Homeಮುಖಪುಟಅನುಮಾನದ ರೋಗ: ಹೆಣ್ಣುಮಕ್ಕಳ ಫೋಟೋ ಎಫ್‌ಬಿಯಲ್ಲಿ ಪೋಸ್ಟ್‌ ಮಾಡಿ ವಿಕೃತಿ

ಅನುಮಾನದ ರೋಗ: ಹೆಣ್ಣುಮಕ್ಕಳ ಫೋಟೋ ಎಫ್‌ಬಿಯಲ್ಲಿ ಪೋಸ್ಟ್‌ ಮಾಡಿ ವಿಕೃತಿ

- Advertisement -
- Advertisement -

ಕೆಲವು ಹಣವಂತರ ಅಹಂಕಾರ ಹೇಗೆಲ್ಲ ಪ್ರದರ್ಶನವಾಗುತ್ತದೆ, ಮಾನವ ಹಕ್ಕುಗಳು ಹೇಗೆಲ್ಲ ಉಲ್ಲಂಘನೆಯಾಗುತ್ತವೆ ಎಂಬುದಕ್ಕೆ ತಾಜಾ ನಿದರ್ಶನವಾಗಿ ‘ಹೆಲ್ಪ್‌ಚೆಕ್ಕರ್‌ ಹೆಲ್ಪಿಂಗ್ ಟ್ರೀ’ ಎಂಬ ಫೇಸ್‌ಬುಕ್‌ ಗ್ರೂಪ್‌ನ ಚಟುವಟಿಕೆಗಳು ಕಾಣಿಸಿಕೊಂಡಿವೆ.

ಪ್ರೈವೇಟ್‌ ಗ್ರೂಪ್ ಆಗಿರುವ ‘HelpChecker – Helping Tree’ ಮನೆಗೆಲಸದ ಹೆಣ್ಣುಮಕ್ಕಳ ಫೋಟೋಗಳನ್ನು ಹಾಕಿ ವಿಕೃತಿ ಮೆರೆಯುತ್ತಿದೆ. 13,227 ಸದಸ್ಯರನ್ನು ಹೊಂದಿರುವ ಈ ಗ್ರೂಪ್‌ 2015ರಿಂದಲೂ ಚಾಲ್ತಿಯಲ್ಲಿದೆ. ಏಪ್ರಿಲ್‌ 15, 2015ರಂದು ಗ್ರೂಪ್‌ ರಚನೆಯಾಗಿದೆ. ಕಾಲಕಾಲಕ್ಕೆ ಹೆಸರನ್ನು ಬದಲಾಯಿಸಲಾಗಿದೆ.

HELPCHECKER- MOMS & DADS WATCH OUT FOR THESE, MOMS & DADS WATCH OUT FOR THESE- HELPCHECKER, HELPCHECKER – Domestic Diaries ಹೀಗೆ ಆಗಾಗ್ಗೆ ಹೆಸರುಗಳನ್ನು ಬದಲಾಯಿಸಲಾಗಿದೆ. ಈಗ ಹೆಲ್ಪ್‌ಚೆಕ್ಕರ್‌- ಹೆಲ್ಪಿಂಗ್ ಟ್ರೀ ಎಂಬ ಅಂದದ ಹೆಸರನ್ನು ಇಟ್ಟುಕೊಂಡಿದ್ದು, ಮಾಡುತ್ತಿರುವ ಪೋಸ್ಟ್‌ಗಳು ಮಾತ್ರ ಆಘಾತಕಾರಿಯಾಗಿವೆ. ರುತ್ವಿಕ್‌ ಚಟರ್ಜಿ ಮತ್ತು ರಾಚೆಲ್‌ ಫರ್ನಾಂಡೀಸ್‌ ಚಟರ್ಜಿ ಎಂಬವರು ಈ ಗ್ರೂಪ್‌ನ ಅಡ್ಮಿನ್‌ ಆಗಿದ್ದಾರೆ. ರುತ್ವಿಕ್‌ ಅವರು ಆಸ್ಟ್ರೇಲಿಯಾದ ಮೊನಷ ವಿವಿಯಲ್ಲಿ ಓದಿದವರೆಂದು ಪ್ರೊಫೈಲ್‌ ಹೇಳುತ್ತದೆ. ರಾಚೆಲ್ ಅವರು ಮುಂಬೈ ಮೂಲದವರಾಗಿದ್ದಾರೆ.

“ಅತ್ಯಂತ ಅನಿರೀಕ್ಷಿತ ಮೂಲಗಳಿಂದ ಸಹಾಯವು ಎಲ್ಲಾ ರೂಪಗಳಲ್ಲಿ ಬರಲಿದೆ. ಈ ಸಮುದಾಯವು ನಿಮಗೆ ಸರಿಯಾದ ಸಹಾಯವನ್ನು ನೀಡುತ್ತದೆ” ಎಂದು ಗ್ರೂಪ್‌‌ನ ಅಡ್ಮಿನ್ ಬರೆದುಕೊಂಡಿದ್ದಾರೆ.

“ಒಂದೆರಡು ವರ್ಷಗಳ ಹಿಂದೆ ನಾನು ತುಂಬಾ ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಎಂದು ತೋರುವ ದಾದಿಯನ್ನು ನೇಮಿಸಿಕೊಂಡಾಗ ಕೆಟ್ಟ ಅನುಭವವಾಯಿತು. ಆಕೆ ಕೋಪಗೊಳ್ಳುತ್ತಿದ್ದಳು, ನನ್ನ ಮಗನನ್ನು ಹಿಂಸಿಸಿದಳು. ಆಗ ನಾನು ಅರಿತುಕೊಂಡೆ, ನಮ್ಮ ಮನೆಗಳಿಗೆ ಯಾರನ್ನಾದರೂ ಕರೆತರುವ ಮೊದಲು ಅವರ ಎಲ್ಲ ಪೂರ್ವಪರವನ್ನು ತಿಳಿಯಬೇಕು ಎಂದು.”

ಇದನ್ನೂ ಓದಿರಿ: ಲಂಡನ್‌ನಲ್ಲಿ 300 ಎಕರೆ ಎಸ್ಟೇಟ್ ಖರೀದಿಸಿದ ಅಂಬಾನಿ: ಭಾರತ ಬಿಟ್ಟು ಹೋಗುವುದಿಲ್ಲ ಎಂದು ಸ್ಪಷ್ಟನೆ

“ಅವರು ನಮ್ಮ ಮನೆಗಳನ್ನು ಸ್ವಚ್ಛವಾಗಿಡುತ್ತಾರೆ, ಅವರು ನಮ್ಮ ಮೇಜಿನ ಮೇಲೆ ಬಿಸಿಬಿಸಿ ಊಟವಿಡುತ್ತಾರೆ, ನಮ್ಮ ಮಕ್ಕಳನ್ನು ನೋಡಿಕೊಳ್ಳುತ್ತಾರೆ, ನಮ್ಮ ಕಾರುಗಳನ್ನು ಓಡಿಸುತ್ತಾರೆ, ನಮ್ಮ ಕೆಲಸಗಳನ್ನು ಮಾಡುತ್ತಾರೆ, ಕಚೇರಿಗಳಲ್ಲಿ ಸಹಾಯ ಮಾಡುತ್ತಾರೆ ಮತ್ತು ಇನ್ನೂ ಹೆಚ್ಚಿನ ಕೆಲಸಗಳನ್ನು ಮಾಡುತ್ತಾರೆ. ನಾವು ಅವರಿಲ್ಲದೆ ಬದುಕಲು ಸಾಧ್ಯವಿಲ್ಲ. ನಾವು ಯಾವಾಗಲೂ ಅವರಿಗೆ ಕೃತಜ್ಞರಾಗಿರುತ್ತೇವೆ. ಆದರೆ ಪ್ರತಿ ನಾಣ್ಯಕ್ಕೂ ಯಾವಾಗಲೂ ಎರಡು ಮುಖಗಳಿರುತ್ತವೆ. ಆದ್ದರಿಂದ ನಾವು ಯಾರನ್ನು ನೇಮಿಸಿಕೊಳ್ಳುತ್ತಿದ್ದೇವೆ, ಯಾರನ್ನು ನಮ್ಮ ಮನೆಗೆ ಬಿಡುತ್ತಿದ್ದೇವೆ ಎಂಬುದು ನಮಗೆ ತಿಳಿದಿರುವುದು ಬಹಳ ಮುಖ್ಯ” ಎಂದು ಅಡ್ಮಿನ್ ಹೇಳಿಕೊಂಡಿದ್ದಾರೆ.

“ಮನೆ ನಮ್ಮ ವೈಯಕ್ತಿಕ ಜಾಗ. ಕಳ್ಳತನ ಮಾಡಿದವರು, ಯಾರೊಬ್ಬರ ಮಗುವನ್ನು ಹೊಡೆದವರು, ವೃದ್ಧ ದಂಪತಿಯನ್ನು ಕೊಂದವರು, ಜೈಲಿನಿಂದ ಹೊರಬಂದಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಬೇಕು. ಕೆಲಸಕ್ಕೆ ತೆಗೆದುಕೊಳ್ಳುವ ಮುನ್ನ ಈ ಹಿಂದೆ ಇವರು ಎಲ್ಲಿ ಕೆಲಸ ಮಾಡುತ್ತಿದ್ದರೆಂದು ತಿಳಿದು, ಅಲ್ಲಿನ ಮಾಲೀಕರಿಂದ ಪ್ರತಿಕ್ರಿಯೆ ಪಡೆಯಬೇಕು…”

– ಹೀಗೆ ಗ್ರೂಪ್‌ನ ಉದ್ದೇಶವನ್ನು ಅಡ್ಮಿನ್‌ ಬರೆದುಕೊಂಡಿದ್ದಾರೆ. ನಿತ್ಯವೂ ಒಂದಲ್ಲ ಒಂದು ಹೆಣ್ಣುಮಕ್ಕಳ ಫೋಟೋ ಹಾಕಿ ಅಭಿಪ್ರಾಯ ಕೇಳಲಾಗುತ್ತಿದೆ. ಎಲ್ಲೋ ಒಂದು ಕಡೆ ಆಗಿದ್ದನ್ನು ನೆಪವಾಗಿಟ್ಟುಕೊಂಡು ಮನೆಗೆಲಸಕ್ಕೆ ಸೇರುವ ಎಲ್ಲ ಹೆಣ್ಣು ಮಕ್ಕಳ ಮೇಲೆ ಅನುಮಾನಪಡುವುದು ಎಷ್ಟು ಸರಿ? ಅವರ ಫೋಟೋಗಳನ್ನು ಸಾರ್ವಜನಿಕ ವೇದಿಕೆಯಲ್ಲಿ ಹಾಕಿ ಅಭಿಪ್ರಾಯ ಕೇಳುವುದು ವಿಕೃತಿಯಲ್ಲವೇ?

ಈ ಖಾಸಗಿ ಗ್ರೂಪ್‌ನಲ್ಲಿದ್ದ ಒಬ್ಬರು ‘ನಾನುಗೌರಿ.ಕಾಂ’ಗೆ ಮಾಹಿತಿ ನೀಡಿದ್ದಾರೆ. ಗ್ರೂಪ್‌ನಲ್ಲಿ ಹಾಕಿರುವ ಫೋಟೋಗಳ ಸ್ಕ್ರೀನ್‌ಶಾಟ್‌ಗಳನ್ನು ನಮ್ಮೊಂದಿಗೆ ಹಂಚಿಕೊಂಡಿದ್ದಾರೆ. ಮನೆಗೆಲಸದವರ ಖಾಸಗಿತನ ಹಾಗೂ ಮಾನವ ಹಕ್ಕುಗಳಿಗೆ ಈ ಗ್ರೂಪ್‌ನಲ್ಲಿ ಬೆಲೆ ಇಲ್ಲವಾಗಿದೆ ಎಂದು ವಿಷಾದಿಸಿದ್ದಾರೆ.

ಕೆಲವು ಹೆಣ್ಣು ಮಕ್ಕಳ ಫೋಟೋವನ್ನು ಹಾಕಿ, ಇವರನ್ನು ಯಾರೂ ಕೆಲಸಕ್ಕೆ ತೆಗೆದುಕೊಳ್ಳಬೇಡಿ, ನಾವು ಬ್ಲಾಕ್‌ಲಿಸ್ಟ್‌ಗೆ ಹಾಕಿದ್ದೇವೆ ಎಂದು ಪೋಸ್ಟ್‌ ಮಾಡಲಾಗಿದೆ. ಇದನ್ನು ಪ್ರಶ್ನಿಸಿದವರನ್ನು ಗ್ರೂಪ್‌ನಿಂದ ಹೊರಹಾಕುವ ಕೆಲಸವೂ ನಡೆಯುತ್ತಿದೆ. ಹೆಚ್ಚಿನ ವಿವರ ಪಡೆಯಲು ನಾನುಗೌರಿ.ಕಾಂ ತಂಡವು ಗ್ರೂಪ್‌ಗೆ ಪ್ರವೇಶಿಸಲು ಯತ್ನಿಸಿತು. ಅಡ್ಮಿನ್‌ ಅವಕಾಶ ನೀಡದ ಕಾರಣ, ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ.

ಬದುಕಿನ ಅನಿವಾರ್ಯತೆಗೆ ಸಿಲುಕಿ ಮನೆಗೆಲಸಕ್ಕೆ ಹೋಗುವ ಹೆಣ್ಣುಮಕ್ಕಳ ಮೇಲೆ ಈ ರೀತಿಯ ಅಮಾನುಷವಾಗಿ ವರ್ತಿಸುವುದು ಜಗತ್ತಿನ ಯಾವ ಮೂಲೆಯಲ್ಲಿ ನಡೆದರೂ ಖಂಡನೀಯ. ಇದೇ ರೀತಿಯ ಖಾಸಗಿ ಗ್ರೂಪ್‌ಗಳು ಬೆಂಗಳೂರಿನಲ್ಲಿಯೂ ಇರಬಹುದು.

ಮಹಿಳೆಯರ ಹಕ್ಕುಗಳ ಪರವಾಗಿ ದನಿ ಜೋರಾಗುತ್ತಿರುವ ಈ ಹೊತ್ತಿನಲ್ಲಿ ಇಂತಹ ವಿದ್ಯಮಾನಗಳು ಬೆಳಕಿಗೆ ಬರುವುದು ಆತಂಕಕಾರಿ. ಈ ರೀತಿ ಪ್ರಕರಣಗಳು ಕಂಡು ಬಂದಲ್ಲಿ ಪ್ರಜ್ಞಾವಂತರು ರಿಪೋರ್ಟ್ ಮಾಡಬೇಕಾಗಿ ವಿನಂತಿ. ಸಾಮಾಜಿಕ ಮಾಧ್ಯಮಗಳು ಹೀಗೆಲ್ಲ ದುರ್ಬಳಕೆ ಆಗುವುದು ತಪ್ಪಬೇಕಿದೆ.

ಯಾವುದೇ ಜೀವನ ಭದ್ರತೆ ಇಲ್ಲದೆ ಅತ್ಯಂತ ಕಡಿಮೆ ಸಂಬಳಕ್ಕೆ ದುಡಿಯುತ್ತಿರುವ ಮನೆಗೆಲಸದ ಹೆಣ್ಣು ಮಕ್ಕಳನ್ನು ಇಷ್ಟು ಕ್ರೂರವಾಗಿ ನಡೆಸಿಕೊಳ್ಳುವುದು ದುರಾದೃಷ್ಟಕರ. ಆಧುನಿಕವಾಗಿ ಮುಂದುವರಿಯುತ್ತಿರುವ ಸಮಾಜವು ಇವುಗಳ ವಿರುದ್ಧ ದನಿ ಎತ್ತಬೇಕಿದೆ.


ಇದನ್ನೂ ಓದಿರಿ: ಇನ್ನೆಂದೂ ಆಗಿರದಷ್ಟು ಬಡತನ ಕಳೆದ 8 ವರ್ಷಗಳಲ್ಲಿ ಭಾರತದಲ್ಲಿ ಹೆಚ್ಚಳ: ಅಧ್ಯಯನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...