Homeಮುಖಪುಟಮೋದಿ ನೀತಿಗಳನ್ನು ಟೀಕಿಸಿದ್ದ ನನ್ನ ಭಾಷಣದ ಭಾಗಗಳನ್ನು ರಾಜ್ಯಸಭೆ ಕಡತದಿಂದ ತೆಗೆಯಲಾಗಿದೆ : ಮಲ್ಲಿಕಾರ್ಜುನ ಖರ್ಗೆ

ಮೋದಿ ನೀತಿಗಳನ್ನು ಟೀಕಿಸಿದ್ದ ನನ್ನ ಭಾಷಣದ ಭಾಗಗಳನ್ನು ರಾಜ್ಯಸಭೆ ಕಡತದಿಂದ ತೆಗೆಯಲಾಗಿದೆ : ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ಫೆಬ್ರವರಿ 4ರಂದು ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯ ಸಂದರ್ಭದಲ್ಲಿ ತಾನು ಮಾಡಿದ್ದ ಭಾಷಣದ ಬಹುಪಾಲು ಅಂಶಗಳನ್ನು ಯಾವುದೇ ಸಮರ್ಪಕ ಕಾರಣ ನೀಡದೆ ರಾಜ್ಯಸಭೆಯ ಅಧಿಕೃತ ದಾಖಲೆಗಳಿಂದ ತೆಗೆದುಹಾಕಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದು ಸಂವಿಧಾನದ 105(1)ನೇ ವಿಧಿಯಡಿ ಸಂಸದರಿಗೆ ಖಾತರಿಪಡಿಸಿದ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿದೆ ಎಂದಿರುವ ಖರ್ಗೆ, ತೆಗೆದುಹಾಕಲಾದ ಭಾಗಗಳನ್ನು ಪುನಃಸ್ಥಾಪಿಸುವುದನ್ನು ಪರಿಗಣಿಸುವಂತೆ ರಾಜ್ಯಸಭೆಯ ಅಧ್ಯಕ್ಷ ಹಾಗೂ ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಅವರನ್ನು ಒತ್ತಾಯಿಸಿದ್ದಾರೆ. ದಾಖಲೆಯಿಂದ ತೆಗೆಯುವಂತಹ ಯಾವುದೇ ಸಂಸತ್ತಿನ ವಿರೋಧಿ ಹೇಳಿಕೆಗಳನ್ನು ನಾನು ನೀಡಿಲ್ಲ ಎಂದು ಅವರು ಒತ್ತಿ ಹೇಳಿದ್ದಾರೆ.

ಸಾರ್ವಜನಿಕವಾಗಿ ಲಭ್ಯವಿರುವ ಮಲ್ಲಿಕಾರ್ಜುನ ಖರ್ಗೆ ಅವರ ಫೆಬ್ರವರಿ 4ರ ಭಾಷಣದ ಅಧಿಕೃತ ಪ್ರತಿಗಳನ್ನು ಪರಿಶೀಲಿಸಿದಾಗ, ಹಲವು ಕಡೆಗಳಲ್ಲಿ ಭಾಷಣದ ಭಾಗಗಳನ್ನು “ದಾಖಲಾಗಿಲ್ಲ” (not recorded) ಎಂದು ಗುರುತಿಸಿರುವುದು ಕಂಡುಬಂದಿದೆ. ಈ ಬೆಳವಣಿಗೆಯ ಕುರಿತು ಆಡಳಿತ ಪಕ್ಷದ ಪರವಾಗಿ ಪ್ರತಿಕ್ರಿಯಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಖರ್ಗೆಯವರ ಆರೋಪಗಳನ್ನು ತೀವ್ರವಾಗಿ ಖಂಡಿಸಿದ್ದಾರೆ. ರಾಜ್ಯಸಭೆಯ ಅಧ್ಯಕ್ಷರ ತೀರ್ಮಾನವನ್ನು ಪ್ರಶ್ನಿಸುವ ಖರ್ಗೆಯವರ ನಡವಳಿಕೆಯು ಅವರಿಗೆ ತೋರುವ ಅಗೌರವ. ಇದು ಖರ್ಗೆಯವರ ಸ್ಥಾನಕ್ಕೆ ತಕ್ಕುದಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ವಿಷಯದಲ್ಲಿ ತನಗೆ ನ್ಯಾಯ ಸಿಗದಿದ್ದಲ್ಲಿ, ಅಧಿಕೃತವಾಗಿ “ದಾಖಲಾಗಿಲ್ಲ” ಎಂದು ಕೈಬಿಡಲಾದ ತನ್ನ ಭಾಷಣದ ಭಾಗಗಳನ್ನು ಸಾರ್ವಜನಿಕರ ಮುಂದೆ ಹಂಚಿಕೊಳ್ಳಲು ಅನಿವಾರ್ಯವಾಗಿ ಮುಂದಾಗಬೇಕಾಗುತ್ತದೆ ಎಂದು ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ ನೀಡಿದ್ದಾರೆ. ಸಂಸದೀಯ ಹಕ್ಕುಗಳ ರಕ್ಷಣೆಗಾಗಿ ಮತ್ತು ಜನರ ಮುಂದೆ ಸತ್ಯವನ್ನು ಇರಿಸಲು ಈ ಕ್ರಮ ಅನಿವಾರ್ಯ ಎಂದು ಅವರು ತಿಳಿಸಿದ್ದಾರೆ.

ಅಧ್ಯಕ್ಷ ರಾಧಾಕೃಷ್ಣನ್ ಅವರು ಈ ವಿಷಯವನ್ನು ಪರಿಶೀಲಿಸುವುದಾಗಿ ತಿಳಿಸಿದರಾದರೂ, ಅಧಿಕೃತ ದಾಖಲೆಗಳಿಂದ ಅಳಿಸಿಹಾಕಲಾದ ಯಾವುದೇ ಅಂಶಗಳನ್ನು ಸದನದ ಹೊರಗೆ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ರಾಧಾಕೃಷ್ಣನ್, “ನೀವು ಹಾಗೆ ಹೇಳಲು ಹೇಗೆ ಸಾಧ್ಯ? ಯಾವುದನ್ನು ದಾಖಲೆಗಳಿಂದ ತೆಗೆದುಹಾಕಲಾಗಿದೆಯೋ, ಅದನ್ನು ನೀವು ಹೊರಗೆ ಹೇಳುವಂತಿಲ್ಲ” ಎಂದು ಖರ್ಗೆಯವರ ನಿಲುವಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ರಾಜ್ಯಸಭೆಯ ಕಲಾಪವನ್ನು ಮಾರ್ಚ್ 9ರವರೆಗೆ ಮುಂದೂಡಲಾಗಿದೆ. ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಶೂನ್ಯ ವೇಳೆಯಲ್ಲಿ ಸಭೆ ಸೇರಿ, ನಿಗದಿತ ಪ್ರಶ್ನೋತ್ತರ ಅವಧಿಯ ನಂತರ ಮಧ್ಯಾಹ್ನ 1 ಗಂಟೆಗೆ ಕಲಾಪ ಮುಂದೂಡಲ್ಪಟ್ಟಿತು.

ಪ್ರಶ್ನೋತ್ತರ ಅವಧಿ ಆರಂಭವಾಗುವ ಕೆಲವೇ ಕ್ಷಣಗಳ ಮೊದಲು ತನ್ನ ಭಾಷಣ ತೆಗೆದು ಹಾಕಿರುವ ವಿಷಯವನ್ನು ಪ್ರಸ್ತಾಪಿಸಿದ ಎಐಸಿಸಿ ಅಧ್ಯಕ್ಷರೂ ಆಗಿರುವ ಖರ್ಗೆ, “ರಾಜ್ಯಸಭೆಯ ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡಲಾದ ನನ್ನ ಭಾಷಣದ ಅಧಿಕೃತ ಪ್ರತಿಯನ್ನು ಪರಿಶೀಲಿಸಿದಾಗ, ನನ್ನ ಭಾಷಣದ ಬಹುದೊಡ್ಡ ಭಾಗವನ್ನು ಯಾವುದೇ ಸರಿಯಾದ ಸಮರ್ಥನೆ ಅಥವಾ ಕಾರಣವಿಲ್ಲದೆ ತೆಗೆದುಹಾಕಲಾಗಿದೆ ಅಥವಾ ಅಳಿಸಿಹಾಕಲಾಗಿದೆ ಎಂಬುದು ಗಮನಕ್ಕೆ ಬಂದಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ನನ್ನ ಭಾಷಣದ ಯಾವ ಭಾಗಗಳನ್ನು ದಾಖಲೆಯಿಂದ ಕೈಬಿಡಲಾಗಿದೆಯೋ, ಅವುಗಳಲ್ಲಿ ಪ್ರಸ್ತುತ ಸರ್ಕಾರದ ಅವಧಿಯಲ್ಲಿ ಸಂಸತ್ತಿನ ಕಾರ್ಯವೈಖರಿಯ ಬಗ್ಗೆ ನಾನು ಸತ್ಯಾಧಾರಿತವಾಗಿ ನೀಡಿದ್ದ ಅಭಿಪ್ರಾಯಗಳು ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಕೆಲವು ನೀತಿಗಳ ಕುರಿತಾದ ಟೀಕೆಗಳಿದ್ದವು. ಈ ನೀತಿಗಳು ಭಾರತದ ಸಾರ್ವಜನಿಕರ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿವೆ ಎಂದು ನಾನು ನಂಬಿರುವುದರಿಂದ, ಅವುಗಳನ್ನು ವಿಮರ್ಶಿಸುವುದು ವಿಪಕ್ಷ ನಾಯಕನಾಗಿ ನನ್ನ ಕರ್ತವ್ಯವೂ ಆಗಿದೆ” ಎಂದು ಖರ್ಗೆ ಹೇಳಿದರು.

ಖರ್ಗೆ ಅವರ ಮಾತಿಗೆ ಪ್ರತಿಕ್ರಿಯಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರಾಜ್ಯಸಭೆಯ ಕಲಾಪಕ್ಕೆ ಸಂಬಂಧಿಸಿದ ನಿಯಮ 261 ಅನ್ನು ಉಲ್ಲೇಖಿಸಿದರು. ಭಾಷಣದ ಭಾಗಗಳನ್ನು ತೆಗೆದುಹಾಕುವ ವಿವೇಚನಾ ಅಧಿಕಾರ ಸಭಾಪತಿಗಳಿಗೆ ಇದೆ ಎಂದ ಅವರು, ವಿರೋಧ ಪಕ್ಷದ ನಾಯಕರು ಅಧ್ಯಕ್ಷರ ನಿರ್ಧಾರವನ್ನು ಪ್ರಶ್ನಿಸುವ ಮೂಲಕ ಅವರಿಗೆ ಅಗೌರವ ತೋರುತ್ತಿದ್ದಾರೆ ಎಂದರು.

ಖರ್ಗೆ ಅವರು ತಾನು ಯಾವುದೇ ಅಸಂಸದೀಯ ಅಥವಾ ಅಗೌರವದ ಮಾತುಗಳನ್ನಾಡಿಲ್ಲ ಎಂಬ ಸ್ವಯಂ ತೀರ್ಮಾನಕ್ಕೆ ಬಂದು, ಅಧ್ಯಕ್ಷರು ಆ ಮಾತುಗಳನ್ನು ತೆಗೆದುಹಾಕಿರುವ ಕ್ರಮವನ್ನು ಪ್ರಶ್ನಿಸುತ್ತಿದ್ದಾರೆ. ಪ್ರಧಾನಿಯನ್ನು ರಕ್ಷಿಸುವ ಉದ್ದೇಶದಿಂದ ಭಾಷಣದ ಭಾಗಗಳನ್ನು ಅಳಿಸಲಾಗಿದೆ ಎಂದು ಹೇಳುವುದು ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಸೂಕ್ತವಾದುದಲ್ಲ ಎಂದು ಸೀತಾರಾಮನ್ ಆಕ್ಷೇಪ ವ್ಯಕ್ತಪಡಿಸಿದರು.

ಸಭೆಯ ನಿಯಮ 261 ಅನ್ನು ಉಲ್ಲೇಖಿಸಿದ ಸೀತಾರಾಮನ್, ಚರ್ಚೆಯ ಸಂದರ್ಭದಲ್ಲಿ ಯಾವುದೇ ಸಚಿವರು ಅಥವಾ ಸದಸ್ಯರು ಬಳಸಿದ ಪದಗಳು ಮಾನಹಾನಿಕರ, ಅಸಭ್ಯ, ಅಸಂಸದೀಯ ಅಥವಾ ಘನತೆಗೆ ತಕ್ಕುದಲ್ಲದವು ಎಂದು ಸಭಾಪತಿಗಳು ಅಭಿಪ್ರಾಯಪಟ್ಟರೆ, ಅಂತಹ ಪದಗಳನ್ನು ಸದನದ ನಡಾವಳಿಗಳಿಂದ ತೆಗೆದುಹಾಕಲು ತಮ್ಮ ವಿವೇಚನಾ ಅಧಿಕಾರವನ್ನು ಬಳಸಿ ಆದೇಶಿಸಬಹುದು ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...