Homeಮುಖಪುಟಸಿಎಎ ಮತ್ತು ಭಾರತೀಯ ಮುಸ್ಲಿಮರ ಕುರಿತ ಧನಾತ್ಮಕ ನಿರೂಪಣೆ PIB ವೆಬ್‌ಪೇಜ್‌ನಿಂದ ನಾಪತ್ತೆ!

ಸಿಎಎ ಮತ್ತು ಭಾರತೀಯ ಮುಸ್ಲಿಮರ ಕುರಿತ ಧನಾತ್ಮಕ ನಿರೂಪಣೆ PIB ವೆಬ್‌ಪೇಜ್‌ನಿಂದ ನಾಪತ್ತೆ!

- Advertisement -
- Advertisement -

ಗೃಹ ಸಚಿವಾಲಯ ಬಿಡುಗಡೆ ಮಾಡಿದ ಸಿಎಎ ಮತ್ತು ಭಾರತೀಯ ಮುಸ್ಲಿಮರ ಕುರಿತ ‘ಧನಾತ್ಮಕ ನಿರೂಪಣೆ’  ಪಿಐಬಿ(ಪ್ರೆಸ್‌ ಇನ್ಪೋರ್ಮೇಶನ್‌ ಬ್ಯೂರೋ) ವೆಬ್‌ಪೇಜ್‌ನಿಂದ ತೆಗೆದು ಹಾಕಲಾಗಿದೆ ಎಂದು ದಿ ವೈರ್‌ ವರದಿ ಮಾಡಿದೆ.

‘ಪೌರತ್ವ ತಿದ್ದುಪಡಿ ಕಾಯಿದೆ-2019’ ಇಸ್ಲಾಂನ್ನು ಶೋಷಣೆಯ ಹೆಸರಿನಲ್ಲಿ ಕಳಂಕಗೊಳಿಸದಂತೆ ರಕ್ಷಿಸುತ್ತದೆ ಎಂದು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯದ ಪತ್ರಿಕಾ ಪ್ರಕಟಣೆಯು ಅದರ ಮೂಲ ಪತ್ರಿಕಾ ಮಾಹಿತಿ ಬ್ಯೂರೋ (ಪಿಐಬಿ) ವೆಬ್‌ಪುಟದಲ್ಲಿ ಮತ್ತು ಎಕ್ಸ್‌ ಪೇಜ್‌ನಲ್ಲಿ ಇನ್ನು ಮುಂದೆ ಲಭ್ಯವಿರುವುದಿಲ್ಲ.

ಪೌರತ್ವ ತಿದ್ದುಪಡಿ ಕಾಯಿದೆ-2019ರ ಧನಾತ್ಮಕ ನಿರೂಪಣೆ (Positive Narrative on Citizenship Amendment Act, 2019) ಎಂಬ ಶೀರ್ಷಿಕೆಯ ಪ್ರಶ್ನೋತ್ತರ ಸ್ವರೂಪದ ವಿನ್ಯಾಸದಲ್ಲಿ ಪತ್ರಿಕಾ ಪ್ರಕಟಣೆಯು ಇತ್ತು. CAAಯಿಂದ ಭಾರತದ ಮುಸ್ಲಿಂ ನಾಗರಿಕರ ಪೌರತ್ವದ ಮೇಲೆ ಪ್ರಭಾವ ಬೀರುವುದಿಲ್ಲ ಎಂದು ಉಲ್ಲೇಖಿಸಲಾಗಿತ್ತು. ಮಾರ್ಚ್ 12ರ ಮಂಗಳವಾರ ಸಂಜೆ 6:43ಕ್ಕೆ ಪಿಐಬಿ ವೆಬ್‌ಸೈಟ್‌ಗೆ ಪೋಸ್ಟ್ ಮಾಡಲಾಗಿದೆ. ಈ ಪ್ರಕಟಣೆಯು ಈಗ ಏಕೆ ಲಭ್ಯವಿಲ್ಲ ಎಂಬುವುದು ಸ್ಪಷ್ಟವಾಗಿಲ್ಲ. ಈ ಬಗ್ಗೆ PIBಯ ಎಕ್ಸ್‌ ಪುಟದಲ್ಲಿ ಕೂಡ ಪೋಸ್ಟ್‌ ಮಾಡಲಾಗಿತ್ತು.

ಸಿಎಎ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ 2015ರ ಮೊದಲು ಭಾರತಕ್ಕೆ ಆಗಮಿಸಿದ ಹಿಂದೂಗಳು, ಪಾರ್ಸಿಗಳು, ಸಿಖ್ಖರು, ಬೌದ್ಧರು, ಜೈನರು ಮತ್ತು ಕ್ರಿಶ್ಚಿಯನ್ನರು ಕಿರುಕುಳದಿಂದ ಪಲಾಯನ ಮಾಡುವವರಿಗೆ ಪೌರತ್ವವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಶಾಸನದ ನಿಬಂಧನೆಗಳಿಂದ ಮುಸ್ಲಿಮರನ್ನು ಹೊರಗಿಡಲಾಗಿತ್ತು ಮತ್ತು ಎನ್‌ಆರ್‌ಸಿ ವೇಳೆ ಭಾರತದಲ್ಲಿನ ಅನೇಕ ಮುಸ್ಲಿಮರ ಪೌರತ್ವವನ್ನು ಕಸಿದುಕೊಳ್ಳುತ್ತದೆ ಎಂಬ ಆತಂಕವು ಮನೆ ಮಾಡಿತ್ತು, ಇದು ದೇಶಾದ್ಯಂತ ಸಿಎಎ ವಿರುದ್ಧ ವಿರೋಧಕ್ಕೆ ಮತ್ತು  ಭಾರೀ ಪ್ರತಿಭಟನೆಗೆ ಕಾರಣವಾಗಿತ್ತು.

ಸಂಸತ್ತು 2019ರ ಕೊನೆಯಲ್ಲಿ ಶಾಸನವನ್ನು ಅಂಗೀಕರಿಸಿದೆ, ಆದರೆ ಸರ್ಕಾರವು ಅದರ ನಿಯಮಗಳನ್ನು ನಿನ್ನೆಯಷ್ಟೇ ಬಹಿರಂಗಪಡಿಸಿದೆ. ನಿಯಮಗಳಿಲ್ಲದೆ ಸಿಎಎ ಜಾರಿಗೆ ತರಲು ಸಾಧ್ಯವಿಲ್ಲ.

ಗೃಹ ವ್ಯವಹಾರಗಳ ಸಚಿವಾಲಯದ ಪ್ರಶ್ನೆಗಳಲ್ಲಿ CAA ಇಸ್ಲಾಂ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂದು ಕೇಳಲಾಗಿದೆ..

ಈ ಪ್ರಶ್ನೆಗೆ ಉತ್ತರ ಹೀಗಿತ್ತು: ಆ ಮೂರು ಮುಸ್ಲಿಂ ರಾಷ್ಟ್ರಗಳಲ್ಲಿ ಅಲ್ಪಸಂಖ್ಯಾತರ ಮೇಲಿನ ಕಿರುಕುಳದಿಂದಾಗಿ, ಪ್ರಪಂಚದಾದ್ಯಂತ ಇಸ್ಲಾಂ ಧರ್ಮದ ಹೆಸರಿಗೆ ಕಳಂಕಿ ಉಂಟಾಗಿತ್ತು. ಆದರೆ ಇಸ್ಲಾಂ ಶಾಂತಿಯುತ ಧರ್ಮವಾಗಿರುವುದರಿಂದ, ದ್ವೇಷ, ಹಿಂಸೆ, ಧಾರ್ಮಿಕ ನೆಲೆಯಲ್ಲಿ ಯಾವುದೇ ಕಿರುಕುಳವನ್ನು ಎಂದಿಗೂ ಬೋಧಿಸುವುದಿಲ್ಲ ಅಥವಾ ಸೂಚಿಸುವುದಿಲ್ಲ. ಈ ಕಾಯ್ದೆಯು ಶೋಷಣೆಗೆ ಸಹಾನುಭೂತಿ ಮತ್ತು ಪರಿಹಾರವನ್ನು ಹೇಳುತ್ತದೆ, ಶೋಷಣೆಯ ಹೆಸರಿನಲ್ಲಿ ಇಸ್ಲಾಂ ಧರ್ಮವನ್ನು ಕಳಂಕಗೊಳಿಸದಂತೆ ರಕ್ಷಿಸುತ್ತದೆ ಎಂದು ಉಲ್ಲೇಖಿಸಿತ್ತು.

ಭಾರತೀಯ ಮುಸ್ಲಿಮರು ಪೌರತ್ವದ ಮೇಲೆ ಪರಿಣಾಮ ಬೀರುವ ಯಾವುದೇ ನಿಬಂಧನೆಯನ್ನು ಸಿಎಎ ಹೊಂದಿಲ್ಲ, ಆದ್ದರಿಂದ ಅವರು ಈ ಬಗ್ಗೆ ಚಿಂತಿಸಬೇಕಾಗಿಲ್ಲ. ಪ್ರಸ್ತುತ 18 ಕೋಟಿ ಭಾರತೀಯ ಮುಸ್ಲಿಮರಿಗೆ ಯಾವುದೇ ಸಂಬಂಧವಿಲ್ಲ, ಅವರು ತಮ್ಮ ಹಿಂದೂಗಳಂತೆಯೇ ಸಮಾನ ಹಕ್ಕುಗಳನ್ನು ಹೊಂದಿದ್ದಾರೆ. ಸಿಎಎ ಕಾಯ್ದೆಯು ಯಾವುದೇ ಭಾರತೀಯ ನಾಗರಿಕನಲ್ಲಿ ತನ್ನ ಪೌರತ್ವವನ್ನು ಸಾಬೀತುಪಡಿಸಲು ದಾಖಲೆಯನ್ನು ನೀಡುವಂತೆ ಕೇಳುವುದಿಲ್ಲ ಎಂದು ಅದರಲ್ಲಿ ಉಲ್ಲೇಖಿಸಲಾಗಿತ್ತು.

ಅಕ್ರಮ ಮುಸ್ಲಿಮ್ ವಲಸಿಗರನ್ನು ವಾಪಸು ಕಳುಹಿಸಲು ಅಫ್ಘಾನಿಸ್ತಾನ, ಪಾಕಿಸ್ತಾನ ಅಥವಾ ಬಾಂಗ್ಲಾದೇಶದೊಂದಿಗೆ ಭಾರತವು ಒಪ್ಪಂದವನ್ನು ಹೊಂದಿಲ್ಲ. ಈ ಪೌರತ್ವ ಕಾಯಿದೆಯು ಅಕ್ರಮ ವಲಸಿಗರ ಗಡೀಪಾರು ಮಾಡುವುದನ್ನು ಹೇಳುವುದಿಲ್ಲ, ಆದ್ದರಿಂದ CAA ಮುಸ್ಲಿಂ ಅಲ್ಪಸಂಖ್ಯಾತರ ವಿರುದ್ಧವಾಗಿದೆ ಎಂಬ ಮುಸ್ಲಿಮರು ಮತ್ತು ವಿದ್ಯಾರ್ಥಿಗಳು ಸೇರಿದಂತೆ ಜನರ ಒಂದು ವರ್ಗದ ನಿರೂಪಣೆಯು ತಪ್ಪಾಗಿದೆ ಎಂದು ಹೇಳಲಾಗಿದೆ.

ಪೌರತ್ವ ಕಾಯ್ದೆಯನ್ನು ಏಕೆ ತಿದ್ದುಪಡಿ ಮಾಡುವ ಅಗತ್ಯವಿದೆ ಎಂದು ಕೇಳಿದ ಪ್ರಶ್ನೆಗೆ, ಅಕ್ರಮ ವಲಸಿಗರನ್ನು ನಿಯಂತ್ರಿಸುವ ಅಗತ್ಯವಿದೆ ಎಂದು ಉಲ್ಲೇಖಿಸಲಾಗಿದೆ. ಮೂರು ದೇಶಗಳ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರ ಮೇಲೆ ಕರುಣೆ ತೋರಿಸಲು, ಭಾರತದ ಉದಾರ ಸಂಸ್ಕೃತಿಯ ಪ್ರಕಾರ ಅವರ ಸಂತೋಷ ಮತ್ತು ಸಮೃದ್ಧ ಭವಿಷ್ಯಕ್ಕಾಗಿ ಭಾರತೀಯ ಪೌರತ್ವವನ್ನು ಪಡೆಯಲು ಅವಕಾಶವನ್ನು ನೀಡಲಾಗುತ್ತಿದೆ ಎಂದು ಉಲ್ಲೇಖಿಸಲಾಗಿತ್ತು.

ಇದನ್ನು ಓದಿ: ಎಸ್‌ಬಿಐ ಮುಖ್ಯಸ್ಥರ ರಾಜೀನಾಮೆಗೆ ನೌಕರರ ಒಕ್ಕೂಟ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...