Homeಮುಖಪುಟಅನುಮಾನದ ರೋಗ: ಹೆಣ್ಣುಮಕ್ಕಳ ಫೋಟೋ ಎಫ್‌ಬಿಯಲ್ಲಿ ಪೋಸ್ಟ್‌ ಮಾಡಿ ವಿಕೃತಿ

ಅನುಮಾನದ ರೋಗ: ಹೆಣ್ಣುಮಕ್ಕಳ ಫೋಟೋ ಎಫ್‌ಬಿಯಲ್ಲಿ ಪೋಸ್ಟ್‌ ಮಾಡಿ ವಿಕೃತಿ

- Advertisement -
- Advertisement -

ಕೆಲವು ಹಣವಂತರ ಅಹಂಕಾರ ಹೇಗೆಲ್ಲ ಪ್ರದರ್ಶನವಾಗುತ್ತದೆ, ಮಾನವ ಹಕ್ಕುಗಳು ಹೇಗೆಲ್ಲ ಉಲ್ಲಂಘನೆಯಾಗುತ್ತವೆ ಎಂಬುದಕ್ಕೆ ತಾಜಾ ನಿದರ್ಶನವಾಗಿ ‘ಹೆಲ್ಪ್‌ಚೆಕ್ಕರ್‌ ಹೆಲ್ಪಿಂಗ್ ಟ್ರೀ’ ಎಂಬ ಫೇಸ್‌ಬುಕ್‌ ಗ್ರೂಪ್‌ನ ಚಟುವಟಿಕೆಗಳು ಕಾಣಿಸಿಕೊಂಡಿವೆ.

ಪ್ರೈವೇಟ್‌ ಗ್ರೂಪ್ ಆಗಿರುವ ‘HelpChecker – Helping Tree’ ಮನೆಗೆಲಸದ ಹೆಣ್ಣುಮಕ್ಕಳ ಫೋಟೋಗಳನ್ನು ಹಾಕಿ ವಿಕೃತಿ ಮೆರೆಯುತ್ತಿದೆ. 13,227 ಸದಸ್ಯರನ್ನು ಹೊಂದಿರುವ ಈ ಗ್ರೂಪ್‌ 2015ರಿಂದಲೂ ಚಾಲ್ತಿಯಲ್ಲಿದೆ. ಏಪ್ರಿಲ್‌ 15, 2015ರಂದು ಗ್ರೂಪ್‌ ರಚನೆಯಾಗಿದೆ. ಕಾಲಕಾಲಕ್ಕೆ ಹೆಸರನ್ನು ಬದಲಾಯಿಸಲಾಗಿದೆ.

HELPCHECKER- MOMS & DADS WATCH OUT FOR THESE, MOMS & DADS WATCH OUT FOR THESE- HELPCHECKER, HELPCHECKER – Domestic Diaries ಹೀಗೆ ಆಗಾಗ್ಗೆ ಹೆಸರುಗಳನ್ನು ಬದಲಾಯಿಸಲಾಗಿದೆ. ಈಗ ಹೆಲ್ಪ್‌ಚೆಕ್ಕರ್‌- ಹೆಲ್ಪಿಂಗ್ ಟ್ರೀ ಎಂಬ ಅಂದದ ಹೆಸರನ್ನು ಇಟ್ಟುಕೊಂಡಿದ್ದು, ಮಾಡುತ್ತಿರುವ ಪೋಸ್ಟ್‌ಗಳು ಮಾತ್ರ ಆಘಾತಕಾರಿಯಾಗಿವೆ. ರುತ್ವಿಕ್‌ ಚಟರ್ಜಿ ಮತ್ತು ರಾಚೆಲ್‌ ಫರ್ನಾಂಡೀಸ್‌ ಚಟರ್ಜಿ ಎಂಬವರು ಈ ಗ್ರೂಪ್‌ನ ಅಡ್ಮಿನ್‌ ಆಗಿದ್ದಾರೆ. ರುತ್ವಿಕ್‌ ಅವರು ಆಸ್ಟ್ರೇಲಿಯಾದ ಮೊನಷ ವಿವಿಯಲ್ಲಿ ಓದಿದವರೆಂದು ಪ್ರೊಫೈಲ್‌ ಹೇಳುತ್ತದೆ. ರಾಚೆಲ್ ಅವರು ಮುಂಬೈ ಮೂಲದವರಾಗಿದ್ದಾರೆ.

“ಅತ್ಯಂತ ಅನಿರೀಕ್ಷಿತ ಮೂಲಗಳಿಂದ ಸಹಾಯವು ಎಲ್ಲಾ ರೂಪಗಳಲ್ಲಿ ಬರಲಿದೆ. ಈ ಸಮುದಾಯವು ನಿಮಗೆ ಸರಿಯಾದ ಸಹಾಯವನ್ನು ನೀಡುತ್ತದೆ” ಎಂದು ಗ್ರೂಪ್‌‌ನ ಅಡ್ಮಿನ್ ಬರೆದುಕೊಂಡಿದ್ದಾರೆ.

“ಒಂದೆರಡು ವರ್ಷಗಳ ಹಿಂದೆ ನಾನು ತುಂಬಾ ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಎಂದು ತೋರುವ ದಾದಿಯನ್ನು ನೇಮಿಸಿಕೊಂಡಾಗ ಕೆಟ್ಟ ಅನುಭವವಾಯಿತು. ಆಕೆ ಕೋಪಗೊಳ್ಳುತ್ತಿದ್ದಳು, ನನ್ನ ಮಗನನ್ನು ಹಿಂಸಿಸಿದಳು. ಆಗ ನಾನು ಅರಿತುಕೊಂಡೆ, ನಮ್ಮ ಮನೆಗಳಿಗೆ ಯಾರನ್ನಾದರೂ ಕರೆತರುವ ಮೊದಲು ಅವರ ಎಲ್ಲ ಪೂರ್ವಪರವನ್ನು ತಿಳಿಯಬೇಕು ಎಂದು.”

ಇದನ್ನೂ ಓದಿರಿ: ಲಂಡನ್‌ನಲ್ಲಿ 300 ಎಕರೆ ಎಸ್ಟೇಟ್ ಖರೀದಿಸಿದ ಅಂಬಾನಿ: ಭಾರತ ಬಿಟ್ಟು ಹೋಗುವುದಿಲ್ಲ ಎಂದು ಸ್ಪಷ್ಟನೆ

“ಅವರು ನಮ್ಮ ಮನೆಗಳನ್ನು ಸ್ವಚ್ಛವಾಗಿಡುತ್ತಾರೆ, ಅವರು ನಮ್ಮ ಮೇಜಿನ ಮೇಲೆ ಬಿಸಿಬಿಸಿ ಊಟವಿಡುತ್ತಾರೆ, ನಮ್ಮ ಮಕ್ಕಳನ್ನು ನೋಡಿಕೊಳ್ಳುತ್ತಾರೆ, ನಮ್ಮ ಕಾರುಗಳನ್ನು ಓಡಿಸುತ್ತಾರೆ, ನಮ್ಮ ಕೆಲಸಗಳನ್ನು ಮಾಡುತ್ತಾರೆ, ಕಚೇರಿಗಳಲ್ಲಿ ಸಹಾಯ ಮಾಡುತ್ತಾರೆ ಮತ್ತು ಇನ್ನೂ ಹೆಚ್ಚಿನ ಕೆಲಸಗಳನ್ನು ಮಾಡುತ್ತಾರೆ. ನಾವು ಅವರಿಲ್ಲದೆ ಬದುಕಲು ಸಾಧ್ಯವಿಲ್ಲ. ನಾವು ಯಾವಾಗಲೂ ಅವರಿಗೆ ಕೃತಜ್ಞರಾಗಿರುತ್ತೇವೆ. ಆದರೆ ಪ್ರತಿ ನಾಣ್ಯಕ್ಕೂ ಯಾವಾಗಲೂ ಎರಡು ಮುಖಗಳಿರುತ್ತವೆ. ಆದ್ದರಿಂದ ನಾವು ಯಾರನ್ನು ನೇಮಿಸಿಕೊಳ್ಳುತ್ತಿದ್ದೇವೆ, ಯಾರನ್ನು ನಮ್ಮ ಮನೆಗೆ ಬಿಡುತ್ತಿದ್ದೇವೆ ಎಂಬುದು ನಮಗೆ ತಿಳಿದಿರುವುದು ಬಹಳ ಮುಖ್ಯ” ಎಂದು ಅಡ್ಮಿನ್ ಹೇಳಿಕೊಂಡಿದ್ದಾರೆ.

“ಮನೆ ನಮ್ಮ ವೈಯಕ್ತಿಕ ಜಾಗ. ಕಳ್ಳತನ ಮಾಡಿದವರು, ಯಾರೊಬ್ಬರ ಮಗುವನ್ನು ಹೊಡೆದವರು, ವೃದ್ಧ ದಂಪತಿಯನ್ನು ಕೊಂದವರು, ಜೈಲಿನಿಂದ ಹೊರಬಂದಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಬೇಕು. ಕೆಲಸಕ್ಕೆ ತೆಗೆದುಕೊಳ್ಳುವ ಮುನ್ನ ಈ ಹಿಂದೆ ಇವರು ಎಲ್ಲಿ ಕೆಲಸ ಮಾಡುತ್ತಿದ್ದರೆಂದು ತಿಳಿದು, ಅಲ್ಲಿನ ಮಾಲೀಕರಿಂದ ಪ್ರತಿಕ್ರಿಯೆ ಪಡೆಯಬೇಕು…”

– ಹೀಗೆ ಗ್ರೂಪ್‌ನ ಉದ್ದೇಶವನ್ನು ಅಡ್ಮಿನ್‌ ಬರೆದುಕೊಂಡಿದ್ದಾರೆ. ನಿತ್ಯವೂ ಒಂದಲ್ಲ ಒಂದು ಹೆಣ್ಣುಮಕ್ಕಳ ಫೋಟೋ ಹಾಕಿ ಅಭಿಪ್ರಾಯ ಕೇಳಲಾಗುತ್ತಿದೆ. ಎಲ್ಲೋ ಒಂದು ಕಡೆ ಆಗಿದ್ದನ್ನು ನೆಪವಾಗಿಟ್ಟುಕೊಂಡು ಮನೆಗೆಲಸಕ್ಕೆ ಸೇರುವ ಎಲ್ಲ ಹೆಣ್ಣು ಮಕ್ಕಳ ಮೇಲೆ ಅನುಮಾನಪಡುವುದು ಎಷ್ಟು ಸರಿ? ಅವರ ಫೋಟೋಗಳನ್ನು ಸಾರ್ವಜನಿಕ ವೇದಿಕೆಯಲ್ಲಿ ಹಾಕಿ ಅಭಿಪ್ರಾಯ ಕೇಳುವುದು ವಿಕೃತಿಯಲ್ಲವೇ?

ಈ ಖಾಸಗಿ ಗ್ರೂಪ್‌ನಲ್ಲಿದ್ದ ಒಬ್ಬರು ‘ನಾನುಗೌರಿ.ಕಾಂ’ಗೆ ಮಾಹಿತಿ ನೀಡಿದ್ದಾರೆ. ಗ್ರೂಪ್‌ನಲ್ಲಿ ಹಾಕಿರುವ ಫೋಟೋಗಳ ಸ್ಕ್ರೀನ್‌ಶಾಟ್‌ಗಳನ್ನು ನಮ್ಮೊಂದಿಗೆ ಹಂಚಿಕೊಂಡಿದ್ದಾರೆ. ಮನೆಗೆಲಸದವರ ಖಾಸಗಿತನ ಹಾಗೂ ಮಾನವ ಹಕ್ಕುಗಳಿಗೆ ಈ ಗ್ರೂಪ್‌ನಲ್ಲಿ ಬೆಲೆ ಇಲ್ಲವಾಗಿದೆ ಎಂದು ವಿಷಾದಿಸಿದ್ದಾರೆ.

ಕೆಲವು ಹೆಣ್ಣು ಮಕ್ಕಳ ಫೋಟೋವನ್ನು ಹಾಕಿ, ಇವರನ್ನು ಯಾರೂ ಕೆಲಸಕ್ಕೆ ತೆಗೆದುಕೊಳ್ಳಬೇಡಿ, ನಾವು ಬ್ಲಾಕ್‌ಲಿಸ್ಟ್‌ಗೆ ಹಾಕಿದ್ದೇವೆ ಎಂದು ಪೋಸ್ಟ್‌ ಮಾಡಲಾಗಿದೆ. ಇದನ್ನು ಪ್ರಶ್ನಿಸಿದವರನ್ನು ಗ್ರೂಪ್‌ನಿಂದ ಹೊರಹಾಕುವ ಕೆಲಸವೂ ನಡೆಯುತ್ತಿದೆ. ಹೆಚ್ಚಿನ ವಿವರ ಪಡೆಯಲು ನಾನುಗೌರಿ.ಕಾಂ ತಂಡವು ಗ್ರೂಪ್‌ಗೆ ಪ್ರವೇಶಿಸಲು ಯತ್ನಿಸಿತು. ಅಡ್ಮಿನ್‌ ಅವಕಾಶ ನೀಡದ ಕಾರಣ, ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ.

ಬದುಕಿನ ಅನಿವಾರ್ಯತೆಗೆ ಸಿಲುಕಿ ಮನೆಗೆಲಸಕ್ಕೆ ಹೋಗುವ ಹೆಣ್ಣುಮಕ್ಕಳ ಮೇಲೆ ಈ ರೀತಿಯ ಅಮಾನುಷವಾಗಿ ವರ್ತಿಸುವುದು ಜಗತ್ತಿನ ಯಾವ ಮೂಲೆಯಲ್ಲಿ ನಡೆದರೂ ಖಂಡನೀಯ. ಇದೇ ರೀತಿಯ ಖಾಸಗಿ ಗ್ರೂಪ್‌ಗಳು ಬೆಂಗಳೂರಿನಲ್ಲಿಯೂ ಇರಬಹುದು.

ಮಹಿಳೆಯರ ಹಕ್ಕುಗಳ ಪರವಾಗಿ ದನಿ ಜೋರಾಗುತ್ತಿರುವ ಈ ಹೊತ್ತಿನಲ್ಲಿ ಇಂತಹ ವಿದ್ಯಮಾನಗಳು ಬೆಳಕಿಗೆ ಬರುವುದು ಆತಂಕಕಾರಿ. ಈ ರೀತಿ ಪ್ರಕರಣಗಳು ಕಂಡು ಬಂದಲ್ಲಿ ಪ್ರಜ್ಞಾವಂತರು ರಿಪೋರ್ಟ್ ಮಾಡಬೇಕಾಗಿ ವಿನಂತಿ. ಸಾಮಾಜಿಕ ಮಾಧ್ಯಮಗಳು ಹೀಗೆಲ್ಲ ದುರ್ಬಳಕೆ ಆಗುವುದು ತಪ್ಪಬೇಕಿದೆ.

ಯಾವುದೇ ಜೀವನ ಭದ್ರತೆ ಇಲ್ಲದೆ ಅತ್ಯಂತ ಕಡಿಮೆ ಸಂಬಳಕ್ಕೆ ದುಡಿಯುತ್ತಿರುವ ಮನೆಗೆಲಸದ ಹೆಣ್ಣು ಮಕ್ಕಳನ್ನು ಇಷ್ಟು ಕ್ರೂರವಾಗಿ ನಡೆಸಿಕೊಳ್ಳುವುದು ದುರಾದೃಷ್ಟಕರ. ಆಧುನಿಕವಾಗಿ ಮುಂದುವರಿಯುತ್ತಿರುವ ಸಮಾಜವು ಇವುಗಳ ವಿರುದ್ಧ ದನಿ ಎತ್ತಬೇಕಿದೆ.


ಇದನ್ನೂ ಓದಿರಿ: ಇನ್ನೆಂದೂ ಆಗಿರದಷ್ಟು ಬಡತನ ಕಳೆದ 8 ವರ್ಷಗಳಲ್ಲಿ ಭಾರತದಲ್ಲಿ ಹೆಚ್ಚಳ: ಅಧ್ಯಯನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...