ನಡುವೆಯೇ ಈ ಬೆಳವಣಿಗೆ ನಡೆದಿದೆ.

“ಮಸೀದಿ ಸಮಿತಿ ಹೈಕೋರ್ಟ್‌ಗೆ ಅರ್ಜಿ ಹಾಕಿದೆ. ಆದರೆ, ಇನ್ನೂ ವಿಚಾರಣೆಗೆ ಪಟ್ಟಿಯಾಗಿಲ್ಲ. ಕೆಡವಲಾಗಿರುವ ಮಸೀದಿ ಕಟ್ಟಡವನ್ನು ಕಳೆದ ಮೂರು ವರ್ಷಗಳಲ್ಲಿ ನಿರ್ಮಿಸಲಾಗಿದೆ. ಮಸೀದಿಯ ಮುಖ್ಯ ಕಟ್ಟಡ ಯಥಾಸ್ಥಿತಿಯಲ್ಲಿದೆ” ಎಂದು ಫತೇಪುರ್ ಜಿಲ್ಲಾ ಹೆಚ್ಚುವರಿ ಮ್ಯಾಜಿಸ್ಟ್ರೇಟ್ (ಹಣಕಾಸು ಮತ್ತು ಕಂದಾಯ) ಅವಿನಾಶ್ ತ್ರಿಪಾಠಿ ಹೇಳಿದ್ದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ರಸ್ತೆಯನ್ನು ಅತಿಕ್ರಮಿಸಿ ನಿರ್ಮಿಸಿರುವ ಕಟ್ಟಡಗಳನ್ನು ತೆರವುಗೊಳಿಸುವುದಾಗಿ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಕಳೆದ ಆಗಸ್ಟ್‌ನಲ್ಲಿ ವ್ಯಾಪಾರಿಗಳು, ಮನೆ ಮಾಲೀಕರು ಮತ್ತು ಮಸೀದಿ ಸಮಿತಿ ಸೇರಿದಂತೆ 139 ಜನರಿಗೆ ನೋಟಿಸ್ ನೀಡಿತ್ತು. ರಸ್ತೆಯನ್ನು ಅಭಿವೃದ್ದಿ ಮಾಡಿ, ಚರಂಡಿ ನಿರ್ಮಿಸಲು ಅತಿಕ್ರಮಣ ತೆರವು ಮಾಡಲಾಗಿದೆ” ಎಂದು ಅವಿನಾಶ್ ತ್ರಿಪಾಠಿ ತಿಳಿಸಿದ್ದಾರೆ.

“ಎಲ್ಲಾ ಕಟ್ಟಡಗಳ ಅತಿಕ್ರಮಣ ಭಾಗವನ್ನು ಗುರುತಿಸಿ ನೋಟಿಸ್ ನೀಡಲಾಗಿತ್ತು. ಕಳೆದ ಸೆಪ್ಟೆಂಬರ್‌ನಲ್ಲಿ ಅವುಗಳನ್ನು ತೆರವುಗೊಳಿಸಲಾಗಿದೆ. ಮಸೀದಿ ಸಮಿತಿ ಕೂಡ ಮಸೀದಿಗೆ ಹೊಂದಿಕೊಂಡಿರುವ ಅಂಗಡಿಗಳ ಅತಿಕ್ರಮಣ ಭಾಗವನ್ನು ತೆರವುಗೊಳಿಸಿದೆ. ಮಸೀದಿಯ ಅತಿಕ್ರಮಣ ಭಾಗವನ್ನು ತೆರವು ಮಾಡುವುದಾಗಿ ಸಮಿತಿ ಭರವಸೆ ನೀಡಿತ್ತು. ಅವರು ತೆರವು ಮಾಡಿಲ್ಲ. ಹಾಗಾಗಿ, ಜಿಲ್ಲಾಡಳಿತ ತೆರವು ಮಾಡಿದೆ” ಎಂದು ಅವಿನಾಶ್ ತ್ರಿಪಾಠಿ ಹೇಳಿದ್ದಾರೆ.

“ಮಸೀದಿಯ ಅತಿಕ್ರಮಣ ಭಾಗವನ್ನು ಕೆಡವಿದ ಸಂದರ್ಭ ಪಿಡಬ್ಲ್ಯುಡಿ ಪೊಲೀಸರ ಸಹಾಯ ಕೋರಿತ್ತು. ಕಾನೂನು ಸುವ್ಯವಸ್ಥೆ ಕಾಪಾಡಲು ಸ್ಥಳದಲ್ಲಿ ಪೊಲೀಸರನ್ನು ನೇಮಕ ಮಾಡಲಾಗಿತ್ತು. ಮಸೀದಿ ಕೆಡವುವ ಸಂದರ್ಭದಲ್ಲಿ ಯಾವುದೇ ಪ್ರತಿಭಟನೆ ನಡೆದಿಲ್ಲ” ಎಂದು ಅವಿನಾಶ್ ತ್ರಿಪಾಠಿ ಹೇಳಿದ್ದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವಿವರಿಸಿದೆ.

ಮಸೀದಿ ಸಮಿತಿ ಹೇಳಿದ್ದೇನು?

ತೆರವು ಕಾರ್ಯಾಚರಣೆಗೆ ತಡೆ ಕೋರಿ ಮಸೀದಿ ಸಮಿತಿಯು ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಹೈಕೋರ್ಟ್ ಈ ಪ್ರಕರಣದ ವಿಚಾರಣೆಯನ್ನು ಡಿಸೆಂಬರ್ 13ಕ್ಕೆ ನಿಗದಿಪಡಿಸಿತ್ತು. ಆದರೆ, ನ್ಯಾಯಾಲಯದ ವಿಚಾರಣೆಗೆ ಮೊದಲೇ ಮಸೀದಿಯನ್ನು ಭಾಗಶಃ ಕೆಡವಲಾಗಿದೆ. ಮಸೀದಿಯು 180 ವರ್ಷಗಳಷ್ಟು ಹಳೆಯದಾಗಿದೆ. ಹಿಂಬದಿಯ ಗೋಡೆಗಳನ್ನು ಕೆಡವುದರಿಂದ ಮುಖ್ಯ ಕಟ್ಟಡಕ್ಕೆ ಹಾನಿಯಾಗಲಿದೆ. ನ್ಯಾಯಾಲಯದ ವಿಚಾರಣೆಗಾಗಿ ಕಾಯುವಂತೆ ನಾವು ಮನವಿ ಮಾಡಿದ್ದೆವು, ಆದರೆ, ಜಿಲ್ಲಾಡಳಿತ ನಮ್ಮ ಮಾತನ್ನು ಕೇಳಲಿಲ್ಲ ಎಂದು ಮಸೀದಿಯ ಉಸ್ತುವಾರಿ ಹೇಳಿದ್ದಾರೆ.

ಇದನ್ನೂ ಓದಿ : ವಿಹೆಚ್‌ಪಿ ಕಾರ್ಯಕ್ರಮದಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ವಿವಾದಾತ್ಮಕ ಭಾಷಣ : ಮಾಹಿತಿ ಕೇಳಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...