Homeಕರ್ನಾಟಕ7ನೇ ವೇತನ ಆಯೋಗದ ವರದಿ ಬಂದ ನಂತರ ಸಕಾರಾತ್ಮಕ ತೀರ್ಮಾನ: ಸಿಎಂ ಸಿದ್ದರಾಮಯ್ಯ

7ನೇ ವೇತನ ಆಯೋಗದ ವರದಿ ಬಂದ ನಂತರ ಸಕಾರಾತ್ಮಕ ತೀರ್ಮಾನ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಪಂಚ ಗ್ಯಾರಂಟಿಗಳನ್ನು ಜಾರಿ ಮಾಡುವ ಆರ್ಥಿಕ ಹೊರೆಯ ನಡುವೆಯೂ 7ನೇ ವೇತನ ಆಯೋಗದ ಅಂತಿಮ ವರದಿ ಬಂದ ನಂತರ ಸರ್ಕಾರಿ ನೌಕರರ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿ ತೀರ್ಮಾನವನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಸರ್ಕಾರಿ ನೌಕರರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ನಿರ್ಧರಿಸಿದಂತೆ ತುಟ್ಟಿ ಭತ್ಯೆಯನ್ನು ಯಾವುದೇ ವಿಳಂಬವಿಲ್ಲದೇ ರಾಜ್ಯದಲ್ಲಿ ನೀಡಲಾಗುತ್ತಿದೆ. ಎನ್‌ಪಿಎಸ್ ತೆಗೆದು ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿ ಮಾಡುವ ಬಗ್ಗೆಯೂ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಸರ್ಕಾರಿ ನೌಕರರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿ ಮಾಡುವ ಬಗ್ಗೆಯೂ ಶೀಘ್ರದಲ್ಲಿ ತೀರ್ಮಾನಿಸಲಾಗುವುದು ಎಂದರು. ಮುಖ್ಯಮಂತ್ರಿಗಳು ಸರ್ಕಾರ ಮತ್ತು ಜನರ ನಡುವೆ ಸೇತುವೆಯಾಗಿ ಜವಾಬ್ದಾರಿಯುತ ಕೆಲಸವನ್ನು ಪರಿಣಾಮಕಾರಿಯಾಗಿ ಮಾಡುತ್ತಿರುವ ಸರ್ಕಾರಿ ನೌಕರರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ರಾಜ್ಯದ ಅಭಿವೃದ್ಧಿಯಲ್ಲಿ ಭಾಗಿಯಾಗಬೇಕು

ಕರ್ನಾಟಕದಲ್ಲಿ 7.50 ಲಕ್ಷ ಸರ್ಕಾರಿ ನೌಕರರಿದ್ದಾರೆ. ಅದರಲ್ಲಿ 5.90 ಲಕ್ಷ ಜನ ಹಾಲಿ ಕೆಲಸ ಮಾಡುತ್ತಿದ್ದಾರೆ. 2.50 ಲಕ್ಷ ಜನರನ್ನು ಭರ್ತಿ ಮಾಡಲು ಸಾಧ್ಯವಾಗಿಲ್ಲ. ಕರ್ನಾಟಕದ ಜನಸಂಖ್ಯೆ 7 ಕೋಟಿ ಇದೆ. 7.50 ಲಕ್ಷ ಮಂಜೂರಾಗಿರುವ ಹುದ್ದೆಗಳಿವೆ. 7 ಲಕ್ಷ ಜನ 7 ಕೋಟಿ ಜನರ ಕಷ್ಟ ಸುಖಗಳಲ್ಲಿ ಭಾಗಿಯಾಗುವ, ರಾಜ್ಯದ ಅಭಿವೃದ್ಧಿಯಲ್ಲಿ ಭಾಗಿಯಾಗುವ ಪ್ರಾಮಾಣಿಕ ಪ್ರಯತ್ನವನ್ನು ಮಾಡಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ನಮ್ಮನ್ನು 5 ವರ್ಷಕ್ಕೊಮ್ಮೆ ಆಯ್ಕೆ ಮಾಡಿದರೆ, ಸರ್ಕಾರಿ ಸೇವೆಗೆ ಸೇರಿದ ಮೇಲೆ ನಿವೃತ್ತಿಯಾಗುವವರೆಗೆ ನವೀಕರಣ ಮಾಡಿಸಿಕೊಳ್ಳುವ ಪ್ರಮೇಯವಿಲ್ಲ. ರಾಜಕಾರಣಿಗಳು 5 ವರ್ಷಕ್ಕೊಮ್ಮೆ ಕರ್ನಾಟಕದ ಜನರ ಆಶೀರ್ವಾದವನ್ನು ನವೀಕರಿಸಿಕೊಳ್ಳಬೇಕು ಎಂದರು.

ಪ್ರಜಾಪ್ರಭುತ್ವದ ಮಾಲೀಕರ ಪರವಾಗಿ ಕೆಲಸ ಮಾಡಬೇಕು

ರಾಜ್ಯದ ಜನ ನನಗೆ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗುವ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ. ಅದರಲ್ಲಿ ನೀವೂ, ನಿಮ್ಮ ಕುಟುಂಬದವರೂ ಇದ್ದಾರೆ. 7 ಕೋಟಿ ಕನ್ನಡಿಗರ ಭಾಗವಾದ ಸರ್ಕಾರಿ ನೌಕರರು, ಸಾಮಾಜಿಕ ವ್ಯವಸ್ಥೆಯನ್ನು ಅರ್ಥ ಮಾಡಿಕೊಂಡಿದ್ದೀರಿ ಎಂದು ಭಾವಿಸಿದ್ದೇನೆ. ನಮ್ಮ ಸಮಾಜದಲ್ಲಿ ಸಾಮಾಜಿಕ, ಆರ್ಥಿಕ ಸಮಾನತೆ ತರಬೇಕು. ನಾವೆಲ್ಲರೂ ಪ್ರಜಾಪ್ರಭುತ್ವದ ಮಾಲೀಕರ ಪರವಾಗಿ ಕೆಲಸ ಮಾಡಲು ಇರಬೇಕು ಎಂದರು.

ರಾಜ್ಯದ ಜನರ ಪರವಾಗಿ ಕೆಲಸ ಮಾಡಬೇಕಾಗಿರುವುದು ಮೊದಲನೇ ಆದ್ಯತೆ

ಸರ್ಕಾರ ನಿಮಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು ಎನ್ನುವುದರಲ್ಲಿ ಎರಡು ಮಾತಿಲ್ಲ. ಸರ್ಕಾರ ನಿಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು. ಆದರೆ ಅದೇ ಮೊದಲ ಆದ್ಯತೆ ಅಲ್ಲ. ಅನ್ಯಾಯಗಳನ್ನು ಸರಿಪಡಿಸುವುದು ಸರ್ಕಾರದ ಕರ್ತವ್ಯ. ರಾಜ್ಯದ ಜನರ ಪರವಾಗಿ ಕೆಲಸ ಮಾಡಬೇಕಾಗಿರುವುದು ಮೊದಲನೇ ಆದ್ಯತೆ. ಬೇಡಿಕೆಗಳು ನಂತರದ ಆದ್ಯತೆ. ಇದನ್ನು ಸ್ಪಷ್ಟವಾಗಿ ನೀವು ಅರ್ಥಮಾಡಿಕೊಂಡಿದ್ದೀರಿ ಎನ್ನುವುದು ನನ್ನ ಅನಿಸಿಕೆ ಎಂದು ಹೇಳಿದರು.

ನಾನು ಸರ್ಕಾರಿ ನೌಕರರ ಪರ

ಸರ್ಕಾರಿ ನೌಕರರ ಸಮಸ್ಯೆಗಳನ್ನು ಅರಿತು 7ನೇ ವೇತನ ಆಯೋಗ ರಚಿಸಲಾಗಿದ್ದು, 6ನೇ ವೇತನ ಆಯೋಗವನ್ನು ನಮ್ಮ ಸರ್ಕಾರ ಜಾರಿಗೆ ತಂದಿತ್ತು. ಆ ಸಂದರ್ಭದಲ್ಲಿ ಸರ್ಕಾರಿ ನೌಕರರ ವಿರುದ್ಧವಿರುವುದಾಗಿ ನನ್ನ ಮೇಲೆ ಅರೋಪ ಮಾಡಿದ್ದರು. ಆದರೆ ನಾವೇ 6ನೇ ವೇತನ ಆಯೋಗವನ್ನು ರಚಿಸಿದ್ದೆವು. ಸರ್ಕಾರಿ ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ಕೆಲಸವಾಗಬೇಕು. 6ನೇ ವೇತನ ಆಯೋಗದಲ್ಲಿ ಶೇ. 30ರಷ್ಟು ಫಿಟ್ಮೆಂಟ್ ಸೌಲಭ್ಯ ನೀಡಲು 10,500 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ಬಿಡುಗಡೆ ಮಾಡಿದೆ. ಈಗ 7 ನೇ ವೇತನ ಆಯೋಗದ ಮಧ್ಯಂತರ ವರದಿಯಂತೆ 17% ಹೆಚ್ಚಳ ಮಾಡಲಾಗಿತ್ತು. ಆಯೋಗದ ಅಂತಿಮ ವರದಿ ನೀಡಲು ಇನ್ನಷ್ಟು ಕಾಲಾವಕಾಶ ಬೇಕೆಂದು ಆಯೋಗದ ಆಧ್ಯಕ್ಷರು ಕೋರಿದ್ದು, ಮಾರ್ಚ್ 15 ರವರೆಗೆ ವರದಿ ನೀಡಲು ಸಮಯಾವಕಾಶ ನೀಡಲಾಗಿದೆ. ಲೋಕಸಭಾ ಚುನಾವಣೆಯ ಹಿನ್ನಲೆ , ಆಯೋಗದ ಅಂತಿಮ ವರದಿಯನ್ನು ಆದಷ್ಟು ಶೀಘ್ರ ಸಲ್ಲಿಸುವುದಾಗಿ ತಿಳಿಸಿದ್ದಾರೆ. ನಾನು ಸರ್ಕಾರಿ ನೌಕರರ ಪರವಾಗಿದ್ದೇನೆ ಎಂದು ತಿಳಿಸಿದರು.

ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ, ಸಚಿವ ಈಶ್ವರ್ ಖಂಡ್ರೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಕೃಷ್ಣಪ್ಪ, ಶೇಷಯ್ಯ, ಭೈರಪ್ಪ, ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಶ್ರೀನಿವಾಸ ತಿಮ್ಮೇಗೌಡ, ಖಜಾಂಚಿ ಡಾ. ಸಿದ್ದರಾಮಣ್ಣ, ರಾಜ್ಯ ಮಟ್ಟದ ನೌಕರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಕಾಂಗ್ರೆಸ್ ಶಾಸಕರಿಗೆ ‘ಬೆದರಿಕೆ’: ಜೆಡಿಎಸ್ ರಾಜ್ಯಸಭಾ ಅಭ್ಯರ್ಥಿ ಕುಪೇಂದ್ರ ರೆಡ್ಡಿ ವಿರುದ್ಧ ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...