Homeಮುಖಪುಟಉತ್ತರ ಪ್ರದೇಶ | 180 ವರ್ಷ ಹಳೆಯ ಮಸೀದಿಯನ್ನು ಭಾಗಶಃ ಕೆಡವಿದ ಜಿಲ್ಲಾಡಳಿತ

ಉತ್ತರ ಪ್ರದೇಶ | 180 ವರ್ಷ ಹಳೆಯ ಮಸೀದಿಯನ್ನು ಭಾಗಶಃ ಕೆಡವಿದ ಜಿಲ್ಲಾಡಳಿತ

- Advertisement -
- Advertisement -

ಉತ್ತರ ಪ್ರದೇಶದ ಫತೇಪುರ್‌ನಲ್ಲಿರುವ ಸುಮಾರು 180 ವರ್ಷ ಹಳೆಯ ನೂರಿ ಜಾಮಾ ಮಸೀದಿಯ ಒಂದು ಭಾಗವನ್ನು ಮಂಗಳವಾರ (ಡಿ.10) ಜಿಲ್ಲಾಡಳಿತ ಕೆಡವಿದೆ.

ಮಸೀದಿಯು ಪಕ್ಕದ ಬಂದಾ-ಫತೇಪುರ್ ರಸ್ತೆಯನ್ನು ಆಕ್ರಮಿಸಿಕೊಂಡಿತ್ತು. ಭಾಗಶಃ ಕೆಡವುವ ಮುನ್ನ ನೋಟಿಸ್ ನೀಡಲಾಗಿದೆ ಎಂದು ಅಧಿಕಾರಿಗಳು ಸಮರ್ಥಿಸಿಕೊಂಡಿದ್ದಾರೆ. ತೆರವು ಕಾರ್ಯಾಚರಣೆ ವಿರುದ್ದ ಮಸೀದಿ ಸಮಿತಿ ಅಲಹಾಬಾದ್ ಹೈಕೋರ್ಟ್ ಮೆಟ್ಟಿಲೇರಿದ ನಡುವೆಯೇ ಈ ಬೆಳವಣಿಗೆ ನಡೆದಿದೆ.

“ಮಸೀದಿ ಸಮಿತಿ ಹೈಕೋರ್ಟ್‌ಗೆ ಅರ್ಜಿ ಹಾಕಿದೆ. ಆದರೆ, ಇನ್ನೂ ವಿಚಾರಣೆಗೆ ಪಟ್ಟಿಯಾಗಿಲ್ಲ. ಕೆಡವಲಾಗಿರುವ ಮಸೀದಿ ಕಟ್ಟಡವನ್ನು ಕಳೆದ ಮೂರು ವರ್ಷಗಳಲ್ಲಿ ನಿರ್ಮಿಸಲಾಗಿದೆ. ಮಸೀದಿಯ ಮುಖ್ಯ ಕಟ್ಟಡ ಯಥಾಸ್ಥಿತಿಯಲ್ಲಿದೆ” ಎಂದು ಫತೇಪುರ್ ಜಿಲ್ಲಾ ಹೆಚ್ಚುವರಿ ಮ್ಯಾಜಿಸ್ಟ್ರೇಟ್ (ಹಣಕಾಸು ಮತ್ತು ಕಂದಾಯ) ಅವಿನಾಶ್ ತ್ರಿಪಾಠಿ ಹೇಳಿದ್ದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ರಸ್ತೆಯನ್ನು ಅತಿಕ್ರಮಿಸಿ ನಿರ್ಮಿಸಿರುವ ಕಟ್ಟಡಗಳನ್ನು ತೆರವುಗೊಳಿಸುವುದಾಗಿ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಕಳೆದ ಆಗಸ್ಟ್‌ನಲ್ಲಿ ವ್ಯಾಪಾರಿಗಳು, ಮನೆ ಮಾಲೀಕರು ಮತ್ತು ಮಸೀದಿ ಸಮಿತಿ ಸೇರಿದಂತೆ 139 ಜನರಿಗೆ ನೋಟಿಸ್ ನೀಡಿತ್ತು. ರಸ್ತೆಯನ್ನು ಅಭಿವೃದ್ದಿ ಮಾಡಿ, ಚರಂಡಿ ನಿರ್ಮಿಸಲು ಅತಿಕ್ರಮಣ ತೆರವು ಮಾಡಲಾಗಿದೆ” ಎಂದು ಅವಿನಾಶ್ ತ್ರಿಪಾಠಿ ತಿಳಿಸಿದ್ದಾರೆ.

“ಎಲ್ಲಾ ಕಟ್ಟಡಗಳ ಅತಿಕ್ರಮಣ ಭಾಗವನ್ನು ಗುರುತಿಸಿ ನೋಟಿಸ್ ನೀಡಲಾಗಿತ್ತು. ಕಳೆದ ಸೆಪ್ಟೆಂಬರ್‌ನಲ್ಲಿ ಅವುಗಳನ್ನು ತೆರವುಗೊಳಿಸಲಾಗಿದೆ. ಮಸೀದಿ ಸಮಿತಿ ಕೂಡ ಮಸೀದಿಗೆ ಹೊಂದಿಕೊಂಡಿರುವ ಅಂಗಡಿಗಳ ಅತಿಕ್ರಮಣ ಭಾಗವನ್ನು ತೆರವುಗೊಳಿಸಿದೆ. ಮಸೀದಿಯ ಅತಿಕ್ರಮಣ ಭಾಗವನ್ನು ತೆರವು ಮಾಡುವುದಾಗಿ ಸಮಿತಿ ಭರವಸೆ ನೀಡಿತ್ತು. ಅವರು ತೆರವು ಮಾಡಿಲ್ಲ. ಹಾಗಾಗಿ, ಜಿಲ್ಲಾಡಳಿತ ತೆರವು ಮಾಡಿದೆ” ಎಂದು ಅವಿನಾಶ್ ತ್ರಿಪಾಠಿ ಹೇಳಿದ್ದಾರೆ.

“ಮಸೀದಿಯ ಅತಿಕ್ರಮಣ ಭಾಗವನ್ನು ಕೆಡವಿದ ಸಂದರ್ಭ ಪಿಡಬ್ಲ್ಯುಡಿ ಪೊಲೀಸರ ಸಹಾಯ ಕೋರಿತ್ತು. ಕಾನೂನು ಸುವ್ಯವಸ್ಥೆ ಕಾಪಾಡಲು ಸ್ಥಳದಲ್ಲಿ ಪೊಲೀಸರನ್ನು ನೇಮಕ ಮಾಡಲಾಗಿತ್ತು. ಮಸೀದಿ ಕೆಡವುವ ಸಂದರ್ಭದಲ್ಲಿ ಯಾವುದೇ ಪ್ರತಿಭಟನೆ ನಡೆದಿಲ್ಲ” ಎಂದು ಅವಿನಾಶ್ ತ್ರಿಪಾಠಿ ಹೇಳಿದ್ದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವಿವರಿಸಿದೆ.

ಮಸೀದಿ ಸಮಿತಿ ಹೇಳಿದ್ದೇನು?

ತೆರವು ಕಾರ್ಯಾಚರಣೆಗೆ ತಡೆ ಕೋರಿ ಮಸೀದಿ ಸಮಿತಿಯು ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಹೈಕೋರ್ಟ್ ಈ ಪ್ರಕರಣದ ವಿಚಾರಣೆಯನ್ನು ಡಿಸೆಂಬರ್ 13ಕ್ಕೆ ನಿಗದಿಪಡಿಸಿತ್ತು. ಆದರೆ, ನ್ಯಾಯಾಲಯದ ವಿಚಾರಣೆಗೆ ಮೊದಲೇ ಮಸೀದಿಯನ್ನು ಭಾಗಶಃ ಕೆಡವಲಾಗಿದೆ. ಮಸೀದಿಯು 180 ವರ್ಷಗಳಷ್ಟು ಹಳೆಯದಾಗಿದೆ. ಹಿಂಬದಿಯ ಗೋಡೆಗಳನ್ನು ಕೆಡವುದರಿಂದ ಮುಖ್ಯ ಕಟ್ಟಡಕ್ಕೆ ಹಾನಿಯಾಗಲಿದೆ. ನ್ಯಾಯಾಲಯದ ವಿಚಾರಣೆಗಾಗಿ ಕಾಯುವಂತೆ ನಾವು ಮನವಿ ಮಾಡಿದ್ದೆವು, ಆದರೆ, ಜಿಲ್ಲಾಡಳಿತ ನಮ್ಮ ಮಾತನ್ನು ಕೇಳಲಿಲ್ಲ ಎಂದು ಮಸೀದಿಯ ಉಸ್ತುವಾರಿ ಹೇಳಿದ್ದಾರೆ.

ಇದನ್ನೂ ಓದಿ : ವಿಹೆಚ್‌ಪಿ ಕಾರ್ಯಕ್ರಮದಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ವಿವಾದಾತ್ಮಕ ಭಾಷಣ : ಮಾಹಿತಿ ಕೇಳಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...