Homeಮುಖಪುಟಅನುಮಾನದ ರೋಗ: ಹೆಣ್ಣುಮಕ್ಕಳ ಫೋಟೋ ಎಫ್‌ಬಿಯಲ್ಲಿ ಪೋಸ್ಟ್‌ ಮಾಡಿ ವಿಕೃತಿ

ಅನುಮಾನದ ರೋಗ: ಹೆಣ್ಣುಮಕ್ಕಳ ಫೋಟೋ ಎಫ್‌ಬಿಯಲ್ಲಿ ಪೋಸ್ಟ್‌ ಮಾಡಿ ವಿಕೃತಿ

- Advertisement -
- Advertisement -

ಕೆಲವು ಹಣವಂತರ ಅಹಂಕಾರ ಹೇಗೆಲ್ಲ ಪ್ರದರ್ಶನವಾಗುತ್ತದೆ, ಮಾನವ ಹಕ್ಕುಗಳು ಹೇಗೆಲ್ಲ ಉಲ್ಲಂಘನೆಯಾಗುತ್ತವೆ ಎಂಬುದಕ್ಕೆ ತಾಜಾ ನಿದರ್ಶನವಾಗಿ ‘ಹೆಲ್ಪ್‌ಚೆಕ್ಕರ್‌ ಹೆಲ್ಪಿಂಗ್ ಟ್ರೀ’ ಎಂಬ ಫೇಸ್‌ಬುಕ್‌ ಗ್ರೂಪ್‌ನ ಚಟುವಟಿಕೆಗಳು ಕಾಣಿಸಿಕೊಂಡಿವೆ.

ಪ್ರೈವೇಟ್‌ ಗ್ರೂಪ್ ಆಗಿರುವ ‘HelpChecker – Helping Tree’ ಮನೆಗೆಲಸದ ಹೆಣ್ಣುಮಕ್ಕಳ ಫೋಟೋಗಳನ್ನು ಹಾಕಿ ವಿಕೃತಿ ಮೆರೆಯುತ್ತಿದೆ. 13,227 ಸದಸ್ಯರನ್ನು ಹೊಂದಿರುವ ಈ ಗ್ರೂಪ್‌ 2015ರಿಂದಲೂ ಚಾಲ್ತಿಯಲ್ಲಿದೆ. ಏಪ್ರಿಲ್‌ 15, 2015ರಂದು ಗ್ರೂಪ್‌ ರಚನೆಯಾಗಿದೆ. ಕಾಲಕಾಲಕ್ಕೆ ಹೆಸರನ್ನು ಬದಲಾಯಿಸಲಾಗಿದೆ.

HELPCHECKER- MOMS & DADS WATCH OUT FOR THESE, MOMS & DADS WATCH OUT FOR THESE- HELPCHECKER, HELPCHECKER – Domestic Diaries ಹೀಗೆ ಆಗಾಗ್ಗೆ ಹೆಸರುಗಳನ್ನು ಬದಲಾಯಿಸಲಾಗಿದೆ. ಈಗ ಹೆಲ್ಪ್‌ಚೆಕ್ಕರ್‌- ಹೆಲ್ಪಿಂಗ್ ಟ್ರೀ ಎಂಬ ಅಂದದ ಹೆಸರನ್ನು ಇಟ್ಟುಕೊಂಡಿದ್ದು, ಮಾಡುತ್ತಿರುವ ಪೋಸ್ಟ್‌ಗಳು ಮಾತ್ರ ಆಘಾತಕಾರಿಯಾಗಿವೆ. ರುತ್ವಿಕ್‌ ಚಟರ್ಜಿ ಮತ್ತು ರಾಚೆಲ್‌ ಫರ್ನಾಂಡೀಸ್‌ ಚಟರ್ಜಿ ಎಂಬವರು ಈ ಗ್ರೂಪ್‌ನ ಅಡ್ಮಿನ್‌ ಆಗಿದ್ದಾರೆ. ರುತ್ವಿಕ್‌ ಅವರು ಆಸ್ಟ್ರೇಲಿಯಾದ ಮೊನಷ ವಿವಿಯಲ್ಲಿ ಓದಿದವರೆಂದು ಪ್ರೊಫೈಲ್‌ ಹೇಳುತ್ತದೆ. ರಾಚೆಲ್ ಅವರು ಮುಂಬೈ ಮೂಲದವರಾಗಿದ್ದಾರೆ.

“ಅತ್ಯಂತ ಅನಿರೀಕ್ಷಿತ ಮೂಲಗಳಿಂದ ಸಹಾಯವು ಎಲ್ಲಾ ರೂಪಗಳಲ್ಲಿ ಬರಲಿದೆ. ಈ ಸಮುದಾಯವು ನಿಮಗೆ ಸರಿಯಾದ ಸಹಾಯವನ್ನು ನೀಡುತ್ತದೆ” ಎಂದು ಗ್ರೂಪ್‌‌ನ ಅಡ್ಮಿನ್ ಬರೆದುಕೊಂಡಿದ್ದಾರೆ.

“ಒಂದೆರಡು ವರ್ಷಗಳ ಹಿಂದೆ ನಾನು ತುಂಬಾ ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಎಂದು ತೋರುವ ದಾದಿಯನ್ನು ನೇಮಿಸಿಕೊಂಡಾಗ ಕೆಟ್ಟ ಅನುಭವವಾಯಿತು. ಆಕೆ ಕೋಪಗೊಳ್ಳುತ್ತಿದ್ದಳು, ನನ್ನ ಮಗನನ್ನು ಹಿಂಸಿಸಿದಳು. ಆಗ ನಾನು ಅರಿತುಕೊಂಡೆ, ನಮ್ಮ ಮನೆಗಳಿಗೆ ಯಾರನ್ನಾದರೂ ಕರೆತರುವ ಮೊದಲು ಅವರ ಎಲ್ಲ ಪೂರ್ವಪರವನ್ನು ತಿಳಿಯಬೇಕು ಎಂದು.”

ಇದನ್ನೂ ಓದಿರಿ: ಲಂಡನ್‌ನಲ್ಲಿ 300 ಎಕರೆ ಎಸ್ಟೇಟ್ ಖರೀದಿಸಿದ ಅಂಬಾನಿ: ಭಾರತ ಬಿಟ್ಟು ಹೋಗುವುದಿಲ್ಲ ಎಂದು ಸ್ಪಷ್ಟನೆ

“ಅವರು ನಮ್ಮ ಮನೆಗಳನ್ನು ಸ್ವಚ್ಛವಾಗಿಡುತ್ತಾರೆ, ಅವರು ನಮ್ಮ ಮೇಜಿನ ಮೇಲೆ ಬಿಸಿಬಿಸಿ ಊಟವಿಡುತ್ತಾರೆ, ನಮ್ಮ ಮಕ್ಕಳನ್ನು ನೋಡಿಕೊಳ್ಳುತ್ತಾರೆ, ನಮ್ಮ ಕಾರುಗಳನ್ನು ಓಡಿಸುತ್ತಾರೆ, ನಮ್ಮ ಕೆಲಸಗಳನ್ನು ಮಾಡುತ್ತಾರೆ, ಕಚೇರಿಗಳಲ್ಲಿ ಸಹಾಯ ಮಾಡುತ್ತಾರೆ ಮತ್ತು ಇನ್ನೂ ಹೆಚ್ಚಿನ ಕೆಲಸಗಳನ್ನು ಮಾಡುತ್ತಾರೆ. ನಾವು ಅವರಿಲ್ಲದೆ ಬದುಕಲು ಸಾಧ್ಯವಿಲ್ಲ. ನಾವು ಯಾವಾಗಲೂ ಅವರಿಗೆ ಕೃತಜ್ಞರಾಗಿರುತ್ತೇವೆ. ಆದರೆ ಪ್ರತಿ ನಾಣ್ಯಕ್ಕೂ ಯಾವಾಗಲೂ ಎರಡು ಮುಖಗಳಿರುತ್ತವೆ. ಆದ್ದರಿಂದ ನಾವು ಯಾರನ್ನು ನೇಮಿಸಿಕೊಳ್ಳುತ್ತಿದ್ದೇವೆ, ಯಾರನ್ನು ನಮ್ಮ ಮನೆಗೆ ಬಿಡುತ್ತಿದ್ದೇವೆ ಎಂಬುದು ನಮಗೆ ತಿಳಿದಿರುವುದು ಬಹಳ ಮುಖ್ಯ” ಎಂದು ಅಡ್ಮಿನ್ ಹೇಳಿಕೊಂಡಿದ್ದಾರೆ.

“ಮನೆ ನಮ್ಮ ವೈಯಕ್ತಿಕ ಜಾಗ. ಕಳ್ಳತನ ಮಾಡಿದವರು, ಯಾರೊಬ್ಬರ ಮಗುವನ್ನು ಹೊಡೆದವರು, ವೃದ್ಧ ದಂಪತಿಯನ್ನು ಕೊಂದವರು, ಜೈಲಿನಿಂದ ಹೊರಬಂದಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಬೇಕು. ಕೆಲಸಕ್ಕೆ ತೆಗೆದುಕೊಳ್ಳುವ ಮುನ್ನ ಈ ಹಿಂದೆ ಇವರು ಎಲ್ಲಿ ಕೆಲಸ ಮಾಡುತ್ತಿದ್ದರೆಂದು ತಿಳಿದು, ಅಲ್ಲಿನ ಮಾಲೀಕರಿಂದ ಪ್ರತಿಕ್ರಿಯೆ ಪಡೆಯಬೇಕು…”

– ಹೀಗೆ ಗ್ರೂಪ್‌ನ ಉದ್ದೇಶವನ್ನು ಅಡ್ಮಿನ್‌ ಬರೆದುಕೊಂಡಿದ್ದಾರೆ. ನಿತ್ಯವೂ ಒಂದಲ್ಲ ಒಂದು ಹೆಣ್ಣುಮಕ್ಕಳ ಫೋಟೋ ಹಾಕಿ ಅಭಿಪ್ರಾಯ ಕೇಳಲಾಗುತ್ತಿದೆ. ಎಲ್ಲೋ ಒಂದು ಕಡೆ ಆಗಿದ್ದನ್ನು ನೆಪವಾಗಿಟ್ಟುಕೊಂಡು ಮನೆಗೆಲಸಕ್ಕೆ ಸೇರುವ ಎಲ್ಲ ಹೆಣ್ಣು ಮಕ್ಕಳ ಮೇಲೆ ಅನುಮಾನಪಡುವುದು ಎಷ್ಟು ಸರಿ? ಅವರ ಫೋಟೋಗಳನ್ನು ಸಾರ್ವಜನಿಕ ವೇದಿಕೆಯಲ್ಲಿ ಹಾಕಿ ಅಭಿಪ್ರಾಯ ಕೇಳುವುದು ವಿಕೃತಿಯಲ್ಲವೇ?

ಈ ಖಾಸಗಿ ಗ್ರೂಪ್‌ನಲ್ಲಿದ್ದ ಒಬ್ಬರು ‘ನಾನುಗೌರಿ.ಕಾಂ’ಗೆ ಮಾಹಿತಿ ನೀಡಿದ್ದಾರೆ. ಗ್ರೂಪ್‌ನಲ್ಲಿ ಹಾಕಿರುವ ಫೋಟೋಗಳ ಸ್ಕ್ರೀನ್‌ಶಾಟ್‌ಗಳನ್ನು ನಮ್ಮೊಂದಿಗೆ ಹಂಚಿಕೊಂಡಿದ್ದಾರೆ. ಮನೆಗೆಲಸದವರ ಖಾಸಗಿತನ ಹಾಗೂ ಮಾನವ ಹಕ್ಕುಗಳಿಗೆ ಈ ಗ್ರೂಪ್‌ನಲ್ಲಿ ಬೆಲೆ ಇಲ್ಲವಾಗಿದೆ ಎಂದು ವಿಷಾದಿಸಿದ್ದಾರೆ.

ಕೆಲವು ಹೆಣ್ಣು ಮಕ್ಕಳ ಫೋಟೋವನ್ನು ಹಾಕಿ, ಇವರನ್ನು ಯಾರೂ ಕೆಲಸಕ್ಕೆ ತೆಗೆದುಕೊಳ್ಳಬೇಡಿ, ನಾವು ಬ್ಲಾಕ್‌ಲಿಸ್ಟ್‌ಗೆ ಹಾಕಿದ್ದೇವೆ ಎಂದು ಪೋಸ್ಟ್‌ ಮಾಡಲಾಗಿದೆ. ಇದನ್ನು ಪ್ರಶ್ನಿಸಿದವರನ್ನು ಗ್ರೂಪ್‌ನಿಂದ ಹೊರಹಾಕುವ ಕೆಲಸವೂ ನಡೆಯುತ್ತಿದೆ. ಹೆಚ್ಚಿನ ವಿವರ ಪಡೆಯಲು ನಾನುಗೌರಿ.ಕಾಂ ತಂಡವು ಗ್ರೂಪ್‌ಗೆ ಪ್ರವೇಶಿಸಲು ಯತ್ನಿಸಿತು. ಅಡ್ಮಿನ್‌ ಅವಕಾಶ ನೀಡದ ಕಾರಣ, ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ.

ಬದುಕಿನ ಅನಿವಾರ್ಯತೆಗೆ ಸಿಲುಕಿ ಮನೆಗೆಲಸಕ್ಕೆ ಹೋಗುವ ಹೆಣ್ಣುಮಕ್ಕಳ ಮೇಲೆ ಈ ರೀತಿಯ ಅಮಾನುಷವಾಗಿ ವರ್ತಿಸುವುದು ಜಗತ್ತಿನ ಯಾವ ಮೂಲೆಯಲ್ಲಿ ನಡೆದರೂ ಖಂಡನೀಯ. ಇದೇ ರೀತಿಯ ಖಾಸಗಿ ಗ್ರೂಪ್‌ಗಳು ಬೆಂಗಳೂರಿನಲ್ಲಿಯೂ ಇರಬಹುದು.

ಮಹಿಳೆಯರ ಹಕ್ಕುಗಳ ಪರವಾಗಿ ದನಿ ಜೋರಾಗುತ್ತಿರುವ ಈ ಹೊತ್ತಿನಲ್ಲಿ ಇಂತಹ ವಿದ್ಯಮಾನಗಳು ಬೆಳಕಿಗೆ ಬರುವುದು ಆತಂಕಕಾರಿ. ಈ ರೀತಿ ಪ್ರಕರಣಗಳು ಕಂಡು ಬಂದಲ್ಲಿ ಪ್ರಜ್ಞಾವಂತರು ರಿಪೋರ್ಟ್ ಮಾಡಬೇಕಾಗಿ ವಿನಂತಿ. ಸಾಮಾಜಿಕ ಮಾಧ್ಯಮಗಳು ಹೀಗೆಲ್ಲ ದುರ್ಬಳಕೆ ಆಗುವುದು ತಪ್ಪಬೇಕಿದೆ.

ಯಾವುದೇ ಜೀವನ ಭದ್ರತೆ ಇಲ್ಲದೆ ಅತ್ಯಂತ ಕಡಿಮೆ ಸಂಬಳಕ್ಕೆ ದುಡಿಯುತ್ತಿರುವ ಮನೆಗೆಲಸದ ಹೆಣ್ಣು ಮಕ್ಕಳನ್ನು ಇಷ್ಟು ಕ್ರೂರವಾಗಿ ನಡೆಸಿಕೊಳ್ಳುವುದು ದುರಾದೃಷ್ಟಕರ. ಆಧುನಿಕವಾಗಿ ಮುಂದುವರಿಯುತ್ತಿರುವ ಸಮಾಜವು ಇವುಗಳ ವಿರುದ್ಧ ದನಿ ಎತ್ತಬೇಕಿದೆ.


ಇದನ್ನೂ ಓದಿರಿ: ಇನ್ನೆಂದೂ ಆಗಿರದಷ್ಟು ಬಡತನ ಕಳೆದ 8 ವರ್ಷಗಳಲ್ಲಿ ಭಾರತದಲ್ಲಿ ಹೆಚ್ಚಳ: ಅಧ್ಯಯನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...