Homeಮುಖಪುಟಅನುಮಾನದ ರೋಗ: ಹೆಣ್ಣುಮಕ್ಕಳ ಫೋಟೋ ಎಫ್‌ಬಿಯಲ್ಲಿ ಪೋಸ್ಟ್‌ ಮಾಡಿ ವಿಕೃತಿ

ಅನುಮಾನದ ರೋಗ: ಹೆಣ್ಣುಮಕ್ಕಳ ಫೋಟೋ ಎಫ್‌ಬಿಯಲ್ಲಿ ಪೋಸ್ಟ್‌ ಮಾಡಿ ವಿಕೃತಿ

- Advertisement -
- Advertisement -

ಕೆಲವು ಹಣವಂತರ ಅಹಂಕಾರ ಹೇಗೆಲ್ಲ ಪ್ರದರ್ಶನವಾಗುತ್ತದೆ, ಮಾನವ ಹಕ್ಕುಗಳು ಹೇಗೆಲ್ಲ ಉಲ್ಲಂಘನೆಯಾಗುತ್ತವೆ ಎಂಬುದಕ್ಕೆ ತಾಜಾ ನಿದರ್ಶನವಾಗಿ ‘ಹೆಲ್ಪ್‌ಚೆಕ್ಕರ್‌ ಹೆಲ್ಪಿಂಗ್ ಟ್ರೀ’ ಎಂಬ ಫೇಸ್‌ಬುಕ್‌ ಗ್ರೂಪ್‌ನ ಚಟುವಟಿಕೆಗಳು ಕಾಣಿಸಿಕೊಂಡಿವೆ.

ಪ್ರೈವೇಟ್‌ ಗ್ರೂಪ್ ಆಗಿರುವ ‘HelpChecker – Helping Tree’ ಮನೆಗೆಲಸದ ಹೆಣ್ಣುಮಕ್ಕಳ ಫೋಟೋಗಳನ್ನು ಹಾಕಿ ವಿಕೃತಿ ಮೆರೆಯುತ್ತಿದೆ. 13,227 ಸದಸ್ಯರನ್ನು ಹೊಂದಿರುವ ಈ ಗ್ರೂಪ್‌ 2015ರಿಂದಲೂ ಚಾಲ್ತಿಯಲ್ಲಿದೆ. ಏಪ್ರಿಲ್‌ 15, 2015ರಂದು ಗ್ರೂಪ್‌ ರಚನೆಯಾಗಿದೆ. ಕಾಲಕಾಲಕ್ಕೆ ಹೆಸರನ್ನು ಬದಲಾಯಿಸಲಾಗಿದೆ.

HELPCHECKER- MOMS & DADS WATCH OUT FOR THESE, MOMS & DADS WATCH OUT FOR THESE- HELPCHECKER, HELPCHECKER – Domestic Diaries ಹೀಗೆ ಆಗಾಗ್ಗೆ ಹೆಸರುಗಳನ್ನು ಬದಲಾಯಿಸಲಾಗಿದೆ. ಈಗ ಹೆಲ್ಪ್‌ಚೆಕ್ಕರ್‌- ಹೆಲ್ಪಿಂಗ್ ಟ್ರೀ ಎಂಬ ಅಂದದ ಹೆಸರನ್ನು ಇಟ್ಟುಕೊಂಡಿದ್ದು, ಮಾಡುತ್ತಿರುವ ಪೋಸ್ಟ್‌ಗಳು ಮಾತ್ರ ಆಘಾತಕಾರಿಯಾಗಿವೆ. ರುತ್ವಿಕ್‌ ಚಟರ್ಜಿ ಮತ್ತು ರಾಚೆಲ್‌ ಫರ್ನಾಂಡೀಸ್‌ ಚಟರ್ಜಿ ಎಂಬವರು ಈ ಗ್ರೂಪ್‌ನ ಅಡ್ಮಿನ್‌ ಆಗಿದ್ದಾರೆ. ರುತ್ವಿಕ್‌ ಅವರು ಆಸ್ಟ್ರೇಲಿಯಾದ ಮೊನಷ ವಿವಿಯಲ್ಲಿ ಓದಿದವರೆಂದು ಪ್ರೊಫೈಲ್‌ ಹೇಳುತ್ತದೆ. ರಾಚೆಲ್ ಅವರು ಮುಂಬೈ ಮೂಲದವರಾಗಿದ್ದಾರೆ.

“ಅತ್ಯಂತ ಅನಿರೀಕ್ಷಿತ ಮೂಲಗಳಿಂದ ಸಹಾಯವು ಎಲ್ಲಾ ರೂಪಗಳಲ್ಲಿ ಬರಲಿದೆ. ಈ ಸಮುದಾಯವು ನಿಮಗೆ ಸರಿಯಾದ ಸಹಾಯವನ್ನು ನೀಡುತ್ತದೆ” ಎಂದು ಗ್ರೂಪ್‌‌ನ ಅಡ್ಮಿನ್ ಬರೆದುಕೊಂಡಿದ್ದಾರೆ.

“ಒಂದೆರಡು ವರ್ಷಗಳ ಹಿಂದೆ ನಾನು ತುಂಬಾ ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಎಂದು ತೋರುವ ದಾದಿಯನ್ನು ನೇಮಿಸಿಕೊಂಡಾಗ ಕೆಟ್ಟ ಅನುಭವವಾಯಿತು. ಆಕೆ ಕೋಪಗೊಳ್ಳುತ್ತಿದ್ದಳು, ನನ್ನ ಮಗನನ್ನು ಹಿಂಸಿಸಿದಳು. ಆಗ ನಾನು ಅರಿತುಕೊಂಡೆ, ನಮ್ಮ ಮನೆಗಳಿಗೆ ಯಾರನ್ನಾದರೂ ಕರೆತರುವ ಮೊದಲು ಅವರ ಎಲ್ಲ ಪೂರ್ವಪರವನ್ನು ತಿಳಿಯಬೇಕು ಎಂದು.”

ಇದನ್ನೂ ಓದಿರಿ: ಲಂಡನ್‌ನಲ್ಲಿ 300 ಎಕರೆ ಎಸ್ಟೇಟ್ ಖರೀದಿಸಿದ ಅಂಬಾನಿ: ಭಾರತ ಬಿಟ್ಟು ಹೋಗುವುದಿಲ್ಲ ಎಂದು ಸ್ಪಷ್ಟನೆ

“ಅವರು ನಮ್ಮ ಮನೆಗಳನ್ನು ಸ್ವಚ್ಛವಾಗಿಡುತ್ತಾರೆ, ಅವರು ನಮ್ಮ ಮೇಜಿನ ಮೇಲೆ ಬಿಸಿಬಿಸಿ ಊಟವಿಡುತ್ತಾರೆ, ನಮ್ಮ ಮಕ್ಕಳನ್ನು ನೋಡಿಕೊಳ್ಳುತ್ತಾರೆ, ನಮ್ಮ ಕಾರುಗಳನ್ನು ಓಡಿಸುತ್ತಾರೆ, ನಮ್ಮ ಕೆಲಸಗಳನ್ನು ಮಾಡುತ್ತಾರೆ, ಕಚೇರಿಗಳಲ್ಲಿ ಸಹಾಯ ಮಾಡುತ್ತಾರೆ ಮತ್ತು ಇನ್ನೂ ಹೆಚ್ಚಿನ ಕೆಲಸಗಳನ್ನು ಮಾಡುತ್ತಾರೆ. ನಾವು ಅವರಿಲ್ಲದೆ ಬದುಕಲು ಸಾಧ್ಯವಿಲ್ಲ. ನಾವು ಯಾವಾಗಲೂ ಅವರಿಗೆ ಕೃತಜ್ಞರಾಗಿರುತ್ತೇವೆ. ಆದರೆ ಪ್ರತಿ ನಾಣ್ಯಕ್ಕೂ ಯಾವಾಗಲೂ ಎರಡು ಮುಖಗಳಿರುತ್ತವೆ. ಆದ್ದರಿಂದ ನಾವು ಯಾರನ್ನು ನೇಮಿಸಿಕೊಳ್ಳುತ್ತಿದ್ದೇವೆ, ಯಾರನ್ನು ನಮ್ಮ ಮನೆಗೆ ಬಿಡುತ್ತಿದ್ದೇವೆ ಎಂಬುದು ನಮಗೆ ತಿಳಿದಿರುವುದು ಬಹಳ ಮುಖ್ಯ” ಎಂದು ಅಡ್ಮಿನ್ ಹೇಳಿಕೊಂಡಿದ್ದಾರೆ.

“ಮನೆ ನಮ್ಮ ವೈಯಕ್ತಿಕ ಜಾಗ. ಕಳ್ಳತನ ಮಾಡಿದವರು, ಯಾರೊಬ್ಬರ ಮಗುವನ್ನು ಹೊಡೆದವರು, ವೃದ್ಧ ದಂಪತಿಯನ್ನು ಕೊಂದವರು, ಜೈಲಿನಿಂದ ಹೊರಬಂದಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಬೇಕು. ಕೆಲಸಕ್ಕೆ ತೆಗೆದುಕೊಳ್ಳುವ ಮುನ್ನ ಈ ಹಿಂದೆ ಇವರು ಎಲ್ಲಿ ಕೆಲಸ ಮಾಡುತ್ತಿದ್ದರೆಂದು ತಿಳಿದು, ಅಲ್ಲಿನ ಮಾಲೀಕರಿಂದ ಪ್ರತಿಕ್ರಿಯೆ ಪಡೆಯಬೇಕು…”

– ಹೀಗೆ ಗ್ರೂಪ್‌ನ ಉದ್ದೇಶವನ್ನು ಅಡ್ಮಿನ್‌ ಬರೆದುಕೊಂಡಿದ್ದಾರೆ. ನಿತ್ಯವೂ ಒಂದಲ್ಲ ಒಂದು ಹೆಣ್ಣುಮಕ್ಕಳ ಫೋಟೋ ಹಾಕಿ ಅಭಿಪ್ರಾಯ ಕೇಳಲಾಗುತ್ತಿದೆ. ಎಲ್ಲೋ ಒಂದು ಕಡೆ ಆಗಿದ್ದನ್ನು ನೆಪವಾಗಿಟ್ಟುಕೊಂಡು ಮನೆಗೆಲಸಕ್ಕೆ ಸೇರುವ ಎಲ್ಲ ಹೆಣ್ಣು ಮಕ್ಕಳ ಮೇಲೆ ಅನುಮಾನಪಡುವುದು ಎಷ್ಟು ಸರಿ? ಅವರ ಫೋಟೋಗಳನ್ನು ಸಾರ್ವಜನಿಕ ವೇದಿಕೆಯಲ್ಲಿ ಹಾಕಿ ಅಭಿಪ್ರಾಯ ಕೇಳುವುದು ವಿಕೃತಿಯಲ್ಲವೇ?

ಈ ಖಾಸಗಿ ಗ್ರೂಪ್‌ನಲ್ಲಿದ್ದ ಒಬ್ಬರು ‘ನಾನುಗೌರಿ.ಕಾಂ’ಗೆ ಮಾಹಿತಿ ನೀಡಿದ್ದಾರೆ. ಗ್ರೂಪ್‌ನಲ್ಲಿ ಹಾಕಿರುವ ಫೋಟೋಗಳ ಸ್ಕ್ರೀನ್‌ಶಾಟ್‌ಗಳನ್ನು ನಮ್ಮೊಂದಿಗೆ ಹಂಚಿಕೊಂಡಿದ್ದಾರೆ. ಮನೆಗೆಲಸದವರ ಖಾಸಗಿತನ ಹಾಗೂ ಮಾನವ ಹಕ್ಕುಗಳಿಗೆ ಈ ಗ್ರೂಪ್‌ನಲ್ಲಿ ಬೆಲೆ ಇಲ್ಲವಾಗಿದೆ ಎಂದು ವಿಷಾದಿಸಿದ್ದಾರೆ.

ಕೆಲವು ಹೆಣ್ಣು ಮಕ್ಕಳ ಫೋಟೋವನ್ನು ಹಾಕಿ, ಇವರನ್ನು ಯಾರೂ ಕೆಲಸಕ್ಕೆ ತೆಗೆದುಕೊಳ್ಳಬೇಡಿ, ನಾವು ಬ್ಲಾಕ್‌ಲಿಸ್ಟ್‌ಗೆ ಹಾಕಿದ್ದೇವೆ ಎಂದು ಪೋಸ್ಟ್‌ ಮಾಡಲಾಗಿದೆ. ಇದನ್ನು ಪ್ರಶ್ನಿಸಿದವರನ್ನು ಗ್ರೂಪ್‌ನಿಂದ ಹೊರಹಾಕುವ ಕೆಲಸವೂ ನಡೆಯುತ್ತಿದೆ. ಹೆಚ್ಚಿನ ವಿವರ ಪಡೆಯಲು ನಾನುಗೌರಿ.ಕಾಂ ತಂಡವು ಗ್ರೂಪ್‌ಗೆ ಪ್ರವೇಶಿಸಲು ಯತ್ನಿಸಿತು. ಅಡ್ಮಿನ್‌ ಅವಕಾಶ ನೀಡದ ಕಾರಣ, ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ.

ಬದುಕಿನ ಅನಿವಾರ್ಯತೆಗೆ ಸಿಲುಕಿ ಮನೆಗೆಲಸಕ್ಕೆ ಹೋಗುವ ಹೆಣ್ಣುಮಕ್ಕಳ ಮೇಲೆ ಈ ರೀತಿಯ ಅಮಾನುಷವಾಗಿ ವರ್ತಿಸುವುದು ಜಗತ್ತಿನ ಯಾವ ಮೂಲೆಯಲ್ಲಿ ನಡೆದರೂ ಖಂಡನೀಯ. ಇದೇ ರೀತಿಯ ಖಾಸಗಿ ಗ್ರೂಪ್‌ಗಳು ಬೆಂಗಳೂರಿನಲ್ಲಿಯೂ ಇರಬಹುದು.

ಮಹಿಳೆಯರ ಹಕ್ಕುಗಳ ಪರವಾಗಿ ದನಿ ಜೋರಾಗುತ್ತಿರುವ ಈ ಹೊತ್ತಿನಲ್ಲಿ ಇಂತಹ ವಿದ್ಯಮಾನಗಳು ಬೆಳಕಿಗೆ ಬರುವುದು ಆತಂಕಕಾರಿ. ಈ ರೀತಿ ಪ್ರಕರಣಗಳು ಕಂಡು ಬಂದಲ್ಲಿ ಪ್ರಜ್ಞಾವಂತರು ರಿಪೋರ್ಟ್ ಮಾಡಬೇಕಾಗಿ ವಿನಂತಿ. ಸಾಮಾಜಿಕ ಮಾಧ್ಯಮಗಳು ಹೀಗೆಲ್ಲ ದುರ್ಬಳಕೆ ಆಗುವುದು ತಪ್ಪಬೇಕಿದೆ.

ಯಾವುದೇ ಜೀವನ ಭದ್ರತೆ ಇಲ್ಲದೆ ಅತ್ಯಂತ ಕಡಿಮೆ ಸಂಬಳಕ್ಕೆ ದುಡಿಯುತ್ತಿರುವ ಮನೆಗೆಲಸದ ಹೆಣ್ಣು ಮಕ್ಕಳನ್ನು ಇಷ್ಟು ಕ್ರೂರವಾಗಿ ನಡೆಸಿಕೊಳ್ಳುವುದು ದುರಾದೃಷ್ಟಕರ. ಆಧುನಿಕವಾಗಿ ಮುಂದುವರಿಯುತ್ತಿರುವ ಸಮಾಜವು ಇವುಗಳ ವಿರುದ್ಧ ದನಿ ಎತ್ತಬೇಕಿದೆ.


ಇದನ್ನೂ ಓದಿರಿ: ಇನ್ನೆಂದೂ ಆಗಿರದಷ್ಟು ಬಡತನ ಕಳೆದ 8 ವರ್ಷಗಳಲ್ಲಿ ಭಾರತದಲ್ಲಿ ಹೆಚ್ಚಳ: ಅಧ್ಯಯನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....