Homeಮುಖಪುಟಮೋದಿ ನೀತಿಗಳನ್ನು ಟೀಕಿಸಿದ್ದ ನನ್ನ ಭಾಷಣದ ಭಾಗಗಳನ್ನು ರಾಜ್ಯಸಭೆ ಕಡತದಿಂದ ತೆಗೆಯಲಾಗಿದೆ : ಮಲ್ಲಿಕಾರ್ಜುನ ಖರ್ಗೆ

ಮೋದಿ ನೀತಿಗಳನ್ನು ಟೀಕಿಸಿದ್ದ ನನ್ನ ಭಾಷಣದ ಭಾಗಗಳನ್ನು ರಾಜ್ಯಸಭೆ ಕಡತದಿಂದ ತೆಗೆಯಲಾಗಿದೆ : ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ಫೆಬ್ರವರಿ 4ರಂದು ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯ ಸಂದರ್ಭದಲ್ಲಿ ತಾನು ಮಾಡಿದ್ದ ಭಾಷಣದ ಬಹುಪಾಲು ಅಂಶಗಳನ್ನು ಯಾವುದೇ ಸಮರ್ಪಕ ಕಾರಣ ನೀಡದೆ ರಾಜ್ಯಸಭೆಯ ಅಧಿಕೃತ ದಾಖಲೆಗಳಿಂದ ತೆಗೆದುಹಾಕಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದು ಸಂವಿಧಾನದ 105(1)ನೇ ವಿಧಿಯಡಿ ಸಂಸದರಿಗೆ ಖಾತರಿಪಡಿಸಿದ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿದೆ ಎಂದಿರುವ ಖರ್ಗೆ, ತೆಗೆದುಹಾಕಲಾದ ಭಾಗಗಳನ್ನು ಪುನಃಸ್ಥಾಪಿಸುವುದನ್ನು ಪರಿಗಣಿಸುವಂತೆ ರಾಜ್ಯಸಭೆಯ ಅಧ್ಯಕ್ಷ ಹಾಗೂ ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಅವರನ್ನು ಒತ್ತಾಯಿಸಿದ್ದಾರೆ. ದಾಖಲೆಯಿಂದ ತೆಗೆಯುವಂತಹ ಯಾವುದೇ ಸಂಸತ್ತಿನ ವಿರೋಧಿ ಹೇಳಿಕೆಗಳನ್ನು ನಾನು ನೀಡಿಲ್ಲ ಎಂದು ಅವರು ಒತ್ತಿ ಹೇಳಿದ್ದಾರೆ.

ಸಾರ್ವಜನಿಕವಾಗಿ ಲಭ್ಯವಿರುವ ಮಲ್ಲಿಕಾರ್ಜುನ ಖರ್ಗೆ ಅವರ ಫೆಬ್ರವರಿ 4ರ ಭಾಷಣದ ಅಧಿಕೃತ ಪ್ರತಿಗಳನ್ನು ಪರಿಶೀಲಿಸಿದಾಗ, ಹಲವು ಕಡೆಗಳಲ್ಲಿ ಭಾಷಣದ ಭಾಗಗಳನ್ನು “ದಾಖಲಾಗಿಲ್ಲ” (not recorded) ಎಂದು ಗುರುತಿಸಿರುವುದು ಕಂಡುಬಂದಿದೆ. ಈ ಬೆಳವಣಿಗೆಯ ಕುರಿತು ಆಡಳಿತ ಪಕ್ಷದ ಪರವಾಗಿ ಪ್ರತಿಕ್ರಿಯಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಖರ್ಗೆಯವರ ಆರೋಪಗಳನ್ನು ತೀವ್ರವಾಗಿ ಖಂಡಿಸಿದ್ದಾರೆ. ರಾಜ್ಯಸಭೆಯ ಅಧ್ಯಕ್ಷರ ತೀರ್ಮಾನವನ್ನು ಪ್ರಶ್ನಿಸುವ ಖರ್ಗೆಯವರ ನಡವಳಿಕೆಯು ಅವರಿಗೆ ತೋರುವ ಅಗೌರವ. ಇದು ಖರ್ಗೆಯವರ ಸ್ಥಾನಕ್ಕೆ ತಕ್ಕುದಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ವಿಷಯದಲ್ಲಿ ತನಗೆ ನ್ಯಾಯ ಸಿಗದಿದ್ದಲ್ಲಿ, ಅಧಿಕೃತವಾಗಿ “ದಾಖಲಾಗಿಲ್ಲ” ಎಂದು ಕೈಬಿಡಲಾದ ತನ್ನ ಭಾಷಣದ ಭಾಗಗಳನ್ನು ಸಾರ್ವಜನಿಕರ ಮುಂದೆ ಹಂಚಿಕೊಳ್ಳಲು ಅನಿವಾರ್ಯವಾಗಿ ಮುಂದಾಗಬೇಕಾಗುತ್ತದೆ ಎಂದು ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ ನೀಡಿದ್ದಾರೆ. ಸಂಸದೀಯ ಹಕ್ಕುಗಳ ರಕ್ಷಣೆಗಾಗಿ ಮತ್ತು ಜನರ ಮುಂದೆ ಸತ್ಯವನ್ನು ಇರಿಸಲು ಈ ಕ್ರಮ ಅನಿವಾರ್ಯ ಎಂದು ಅವರು ತಿಳಿಸಿದ್ದಾರೆ.

ಅಧ್ಯಕ್ಷ ರಾಧಾಕೃಷ್ಣನ್ ಅವರು ಈ ವಿಷಯವನ್ನು ಪರಿಶೀಲಿಸುವುದಾಗಿ ತಿಳಿಸಿದರಾದರೂ, ಅಧಿಕೃತ ದಾಖಲೆಗಳಿಂದ ಅಳಿಸಿಹಾಕಲಾದ ಯಾವುದೇ ಅಂಶಗಳನ್ನು ಸದನದ ಹೊರಗೆ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ರಾಧಾಕೃಷ್ಣನ್, “ನೀವು ಹಾಗೆ ಹೇಳಲು ಹೇಗೆ ಸಾಧ್ಯ? ಯಾವುದನ್ನು ದಾಖಲೆಗಳಿಂದ ತೆಗೆದುಹಾಕಲಾಗಿದೆಯೋ, ಅದನ್ನು ನೀವು ಹೊರಗೆ ಹೇಳುವಂತಿಲ್ಲ” ಎಂದು ಖರ್ಗೆಯವರ ನಿಲುವಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ರಾಜ್ಯಸಭೆಯ ಕಲಾಪವನ್ನು ಮಾರ್ಚ್ 9ರವರೆಗೆ ಮುಂದೂಡಲಾಗಿದೆ. ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಶೂನ್ಯ ವೇಳೆಯಲ್ಲಿ ಸಭೆ ಸೇರಿ, ನಿಗದಿತ ಪ್ರಶ್ನೋತ್ತರ ಅವಧಿಯ ನಂತರ ಮಧ್ಯಾಹ್ನ 1 ಗಂಟೆಗೆ ಕಲಾಪ ಮುಂದೂಡಲ್ಪಟ್ಟಿತು.

ಪ್ರಶ್ನೋತ್ತರ ಅವಧಿ ಆರಂಭವಾಗುವ ಕೆಲವೇ ಕ್ಷಣಗಳ ಮೊದಲು ತನ್ನ ಭಾಷಣ ತೆಗೆದು ಹಾಕಿರುವ ವಿಷಯವನ್ನು ಪ್ರಸ್ತಾಪಿಸಿದ ಎಐಸಿಸಿ ಅಧ್ಯಕ್ಷರೂ ಆಗಿರುವ ಖರ್ಗೆ, “ರಾಜ್ಯಸಭೆಯ ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡಲಾದ ನನ್ನ ಭಾಷಣದ ಅಧಿಕೃತ ಪ್ರತಿಯನ್ನು ಪರಿಶೀಲಿಸಿದಾಗ, ನನ್ನ ಭಾಷಣದ ಬಹುದೊಡ್ಡ ಭಾಗವನ್ನು ಯಾವುದೇ ಸರಿಯಾದ ಸಮರ್ಥನೆ ಅಥವಾ ಕಾರಣವಿಲ್ಲದೆ ತೆಗೆದುಹಾಕಲಾಗಿದೆ ಅಥವಾ ಅಳಿಸಿಹಾಕಲಾಗಿದೆ ಎಂಬುದು ಗಮನಕ್ಕೆ ಬಂದಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ನನ್ನ ಭಾಷಣದ ಯಾವ ಭಾಗಗಳನ್ನು ದಾಖಲೆಯಿಂದ ಕೈಬಿಡಲಾಗಿದೆಯೋ, ಅವುಗಳಲ್ಲಿ ಪ್ರಸ್ತುತ ಸರ್ಕಾರದ ಅವಧಿಯಲ್ಲಿ ಸಂಸತ್ತಿನ ಕಾರ್ಯವೈಖರಿಯ ಬಗ್ಗೆ ನಾನು ಸತ್ಯಾಧಾರಿತವಾಗಿ ನೀಡಿದ್ದ ಅಭಿಪ್ರಾಯಗಳು ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಕೆಲವು ನೀತಿಗಳ ಕುರಿತಾದ ಟೀಕೆಗಳಿದ್ದವು. ಈ ನೀತಿಗಳು ಭಾರತದ ಸಾರ್ವಜನಿಕರ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿವೆ ಎಂದು ನಾನು ನಂಬಿರುವುದರಿಂದ, ಅವುಗಳನ್ನು ವಿಮರ್ಶಿಸುವುದು ವಿಪಕ್ಷ ನಾಯಕನಾಗಿ ನನ್ನ ಕರ್ತವ್ಯವೂ ಆಗಿದೆ” ಎಂದು ಖರ್ಗೆ ಹೇಳಿದರು.

ಖರ್ಗೆ ಅವರ ಮಾತಿಗೆ ಪ್ರತಿಕ್ರಿಯಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರಾಜ್ಯಸಭೆಯ ಕಲಾಪಕ್ಕೆ ಸಂಬಂಧಿಸಿದ ನಿಯಮ 261 ಅನ್ನು ಉಲ್ಲೇಖಿಸಿದರು. ಭಾಷಣದ ಭಾಗಗಳನ್ನು ತೆಗೆದುಹಾಕುವ ವಿವೇಚನಾ ಅಧಿಕಾರ ಸಭಾಪತಿಗಳಿಗೆ ಇದೆ ಎಂದ ಅವರು, ವಿರೋಧ ಪಕ್ಷದ ನಾಯಕರು ಅಧ್ಯಕ್ಷರ ನಿರ್ಧಾರವನ್ನು ಪ್ರಶ್ನಿಸುವ ಮೂಲಕ ಅವರಿಗೆ ಅಗೌರವ ತೋರುತ್ತಿದ್ದಾರೆ ಎಂದರು.

ಖರ್ಗೆ ಅವರು ತಾನು ಯಾವುದೇ ಅಸಂಸದೀಯ ಅಥವಾ ಅಗೌರವದ ಮಾತುಗಳನ್ನಾಡಿಲ್ಲ ಎಂಬ ಸ್ವಯಂ ತೀರ್ಮಾನಕ್ಕೆ ಬಂದು, ಅಧ್ಯಕ್ಷರು ಆ ಮಾತುಗಳನ್ನು ತೆಗೆದುಹಾಕಿರುವ ಕ್ರಮವನ್ನು ಪ್ರಶ್ನಿಸುತ್ತಿದ್ದಾರೆ. ಪ್ರಧಾನಿಯನ್ನು ರಕ್ಷಿಸುವ ಉದ್ದೇಶದಿಂದ ಭಾಷಣದ ಭಾಗಗಳನ್ನು ಅಳಿಸಲಾಗಿದೆ ಎಂದು ಹೇಳುವುದು ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಸೂಕ್ತವಾದುದಲ್ಲ ಎಂದು ಸೀತಾರಾಮನ್ ಆಕ್ಷೇಪ ವ್ಯಕ್ತಪಡಿಸಿದರು.

ಸಭೆಯ ನಿಯಮ 261 ಅನ್ನು ಉಲ್ಲೇಖಿಸಿದ ಸೀತಾರಾಮನ್, ಚರ್ಚೆಯ ಸಂದರ್ಭದಲ್ಲಿ ಯಾವುದೇ ಸಚಿವರು ಅಥವಾ ಸದಸ್ಯರು ಬಳಸಿದ ಪದಗಳು ಮಾನಹಾನಿಕರ, ಅಸಭ್ಯ, ಅಸಂಸದೀಯ ಅಥವಾ ಘನತೆಗೆ ತಕ್ಕುದಲ್ಲದವು ಎಂದು ಸಭಾಪತಿಗಳು ಅಭಿಪ್ರಾಯಪಟ್ಟರೆ, ಅಂತಹ ಪದಗಳನ್ನು ಸದನದ ನಡಾವಳಿಗಳಿಂದ ತೆಗೆದುಹಾಕಲು ತಮ್ಮ ವಿವೇಚನಾ ಅಧಿಕಾರವನ್ನು ಬಳಸಿ ಆದೇಶಿಸಬಹುದು ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...