Homeಮುಖಪುಟಅನುಮಾನದ ರೋಗ: ಹೆಣ್ಣುಮಕ್ಕಳ ಫೋಟೋ ಎಫ್‌ಬಿಯಲ್ಲಿ ಪೋಸ್ಟ್‌ ಮಾಡಿ ವಿಕೃತಿ

ಅನುಮಾನದ ರೋಗ: ಹೆಣ್ಣುಮಕ್ಕಳ ಫೋಟೋ ಎಫ್‌ಬಿಯಲ್ಲಿ ಪೋಸ್ಟ್‌ ಮಾಡಿ ವಿಕೃತಿ

- Advertisement -
- Advertisement -

ಕೆಲವು ಹಣವಂತರ ಅಹಂಕಾರ ಹೇಗೆಲ್ಲ ಪ್ರದರ್ಶನವಾಗುತ್ತದೆ, ಮಾನವ ಹಕ್ಕುಗಳು ಹೇಗೆಲ್ಲ ಉಲ್ಲಂಘನೆಯಾಗುತ್ತವೆ ಎಂಬುದಕ್ಕೆ ತಾಜಾ ನಿದರ್ಶನವಾಗಿ ‘ಹೆಲ್ಪ್‌ಚೆಕ್ಕರ್‌ ಹೆಲ್ಪಿಂಗ್ ಟ್ರೀ’ ಎಂಬ ಫೇಸ್‌ಬುಕ್‌ ಗ್ರೂಪ್‌ನ ಚಟುವಟಿಕೆಗಳು ಕಾಣಿಸಿಕೊಂಡಿವೆ.

ಪ್ರೈವೇಟ್‌ ಗ್ರೂಪ್ ಆಗಿರುವ ‘HelpChecker – Helping Tree’ ಮನೆಗೆಲಸದ ಹೆಣ್ಣುಮಕ್ಕಳ ಫೋಟೋಗಳನ್ನು ಹಾಕಿ ವಿಕೃತಿ ಮೆರೆಯುತ್ತಿದೆ. 13,227 ಸದಸ್ಯರನ್ನು ಹೊಂದಿರುವ ಈ ಗ್ರೂಪ್‌ 2015ರಿಂದಲೂ ಚಾಲ್ತಿಯಲ್ಲಿದೆ. ಏಪ್ರಿಲ್‌ 15, 2015ರಂದು ಗ್ರೂಪ್‌ ರಚನೆಯಾಗಿದೆ. ಕಾಲಕಾಲಕ್ಕೆ ಹೆಸರನ್ನು ಬದಲಾಯಿಸಲಾಗಿದೆ.

HELPCHECKER- MOMS & DADS WATCH OUT FOR THESE, MOMS & DADS WATCH OUT FOR THESE- HELPCHECKER, HELPCHECKER – Domestic Diaries ಹೀಗೆ ಆಗಾಗ್ಗೆ ಹೆಸರುಗಳನ್ನು ಬದಲಾಯಿಸಲಾಗಿದೆ. ಈಗ ಹೆಲ್ಪ್‌ಚೆಕ್ಕರ್‌- ಹೆಲ್ಪಿಂಗ್ ಟ್ರೀ ಎಂಬ ಅಂದದ ಹೆಸರನ್ನು ಇಟ್ಟುಕೊಂಡಿದ್ದು, ಮಾಡುತ್ತಿರುವ ಪೋಸ್ಟ್‌ಗಳು ಮಾತ್ರ ಆಘಾತಕಾರಿಯಾಗಿವೆ. ರುತ್ವಿಕ್‌ ಚಟರ್ಜಿ ಮತ್ತು ರಾಚೆಲ್‌ ಫರ್ನಾಂಡೀಸ್‌ ಚಟರ್ಜಿ ಎಂಬವರು ಈ ಗ್ರೂಪ್‌ನ ಅಡ್ಮಿನ್‌ ಆಗಿದ್ದಾರೆ. ರುತ್ವಿಕ್‌ ಅವರು ಆಸ್ಟ್ರೇಲಿಯಾದ ಮೊನಷ ವಿವಿಯಲ್ಲಿ ಓದಿದವರೆಂದು ಪ್ರೊಫೈಲ್‌ ಹೇಳುತ್ತದೆ. ರಾಚೆಲ್ ಅವರು ಮುಂಬೈ ಮೂಲದವರಾಗಿದ್ದಾರೆ.

“ಅತ್ಯಂತ ಅನಿರೀಕ್ಷಿತ ಮೂಲಗಳಿಂದ ಸಹಾಯವು ಎಲ್ಲಾ ರೂಪಗಳಲ್ಲಿ ಬರಲಿದೆ. ಈ ಸಮುದಾಯವು ನಿಮಗೆ ಸರಿಯಾದ ಸಹಾಯವನ್ನು ನೀಡುತ್ತದೆ” ಎಂದು ಗ್ರೂಪ್‌‌ನ ಅಡ್ಮಿನ್ ಬರೆದುಕೊಂಡಿದ್ದಾರೆ.

“ಒಂದೆರಡು ವರ್ಷಗಳ ಹಿಂದೆ ನಾನು ತುಂಬಾ ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಎಂದು ತೋರುವ ದಾದಿಯನ್ನು ನೇಮಿಸಿಕೊಂಡಾಗ ಕೆಟ್ಟ ಅನುಭವವಾಯಿತು. ಆಕೆ ಕೋಪಗೊಳ್ಳುತ್ತಿದ್ದಳು, ನನ್ನ ಮಗನನ್ನು ಹಿಂಸಿಸಿದಳು. ಆಗ ನಾನು ಅರಿತುಕೊಂಡೆ, ನಮ್ಮ ಮನೆಗಳಿಗೆ ಯಾರನ್ನಾದರೂ ಕರೆತರುವ ಮೊದಲು ಅವರ ಎಲ್ಲ ಪೂರ್ವಪರವನ್ನು ತಿಳಿಯಬೇಕು ಎಂದು.”

ಇದನ್ನೂ ಓದಿರಿ: ಲಂಡನ್‌ನಲ್ಲಿ 300 ಎಕರೆ ಎಸ್ಟೇಟ್ ಖರೀದಿಸಿದ ಅಂಬಾನಿ: ಭಾರತ ಬಿಟ್ಟು ಹೋಗುವುದಿಲ್ಲ ಎಂದು ಸ್ಪಷ್ಟನೆ

“ಅವರು ನಮ್ಮ ಮನೆಗಳನ್ನು ಸ್ವಚ್ಛವಾಗಿಡುತ್ತಾರೆ, ಅವರು ನಮ್ಮ ಮೇಜಿನ ಮೇಲೆ ಬಿಸಿಬಿಸಿ ಊಟವಿಡುತ್ತಾರೆ, ನಮ್ಮ ಮಕ್ಕಳನ್ನು ನೋಡಿಕೊಳ್ಳುತ್ತಾರೆ, ನಮ್ಮ ಕಾರುಗಳನ್ನು ಓಡಿಸುತ್ತಾರೆ, ನಮ್ಮ ಕೆಲಸಗಳನ್ನು ಮಾಡುತ್ತಾರೆ, ಕಚೇರಿಗಳಲ್ಲಿ ಸಹಾಯ ಮಾಡುತ್ತಾರೆ ಮತ್ತು ಇನ್ನೂ ಹೆಚ್ಚಿನ ಕೆಲಸಗಳನ್ನು ಮಾಡುತ್ತಾರೆ. ನಾವು ಅವರಿಲ್ಲದೆ ಬದುಕಲು ಸಾಧ್ಯವಿಲ್ಲ. ನಾವು ಯಾವಾಗಲೂ ಅವರಿಗೆ ಕೃತಜ್ಞರಾಗಿರುತ್ತೇವೆ. ಆದರೆ ಪ್ರತಿ ನಾಣ್ಯಕ್ಕೂ ಯಾವಾಗಲೂ ಎರಡು ಮುಖಗಳಿರುತ್ತವೆ. ಆದ್ದರಿಂದ ನಾವು ಯಾರನ್ನು ನೇಮಿಸಿಕೊಳ್ಳುತ್ತಿದ್ದೇವೆ, ಯಾರನ್ನು ನಮ್ಮ ಮನೆಗೆ ಬಿಡುತ್ತಿದ್ದೇವೆ ಎಂಬುದು ನಮಗೆ ತಿಳಿದಿರುವುದು ಬಹಳ ಮುಖ್ಯ” ಎಂದು ಅಡ್ಮಿನ್ ಹೇಳಿಕೊಂಡಿದ್ದಾರೆ.

“ಮನೆ ನಮ್ಮ ವೈಯಕ್ತಿಕ ಜಾಗ. ಕಳ್ಳತನ ಮಾಡಿದವರು, ಯಾರೊಬ್ಬರ ಮಗುವನ್ನು ಹೊಡೆದವರು, ವೃದ್ಧ ದಂಪತಿಯನ್ನು ಕೊಂದವರು, ಜೈಲಿನಿಂದ ಹೊರಬಂದಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಬೇಕು. ಕೆಲಸಕ್ಕೆ ತೆಗೆದುಕೊಳ್ಳುವ ಮುನ್ನ ಈ ಹಿಂದೆ ಇವರು ಎಲ್ಲಿ ಕೆಲಸ ಮಾಡುತ್ತಿದ್ದರೆಂದು ತಿಳಿದು, ಅಲ್ಲಿನ ಮಾಲೀಕರಿಂದ ಪ್ರತಿಕ್ರಿಯೆ ಪಡೆಯಬೇಕು…”

– ಹೀಗೆ ಗ್ರೂಪ್‌ನ ಉದ್ದೇಶವನ್ನು ಅಡ್ಮಿನ್‌ ಬರೆದುಕೊಂಡಿದ್ದಾರೆ. ನಿತ್ಯವೂ ಒಂದಲ್ಲ ಒಂದು ಹೆಣ್ಣುಮಕ್ಕಳ ಫೋಟೋ ಹಾಕಿ ಅಭಿಪ್ರಾಯ ಕೇಳಲಾಗುತ್ತಿದೆ. ಎಲ್ಲೋ ಒಂದು ಕಡೆ ಆಗಿದ್ದನ್ನು ನೆಪವಾಗಿಟ್ಟುಕೊಂಡು ಮನೆಗೆಲಸಕ್ಕೆ ಸೇರುವ ಎಲ್ಲ ಹೆಣ್ಣು ಮಕ್ಕಳ ಮೇಲೆ ಅನುಮಾನಪಡುವುದು ಎಷ್ಟು ಸರಿ? ಅವರ ಫೋಟೋಗಳನ್ನು ಸಾರ್ವಜನಿಕ ವೇದಿಕೆಯಲ್ಲಿ ಹಾಕಿ ಅಭಿಪ್ರಾಯ ಕೇಳುವುದು ವಿಕೃತಿಯಲ್ಲವೇ?

ಈ ಖಾಸಗಿ ಗ್ರೂಪ್‌ನಲ್ಲಿದ್ದ ಒಬ್ಬರು ‘ನಾನುಗೌರಿ.ಕಾಂ’ಗೆ ಮಾಹಿತಿ ನೀಡಿದ್ದಾರೆ. ಗ್ರೂಪ್‌ನಲ್ಲಿ ಹಾಕಿರುವ ಫೋಟೋಗಳ ಸ್ಕ್ರೀನ್‌ಶಾಟ್‌ಗಳನ್ನು ನಮ್ಮೊಂದಿಗೆ ಹಂಚಿಕೊಂಡಿದ್ದಾರೆ. ಮನೆಗೆಲಸದವರ ಖಾಸಗಿತನ ಹಾಗೂ ಮಾನವ ಹಕ್ಕುಗಳಿಗೆ ಈ ಗ್ರೂಪ್‌ನಲ್ಲಿ ಬೆಲೆ ಇಲ್ಲವಾಗಿದೆ ಎಂದು ವಿಷಾದಿಸಿದ್ದಾರೆ.

ಕೆಲವು ಹೆಣ್ಣು ಮಕ್ಕಳ ಫೋಟೋವನ್ನು ಹಾಕಿ, ಇವರನ್ನು ಯಾರೂ ಕೆಲಸಕ್ಕೆ ತೆಗೆದುಕೊಳ್ಳಬೇಡಿ, ನಾವು ಬ್ಲಾಕ್‌ಲಿಸ್ಟ್‌ಗೆ ಹಾಕಿದ್ದೇವೆ ಎಂದು ಪೋಸ್ಟ್‌ ಮಾಡಲಾಗಿದೆ. ಇದನ್ನು ಪ್ರಶ್ನಿಸಿದವರನ್ನು ಗ್ರೂಪ್‌ನಿಂದ ಹೊರಹಾಕುವ ಕೆಲಸವೂ ನಡೆಯುತ್ತಿದೆ. ಹೆಚ್ಚಿನ ವಿವರ ಪಡೆಯಲು ನಾನುಗೌರಿ.ಕಾಂ ತಂಡವು ಗ್ರೂಪ್‌ಗೆ ಪ್ರವೇಶಿಸಲು ಯತ್ನಿಸಿತು. ಅಡ್ಮಿನ್‌ ಅವಕಾಶ ನೀಡದ ಕಾರಣ, ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ.

ಬದುಕಿನ ಅನಿವಾರ್ಯತೆಗೆ ಸಿಲುಕಿ ಮನೆಗೆಲಸಕ್ಕೆ ಹೋಗುವ ಹೆಣ್ಣುಮಕ್ಕಳ ಮೇಲೆ ಈ ರೀತಿಯ ಅಮಾನುಷವಾಗಿ ವರ್ತಿಸುವುದು ಜಗತ್ತಿನ ಯಾವ ಮೂಲೆಯಲ್ಲಿ ನಡೆದರೂ ಖಂಡನೀಯ. ಇದೇ ರೀತಿಯ ಖಾಸಗಿ ಗ್ರೂಪ್‌ಗಳು ಬೆಂಗಳೂರಿನಲ್ಲಿಯೂ ಇರಬಹುದು.

ಮಹಿಳೆಯರ ಹಕ್ಕುಗಳ ಪರವಾಗಿ ದನಿ ಜೋರಾಗುತ್ತಿರುವ ಈ ಹೊತ್ತಿನಲ್ಲಿ ಇಂತಹ ವಿದ್ಯಮಾನಗಳು ಬೆಳಕಿಗೆ ಬರುವುದು ಆತಂಕಕಾರಿ. ಈ ರೀತಿ ಪ್ರಕರಣಗಳು ಕಂಡು ಬಂದಲ್ಲಿ ಪ್ರಜ್ಞಾವಂತರು ರಿಪೋರ್ಟ್ ಮಾಡಬೇಕಾಗಿ ವಿನಂತಿ. ಸಾಮಾಜಿಕ ಮಾಧ್ಯಮಗಳು ಹೀಗೆಲ್ಲ ದುರ್ಬಳಕೆ ಆಗುವುದು ತಪ್ಪಬೇಕಿದೆ.

ಯಾವುದೇ ಜೀವನ ಭದ್ರತೆ ಇಲ್ಲದೆ ಅತ್ಯಂತ ಕಡಿಮೆ ಸಂಬಳಕ್ಕೆ ದುಡಿಯುತ್ತಿರುವ ಮನೆಗೆಲಸದ ಹೆಣ್ಣು ಮಕ್ಕಳನ್ನು ಇಷ್ಟು ಕ್ರೂರವಾಗಿ ನಡೆಸಿಕೊಳ್ಳುವುದು ದುರಾದೃಷ್ಟಕರ. ಆಧುನಿಕವಾಗಿ ಮುಂದುವರಿಯುತ್ತಿರುವ ಸಮಾಜವು ಇವುಗಳ ವಿರುದ್ಧ ದನಿ ಎತ್ತಬೇಕಿದೆ.


ಇದನ್ನೂ ಓದಿರಿ: ಇನ್ನೆಂದೂ ಆಗಿರದಷ್ಟು ಬಡತನ ಕಳೆದ 8 ವರ್ಷಗಳಲ್ಲಿ ಭಾರತದಲ್ಲಿ ಹೆಚ್ಚಳ: ಅಧ್ಯಯನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...