Homeಮುಖಪುಟಸಿಎಎ ಮತ್ತು ಭಾರತೀಯ ಮುಸ್ಲಿಮರ ಕುರಿತ ಧನಾತ್ಮಕ ನಿರೂಪಣೆ PIB ವೆಬ್‌ಪೇಜ್‌ನಿಂದ ನಾಪತ್ತೆ!

ಸಿಎಎ ಮತ್ತು ಭಾರತೀಯ ಮುಸ್ಲಿಮರ ಕುರಿತ ಧನಾತ್ಮಕ ನಿರೂಪಣೆ PIB ವೆಬ್‌ಪೇಜ್‌ನಿಂದ ನಾಪತ್ತೆ!

- Advertisement -
- Advertisement -

ಗೃಹ ಸಚಿವಾಲಯ ಬಿಡುಗಡೆ ಮಾಡಿದ ಸಿಎಎ ಮತ್ತು ಭಾರತೀಯ ಮುಸ್ಲಿಮರ ಕುರಿತ ‘ಧನಾತ್ಮಕ ನಿರೂಪಣೆ’  ಪಿಐಬಿ(ಪ್ರೆಸ್‌ ಇನ್ಪೋರ್ಮೇಶನ್‌ ಬ್ಯೂರೋ) ವೆಬ್‌ಪೇಜ್‌ನಿಂದ ತೆಗೆದು ಹಾಕಲಾಗಿದೆ ಎಂದು ದಿ ವೈರ್‌ ವರದಿ ಮಾಡಿದೆ.

‘ಪೌರತ್ವ ತಿದ್ದುಪಡಿ ಕಾಯಿದೆ-2019’ ಇಸ್ಲಾಂನ್ನು ಶೋಷಣೆಯ ಹೆಸರಿನಲ್ಲಿ ಕಳಂಕಗೊಳಿಸದಂತೆ ರಕ್ಷಿಸುತ್ತದೆ ಎಂದು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯದ ಪತ್ರಿಕಾ ಪ್ರಕಟಣೆಯು ಅದರ ಮೂಲ ಪತ್ರಿಕಾ ಮಾಹಿತಿ ಬ್ಯೂರೋ (ಪಿಐಬಿ) ವೆಬ್‌ಪುಟದಲ್ಲಿ ಮತ್ತು ಎಕ್ಸ್‌ ಪೇಜ್‌ನಲ್ಲಿ ಇನ್ನು ಮುಂದೆ ಲಭ್ಯವಿರುವುದಿಲ್ಲ.

ಪೌರತ್ವ ತಿದ್ದುಪಡಿ ಕಾಯಿದೆ-2019ರ ಧನಾತ್ಮಕ ನಿರೂಪಣೆ (Positive Narrative on Citizenship Amendment Act, 2019) ಎಂಬ ಶೀರ್ಷಿಕೆಯ ಪ್ರಶ್ನೋತ್ತರ ಸ್ವರೂಪದ ವಿನ್ಯಾಸದಲ್ಲಿ ಪತ್ರಿಕಾ ಪ್ರಕಟಣೆಯು ಇತ್ತು. CAAಯಿಂದ ಭಾರತದ ಮುಸ್ಲಿಂ ನಾಗರಿಕರ ಪೌರತ್ವದ ಮೇಲೆ ಪ್ರಭಾವ ಬೀರುವುದಿಲ್ಲ ಎಂದು ಉಲ್ಲೇಖಿಸಲಾಗಿತ್ತು. ಮಾರ್ಚ್ 12ರ ಮಂಗಳವಾರ ಸಂಜೆ 6:43ಕ್ಕೆ ಪಿಐಬಿ ವೆಬ್‌ಸೈಟ್‌ಗೆ ಪೋಸ್ಟ್ ಮಾಡಲಾಗಿದೆ. ಈ ಪ್ರಕಟಣೆಯು ಈಗ ಏಕೆ ಲಭ್ಯವಿಲ್ಲ ಎಂಬುವುದು ಸ್ಪಷ್ಟವಾಗಿಲ್ಲ. ಈ ಬಗ್ಗೆ PIBಯ ಎಕ್ಸ್‌ ಪುಟದಲ್ಲಿ ಕೂಡ ಪೋಸ್ಟ್‌ ಮಾಡಲಾಗಿತ್ತು.

ಸಿಎಎ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ 2015ರ ಮೊದಲು ಭಾರತಕ್ಕೆ ಆಗಮಿಸಿದ ಹಿಂದೂಗಳು, ಪಾರ್ಸಿಗಳು, ಸಿಖ್ಖರು, ಬೌದ್ಧರು, ಜೈನರು ಮತ್ತು ಕ್ರಿಶ್ಚಿಯನ್ನರು ಕಿರುಕುಳದಿಂದ ಪಲಾಯನ ಮಾಡುವವರಿಗೆ ಪೌರತ್ವವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಶಾಸನದ ನಿಬಂಧನೆಗಳಿಂದ ಮುಸ್ಲಿಮರನ್ನು ಹೊರಗಿಡಲಾಗಿತ್ತು ಮತ್ತು ಎನ್‌ಆರ್‌ಸಿ ವೇಳೆ ಭಾರತದಲ್ಲಿನ ಅನೇಕ ಮುಸ್ಲಿಮರ ಪೌರತ್ವವನ್ನು ಕಸಿದುಕೊಳ್ಳುತ್ತದೆ ಎಂಬ ಆತಂಕವು ಮನೆ ಮಾಡಿತ್ತು, ಇದು ದೇಶಾದ್ಯಂತ ಸಿಎಎ ವಿರುದ್ಧ ವಿರೋಧಕ್ಕೆ ಮತ್ತು  ಭಾರೀ ಪ್ರತಿಭಟನೆಗೆ ಕಾರಣವಾಗಿತ್ತು.

ಸಂಸತ್ತು 2019ರ ಕೊನೆಯಲ್ಲಿ ಶಾಸನವನ್ನು ಅಂಗೀಕರಿಸಿದೆ, ಆದರೆ ಸರ್ಕಾರವು ಅದರ ನಿಯಮಗಳನ್ನು ನಿನ್ನೆಯಷ್ಟೇ ಬಹಿರಂಗಪಡಿಸಿದೆ. ನಿಯಮಗಳಿಲ್ಲದೆ ಸಿಎಎ ಜಾರಿಗೆ ತರಲು ಸಾಧ್ಯವಿಲ್ಲ.

ಗೃಹ ವ್ಯವಹಾರಗಳ ಸಚಿವಾಲಯದ ಪ್ರಶ್ನೆಗಳಲ್ಲಿ CAA ಇಸ್ಲಾಂ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂದು ಕೇಳಲಾಗಿದೆ..

ಈ ಪ್ರಶ್ನೆಗೆ ಉತ್ತರ ಹೀಗಿತ್ತು: ಆ ಮೂರು ಮುಸ್ಲಿಂ ರಾಷ್ಟ್ರಗಳಲ್ಲಿ ಅಲ್ಪಸಂಖ್ಯಾತರ ಮೇಲಿನ ಕಿರುಕುಳದಿಂದಾಗಿ, ಪ್ರಪಂಚದಾದ್ಯಂತ ಇಸ್ಲಾಂ ಧರ್ಮದ ಹೆಸರಿಗೆ ಕಳಂಕಿ ಉಂಟಾಗಿತ್ತು. ಆದರೆ ಇಸ್ಲಾಂ ಶಾಂತಿಯುತ ಧರ್ಮವಾಗಿರುವುದರಿಂದ, ದ್ವೇಷ, ಹಿಂಸೆ, ಧಾರ್ಮಿಕ ನೆಲೆಯಲ್ಲಿ ಯಾವುದೇ ಕಿರುಕುಳವನ್ನು ಎಂದಿಗೂ ಬೋಧಿಸುವುದಿಲ್ಲ ಅಥವಾ ಸೂಚಿಸುವುದಿಲ್ಲ. ಈ ಕಾಯ್ದೆಯು ಶೋಷಣೆಗೆ ಸಹಾನುಭೂತಿ ಮತ್ತು ಪರಿಹಾರವನ್ನು ಹೇಳುತ್ತದೆ, ಶೋಷಣೆಯ ಹೆಸರಿನಲ್ಲಿ ಇಸ್ಲಾಂ ಧರ್ಮವನ್ನು ಕಳಂಕಗೊಳಿಸದಂತೆ ರಕ್ಷಿಸುತ್ತದೆ ಎಂದು ಉಲ್ಲೇಖಿಸಿತ್ತು.

ಭಾರತೀಯ ಮುಸ್ಲಿಮರು ಪೌರತ್ವದ ಮೇಲೆ ಪರಿಣಾಮ ಬೀರುವ ಯಾವುದೇ ನಿಬಂಧನೆಯನ್ನು ಸಿಎಎ ಹೊಂದಿಲ್ಲ, ಆದ್ದರಿಂದ ಅವರು ಈ ಬಗ್ಗೆ ಚಿಂತಿಸಬೇಕಾಗಿಲ್ಲ. ಪ್ರಸ್ತುತ 18 ಕೋಟಿ ಭಾರತೀಯ ಮುಸ್ಲಿಮರಿಗೆ ಯಾವುದೇ ಸಂಬಂಧವಿಲ್ಲ, ಅವರು ತಮ್ಮ ಹಿಂದೂಗಳಂತೆಯೇ ಸಮಾನ ಹಕ್ಕುಗಳನ್ನು ಹೊಂದಿದ್ದಾರೆ. ಸಿಎಎ ಕಾಯ್ದೆಯು ಯಾವುದೇ ಭಾರತೀಯ ನಾಗರಿಕನಲ್ಲಿ ತನ್ನ ಪೌರತ್ವವನ್ನು ಸಾಬೀತುಪಡಿಸಲು ದಾಖಲೆಯನ್ನು ನೀಡುವಂತೆ ಕೇಳುವುದಿಲ್ಲ ಎಂದು ಅದರಲ್ಲಿ ಉಲ್ಲೇಖಿಸಲಾಗಿತ್ತು.

ಅಕ್ರಮ ಮುಸ್ಲಿಮ್ ವಲಸಿಗರನ್ನು ವಾಪಸು ಕಳುಹಿಸಲು ಅಫ್ಘಾನಿಸ್ತಾನ, ಪಾಕಿಸ್ತಾನ ಅಥವಾ ಬಾಂಗ್ಲಾದೇಶದೊಂದಿಗೆ ಭಾರತವು ಒಪ್ಪಂದವನ್ನು ಹೊಂದಿಲ್ಲ. ಈ ಪೌರತ್ವ ಕಾಯಿದೆಯು ಅಕ್ರಮ ವಲಸಿಗರ ಗಡೀಪಾರು ಮಾಡುವುದನ್ನು ಹೇಳುವುದಿಲ್ಲ, ಆದ್ದರಿಂದ CAA ಮುಸ್ಲಿಂ ಅಲ್ಪಸಂಖ್ಯಾತರ ವಿರುದ್ಧವಾಗಿದೆ ಎಂಬ ಮುಸ್ಲಿಮರು ಮತ್ತು ವಿದ್ಯಾರ್ಥಿಗಳು ಸೇರಿದಂತೆ ಜನರ ಒಂದು ವರ್ಗದ ನಿರೂಪಣೆಯು ತಪ್ಪಾಗಿದೆ ಎಂದು ಹೇಳಲಾಗಿದೆ.

ಪೌರತ್ವ ಕಾಯ್ದೆಯನ್ನು ಏಕೆ ತಿದ್ದುಪಡಿ ಮಾಡುವ ಅಗತ್ಯವಿದೆ ಎಂದು ಕೇಳಿದ ಪ್ರಶ್ನೆಗೆ, ಅಕ್ರಮ ವಲಸಿಗರನ್ನು ನಿಯಂತ್ರಿಸುವ ಅಗತ್ಯವಿದೆ ಎಂದು ಉಲ್ಲೇಖಿಸಲಾಗಿದೆ. ಮೂರು ದೇಶಗಳ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರ ಮೇಲೆ ಕರುಣೆ ತೋರಿಸಲು, ಭಾರತದ ಉದಾರ ಸಂಸ್ಕೃತಿಯ ಪ್ರಕಾರ ಅವರ ಸಂತೋಷ ಮತ್ತು ಸಮೃದ್ಧ ಭವಿಷ್ಯಕ್ಕಾಗಿ ಭಾರತೀಯ ಪೌರತ್ವವನ್ನು ಪಡೆಯಲು ಅವಕಾಶವನ್ನು ನೀಡಲಾಗುತ್ತಿದೆ ಎಂದು ಉಲ್ಲೇಖಿಸಲಾಗಿತ್ತು.

ಇದನ್ನು ಓದಿ: ಎಸ್‌ಬಿಐ ಮುಖ್ಯಸ್ಥರ ರಾಜೀನಾಮೆಗೆ ನೌಕರರ ಒಕ್ಕೂಟ ಒತ್ತಾಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...