Homeಮುಖಪುಟಸಿಎಎ ಮತ್ತು ಭಾರತೀಯ ಮುಸ್ಲಿಮರ ಕುರಿತ ಧನಾತ್ಮಕ ನಿರೂಪಣೆ PIB ವೆಬ್‌ಪೇಜ್‌ನಿಂದ ನಾಪತ್ತೆ!

ಸಿಎಎ ಮತ್ತು ಭಾರತೀಯ ಮುಸ್ಲಿಮರ ಕುರಿತ ಧನಾತ್ಮಕ ನಿರೂಪಣೆ PIB ವೆಬ್‌ಪೇಜ್‌ನಿಂದ ನಾಪತ್ತೆ!

- Advertisement -
- Advertisement -

ಗೃಹ ಸಚಿವಾಲಯ ಬಿಡುಗಡೆ ಮಾಡಿದ ಸಿಎಎ ಮತ್ತು ಭಾರತೀಯ ಮುಸ್ಲಿಮರ ಕುರಿತ ‘ಧನಾತ್ಮಕ ನಿರೂಪಣೆ’  ಪಿಐಬಿ(ಪ್ರೆಸ್‌ ಇನ್ಪೋರ್ಮೇಶನ್‌ ಬ್ಯೂರೋ) ವೆಬ್‌ಪೇಜ್‌ನಿಂದ ತೆಗೆದು ಹಾಕಲಾಗಿದೆ ಎಂದು ದಿ ವೈರ್‌ ವರದಿ ಮಾಡಿದೆ.

‘ಪೌರತ್ವ ತಿದ್ದುಪಡಿ ಕಾಯಿದೆ-2019’ ಇಸ್ಲಾಂನ್ನು ಶೋಷಣೆಯ ಹೆಸರಿನಲ್ಲಿ ಕಳಂಕಗೊಳಿಸದಂತೆ ರಕ್ಷಿಸುತ್ತದೆ ಎಂದು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯದ ಪತ್ರಿಕಾ ಪ್ರಕಟಣೆಯು ಅದರ ಮೂಲ ಪತ್ರಿಕಾ ಮಾಹಿತಿ ಬ್ಯೂರೋ (ಪಿಐಬಿ) ವೆಬ್‌ಪುಟದಲ್ಲಿ ಮತ್ತು ಎಕ್ಸ್‌ ಪೇಜ್‌ನಲ್ಲಿ ಇನ್ನು ಮುಂದೆ ಲಭ್ಯವಿರುವುದಿಲ್ಲ.

ಪೌರತ್ವ ತಿದ್ದುಪಡಿ ಕಾಯಿದೆ-2019ರ ಧನಾತ್ಮಕ ನಿರೂಪಣೆ (Positive Narrative on Citizenship Amendment Act, 2019) ಎಂಬ ಶೀರ್ಷಿಕೆಯ ಪ್ರಶ್ನೋತ್ತರ ಸ್ವರೂಪದ ವಿನ್ಯಾಸದಲ್ಲಿ ಪತ್ರಿಕಾ ಪ್ರಕಟಣೆಯು ಇತ್ತು. CAAಯಿಂದ ಭಾರತದ ಮುಸ್ಲಿಂ ನಾಗರಿಕರ ಪೌರತ್ವದ ಮೇಲೆ ಪ್ರಭಾವ ಬೀರುವುದಿಲ್ಲ ಎಂದು ಉಲ್ಲೇಖಿಸಲಾಗಿತ್ತು. ಮಾರ್ಚ್ 12ರ ಮಂಗಳವಾರ ಸಂಜೆ 6:43ಕ್ಕೆ ಪಿಐಬಿ ವೆಬ್‌ಸೈಟ್‌ಗೆ ಪೋಸ್ಟ್ ಮಾಡಲಾಗಿದೆ. ಈ ಪ್ರಕಟಣೆಯು ಈಗ ಏಕೆ ಲಭ್ಯವಿಲ್ಲ ಎಂಬುವುದು ಸ್ಪಷ್ಟವಾಗಿಲ್ಲ. ಈ ಬಗ್ಗೆ PIBಯ ಎಕ್ಸ್‌ ಪುಟದಲ್ಲಿ ಕೂಡ ಪೋಸ್ಟ್‌ ಮಾಡಲಾಗಿತ್ತು.

ಸಿಎಎ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ 2015ರ ಮೊದಲು ಭಾರತಕ್ಕೆ ಆಗಮಿಸಿದ ಹಿಂದೂಗಳು, ಪಾರ್ಸಿಗಳು, ಸಿಖ್ಖರು, ಬೌದ್ಧರು, ಜೈನರು ಮತ್ತು ಕ್ರಿಶ್ಚಿಯನ್ನರು ಕಿರುಕುಳದಿಂದ ಪಲಾಯನ ಮಾಡುವವರಿಗೆ ಪೌರತ್ವವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಶಾಸನದ ನಿಬಂಧನೆಗಳಿಂದ ಮುಸ್ಲಿಮರನ್ನು ಹೊರಗಿಡಲಾಗಿತ್ತು ಮತ್ತು ಎನ್‌ಆರ್‌ಸಿ ವೇಳೆ ಭಾರತದಲ್ಲಿನ ಅನೇಕ ಮುಸ್ಲಿಮರ ಪೌರತ್ವವನ್ನು ಕಸಿದುಕೊಳ್ಳುತ್ತದೆ ಎಂಬ ಆತಂಕವು ಮನೆ ಮಾಡಿತ್ತು, ಇದು ದೇಶಾದ್ಯಂತ ಸಿಎಎ ವಿರುದ್ಧ ವಿರೋಧಕ್ಕೆ ಮತ್ತು  ಭಾರೀ ಪ್ರತಿಭಟನೆಗೆ ಕಾರಣವಾಗಿತ್ತು.

ಸಂಸತ್ತು 2019ರ ಕೊನೆಯಲ್ಲಿ ಶಾಸನವನ್ನು ಅಂಗೀಕರಿಸಿದೆ, ಆದರೆ ಸರ್ಕಾರವು ಅದರ ನಿಯಮಗಳನ್ನು ನಿನ್ನೆಯಷ್ಟೇ ಬಹಿರಂಗಪಡಿಸಿದೆ. ನಿಯಮಗಳಿಲ್ಲದೆ ಸಿಎಎ ಜಾರಿಗೆ ತರಲು ಸಾಧ್ಯವಿಲ್ಲ.

ಗೃಹ ವ್ಯವಹಾರಗಳ ಸಚಿವಾಲಯದ ಪ್ರಶ್ನೆಗಳಲ್ಲಿ CAA ಇಸ್ಲಾಂ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂದು ಕೇಳಲಾಗಿದೆ..

ಈ ಪ್ರಶ್ನೆಗೆ ಉತ್ತರ ಹೀಗಿತ್ತು: ಆ ಮೂರು ಮುಸ್ಲಿಂ ರಾಷ್ಟ್ರಗಳಲ್ಲಿ ಅಲ್ಪಸಂಖ್ಯಾತರ ಮೇಲಿನ ಕಿರುಕುಳದಿಂದಾಗಿ, ಪ್ರಪಂಚದಾದ್ಯಂತ ಇಸ್ಲಾಂ ಧರ್ಮದ ಹೆಸರಿಗೆ ಕಳಂಕಿ ಉಂಟಾಗಿತ್ತು. ಆದರೆ ಇಸ್ಲಾಂ ಶಾಂತಿಯುತ ಧರ್ಮವಾಗಿರುವುದರಿಂದ, ದ್ವೇಷ, ಹಿಂಸೆ, ಧಾರ್ಮಿಕ ನೆಲೆಯಲ್ಲಿ ಯಾವುದೇ ಕಿರುಕುಳವನ್ನು ಎಂದಿಗೂ ಬೋಧಿಸುವುದಿಲ್ಲ ಅಥವಾ ಸೂಚಿಸುವುದಿಲ್ಲ. ಈ ಕಾಯ್ದೆಯು ಶೋಷಣೆಗೆ ಸಹಾನುಭೂತಿ ಮತ್ತು ಪರಿಹಾರವನ್ನು ಹೇಳುತ್ತದೆ, ಶೋಷಣೆಯ ಹೆಸರಿನಲ್ಲಿ ಇಸ್ಲಾಂ ಧರ್ಮವನ್ನು ಕಳಂಕಗೊಳಿಸದಂತೆ ರಕ್ಷಿಸುತ್ತದೆ ಎಂದು ಉಲ್ಲೇಖಿಸಿತ್ತು.

ಭಾರತೀಯ ಮುಸ್ಲಿಮರು ಪೌರತ್ವದ ಮೇಲೆ ಪರಿಣಾಮ ಬೀರುವ ಯಾವುದೇ ನಿಬಂಧನೆಯನ್ನು ಸಿಎಎ ಹೊಂದಿಲ್ಲ, ಆದ್ದರಿಂದ ಅವರು ಈ ಬಗ್ಗೆ ಚಿಂತಿಸಬೇಕಾಗಿಲ್ಲ. ಪ್ರಸ್ತುತ 18 ಕೋಟಿ ಭಾರತೀಯ ಮುಸ್ಲಿಮರಿಗೆ ಯಾವುದೇ ಸಂಬಂಧವಿಲ್ಲ, ಅವರು ತಮ್ಮ ಹಿಂದೂಗಳಂತೆಯೇ ಸಮಾನ ಹಕ್ಕುಗಳನ್ನು ಹೊಂದಿದ್ದಾರೆ. ಸಿಎಎ ಕಾಯ್ದೆಯು ಯಾವುದೇ ಭಾರತೀಯ ನಾಗರಿಕನಲ್ಲಿ ತನ್ನ ಪೌರತ್ವವನ್ನು ಸಾಬೀತುಪಡಿಸಲು ದಾಖಲೆಯನ್ನು ನೀಡುವಂತೆ ಕೇಳುವುದಿಲ್ಲ ಎಂದು ಅದರಲ್ಲಿ ಉಲ್ಲೇಖಿಸಲಾಗಿತ್ತು.

ಅಕ್ರಮ ಮುಸ್ಲಿಮ್ ವಲಸಿಗರನ್ನು ವಾಪಸು ಕಳುಹಿಸಲು ಅಫ್ಘಾನಿಸ್ತಾನ, ಪಾಕಿಸ್ತಾನ ಅಥವಾ ಬಾಂಗ್ಲಾದೇಶದೊಂದಿಗೆ ಭಾರತವು ಒಪ್ಪಂದವನ್ನು ಹೊಂದಿಲ್ಲ. ಈ ಪೌರತ್ವ ಕಾಯಿದೆಯು ಅಕ್ರಮ ವಲಸಿಗರ ಗಡೀಪಾರು ಮಾಡುವುದನ್ನು ಹೇಳುವುದಿಲ್ಲ, ಆದ್ದರಿಂದ CAA ಮುಸ್ಲಿಂ ಅಲ್ಪಸಂಖ್ಯಾತರ ವಿರುದ್ಧವಾಗಿದೆ ಎಂಬ ಮುಸ್ಲಿಮರು ಮತ್ತು ವಿದ್ಯಾರ್ಥಿಗಳು ಸೇರಿದಂತೆ ಜನರ ಒಂದು ವರ್ಗದ ನಿರೂಪಣೆಯು ತಪ್ಪಾಗಿದೆ ಎಂದು ಹೇಳಲಾಗಿದೆ.

ಪೌರತ್ವ ಕಾಯ್ದೆಯನ್ನು ಏಕೆ ತಿದ್ದುಪಡಿ ಮಾಡುವ ಅಗತ್ಯವಿದೆ ಎಂದು ಕೇಳಿದ ಪ್ರಶ್ನೆಗೆ, ಅಕ್ರಮ ವಲಸಿಗರನ್ನು ನಿಯಂತ್ರಿಸುವ ಅಗತ್ಯವಿದೆ ಎಂದು ಉಲ್ಲೇಖಿಸಲಾಗಿದೆ. ಮೂರು ದೇಶಗಳ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರ ಮೇಲೆ ಕರುಣೆ ತೋರಿಸಲು, ಭಾರತದ ಉದಾರ ಸಂಸ್ಕೃತಿಯ ಪ್ರಕಾರ ಅವರ ಸಂತೋಷ ಮತ್ತು ಸಮೃದ್ಧ ಭವಿಷ್ಯಕ್ಕಾಗಿ ಭಾರತೀಯ ಪೌರತ್ವವನ್ನು ಪಡೆಯಲು ಅವಕಾಶವನ್ನು ನೀಡಲಾಗುತ್ತಿದೆ ಎಂದು ಉಲ್ಲೇಖಿಸಲಾಗಿತ್ತು.

ಇದನ್ನು ಓದಿ: ಎಸ್‌ಬಿಐ ಮುಖ್ಯಸ್ಥರ ರಾಜೀನಾಮೆಗೆ ನೌಕರರ ಒಕ್ಕೂಟ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...