Homeಮುಖಪುಟಮೋದಿ ನೀತಿಗಳನ್ನು ಟೀಕಿಸಿದ್ದ ನನ್ನ ಭಾಷಣದ ಭಾಗಗಳನ್ನು ರಾಜ್ಯಸಭೆ ಕಡತದಿಂದ ತೆಗೆಯಲಾಗಿದೆ : ಮಲ್ಲಿಕಾರ್ಜುನ ಖರ್ಗೆ

ಮೋದಿ ನೀತಿಗಳನ್ನು ಟೀಕಿಸಿದ್ದ ನನ್ನ ಭಾಷಣದ ಭಾಗಗಳನ್ನು ರಾಜ್ಯಸಭೆ ಕಡತದಿಂದ ತೆಗೆಯಲಾಗಿದೆ : ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ಫೆಬ್ರವರಿ 4ರಂದು ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯ ಸಂದರ್ಭದಲ್ಲಿ ತಾನು ಮಾಡಿದ್ದ ಭಾಷಣದ ಬಹುಪಾಲು ಅಂಶಗಳನ್ನು ಯಾವುದೇ ಸಮರ್ಪಕ ಕಾರಣ ನೀಡದೆ ರಾಜ್ಯಸಭೆಯ ಅಧಿಕೃತ ದಾಖಲೆಗಳಿಂದ ತೆಗೆದುಹಾಕಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದು ಸಂವಿಧಾನದ 105(1)ನೇ ವಿಧಿಯಡಿ ಸಂಸದರಿಗೆ ಖಾತರಿಪಡಿಸಿದ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿದೆ ಎಂದಿರುವ ಖರ್ಗೆ, ತೆಗೆದುಹಾಕಲಾದ ಭಾಗಗಳನ್ನು ಪುನಃಸ್ಥಾಪಿಸುವುದನ್ನು ಪರಿಗಣಿಸುವಂತೆ ರಾಜ್ಯಸಭೆಯ ಅಧ್ಯಕ್ಷ ಹಾಗೂ ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಅವರನ್ನು ಒತ್ತಾಯಿಸಿದ್ದಾರೆ. ದಾಖಲೆಯಿಂದ ತೆಗೆಯುವಂತಹ ಯಾವುದೇ ಸಂಸತ್ತಿನ ವಿರೋಧಿ ಹೇಳಿಕೆಗಳನ್ನು ನಾನು ನೀಡಿಲ್ಲ ಎಂದು ಅವರು ಒತ್ತಿ ಹೇಳಿದ್ದಾರೆ.

ಸಾರ್ವಜನಿಕವಾಗಿ ಲಭ್ಯವಿರುವ ಮಲ್ಲಿಕಾರ್ಜುನ ಖರ್ಗೆ ಅವರ ಫೆಬ್ರವರಿ 4ರ ಭಾಷಣದ ಅಧಿಕೃತ ಪ್ರತಿಗಳನ್ನು ಪರಿಶೀಲಿಸಿದಾಗ, ಹಲವು ಕಡೆಗಳಲ್ಲಿ ಭಾಷಣದ ಭಾಗಗಳನ್ನು “ದಾಖಲಾಗಿಲ್ಲ” (not recorded) ಎಂದು ಗುರುತಿಸಿರುವುದು ಕಂಡುಬಂದಿದೆ. ಈ ಬೆಳವಣಿಗೆಯ ಕುರಿತು ಆಡಳಿತ ಪಕ್ಷದ ಪರವಾಗಿ ಪ್ರತಿಕ್ರಿಯಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಖರ್ಗೆಯವರ ಆರೋಪಗಳನ್ನು ತೀವ್ರವಾಗಿ ಖಂಡಿಸಿದ್ದಾರೆ. ರಾಜ್ಯಸಭೆಯ ಅಧ್ಯಕ್ಷರ ತೀರ್ಮಾನವನ್ನು ಪ್ರಶ್ನಿಸುವ ಖರ್ಗೆಯವರ ನಡವಳಿಕೆಯು ಅವರಿಗೆ ತೋರುವ ಅಗೌರವ. ಇದು ಖರ್ಗೆಯವರ ಸ್ಥಾನಕ್ಕೆ ತಕ್ಕುದಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ವಿಷಯದಲ್ಲಿ ತನಗೆ ನ್ಯಾಯ ಸಿಗದಿದ್ದಲ್ಲಿ, ಅಧಿಕೃತವಾಗಿ “ದಾಖಲಾಗಿಲ್ಲ” ಎಂದು ಕೈಬಿಡಲಾದ ತನ್ನ ಭಾಷಣದ ಭಾಗಗಳನ್ನು ಸಾರ್ವಜನಿಕರ ಮುಂದೆ ಹಂಚಿಕೊಳ್ಳಲು ಅನಿವಾರ್ಯವಾಗಿ ಮುಂದಾಗಬೇಕಾಗುತ್ತದೆ ಎಂದು ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ ನೀಡಿದ್ದಾರೆ. ಸಂಸದೀಯ ಹಕ್ಕುಗಳ ರಕ್ಷಣೆಗಾಗಿ ಮತ್ತು ಜನರ ಮುಂದೆ ಸತ್ಯವನ್ನು ಇರಿಸಲು ಈ ಕ್ರಮ ಅನಿವಾರ್ಯ ಎಂದು ಅವರು ತಿಳಿಸಿದ್ದಾರೆ.

ಅಧ್ಯಕ್ಷ ರಾಧಾಕೃಷ್ಣನ್ ಅವರು ಈ ವಿಷಯವನ್ನು ಪರಿಶೀಲಿಸುವುದಾಗಿ ತಿಳಿಸಿದರಾದರೂ, ಅಧಿಕೃತ ದಾಖಲೆಗಳಿಂದ ಅಳಿಸಿಹಾಕಲಾದ ಯಾವುದೇ ಅಂಶಗಳನ್ನು ಸದನದ ಹೊರಗೆ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ರಾಧಾಕೃಷ್ಣನ್, “ನೀವು ಹಾಗೆ ಹೇಳಲು ಹೇಗೆ ಸಾಧ್ಯ? ಯಾವುದನ್ನು ದಾಖಲೆಗಳಿಂದ ತೆಗೆದುಹಾಕಲಾಗಿದೆಯೋ, ಅದನ್ನು ನೀವು ಹೊರಗೆ ಹೇಳುವಂತಿಲ್ಲ” ಎಂದು ಖರ್ಗೆಯವರ ನಿಲುವಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ರಾಜ್ಯಸಭೆಯ ಕಲಾಪವನ್ನು ಮಾರ್ಚ್ 9ರವರೆಗೆ ಮುಂದೂಡಲಾಗಿದೆ. ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಶೂನ್ಯ ವೇಳೆಯಲ್ಲಿ ಸಭೆ ಸೇರಿ, ನಿಗದಿತ ಪ್ರಶ್ನೋತ್ತರ ಅವಧಿಯ ನಂತರ ಮಧ್ಯಾಹ್ನ 1 ಗಂಟೆಗೆ ಕಲಾಪ ಮುಂದೂಡಲ್ಪಟ್ಟಿತು.

ಪ್ರಶ್ನೋತ್ತರ ಅವಧಿ ಆರಂಭವಾಗುವ ಕೆಲವೇ ಕ್ಷಣಗಳ ಮೊದಲು ತನ್ನ ಭಾಷಣ ತೆಗೆದು ಹಾಕಿರುವ ವಿಷಯವನ್ನು ಪ್ರಸ್ತಾಪಿಸಿದ ಎಐಸಿಸಿ ಅಧ್ಯಕ್ಷರೂ ಆಗಿರುವ ಖರ್ಗೆ, “ರಾಜ್ಯಸಭೆಯ ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡಲಾದ ನನ್ನ ಭಾಷಣದ ಅಧಿಕೃತ ಪ್ರತಿಯನ್ನು ಪರಿಶೀಲಿಸಿದಾಗ, ನನ್ನ ಭಾಷಣದ ಬಹುದೊಡ್ಡ ಭಾಗವನ್ನು ಯಾವುದೇ ಸರಿಯಾದ ಸಮರ್ಥನೆ ಅಥವಾ ಕಾರಣವಿಲ್ಲದೆ ತೆಗೆದುಹಾಕಲಾಗಿದೆ ಅಥವಾ ಅಳಿಸಿಹಾಕಲಾಗಿದೆ ಎಂಬುದು ಗಮನಕ್ಕೆ ಬಂದಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ನನ್ನ ಭಾಷಣದ ಯಾವ ಭಾಗಗಳನ್ನು ದಾಖಲೆಯಿಂದ ಕೈಬಿಡಲಾಗಿದೆಯೋ, ಅವುಗಳಲ್ಲಿ ಪ್ರಸ್ತುತ ಸರ್ಕಾರದ ಅವಧಿಯಲ್ಲಿ ಸಂಸತ್ತಿನ ಕಾರ್ಯವೈಖರಿಯ ಬಗ್ಗೆ ನಾನು ಸತ್ಯಾಧಾರಿತವಾಗಿ ನೀಡಿದ್ದ ಅಭಿಪ್ರಾಯಗಳು ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಕೆಲವು ನೀತಿಗಳ ಕುರಿತಾದ ಟೀಕೆಗಳಿದ್ದವು. ಈ ನೀತಿಗಳು ಭಾರತದ ಸಾರ್ವಜನಿಕರ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿವೆ ಎಂದು ನಾನು ನಂಬಿರುವುದರಿಂದ, ಅವುಗಳನ್ನು ವಿಮರ್ಶಿಸುವುದು ವಿಪಕ್ಷ ನಾಯಕನಾಗಿ ನನ್ನ ಕರ್ತವ್ಯವೂ ಆಗಿದೆ” ಎಂದು ಖರ್ಗೆ ಹೇಳಿದರು.

ಖರ್ಗೆ ಅವರ ಮಾತಿಗೆ ಪ್ರತಿಕ್ರಿಯಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರಾಜ್ಯಸಭೆಯ ಕಲಾಪಕ್ಕೆ ಸಂಬಂಧಿಸಿದ ನಿಯಮ 261 ಅನ್ನು ಉಲ್ಲೇಖಿಸಿದರು. ಭಾಷಣದ ಭಾಗಗಳನ್ನು ತೆಗೆದುಹಾಕುವ ವಿವೇಚನಾ ಅಧಿಕಾರ ಸಭಾಪತಿಗಳಿಗೆ ಇದೆ ಎಂದ ಅವರು, ವಿರೋಧ ಪಕ್ಷದ ನಾಯಕರು ಅಧ್ಯಕ್ಷರ ನಿರ್ಧಾರವನ್ನು ಪ್ರಶ್ನಿಸುವ ಮೂಲಕ ಅವರಿಗೆ ಅಗೌರವ ತೋರುತ್ತಿದ್ದಾರೆ ಎಂದರು.

ಖರ್ಗೆ ಅವರು ತಾನು ಯಾವುದೇ ಅಸಂಸದೀಯ ಅಥವಾ ಅಗೌರವದ ಮಾತುಗಳನ್ನಾಡಿಲ್ಲ ಎಂಬ ಸ್ವಯಂ ತೀರ್ಮಾನಕ್ಕೆ ಬಂದು, ಅಧ್ಯಕ್ಷರು ಆ ಮಾತುಗಳನ್ನು ತೆಗೆದುಹಾಕಿರುವ ಕ್ರಮವನ್ನು ಪ್ರಶ್ನಿಸುತ್ತಿದ್ದಾರೆ. ಪ್ರಧಾನಿಯನ್ನು ರಕ್ಷಿಸುವ ಉದ್ದೇಶದಿಂದ ಭಾಷಣದ ಭಾಗಗಳನ್ನು ಅಳಿಸಲಾಗಿದೆ ಎಂದು ಹೇಳುವುದು ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಸೂಕ್ತವಾದುದಲ್ಲ ಎಂದು ಸೀತಾರಾಮನ್ ಆಕ್ಷೇಪ ವ್ಯಕ್ತಪಡಿಸಿದರು.

ಸಭೆಯ ನಿಯಮ 261 ಅನ್ನು ಉಲ್ಲೇಖಿಸಿದ ಸೀತಾರಾಮನ್, ಚರ್ಚೆಯ ಸಂದರ್ಭದಲ್ಲಿ ಯಾವುದೇ ಸಚಿವರು ಅಥವಾ ಸದಸ್ಯರು ಬಳಸಿದ ಪದಗಳು ಮಾನಹಾನಿಕರ, ಅಸಭ್ಯ, ಅಸಂಸದೀಯ ಅಥವಾ ಘನತೆಗೆ ತಕ್ಕುದಲ್ಲದವು ಎಂದು ಸಭಾಪತಿಗಳು ಅಭಿಪ್ರಾಯಪಟ್ಟರೆ, ಅಂತಹ ಪದಗಳನ್ನು ಸದನದ ನಡಾವಳಿಗಳಿಂದ ತೆಗೆದುಹಾಕಲು ತಮ್ಮ ವಿವೇಚನಾ ಅಧಿಕಾರವನ್ನು ಬಳಸಿ ಆದೇಶಿಸಬಹುದು ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...