Homeಮುಖಪುಟಸಿಎಎ ಮತ್ತು ಭಾರತೀಯ ಮುಸ್ಲಿಮರ ಕುರಿತ ಧನಾತ್ಮಕ ನಿರೂಪಣೆ PIB ವೆಬ್‌ಪೇಜ್‌ನಿಂದ ನಾಪತ್ತೆ!

ಸಿಎಎ ಮತ್ತು ಭಾರತೀಯ ಮುಸ್ಲಿಮರ ಕುರಿತ ಧನಾತ್ಮಕ ನಿರೂಪಣೆ PIB ವೆಬ್‌ಪೇಜ್‌ನಿಂದ ನಾಪತ್ತೆ!

- Advertisement -
- Advertisement -

ಗೃಹ ಸಚಿವಾಲಯ ಬಿಡುಗಡೆ ಮಾಡಿದ ಸಿಎಎ ಮತ್ತು ಭಾರತೀಯ ಮುಸ್ಲಿಮರ ಕುರಿತ ‘ಧನಾತ್ಮಕ ನಿರೂಪಣೆ’  ಪಿಐಬಿ(ಪ್ರೆಸ್‌ ಇನ್ಪೋರ್ಮೇಶನ್‌ ಬ್ಯೂರೋ) ವೆಬ್‌ಪೇಜ್‌ನಿಂದ ತೆಗೆದು ಹಾಕಲಾಗಿದೆ ಎಂದು ದಿ ವೈರ್‌ ವರದಿ ಮಾಡಿದೆ.

‘ಪೌರತ್ವ ತಿದ್ದುಪಡಿ ಕಾಯಿದೆ-2019’ ಇಸ್ಲಾಂನ್ನು ಶೋಷಣೆಯ ಹೆಸರಿನಲ್ಲಿ ಕಳಂಕಗೊಳಿಸದಂತೆ ರಕ್ಷಿಸುತ್ತದೆ ಎಂದು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯದ ಪತ್ರಿಕಾ ಪ್ರಕಟಣೆಯು ಅದರ ಮೂಲ ಪತ್ರಿಕಾ ಮಾಹಿತಿ ಬ್ಯೂರೋ (ಪಿಐಬಿ) ವೆಬ್‌ಪುಟದಲ್ಲಿ ಮತ್ತು ಎಕ್ಸ್‌ ಪೇಜ್‌ನಲ್ಲಿ ಇನ್ನು ಮುಂದೆ ಲಭ್ಯವಿರುವುದಿಲ್ಲ.

ಪೌರತ್ವ ತಿದ್ದುಪಡಿ ಕಾಯಿದೆ-2019ರ ಧನಾತ್ಮಕ ನಿರೂಪಣೆ (Positive Narrative on Citizenship Amendment Act, 2019) ಎಂಬ ಶೀರ್ಷಿಕೆಯ ಪ್ರಶ್ನೋತ್ತರ ಸ್ವರೂಪದ ವಿನ್ಯಾಸದಲ್ಲಿ ಪತ್ರಿಕಾ ಪ್ರಕಟಣೆಯು ಇತ್ತು. CAAಯಿಂದ ಭಾರತದ ಮುಸ್ಲಿಂ ನಾಗರಿಕರ ಪೌರತ್ವದ ಮೇಲೆ ಪ್ರಭಾವ ಬೀರುವುದಿಲ್ಲ ಎಂದು ಉಲ್ಲೇಖಿಸಲಾಗಿತ್ತು. ಮಾರ್ಚ್ 12ರ ಮಂಗಳವಾರ ಸಂಜೆ 6:43ಕ್ಕೆ ಪಿಐಬಿ ವೆಬ್‌ಸೈಟ್‌ಗೆ ಪೋಸ್ಟ್ ಮಾಡಲಾಗಿದೆ. ಈ ಪ್ರಕಟಣೆಯು ಈಗ ಏಕೆ ಲಭ್ಯವಿಲ್ಲ ಎಂಬುವುದು ಸ್ಪಷ್ಟವಾಗಿಲ್ಲ. ಈ ಬಗ್ಗೆ PIBಯ ಎಕ್ಸ್‌ ಪುಟದಲ್ಲಿ ಕೂಡ ಪೋಸ್ಟ್‌ ಮಾಡಲಾಗಿತ್ತು.

ಸಿಎಎ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ 2015ರ ಮೊದಲು ಭಾರತಕ್ಕೆ ಆಗಮಿಸಿದ ಹಿಂದೂಗಳು, ಪಾರ್ಸಿಗಳು, ಸಿಖ್ಖರು, ಬೌದ್ಧರು, ಜೈನರು ಮತ್ತು ಕ್ರಿಶ್ಚಿಯನ್ನರು ಕಿರುಕುಳದಿಂದ ಪಲಾಯನ ಮಾಡುವವರಿಗೆ ಪೌರತ್ವವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಶಾಸನದ ನಿಬಂಧನೆಗಳಿಂದ ಮುಸ್ಲಿಮರನ್ನು ಹೊರಗಿಡಲಾಗಿತ್ತು ಮತ್ತು ಎನ್‌ಆರ್‌ಸಿ ವೇಳೆ ಭಾರತದಲ್ಲಿನ ಅನೇಕ ಮುಸ್ಲಿಮರ ಪೌರತ್ವವನ್ನು ಕಸಿದುಕೊಳ್ಳುತ್ತದೆ ಎಂಬ ಆತಂಕವು ಮನೆ ಮಾಡಿತ್ತು, ಇದು ದೇಶಾದ್ಯಂತ ಸಿಎಎ ವಿರುದ್ಧ ವಿರೋಧಕ್ಕೆ ಮತ್ತು  ಭಾರೀ ಪ್ರತಿಭಟನೆಗೆ ಕಾರಣವಾಗಿತ್ತು.

ಸಂಸತ್ತು 2019ರ ಕೊನೆಯಲ್ಲಿ ಶಾಸನವನ್ನು ಅಂಗೀಕರಿಸಿದೆ, ಆದರೆ ಸರ್ಕಾರವು ಅದರ ನಿಯಮಗಳನ್ನು ನಿನ್ನೆಯಷ್ಟೇ ಬಹಿರಂಗಪಡಿಸಿದೆ. ನಿಯಮಗಳಿಲ್ಲದೆ ಸಿಎಎ ಜಾರಿಗೆ ತರಲು ಸಾಧ್ಯವಿಲ್ಲ.

ಗೃಹ ವ್ಯವಹಾರಗಳ ಸಚಿವಾಲಯದ ಪ್ರಶ್ನೆಗಳಲ್ಲಿ CAA ಇಸ್ಲಾಂ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂದು ಕೇಳಲಾಗಿದೆ..

ಈ ಪ್ರಶ್ನೆಗೆ ಉತ್ತರ ಹೀಗಿತ್ತು: ಆ ಮೂರು ಮುಸ್ಲಿಂ ರಾಷ್ಟ್ರಗಳಲ್ಲಿ ಅಲ್ಪಸಂಖ್ಯಾತರ ಮೇಲಿನ ಕಿರುಕುಳದಿಂದಾಗಿ, ಪ್ರಪಂಚದಾದ್ಯಂತ ಇಸ್ಲಾಂ ಧರ್ಮದ ಹೆಸರಿಗೆ ಕಳಂಕಿ ಉಂಟಾಗಿತ್ತು. ಆದರೆ ಇಸ್ಲಾಂ ಶಾಂತಿಯುತ ಧರ್ಮವಾಗಿರುವುದರಿಂದ, ದ್ವೇಷ, ಹಿಂಸೆ, ಧಾರ್ಮಿಕ ನೆಲೆಯಲ್ಲಿ ಯಾವುದೇ ಕಿರುಕುಳವನ್ನು ಎಂದಿಗೂ ಬೋಧಿಸುವುದಿಲ್ಲ ಅಥವಾ ಸೂಚಿಸುವುದಿಲ್ಲ. ಈ ಕಾಯ್ದೆಯು ಶೋಷಣೆಗೆ ಸಹಾನುಭೂತಿ ಮತ್ತು ಪರಿಹಾರವನ್ನು ಹೇಳುತ್ತದೆ, ಶೋಷಣೆಯ ಹೆಸರಿನಲ್ಲಿ ಇಸ್ಲಾಂ ಧರ್ಮವನ್ನು ಕಳಂಕಗೊಳಿಸದಂತೆ ರಕ್ಷಿಸುತ್ತದೆ ಎಂದು ಉಲ್ಲೇಖಿಸಿತ್ತು.

ಭಾರತೀಯ ಮುಸ್ಲಿಮರು ಪೌರತ್ವದ ಮೇಲೆ ಪರಿಣಾಮ ಬೀರುವ ಯಾವುದೇ ನಿಬಂಧನೆಯನ್ನು ಸಿಎಎ ಹೊಂದಿಲ್ಲ, ಆದ್ದರಿಂದ ಅವರು ಈ ಬಗ್ಗೆ ಚಿಂತಿಸಬೇಕಾಗಿಲ್ಲ. ಪ್ರಸ್ತುತ 18 ಕೋಟಿ ಭಾರತೀಯ ಮುಸ್ಲಿಮರಿಗೆ ಯಾವುದೇ ಸಂಬಂಧವಿಲ್ಲ, ಅವರು ತಮ್ಮ ಹಿಂದೂಗಳಂತೆಯೇ ಸಮಾನ ಹಕ್ಕುಗಳನ್ನು ಹೊಂದಿದ್ದಾರೆ. ಸಿಎಎ ಕಾಯ್ದೆಯು ಯಾವುದೇ ಭಾರತೀಯ ನಾಗರಿಕನಲ್ಲಿ ತನ್ನ ಪೌರತ್ವವನ್ನು ಸಾಬೀತುಪಡಿಸಲು ದಾಖಲೆಯನ್ನು ನೀಡುವಂತೆ ಕೇಳುವುದಿಲ್ಲ ಎಂದು ಅದರಲ್ಲಿ ಉಲ್ಲೇಖಿಸಲಾಗಿತ್ತು.

ಅಕ್ರಮ ಮುಸ್ಲಿಮ್ ವಲಸಿಗರನ್ನು ವಾಪಸು ಕಳುಹಿಸಲು ಅಫ್ಘಾನಿಸ್ತಾನ, ಪಾಕಿಸ್ತಾನ ಅಥವಾ ಬಾಂಗ್ಲಾದೇಶದೊಂದಿಗೆ ಭಾರತವು ಒಪ್ಪಂದವನ್ನು ಹೊಂದಿಲ್ಲ. ಈ ಪೌರತ್ವ ಕಾಯಿದೆಯು ಅಕ್ರಮ ವಲಸಿಗರ ಗಡೀಪಾರು ಮಾಡುವುದನ್ನು ಹೇಳುವುದಿಲ್ಲ, ಆದ್ದರಿಂದ CAA ಮುಸ್ಲಿಂ ಅಲ್ಪಸಂಖ್ಯಾತರ ವಿರುದ್ಧವಾಗಿದೆ ಎಂಬ ಮುಸ್ಲಿಮರು ಮತ್ತು ವಿದ್ಯಾರ್ಥಿಗಳು ಸೇರಿದಂತೆ ಜನರ ಒಂದು ವರ್ಗದ ನಿರೂಪಣೆಯು ತಪ್ಪಾಗಿದೆ ಎಂದು ಹೇಳಲಾಗಿದೆ.

ಪೌರತ್ವ ಕಾಯ್ದೆಯನ್ನು ಏಕೆ ತಿದ್ದುಪಡಿ ಮಾಡುವ ಅಗತ್ಯವಿದೆ ಎಂದು ಕೇಳಿದ ಪ್ರಶ್ನೆಗೆ, ಅಕ್ರಮ ವಲಸಿಗರನ್ನು ನಿಯಂತ್ರಿಸುವ ಅಗತ್ಯವಿದೆ ಎಂದು ಉಲ್ಲೇಖಿಸಲಾಗಿದೆ. ಮೂರು ದೇಶಗಳ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರ ಮೇಲೆ ಕರುಣೆ ತೋರಿಸಲು, ಭಾರತದ ಉದಾರ ಸಂಸ್ಕೃತಿಯ ಪ್ರಕಾರ ಅವರ ಸಂತೋಷ ಮತ್ತು ಸಮೃದ್ಧ ಭವಿಷ್ಯಕ್ಕಾಗಿ ಭಾರತೀಯ ಪೌರತ್ವವನ್ನು ಪಡೆಯಲು ಅವಕಾಶವನ್ನು ನೀಡಲಾಗುತ್ತಿದೆ ಎಂದು ಉಲ್ಲೇಖಿಸಲಾಗಿತ್ತು.

ಇದನ್ನು ಓದಿ: ಎಸ್‌ಬಿಐ ಮುಖ್ಯಸ್ಥರ ರಾಜೀನಾಮೆಗೆ ನೌಕರರ ಒಕ್ಕೂಟ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...