Homeಮುಖಪುಟಅನುಮಾನದ ರೋಗ: ಹೆಣ್ಣುಮಕ್ಕಳ ಫೋಟೋ ಎಫ್‌ಬಿಯಲ್ಲಿ ಪೋಸ್ಟ್‌ ಮಾಡಿ ವಿಕೃತಿ

ಅನುಮಾನದ ರೋಗ: ಹೆಣ್ಣುಮಕ್ಕಳ ಫೋಟೋ ಎಫ್‌ಬಿಯಲ್ಲಿ ಪೋಸ್ಟ್‌ ಮಾಡಿ ವಿಕೃತಿ

- Advertisement -
- Advertisement -

ಕೆಲವು ಹಣವಂತರ ಅಹಂಕಾರ ಹೇಗೆಲ್ಲ ಪ್ರದರ್ಶನವಾಗುತ್ತದೆ, ಮಾನವ ಹಕ್ಕುಗಳು ಹೇಗೆಲ್ಲ ಉಲ್ಲಂಘನೆಯಾಗುತ್ತವೆ ಎಂಬುದಕ್ಕೆ ತಾಜಾ ನಿದರ್ಶನವಾಗಿ ‘ಹೆಲ್ಪ್‌ಚೆಕ್ಕರ್‌ ಹೆಲ್ಪಿಂಗ್ ಟ್ರೀ’ ಎಂಬ ಫೇಸ್‌ಬುಕ್‌ ಗ್ರೂಪ್‌ನ ಚಟುವಟಿಕೆಗಳು ಕಾಣಿಸಿಕೊಂಡಿವೆ.

ಪ್ರೈವೇಟ್‌ ಗ್ರೂಪ್ ಆಗಿರುವ ‘HelpChecker – Helping Tree’ ಮನೆಗೆಲಸದ ಹೆಣ್ಣುಮಕ್ಕಳ ಫೋಟೋಗಳನ್ನು ಹಾಕಿ ವಿಕೃತಿ ಮೆರೆಯುತ್ತಿದೆ. 13,227 ಸದಸ್ಯರನ್ನು ಹೊಂದಿರುವ ಈ ಗ್ರೂಪ್‌ 2015ರಿಂದಲೂ ಚಾಲ್ತಿಯಲ್ಲಿದೆ. ಏಪ್ರಿಲ್‌ 15, 2015ರಂದು ಗ್ರೂಪ್‌ ರಚನೆಯಾಗಿದೆ. ಕಾಲಕಾಲಕ್ಕೆ ಹೆಸರನ್ನು ಬದಲಾಯಿಸಲಾಗಿದೆ.

HELPCHECKER- MOMS & DADS WATCH OUT FOR THESE, MOMS & DADS WATCH OUT FOR THESE- HELPCHECKER, HELPCHECKER – Domestic Diaries ಹೀಗೆ ಆಗಾಗ್ಗೆ ಹೆಸರುಗಳನ್ನು ಬದಲಾಯಿಸಲಾಗಿದೆ. ಈಗ ಹೆಲ್ಪ್‌ಚೆಕ್ಕರ್‌- ಹೆಲ್ಪಿಂಗ್ ಟ್ರೀ ಎಂಬ ಅಂದದ ಹೆಸರನ್ನು ಇಟ್ಟುಕೊಂಡಿದ್ದು, ಮಾಡುತ್ತಿರುವ ಪೋಸ್ಟ್‌ಗಳು ಮಾತ್ರ ಆಘಾತಕಾರಿಯಾಗಿವೆ. ರುತ್ವಿಕ್‌ ಚಟರ್ಜಿ ಮತ್ತು ರಾಚೆಲ್‌ ಫರ್ನಾಂಡೀಸ್‌ ಚಟರ್ಜಿ ಎಂಬವರು ಈ ಗ್ರೂಪ್‌ನ ಅಡ್ಮಿನ್‌ ಆಗಿದ್ದಾರೆ. ರುತ್ವಿಕ್‌ ಅವರು ಆಸ್ಟ್ರೇಲಿಯಾದ ಮೊನಷ ವಿವಿಯಲ್ಲಿ ಓದಿದವರೆಂದು ಪ್ರೊಫೈಲ್‌ ಹೇಳುತ್ತದೆ. ರಾಚೆಲ್ ಅವರು ಮುಂಬೈ ಮೂಲದವರಾಗಿದ್ದಾರೆ.

“ಅತ್ಯಂತ ಅನಿರೀಕ್ಷಿತ ಮೂಲಗಳಿಂದ ಸಹಾಯವು ಎಲ್ಲಾ ರೂಪಗಳಲ್ಲಿ ಬರಲಿದೆ. ಈ ಸಮುದಾಯವು ನಿಮಗೆ ಸರಿಯಾದ ಸಹಾಯವನ್ನು ನೀಡುತ್ತದೆ” ಎಂದು ಗ್ರೂಪ್‌‌ನ ಅಡ್ಮಿನ್ ಬರೆದುಕೊಂಡಿದ್ದಾರೆ.

“ಒಂದೆರಡು ವರ್ಷಗಳ ಹಿಂದೆ ನಾನು ತುಂಬಾ ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಎಂದು ತೋರುವ ದಾದಿಯನ್ನು ನೇಮಿಸಿಕೊಂಡಾಗ ಕೆಟ್ಟ ಅನುಭವವಾಯಿತು. ಆಕೆ ಕೋಪಗೊಳ್ಳುತ್ತಿದ್ದಳು, ನನ್ನ ಮಗನನ್ನು ಹಿಂಸಿಸಿದಳು. ಆಗ ನಾನು ಅರಿತುಕೊಂಡೆ, ನಮ್ಮ ಮನೆಗಳಿಗೆ ಯಾರನ್ನಾದರೂ ಕರೆತರುವ ಮೊದಲು ಅವರ ಎಲ್ಲ ಪೂರ್ವಪರವನ್ನು ತಿಳಿಯಬೇಕು ಎಂದು.”

ಇದನ್ನೂ ಓದಿರಿ: ಲಂಡನ್‌ನಲ್ಲಿ 300 ಎಕರೆ ಎಸ್ಟೇಟ್ ಖರೀದಿಸಿದ ಅಂಬಾನಿ: ಭಾರತ ಬಿಟ್ಟು ಹೋಗುವುದಿಲ್ಲ ಎಂದು ಸ್ಪಷ್ಟನೆ

“ಅವರು ನಮ್ಮ ಮನೆಗಳನ್ನು ಸ್ವಚ್ಛವಾಗಿಡುತ್ತಾರೆ, ಅವರು ನಮ್ಮ ಮೇಜಿನ ಮೇಲೆ ಬಿಸಿಬಿಸಿ ಊಟವಿಡುತ್ತಾರೆ, ನಮ್ಮ ಮಕ್ಕಳನ್ನು ನೋಡಿಕೊಳ್ಳುತ್ತಾರೆ, ನಮ್ಮ ಕಾರುಗಳನ್ನು ಓಡಿಸುತ್ತಾರೆ, ನಮ್ಮ ಕೆಲಸಗಳನ್ನು ಮಾಡುತ್ತಾರೆ, ಕಚೇರಿಗಳಲ್ಲಿ ಸಹಾಯ ಮಾಡುತ್ತಾರೆ ಮತ್ತು ಇನ್ನೂ ಹೆಚ್ಚಿನ ಕೆಲಸಗಳನ್ನು ಮಾಡುತ್ತಾರೆ. ನಾವು ಅವರಿಲ್ಲದೆ ಬದುಕಲು ಸಾಧ್ಯವಿಲ್ಲ. ನಾವು ಯಾವಾಗಲೂ ಅವರಿಗೆ ಕೃತಜ್ಞರಾಗಿರುತ್ತೇವೆ. ಆದರೆ ಪ್ರತಿ ನಾಣ್ಯಕ್ಕೂ ಯಾವಾಗಲೂ ಎರಡು ಮುಖಗಳಿರುತ್ತವೆ. ಆದ್ದರಿಂದ ನಾವು ಯಾರನ್ನು ನೇಮಿಸಿಕೊಳ್ಳುತ್ತಿದ್ದೇವೆ, ಯಾರನ್ನು ನಮ್ಮ ಮನೆಗೆ ಬಿಡುತ್ತಿದ್ದೇವೆ ಎಂಬುದು ನಮಗೆ ತಿಳಿದಿರುವುದು ಬಹಳ ಮುಖ್ಯ” ಎಂದು ಅಡ್ಮಿನ್ ಹೇಳಿಕೊಂಡಿದ್ದಾರೆ.

“ಮನೆ ನಮ್ಮ ವೈಯಕ್ತಿಕ ಜಾಗ. ಕಳ್ಳತನ ಮಾಡಿದವರು, ಯಾರೊಬ್ಬರ ಮಗುವನ್ನು ಹೊಡೆದವರು, ವೃದ್ಧ ದಂಪತಿಯನ್ನು ಕೊಂದವರು, ಜೈಲಿನಿಂದ ಹೊರಬಂದಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಬೇಕು. ಕೆಲಸಕ್ಕೆ ತೆಗೆದುಕೊಳ್ಳುವ ಮುನ್ನ ಈ ಹಿಂದೆ ಇವರು ಎಲ್ಲಿ ಕೆಲಸ ಮಾಡುತ್ತಿದ್ದರೆಂದು ತಿಳಿದು, ಅಲ್ಲಿನ ಮಾಲೀಕರಿಂದ ಪ್ರತಿಕ್ರಿಯೆ ಪಡೆಯಬೇಕು…”

– ಹೀಗೆ ಗ್ರೂಪ್‌ನ ಉದ್ದೇಶವನ್ನು ಅಡ್ಮಿನ್‌ ಬರೆದುಕೊಂಡಿದ್ದಾರೆ. ನಿತ್ಯವೂ ಒಂದಲ್ಲ ಒಂದು ಹೆಣ್ಣುಮಕ್ಕಳ ಫೋಟೋ ಹಾಕಿ ಅಭಿಪ್ರಾಯ ಕೇಳಲಾಗುತ್ತಿದೆ. ಎಲ್ಲೋ ಒಂದು ಕಡೆ ಆಗಿದ್ದನ್ನು ನೆಪವಾಗಿಟ್ಟುಕೊಂಡು ಮನೆಗೆಲಸಕ್ಕೆ ಸೇರುವ ಎಲ್ಲ ಹೆಣ್ಣು ಮಕ್ಕಳ ಮೇಲೆ ಅನುಮಾನಪಡುವುದು ಎಷ್ಟು ಸರಿ? ಅವರ ಫೋಟೋಗಳನ್ನು ಸಾರ್ವಜನಿಕ ವೇದಿಕೆಯಲ್ಲಿ ಹಾಕಿ ಅಭಿಪ್ರಾಯ ಕೇಳುವುದು ವಿಕೃತಿಯಲ್ಲವೇ?

ಈ ಖಾಸಗಿ ಗ್ರೂಪ್‌ನಲ್ಲಿದ್ದ ಒಬ್ಬರು ‘ನಾನುಗೌರಿ.ಕಾಂ’ಗೆ ಮಾಹಿತಿ ನೀಡಿದ್ದಾರೆ. ಗ್ರೂಪ್‌ನಲ್ಲಿ ಹಾಕಿರುವ ಫೋಟೋಗಳ ಸ್ಕ್ರೀನ್‌ಶಾಟ್‌ಗಳನ್ನು ನಮ್ಮೊಂದಿಗೆ ಹಂಚಿಕೊಂಡಿದ್ದಾರೆ. ಮನೆಗೆಲಸದವರ ಖಾಸಗಿತನ ಹಾಗೂ ಮಾನವ ಹಕ್ಕುಗಳಿಗೆ ಈ ಗ್ರೂಪ್‌ನಲ್ಲಿ ಬೆಲೆ ಇಲ್ಲವಾಗಿದೆ ಎಂದು ವಿಷಾದಿಸಿದ್ದಾರೆ.

ಕೆಲವು ಹೆಣ್ಣು ಮಕ್ಕಳ ಫೋಟೋವನ್ನು ಹಾಕಿ, ಇವರನ್ನು ಯಾರೂ ಕೆಲಸಕ್ಕೆ ತೆಗೆದುಕೊಳ್ಳಬೇಡಿ, ನಾವು ಬ್ಲಾಕ್‌ಲಿಸ್ಟ್‌ಗೆ ಹಾಕಿದ್ದೇವೆ ಎಂದು ಪೋಸ್ಟ್‌ ಮಾಡಲಾಗಿದೆ. ಇದನ್ನು ಪ್ರಶ್ನಿಸಿದವರನ್ನು ಗ್ರೂಪ್‌ನಿಂದ ಹೊರಹಾಕುವ ಕೆಲಸವೂ ನಡೆಯುತ್ತಿದೆ. ಹೆಚ್ಚಿನ ವಿವರ ಪಡೆಯಲು ನಾನುಗೌರಿ.ಕಾಂ ತಂಡವು ಗ್ರೂಪ್‌ಗೆ ಪ್ರವೇಶಿಸಲು ಯತ್ನಿಸಿತು. ಅಡ್ಮಿನ್‌ ಅವಕಾಶ ನೀಡದ ಕಾರಣ, ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ.

ಬದುಕಿನ ಅನಿವಾರ್ಯತೆಗೆ ಸಿಲುಕಿ ಮನೆಗೆಲಸಕ್ಕೆ ಹೋಗುವ ಹೆಣ್ಣುಮಕ್ಕಳ ಮೇಲೆ ಈ ರೀತಿಯ ಅಮಾನುಷವಾಗಿ ವರ್ತಿಸುವುದು ಜಗತ್ತಿನ ಯಾವ ಮೂಲೆಯಲ್ಲಿ ನಡೆದರೂ ಖಂಡನೀಯ. ಇದೇ ರೀತಿಯ ಖಾಸಗಿ ಗ್ರೂಪ್‌ಗಳು ಬೆಂಗಳೂರಿನಲ್ಲಿಯೂ ಇರಬಹುದು.

ಮಹಿಳೆಯರ ಹಕ್ಕುಗಳ ಪರವಾಗಿ ದನಿ ಜೋರಾಗುತ್ತಿರುವ ಈ ಹೊತ್ತಿನಲ್ಲಿ ಇಂತಹ ವಿದ್ಯಮಾನಗಳು ಬೆಳಕಿಗೆ ಬರುವುದು ಆತಂಕಕಾರಿ. ಈ ರೀತಿ ಪ್ರಕರಣಗಳು ಕಂಡು ಬಂದಲ್ಲಿ ಪ್ರಜ್ಞಾವಂತರು ರಿಪೋರ್ಟ್ ಮಾಡಬೇಕಾಗಿ ವಿನಂತಿ. ಸಾಮಾಜಿಕ ಮಾಧ್ಯಮಗಳು ಹೀಗೆಲ್ಲ ದುರ್ಬಳಕೆ ಆಗುವುದು ತಪ್ಪಬೇಕಿದೆ.

ಯಾವುದೇ ಜೀವನ ಭದ್ರತೆ ಇಲ್ಲದೆ ಅತ್ಯಂತ ಕಡಿಮೆ ಸಂಬಳಕ್ಕೆ ದುಡಿಯುತ್ತಿರುವ ಮನೆಗೆಲಸದ ಹೆಣ್ಣು ಮಕ್ಕಳನ್ನು ಇಷ್ಟು ಕ್ರೂರವಾಗಿ ನಡೆಸಿಕೊಳ್ಳುವುದು ದುರಾದೃಷ್ಟಕರ. ಆಧುನಿಕವಾಗಿ ಮುಂದುವರಿಯುತ್ತಿರುವ ಸಮಾಜವು ಇವುಗಳ ವಿರುದ್ಧ ದನಿ ಎತ್ತಬೇಕಿದೆ.


ಇದನ್ನೂ ಓದಿರಿ: ಇನ್ನೆಂದೂ ಆಗಿರದಷ್ಟು ಬಡತನ ಕಳೆದ 8 ವರ್ಷಗಳಲ್ಲಿ ಭಾರತದಲ್ಲಿ ಹೆಚ್ಚಳ: ಅಧ್ಯಯನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...