Homeಮುಖಪುಟಅನುಮಾನದ ರೋಗ: ಹೆಣ್ಣುಮಕ್ಕಳ ಫೋಟೋ ಎಫ್‌ಬಿಯಲ್ಲಿ ಪೋಸ್ಟ್‌ ಮಾಡಿ ವಿಕೃತಿ

ಅನುಮಾನದ ರೋಗ: ಹೆಣ್ಣುಮಕ್ಕಳ ಫೋಟೋ ಎಫ್‌ಬಿಯಲ್ಲಿ ಪೋಸ್ಟ್‌ ಮಾಡಿ ವಿಕೃತಿ

- Advertisement -
- Advertisement -

ಕೆಲವು ಹಣವಂತರ ಅಹಂಕಾರ ಹೇಗೆಲ್ಲ ಪ್ರದರ್ಶನವಾಗುತ್ತದೆ, ಮಾನವ ಹಕ್ಕುಗಳು ಹೇಗೆಲ್ಲ ಉಲ್ಲಂಘನೆಯಾಗುತ್ತವೆ ಎಂಬುದಕ್ಕೆ ತಾಜಾ ನಿದರ್ಶನವಾಗಿ ‘ಹೆಲ್ಪ್‌ಚೆಕ್ಕರ್‌ ಹೆಲ್ಪಿಂಗ್ ಟ್ರೀ’ ಎಂಬ ಫೇಸ್‌ಬುಕ್‌ ಗ್ರೂಪ್‌ನ ಚಟುವಟಿಕೆಗಳು ಕಾಣಿಸಿಕೊಂಡಿವೆ.

ಪ್ರೈವೇಟ್‌ ಗ್ರೂಪ್ ಆಗಿರುವ ‘HelpChecker – Helping Tree’ ಮನೆಗೆಲಸದ ಹೆಣ್ಣುಮಕ್ಕಳ ಫೋಟೋಗಳನ್ನು ಹಾಕಿ ವಿಕೃತಿ ಮೆರೆಯುತ್ತಿದೆ. 13,227 ಸದಸ್ಯರನ್ನು ಹೊಂದಿರುವ ಈ ಗ್ರೂಪ್‌ 2015ರಿಂದಲೂ ಚಾಲ್ತಿಯಲ್ಲಿದೆ. ಏಪ್ರಿಲ್‌ 15, 2015ರಂದು ಗ್ರೂಪ್‌ ರಚನೆಯಾಗಿದೆ. ಕಾಲಕಾಲಕ್ಕೆ ಹೆಸರನ್ನು ಬದಲಾಯಿಸಲಾಗಿದೆ.

HELPCHECKER- MOMS & DADS WATCH OUT FOR THESE, MOMS & DADS WATCH OUT FOR THESE- HELPCHECKER, HELPCHECKER – Domestic Diaries ಹೀಗೆ ಆಗಾಗ್ಗೆ ಹೆಸರುಗಳನ್ನು ಬದಲಾಯಿಸಲಾಗಿದೆ. ಈಗ ಹೆಲ್ಪ್‌ಚೆಕ್ಕರ್‌- ಹೆಲ್ಪಿಂಗ್ ಟ್ರೀ ಎಂಬ ಅಂದದ ಹೆಸರನ್ನು ಇಟ್ಟುಕೊಂಡಿದ್ದು, ಮಾಡುತ್ತಿರುವ ಪೋಸ್ಟ್‌ಗಳು ಮಾತ್ರ ಆಘಾತಕಾರಿಯಾಗಿವೆ. ರುತ್ವಿಕ್‌ ಚಟರ್ಜಿ ಮತ್ತು ರಾಚೆಲ್‌ ಫರ್ನಾಂಡೀಸ್‌ ಚಟರ್ಜಿ ಎಂಬವರು ಈ ಗ್ರೂಪ್‌ನ ಅಡ್ಮಿನ್‌ ಆಗಿದ್ದಾರೆ. ರುತ್ವಿಕ್‌ ಅವರು ಆಸ್ಟ್ರೇಲಿಯಾದ ಮೊನಷ ವಿವಿಯಲ್ಲಿ ಓದಿದವರೆಂದು ಪ್ರೊಫೈಲ್‌ ಹೇಳುತ್ತದೆ. ರಾಚೆಲ್ ಅವರು ಮುಂಬೈ ಮೂಲದವರಾಗಿದ್ದಾರೆ.

“ಅತ್ಯಂತ ಅನಿರೀಕ್ಷಿತ ಮೂಲಗಳಿಂದ ಸಹಾಯವು ಎಲ್ಲಾ ರೂಪಗಳಲ್ಲಿ ಬರಲಿದೆ. ಈ ಸಮುದಾಯವು ನಿಮಗೆ ಸರಿಯಾದ ಸಹಾಯವನ್ನು ನೀಡುತ್ತದೆ” ಎಂದು ಗ್ರೂಪ್‌‌ನ ಅಡ್ಮಿನ್ ಬರೆದುಕೊಂಡಿದ್ದಾರೆ.

“ಒಂದೆರಡು ವರ್ಷಗಳ ಹಿಂದೆ ನಾನು ತುಂಬಾ ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಎಂದು ತೋರುವ ದಾದಿಯನ್ನು ನೇಮಿಸಿಕೊಂಡಾಗ ಕೆಟ್ಟ ಅನುಭವವಾಯಿತು. ಆಕೆ ಕೋಪಗೊಳ್ಳುತ್ತಿದ್ದಳು, ನನ್ನ ಮಗನನ್ನು ಹಿಂಸಿಸಿದಳು. ಆಗ ನಾನು ಅರಿತುಕೊಂಡೆ, ನಮ್ಮ ಮನೆಗಳಿಗೆ ಯಾರನ್ನಾದರೂ ಕರೆತರುವ ಮೊದಲು ಅವರ ಎಲ್ಲ ಪೂರ್ವಪರವನ್ನು ತಿಳಿಯಬೇಕು ಎಂದು.”

ಇದನ್ನೂ ಓದಿರಿ: ಲಂಡನ್‌ನಲ್ಲಿ 300 ಎಕರೆ ಎಸ್ಟೇಟ್ ಖರೀದಿಸಿದ ಅಂಬಾನಿ: ಭಾರತ ಬಿಟ್ಟು ಹೋಗುವುದಿಲ್ಲ ಎಂದು ಸ್ಪಷ್ಟನೆ

“ಅವರು ನಮ್ಮ ಮನೆಗಳನ್ನು ಸ್ವಚ್ಛವಾಗಿಡುತ್ತಾರೆ, ಅವರು ನಮ್ಮ ಮೇಜಿನ ಮೇಲೆ ಬಿಸಿಬಿಸಿ ಊಟವಿಡುತ್ತಾರೆ, ನಮ್ಮ ಮಕ್ಕಳನ್ನು ನೋಡಿಕೊಳ್ಳುತ್ತಾರೆ, ನಮ್ಮ ಕಾರುಗಳನ್ನು ಓಡಿಸುತ್ತಾರೆ, ನಮ್ಮ ಕೆಲಸಗಳನ್ನು ಮಾಡುತ್ತಾರೆ, ಕಚೇರಿಗಳಲ್ಲಿ ಸಹಾಯ ಮಾಡುತ್ತಾರೆ ಮತ್ತು ಇನ್ನೂ ಹೆಚ್ಚಿನ ಕೆಲಸಗಳನ್ನು ಮಾಡುತ್ತಾರೆ. ನಾವು ಅವರಿಲ್ಲದೆ ಬದುಕಲು ಸಾಧ್ಯವಿಲ್ಲ. ನಾವು ಯಾವಾಗಲೂ ಅವರಿಗೆ ಕೃತಜ್ಞರಾಗಿರುತ್ತೇವೆ. ಆದರೆ ಪ್ರತಿ ನಾಣ್ಯಕ್ಕೂ ಯಾವಾಗಲೂ ಎರಡು ಮುಖಗಳಿರುತ್ತವೆ. ಆದ್ದರಿಂದ ನಾವು ಯಾರನ್ನು ನೇಮಿಸಿಕೊಳ್ಳುತ್ತಿದ್ದೇವೆ, ಯಾರನ್ನು ನಮ್ಮ ಮನೆಗೆ ಬಿಡುತ್ತಿದ್ದೇವೆ ಎಂಬುದು ನಮಗೆ ತಿಳಿದಿರುವುದು ಬಹಳ ಮುಖ್ಯ” ಎಂದು ಅಡ್ಮಿನ್ ಹೇಳಿಕೊಂಡಿದ್ದಾರೆ.

“ಮನೆ ನಮ್ಮ ವೈಯಕ್ತಿಕ ಜಾಗ. ಕಳ್ಳತನ ಮಾಡಿದವರು, ಯಾರೊಬ್ಬರ ಮಗುವನ್ನು ಹೊಡೆದವರು, ವೃದ್ಧ ದಂಪತಿಯನ್ನು ಕೊಂದವರು, ಜೈಲಿನಿಂದ ಹೊರಬಂದಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಬೇಕು. ಕೆಲಸಕ್ಕೆ ತೆಗೆದುಕೊಳ್ಳುವ ಮುನ್ನ ಈ ಹಿಂದೆ ಇವರು ಎಲ್ಲಿ ಕೆಲಸ ಮಾಡುತ್ತಿದ್ದರೆಂದು ತಿಳಿದು, ಅಲ್ಲಿನ ಮಾಲೀಕರಿಂದ ಪ್ರತಿಕ್ರಿಯೆ ಪಡೆಯಬೇಕು…”

– ಹೀಗೆ ಗ್ರೂಪ್‌ನ ಉದ್ದೇಶವನ್ನು ಅಡ್ಮಿನ್‌ ಬರೆದುಕೊಂಡಿದ್ದಾರೆ. ನಿತ್ಯವೂ ಒಂದಲ್ಲ ಒಂದು ಹೆಣ್ಣುಮಕ್ಕಳ ಫೋಟೋ ಹಾಕಿ ಅಭಿಪ್ರಾಯ ಕೇಳಲಾಗುತ್ತಿದೆ. ಎಲ್ಲೋ ಒಂದು ಕಡೆ ಆಗಿದ್ದನ್ನು ನೆಪವಾಗಿಟ್ಟುಕೊಂಡು ಮನೆಗೆಲಸಕ್ಕೆ ಸೇರುವ ಎಲ್ಲ ಹೆಣ್ಣು ಮಕ್ಕಳ ಮೇಲೆ ಅನುಮಾನಪಡುವುದು ಎಷ್ಟು ಸರಿ? ಅವರ ಫೋಟೋಗಳನ್ನು ಸಾರ್ವಜನಿಕ ವೇದಿಕೆಯಲ್ಲಿ ಹಾಕಿ ಅಭಿಪ್ರಾಯ ಕೇಳುವುದು ವಿಕೃತಿಯಲ್ಲವೇ?

ಈ ಖಾಸಗಿ ಗ್ರೂಪ್‌ನಲ್ಲಿದ್ದ ಒಬ್ಬರು ‘ನಾನುಗೌರಿ.ಕಾಂ’ಗೆ ಮಾಹಿತಿ ನೀಡಿದ್ದಾರೆ. ಗ್ರೂಪ್‌ನಲ್ಲಿ ಹಾಕಿರುವ ಫೋಟೋಗಳ ಸ್ಕ್ರೀನ್‌ಶಾಟ್‌ಗಳನ್ನು ನಮ್ಮೊಂದಿಗೆ ಹಂಚಿಕೊಂಡಿದ್ದಾರೆ. ಮನೆಗೆಲಸದವರ ಖಾಸಗಿತನ ಹಾಗೂ ಮಾನವ ಹಕ್ಕುಗಳಿಗೆ ಈ ಗ್ರೂಪ್‌ನಲ್ಲಿ ಬೆಲೆ ಇಲ್ಲವಾಗಿದೆ ಎಂದು ವಿಷಾದಿಸಿದ್ದಾರೆ.

ಕೆಲವು ಹೆಣ್ಣು ಮಕ್ಕಳ ಫೋಟೋವನ್ನು ಹಾಕಿ, ಇವರನ್ನು ಯಾರೂ ಕೆಲಸಕ್ಕೆ ತೆಗೆದುಕೊಳ್ಳಬೇಡಿ, ನಾವು ಬ್ಲಾಕ್‌ಲಿಸ್ಟ್‌ಗೆ ಹಾಕಿದ್ದೇವೆ ಎಂದು ಪೋಸ್ಟ್‌ ಮಾಡಲಾಗಿದೆ. ಇದನ್ನು ಪ್ರಶ್ನಿಸಿದವರನ್ನು ಗ್ರೂಪ್‌ನಿಂದ ಹೊರಹಾಕುವ ಕೆಲಸವೂ ನಡೆಯುತ್ತಿದೆ. ಹೆಚ್ಚಿನ ವಿವರ ಪಡೆಯಲು ನಾನುಗೌರಿ.ಕಾಂ ತಂಡವು ಗ್ರೂಪ್‌ಗೆ ಪ್ರವೇಶಿಸಲು ಯತ್ನಿಸಿತು. ಅಡ್ಮಿನ್‌ ಅವಕಾಶ ನೀಡದ ಕಾರಣ, ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ.

ಬದುಕಿನ ಅನಿವಾರ್ಯತೆಗೆ ಸಿಲುಕಿ ಮನೆಗೆಲಸಕ್ಕೆ ಹೋಗುವ ಹೆಣ್ಣುಮಕ್ಕಳ ಮೇಲೆ ಈ ರೀತಿಯ ಅಮಾನುಷವಾಗಿ ವರ್ತಿಸುವುದು ಜಗತ್ತಿನ ಯಾವ ಮೂಲೆಯಲ್ಲಿ ನಡೆದರೂ ಖಂಡನೀಯ. ಇದೇ ರೀತಿಯ ಖಾಸಗಿ ಗ್ರೂಪ್‌ಗಳು ಬೆಂಗಳೂರಿನಲ್ಲಿಯೂ ಇರಬಹುದು.

ಮಹಿಳೆಯರ ಹಕ್ಕುಗಳ ಪರವಾಗಿ ದನಿ ಜೋರಾಗುತ್ತಿರುವ ಈ ಹೊತ್ತಿನಲ್ಲಿ ಇಂತಹ ವಿದ್ಯಮಾನಗಳು ಬೆಳಕಿಗೆ ಬರುವುದು ಆತಂಕಕಾರಿ. ಈ ರೀತಿ ಪ್ರಕರಣಗಳು ಕಂಡು ಬಂದಲ್ಲಿ ಪ್ರಜ್ಞಾವಂತರು ರಿಪೋರ್ಟ್ ಮಾಡಬೇಕಾಗಿ ವಿನಂತಿ. ಸಾಮಾಜಿಕ ಮಾಧ್ಯಮಗಳು ಹೀಗೆಲ್ಲ ದುರ್ಬಳಕೆ ಆಗುವುದು ತಪ್ಪಬೇಕಿದೆ.

ಯಾವುದೇ ಜೀವನ ಭದ್ರತೆ ಇಲ್ಲದೆ ಅತ್ಯಂತ ಕಡಿಮೆ ಸಂಬಳಕ್ಕೆ ದುಡಿಯುತ್ತಿರುವ ಮನೆಗೆಲಸದ ಹೆಣ್ಣು ಮಕ್ಕಳನ್ನು ಇಷ್ಟು ಕ್ರೂರವಾಗಿ ನಡೆಸಿಕೊಳ್ಳುವುದು ದುರಾದೃಷ್ಟಕರ. ಆಧುನಿಕವಾಗಿ ಮುಂದುವರಿಯುತ್ತಿರುವ ಸಮಾಜವು ಇವುಗಳ ವಿರುದ್ಧ ದನಿ ಎತ್ತಬೇಕಿದೆ.


ಇದನ್ನೂ ಓದಿರಿ: ಇನ್ನೆಂದೂ ಆಗಿರದಷ್ಟು ಬಡತನ ಕಳೆದ 8 ವರ್ಷಗಳಲ್ಲಿ ಭಾರತದಲ್ಲಿ ಹೆಚ್ಚಳ: ಅಧ್ಯಯನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...