Homeಮುಖಪುಟಸಿಎಎ ಮತ್ತು ಭಾರತೀಯ ಮುಸ್ಲಿಮರ ಕುರಿತ ಧನಾತ್ಮಕ ನಿರೂಪಣೆ PIB ವೆಬ್‌ಪೇಜ್‌ನಿಂದ ನಾಪತ್ತೆ!

ಸಿಎಎ ಮತ್ತು ಭಾರತೀಯ ಮುಸ್ಲಿಮರ ಕುರಿತ ಧನಾತ್ಮಕ ನಿರೂಪಣೆ PIB ವೆಬ್‌ಪೇಜ್‌ನಿಂದ ನಾಪತ್ತೆ!

- Advertisement -
- Advertisement -

ಗೃಹ ಸಚಿವಾಲಯ ಬಿಡುಗಡೆ ಮಾಡಿದ ಸಿಎಎ ಮತ್ತು ಭಾರತೀಯ ಮುಸ್ಲಿಮರ ಕುರಿತ ‘ಧನಾತ್ಮಕ ನಿರೂಪಣೆ’  ಪಿಐಬಿ(ಪ್ರೆಸ್‌ ಇನ್ಪೋರ್ಮೇಶನ್‌ ಬ್ಯೂರೋ) ವೆಬ್‌ಪೇಜ್‌ನಿಂದ ತೆಗೆದು ಹಾಕಲಾಗಿದೆ ಎಂದು ದಿ ವೈರ್‌ ವರದಿ ಮಾಡಿದೆ.

‘ಪೌರತ್ವ ತಿದ್ದುಪಡಿ ಕಾಯಿದೆ-2019’ ಇಸ್ಲಾಂನ್ನು ಶೋಷಣೆಯ ಹೆಸರಿನಲ್ಲಿ ಕಳಂಕಗೊಳಿಸದಂತೆ ರಕ್ಷಿಸುತ್ತದೆ ಎಂದು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯದ ಪತ್ರಿಕಾ ಪ್ರಕಟಣೆಯು ಅದರ ಮೂಲ ಪತ್ರಿಕಾ ಮಾಹಿತಿ ಬ್ಯೂರೋ (ಪಿಐಬಿ) ವೆಬ್‌ಪುಟದಲ್ಲಿ ಮತ್ತು ಎಕ್ಸ್‌ ಪೇಜ್‌ನಲ್ಲಿ ಇನ್ನು ಮುಂದೆ ಲಭ್ಯವಿರುವುದಿಲ್ಲ.

ಪೌರತ್ವ ತಿದ್ದುಪಡಿ ಕಾಯಿದೆ-2019ರ ಧನಾತ್ಮಕ ನಿರೂಪಣೆ (Positive Narrative on Citizenship Amendment Act, 2019) ಎಂಬ ಶೀರ್ಷಿಕೆಯ ಪ್ರಶ್ನೋತ್ತರ ಸ್ವರೂಪದ ವಿನ್ಯಾಸದಲ್ಲಿ ಪತ್ರಿಕಾ ಪ್ರಕಟಣೆಯು ಇತ್ತು. CAAಯಿಂದ ಭಾರತದ ಮುಸ್ಲಿಂ ನಾಗರಿಕರ ಪೌರತ್ವದ ಮೇಲೆ ಪ್ರಭಾವ ಬೀರುವುದಿಲ್ಲ ಎಂದು ಉಲ್ಲೇಖಿಸಲಾಗಿತ್ತು. ಮಾರ್ಚ್ 12ರ ಮಂಗಳವಾರ ಸಂಜೆ 6:43ಕ್ಕೆ ಪಿಐಬಿ ವೆಬ್‌ಸೈಟ್‌ಗೆ ಪೋಸ್ಟ್ ಮಾಡಲಾಗಿದೆ. ಈ ಪ್ರಕಟಣೆಯು ಈಗ ಏಕೆ ಲಭ್ಯವಿಲ್ಲ ಎಂಬುವುದು ಸ್ಪಷ್ಟವಾಗಿಲ್ಲ. ಈ ಬಗ್ಗೆ PIBಯ ಎಕ್ಸ್‌ ಪುಟದಲ್ಲಿ ಕೂಡ ಪೋಸ್ಟ್‌ ಮಾಡಲಾಗಿತ್ತು.

ಸಿಎಎ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ 2015ರ ಮೊದಲು ಭಾರತಕ್ಕೆ ಆಗಮಿಸಿದ ಹಿಂದೂಗಳು, ಪಾರ್ಸಿಗಳು, ಸಿಖ್ಖರು, ಬೌದ್ಧರು, ಜೈನರು ಮತ್ತು ಕ್ರಿಶ್ಚಿಯನ್ನರು ಕಿರುಕುಳದಿಂದ ಪಲಾಯನ ಮಾಡುವವರಿಗೆ ಪೌರತ್ವವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಶಾಸನದ ನಿಬಂಧನೆಗಳಿಂದ ಮುಸ್ಲಿಮರನ್ನು ಹೊರಗಿಡಲಾಗಿತ್ತು ಮತ್ತು ಎನ್‌ಆರ್‌ಸಿ ವೇಳೆ ಭಾರತದಲ್ಲಿನ ಅನೇಕ ಮುಸ್ಲಿಮರ ಪೌರತ್ವವನ್ನು ಕಸಿದುಕೊಳ್ಳುತ್ತದೆ ಎಂಬ ಆತಂಕವು ಮನೆ ಮಾಡಿತ್ತು, ಇದು ದೇಶಾದ್ಯಂತ ಸಿಎಎ ವಿರುದ್ಧ ವಿರೋಧಕ್ಕೆ ಮತ್ತು  ಭಾರೀ ಪ್ರತಿಭಟನೆಗೆ ಕಾರಣವಾಗಿತ್ತು.

ಸಂಸತ್ತು 2019ರ ಕೊನೆಯಲ್ಲಿ ಶಾಸನವನ್ನು ಅಂಗೀಕರಿಸಿದೆ, ಆದರೆ ಸರ್ಕಾರವು ಅದರ ನಿಯಮಗಳನ್ನು ನಿನ್ನೆಯಷ್ಟೇ ಬಹಿರಂಗಪಡಿಸಿದೆ. ನಿಯಮಗಳಿಲ್ಲದೆ ಸಿಎಎ ಜಾರಿಗೆ ತರಲು ಸಾಧ್ಯವಿಲ್ಲ.

ಗೃಹ ವ್ಯವಹಾರಗಳ ಸಚಿವಾಲಯದ ಪ್ರಶ್ನೆಗಳಲ್ಲಿ CAA ಇಸ್ಲಾಂ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂದು ಕೇಳಲಾಗಿದೆ..

ಈ ಪ್ರಶ್ನೆಗೆ ಉತ್ತರ ಹೀಗಿತ್ತು: ಆ ಮೂರು ಮುಸ್ಲಿಂ ರಾಷ್ಟ್ರಗಳಲ್ಲಿ ಅಲ್ಪಸಂಖ್ಯಾತರ ಮೇಲಿನ ಕಿರುಕುಳದಿಂದಾಗಿ, ಪ್ರಪಂಚದಾದ್ಯಂತ ಇಸ್ಲಾಂ ಧರ್ಮದ ಹೆಸರಿಗೆ ಕಳಂಕಿ ಉಂಟಾಗಿತ್ತು. ಆದರೆ ಇಸ್ಲಾಂ ಶಾಂತಿಯುತ ಧರ್ಮವಾಗಿರುವುದರಿಂದ, ದ್ವೇಷ, ಹಿಂಸೆ, ಧಾರ್ಮಿಕ ನೆಲೆಯಲ್ಲಿ ಯಾವುದೇ ಕಿರುಕುಳವನ್ನು ಎಂದಿಗೂ ಬೋಧಿಸುವುದಿಲ್ಲ ಅಥವಾ ಸೂಚಿಸುವುದಿಲ್ಲ. ಈ ಕಾಯ್ದೆಯು ಶೋಷಣೆಗೆ ಸಹಾನುಭೂತಿ ಮತ್ತು ಪರಿಹಾರವನ್ನು ಹೇಳುತ್ತದೆ, ಶೋಷಣೆಯ ಹೆಸರಿನಲ್ಲಿ ಇಸ್ಲಾಂ ಧರ್ಮವನ್ನು ಕಳಂಕಗೊಳಿಸದಂತೆ ರಕ್ಷಿಸುತ್ತದೆ ಎಂದು ಉಲ್ಲೇಖಿಸಿತ್ತು.

ಭಾರತೀಯ ಮುಸ್ಲಿಮರು ಪೌರತ್ವದ ಮೇಲೆ ಪರಿಣಾಮ ಬೀರುವ ಯಾವುದೇ ನಿಬಂಧನೆಯನ್ನು ಸಿಎಎ ಹೊಂದಿಲ್ಲ, ಆದ್ದರಿಂದ ಅವರು ಈ ಬಗ್ಗೆ ಚಿಂತಿಸಬೇಕಾಗಿಲ್ಲ. ಪ್ರಸ್ತುತ 18 ಕೋಟಿ ಭಾರತೀಯ ಮುಸ್ಲಿಮರಿಗೆ ಯಾವುದೇ ಸಂಬಂಧವಿಲ್ಲ, ಅವರು ತಮ್ಮ ಹಿಂದೂಗಳಂತೆಯೇ ಸಮಾನ ಹಕ್ಕುಗಳನ್ನು ಹೊಂದಿದ್ದಾರೆ. ಸಿಎಎ ಕಾಯ್ದೆಯು ಯಾವುದೇ ಭಾರತೀಯ ನಾಗರಿಕನಲ್ಲಿ ತನ್ನ ಪೌರತ್ವವನ್ನು ಸಾಬೀತುಪಡಿಸಲು ದಾಖಲೆಯನ್ನು ನೀಡುವಂತೆ ಕೇಳುವುದಿಲ್ಲ ಎಂದು ಅದರಲ್ಲಿ ಉಲ್ಲೇಖಿಸಲಾಗಿತ್ತು.

ಅಕ್ರಮ ಮುಸ್ಲಿಮ್ ವಲಸಿಗರನ್ನು ವಾಪಸು ಕಳುಹಿಸಲು ಅಫ್ಘಾನಿಸ್ತಾನ, ಪಾಕಿಸ್ತಾನ ಅಥವಾ ಬಾಂಗ್ಲಾದೇಶದೊಂದಿಗೆ ಭಾರತವು ಒಪ್ಪಂದವನ್ನು ಹೊಂದಿಲ್ಲ. ಈ ಪೌರತ್ವ ಕಾಯಿದೆಯು ಅಕ್ರಮ ವಲಸಿಗರ ಗಡೀಪಾರು ಮಾಡುವುದನ್ನು ಹೇಳುವುದಿಲ್ಲ, ಆದ್ದರಿಂದ CAA ಮುಸ್ಲಿಂ ಅಲ್ಪಸಂಖ್ಯಾತರ ವಿರುದ್ಧವಾಗಿದೆ ಎಂಬ ಮುಸ್ಲಿಮರು ಮತ್ತು ವಿದ್ಯಾರ್ಥಿಗಳು ಸೇರಿದಂತೆ ಜನರ ಒಂದು ವರ್ಗದ ನಿರೂಪಣೆಯು ತಪ್ಪಾಗಿದೆ ಎಂದು ಹೇಳಲಾಗಿದೆ.

ಪೌರತ್ವ ಕಾಯ್ದೆಯನ್ನು ಏಕೆ ತಿದ್ದುಪಡಿ ಮಾಡುವ ಅಗತ್ಯವಿದೆ ಎಂದು ಕೇಳಿದ ಪ್ರಶ್ನೆಗೆ, ಅಕ್ರಮ ವಲಸಿಗರನ್ನು ನಿಯಂತ್ರಿಸುವ ಅಗತ್ಯವಿದೆ ಎಂದು ಉಲ್ಲೇಖಿಸಲಾಗಿದೆ. ಮೂರು ದೇಶಗಳ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರ ಮೇಲೆ ಕರುಣೆ ತೋರಿಸಲು, ಭಾರತದ ಉದಾರ ಸಂಸ್ಕೃತಿಯ ಪ್ರಕಾರ ಅವರ ಸಂತೋಷ ಮತ್ತು ಸಮೃದ್ಧ ಭವಿಷ್ಯಕ್ಕಾಗಿ ಭಾರತೀಯ ಪೌರತ್ವವನ್ನು ಪಡೆಯಲು ಅವಕಾಶವನ್ನು ನೀಡಲಾಗುತ್ತಿದೆ ಎಂದು ಉಲ್ಲೇಖಿಸಲಾಗಿತ್ತು.

ಇದನ್ನು ಓದಿ: ಎಸ್‌ಬಿಐ ಮುಖ್ಯಸ್ಥರ ರಾಜೀನಾಮೆಗೆ ನೌಕರರ ಒಕ್ಕೂಟ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...