Homeಮುಖಪುಟಸಿಎಎ ಮತ್ತು ಭಾರತೀಯ ಮುಸ್ಲಿಮರ ಕುರಿತ ಧನಾತ್ಮಕ ನಿರೂಪಣೆ PIB ವೆಬ್‌ಪೇಜ್‌ನಿಂದ ನಾಪತ್ತೆ!

ಸಿಎಎ ಮತ್ತು ಭಾರತೀಯ ಮುಸ್ಲಿಮರ ಕುರಿತ ಧನಾತ್ಮಕ ನಿರೂಪಣೆ PIB ವೆಬ್‌ಪೇಜ್‌ನಿಂದ ನಾಪತ್ತೆ!

- Advertisement -
- Advertisement -

ಗೃಹ ಸಚಿವಾಲಯ ಬಿಡುಗಡೆ ಮಾಡಿದ ಸಿಎಎ ಮತ್ತು ಭಾರತೀಯ ಮುಸ್ಲಿಮರ ಕುರಿತ ‘ಧನಾತ್ಮಕ ನಿರೂಪಣೆ’  ಪಿಐಬಿ(ಪ್ರೆಸ್‌ ಇನ್ಪೋರ್ಮೇಶನ್‌ ಬ್ಯೂರೋ) ವೆಬ್‌ಪೇಜ್‌ನಿಂದ ತೆಗೆದು ಹಾಕಲಾಗಿದೆ ಎಂದು ದಿ ವೈರ್‌ ವರದಿ ಮಾಡಿದೆ.

‘ಪೌರತ್ವ ತಿದ್ದುಪಡಿ ಕಾಯಿದೆ-2019’ ಇಸ್ಲಾಂನ್ನು ಶೋಷಣೆಯ ಹೆಸರಿನಲ್ಲಿ ಕಳಂಕಗೊಳಿಸದಂತೆ ರಕ್ಷಿಸುತ್ತದೆ ಎಂದು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯದ ಪತ್ರಿಕಾ ಪ್ರಕಟಣೆಯು ಅದರ ಮೂಲ ಪತ್ರಿಕಾ ಮಾಹಿತಿ ಬ್ಯೂರೋ (ಪಿಐಬಿ) ವೆಬ್‌ಪುಟದಲ್ಲಿ ಮತ್ತು ಎಕ್ಸ್‌ ಪೇಜ್‌ನಲ್ಲಿ ಇನ್ನು ಮುಂದೆ ಲಭ್ಯವಿರುವುದಿಲ್ಲ.

ಪೌರತ್ವ ತಿದ್ದುಪಡಿ ಕಾಯಿದೆ-2019ರ ಧನಾತ್ಮಕ ನಿರೂಪಣೆ (Positive Narrative on Citizenship Amendment Act, 2019) ಎಂಬ ಶೀರ್ಷಿಕೆಯ ಪ್ರಶ್ನೋತ್ತರ ಸ್ವರೂಪದ ವಿನ್ಯಾಸದಲ್ಲಿ ಪತ್ರಿಕಾ ಪ್ರಕಟಣೆಯು ಇತ್ತು. CAAಯಿಂದ ಭಾರತದ ಮುಸ್ಲಿಂ ನಾಗರಿಕರ ಪೌರತ್ವದ ಮೇಲೆ ಪ್ರಭಾವ ಬೀರುವುದಿಲ್ಲ ಎಂದು ಉಲ್ಲೇಖಿಸಲಾಗಿತ್ತು. ಮಾರ್ಚ್ 12ರ ಮಂಗಳವಾರ ಸಂಜೆ 6:43ಕ್ಕೆ ಪಿಐಬಿ ವೆಬ್‌ಸೈಟ್‌ಗೆ ಪೋಸ್ಟ್ ಮಾಡಲಾಗಿದೆ. ಈ ಪ್ರಕಟಣೆಯು ಈಗ ಏಕೆ ಲಭ್ಯವಿಲ್ಲ ಎಂಬುವುದು ಸ್ಪಷ್ಟವಾಗಿಲ್ಲ. ಈ ಬಗ್ಗೆ PIBಯ ಎಕ್ಸ್‌ ಪುಟದಲ್ಲಿ ಕೂಡ ಪೋಸ್ಟ್‌ ಮಾಡಲಾಗಿತ್ತು.

ಸಿಎಎ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ 2015ರ ಮೊದಲು ಭಾರತಕ್ಕೆ ಆಗಮಿಸಿದ ಹಿಂದೂಗಳು, ಪಾರ್ಸಿಗಳು, ಸಿಖ್ಖರು, ಬೌದ್ಧರು, ಜೈನರು ಮತ್ತು ಕ್ರಿಶ್ಚಿಯನ್ನರು ಕಿರುಕುಳದಿಂದ ಪಲಾಯನ ಮಾಡುವವರಿಗೆ ಪೌರತ್ವವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಶಾಸನದ ನಿಬಂಧನೆಗಳಿಂದ ಮುಸ್ಲಿಮರನ್ನು ಹೊರಗಿಡಲಾಗಿತ್ತು ಮತ್ತು ಎನ್‌ಆರ್‌ಸಿ ವೇಳೆ ಭಾರತದಲ್ಲಿನ ಅನೇಕ ಮುಸ್ಲಿಮರ ಪೌರತ್ವವನ್ನು ಕಸಿದುಕೊಳ್ಳುತ್ತದೆ ಎಂಬ ಆತಂಕವು ಮನೆ ಮಾಡಿತ್ತು, ಇದು ದೇಶಾದ್ಯಂತ ಸಿಎಎ ವಿರುದ್ಧ ವಿರೋಧಕ್ಕೆ ಮತ್ತು  ಭಾರೀ ಪ್ರತಿಭಟನೆಗೆ ಕಾರಣವಾಗಿತ್ತು.

ಸಂಸತ್ತು 2019ರ ಕೊನೆಯಲ್ಲಿ ಶಾಸನವನ್ನು ಅಂಗೀಕರಿಸಿದೆ, ಆದರೆ ಸರ್ಕಾರವು ಅದರ ನಿಯಮಗಳನ್ನು ನಿನ್ನೆಯಷ್ಟೇ ಬಹಿರಂಗಪಡಿಸಿದೆ. ನಿಯಮಗಳಿಲ್ಲದೆ ಸಿಎಎ ಜಾರಿಗೆ ತರಲು ಸಾಧ್ಯವಿಲ್ಲ.

ಗೃಹ ವ್ಯವಹಾರಗಳ ಸಚಿವಾಲಯದ ಪ್ರಶ್ನೆಗಳಲ್ಲಿ CAA ಇಸ್ಲಾಂ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂದು ಕೇಳಲಾಗಿದೆ..

ಈ ಪ್ರಶ್ನೆಗೆ ಉತ್ತರ ಹೀಗಿತ್ತು: ಆ ಮೂರು ಮುಸ್ಲಿಂ ರಾಷ್ಟ್ರಗಳಲ್ಲಿ ಅಲ್ಪಸಂಖ್ಯಾತರ ಮೇಲಿನ ಕಿರುಕುಳದಿಂದಾಗಿ, ಪ್ರಪಂಚದಾದ್ಯಂತ ಇಸ್ಲಾಂ ಧರ್ಮದ ಹೆಸರಿಗೆ ಕಳಂಕಿ ಉಂಟಾಗಿತ್ತು. ಆದರೆ ಇಸ್ಲಾಂ ಶಾಂತಿಯುತ ಧರ್ಮವಾಗಿರುವುದರಿಂದ, ದ್ವೇಷ, ಹಿಂಸೆ, ಧಾರ್ಮಿಕ ನೆಲೆಯಲ್ಲಿ ಯಾವುದೇ ಕಿರುಕುಳವನ್ನು ಎಂದಿಗೂ ಬೋಧಿಸುವುದಿಲ್ಲ ಅಥವಾ ಸೂಚಿಸುವುದಿಲ್ಲ. ಈ ಕಾಯ್ದೆಯು ಶೋಷಣೆಗೆ ಸಹಾನುಭೂತಿ ಮತ್ತು ಪರಿಹಾರವನ್ನು ಹೇಳುತ್ತದೆ, ಶೋಷಣೆಯ ಹೆಸರಿನಲ್ಲಿ ಇಸ್ಲಾಂ ಧರ್ಮವನ್ನು ಕಳಂಕಗೊಳಿಸದಂತೆ ರಕ್ಷಿಸುತ್ತದೆ ಎಂದು ಉಲ್ಲೇಖಿಸಿತ್ತು.

ಭಾರತೀಯ ಮುಸ್ಲಿಮರು ಪೌರತ್ವದ ಮೇಲೆ ಪರಿಣಾಮ ಬೀರುವ ಯಾವುದೇ ನಿಬಂಧನೆಯನ್ನು ಸಿಎಎ ಹೊಂದಿಲ್ಲ, ಆದ್ದರಿಂದ ಅವರು ಈ ಬಗ್ಗೆ ಚಿಂತಿಸಬೇಕಾಗಿಲ್ಲ. ಪ್ರಸ್ತುತ 18 ಕೋಟಿ ಭಾರತೀಯ ಮುಸ್ಲಿಮರಿಗೆ ಯಾವುದೇ ಸಂಬಂಧವಿಲ್ಲ, ಅವರು ತಮ್ಮ ಹಿಂದೂಗಳಂತೆಯೇ ಸಮಾನ ಹಕ್ಕುಗಳನ್ನು ಹೊಂದಿದ್ದಾರೆ. ಸಿಎಎ ಕಾಯ್ದೆಯು ಯಾವುದೇ ಭಾರತೀಯ ನಾಗರಿಕನಲ್ಲಿ ತನ್ನ ಪೌರತ್ವವನ್ನು ಸಾಬೀತುಪಡಿಸಲು ದಾಖಲೆಯನ್ನು ನೀಡುವಂತೆ ಕೇಳುವುದಿಲ್ಲ ಎಂದು ಅದರಲ್ಲಿ ಉಲ್ಲೇಖಿಸಲಾಗಿತ್ತು.

ಅಕ್ರಮ ಮುಸ್ಲಿಮ್ ವಲಸಿಗರನ್ನು ವಾಪಸು ಕಳುಹಿಸಲು ಅಫ್ಘಾನಿಸ್ತಾನ, ಪಾಕಿಸ್ತಾನ ಅಥವಾ ಬಾಂಗ್ಲಾದೇಶದೊಂದಿಗೆ ಭಾರತವು ಒಪ್ಪಂದವನ್ನು ಹೊಂದಿಲ್ಲ. ಈ ಪೌರತ್ವ ಕಾಯಿದೆಯು ಅಕ್ರಮ ವಲಸಿಗರ ಗಡೀಪಾರು ಮಾಡುವುದನ್ನು ಹೇಳುವುದಿಲ್ಲ, ಆದ್ದರಿಂದ CAA ಮುಸ್ಲಿಂ ಅಲ್ಪಸಂಖ್ಯಾತರ ವಿರುದ್ಧವಾಗಿದೆ ಎಂಬ ಮುಸ್ಲಿಮರು ಮತ್ತು ವಿದ್ಯಾರ್ಥಿಗಳು ಸೇರಿದಂತೆ ಜನರ ಒಂದು ವರ್ಗದ ನಿರೂಪಣೆಯು ತಪ್ಪಾಗಿದೆ ಎಂದು ಹೇಳಲಾಗಿದೆ.

ಪೌರತ್ವ ಕಾಯ್ದೆಯನ್ನು ಏಕೆ ತಿದ್ದುಪಡಿ ಮಾಡುವ ಅಗತ್ಯವಿದೆ ಎಂದು ಕೇಳಿದ ಪ್ರಶ್ನೆಗೆ, ಅಕ್ರಮ ವಲಸಿಗರನ್ನು ನಿಯಂತ್ರಿಸುವ ಅಗತ್ಯವಿದೆ ಎಂದು ಉಲ್ಲೇಖಿಸಲಾಗಿದೆ. ಮೂರು ದೇಶಗಳ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರ ಮೇಲೆ ಕರುಣೆ ತೋರಿಸಲು, ಭಾರತದ ಉದಾರ ಸಂಸ್ಕೃತಿಯ ಪ್ರಕಾರ ಅವರ ಸಂತೋಷ ಮತ್ತು ಸಮೃದ್ಧ ಭವಿಷ್ಯಕ್ಕಾಗಿ ಭಾರತೀಯ ಪೌರತ್ವವನ್ನು ಪಡೆಯಲು ಅವಕಾಶವನ್ನು ನೀಡಲಾಗುತ್ತಿದೆ ಎಂದು ಉಲ್ಲೇಖಿಸಲಾಗಿತ್ತು.

ಇದನ್ನು ಓದಿ: ಎಸ್‌ಬಿಐ ಮುಖ್ಯಸ್ಥರ ರಾಜೀನಾಮೆಗೆ ನೌಕರರ ಒಕ್ಕೂಟ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...