Homeಮುಖಪುಟಅನುಮಾನದ ರೋಗ: ಹೆಣ್ಣುಮಕ್ಕಳ ಫೋಟೋ ಎಫ್‌ಬಿಯಲ್ಲಿ ಪೋಸ್ಟ್‌ ಮಾಡಿ ವಿಕೃತಿ

ಅನುಮಾನದ ರೋಗ: ಹೆಣ್ಣುಮಕ್ಕಳ ಫೋಟೋ ಎಫ್‌ಬಿಯಲ್ಲಿ ಪೋಸ್ಟ್‌ ಮಾಡಿ ವಿಕೃತಿ

- Advertisement -
- Advertisement -

ಕೆಲವು ಹಣವಂತರ ಅಹಂಕಾರ ಹೇಗೆಲ್ಲ ಪ್ರದರ್ಶನವಾಗುತ್ತದೆ, ಮಾನವ ಹಕ್ಕುಗಳು ಹೇಗೆಲ್ಲ ಉಲ್ಲಂಘನೆಯಾಗುತ್ತವೆ ಎಂಬುದಕ್ಕೆ ತಾಜಾ ನಿದರ್ಶನವಾಗಿ ‘ಹೆಲ್ಪ್‌ಚೆಕ್ಕರ್‌ ಹೆಲ್ಪಿಂಗ್ ಟ್ರೀ’ ಎಂಬ ಫೇಸ್‌ಬುಕ್‌ ಗ್ರೂಪ್‌ನ ಚಟುವಟಿಕೆಗಳು ಕಾಣಿಸಿಕೊಂಡಿವೆ.

ಪ್ರೈವೇಟ್‌ ಗ್ರೂಪ್ ಆಗಿರುವ ‘HelpChecker – Helping Tree’ ಮನೆಗೆಲಸದ ಹೆಣ್ಣುಮಕ್ಕಳ ಫೋಟೋಗಳನ್ನು ಹಾಕಿ ವಿಕೃತಿ ಮೆರೆಯುತ್ತಿದೆ. 13,227 ಸದಸ್ಯರನ್ನು ಹೊಂದಿರುವ ಈ ಗ್ರೂಪ್‌ 2015ರಿಂದಲೂ ಚಾಲ್ತಿಯಲ್ಲಿದೆ. ಏಪ್ರಿಲ್‌ 15, 2015ರಂದು ಗ್ರೂಪ್‌ ರಚನೆಯಾಗಿದೆ. ಕಾಲಕಾಲಕ್ಕೆ ಹೆಸರನ್ನು ಬದಲಾಯಿಸಲಾಗಿದೆ.

HELPCHECKER- MOMS & DADS WATCH OUT FOR THESE, MOMS & DADS WATCH OUT FOR THESE- HELPCHECKER, HELPCHECKER – Domestic Diaries ಹೀಗೆ ಆಗಾಗ್ಗೆ ಹೆಸರುಗಳನ್ನು ಬದಲಾಯಿಸಲಾಗಿದೆ. ಈಗ ಹೆಲ್ಪ್‌ಚೆಕ್ಕರ್‌- ಹೆಲ್ಪಿಂಗ್ ಟ್ರೀ ಎಂಬ ಅಂದದ ಹೆಸರನ್ನು ಇಟ್ಟುಕೊಂಡಿದ್ದು, ಮಾಡುತ್ತಿರುವ ಪೋಸ್ಟ್‌ಗಳು ಮಾತ್ರ ಆಘಾತಕಾರಿಯಾಗಿವೆ. ರುತ್ವಿಕ್‌ ಚಟರ್ಜಿ ಮತ್ತು ರಾಚೆಲ್‌ ಫರ್ನಾಂಡೀಸ್‌ ಚಟರ್ಜಿ ಎಂಬವರು ಈ ಗ್ರೂಪ್‌ನ ಅಡ್ಮಿನ್‌ ಆಗಿದ್ದಾರೆ. ರುತ್ವಿಕ್‌ ಅವರು ಆಸ್ಟ್ರೇಲಿಯಾದ ಮೊನಷ ವಿವಿಯಲ್ಲಿ ಓದಿದವರೆಂದು ಪ್ರೊಫೈಲ್‌ ಹೇಳುತ್ತದೆ. ರಾಚೆಲ್ ಅವರು ಮುಂಬೈ ಮೂಲದವರಾಗಿದ್ದಾರೆ.

“ಅತ್ಯಂತ ಅನಿರೀಕ್ಷಿತ ಮೂಲಗಳಿಂದ ಸಹಾಯವು ಎಲ್ಲಾ ರೂಪಗಳಲ್ಲಿ ಬರಲಿದೆ. ಈ ಸಮುದಾಯವು ನಿಮಗೆ ಸರಿಯಾದ ಸಹಾಯವನ್ನು ನೀಡುತ್ತದೆ” ಎಂದು ಗ್ರೂಪ್‌‌ನ ಅಡ್ಮಿನ್ ಬರೆದುಕೊಂಡಿದ್ದಾರೆ.

“ಒಂದೆರಡು ವರ್ಷಗಳ ಹಿಂದೆ ನಾನು ತುಂಬಾ ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಎಂದು ತೋರುವ ದಾದಿಯನ್ನು ನೇಮಿಸಿಕೊಂಡಾಗ ಕೆಟ್ಟ ಅನುಭವವಾಯಿತು. ಆಕೆ ಕೋಪಗೊಳ್ಳುತ್ತಿದ್ದಳು, ನನ್ನ ಮಗನನ್ನು ಹಿಂಸಿಸಿದಳು. ಆಗ ನಾನು ಅರಿತುಕೊಂಡೆ, ನಮ್ಮ ಮನೆಗಳಿಗೆ ಯಾರನ್ನಾದರೂ ಕರೆತರುವ ಮೊದಲು ಅವರ ಎಲ್ಲ ಪೂರ್ವಪರವನ್ನು ತಿಳಿಯಬೇಕು ಎಂದು.”

ಇದನ್ನೂ ಓದಿರಿ: ಲಂಡನ್‌ನಲ್ಲಿ 300 ಎಕರೆ ಎಸ್ಟೇಟ್ ಖರೀದಿಸಿದ ಅಂಬಾನಿ: ಭಾರತ ಬಿಟ್ಟು ಹೋಗುವುದಿಲ್ಲ ಎಂದು ಸ್ಪಷ್ಟನೆ

“ಅವರು ನಮ್ಮ ಮನೆಗಳನ್ನು ಸ್ವಚ್ಛವಾಗಿಡುತ್ತಾರೆ, ಅವರು ನಮ್ಮ ಮೇಜಿನ ಮೇಲೆ ಬಿಸಿಬಿಸಿ ಊಟವಿಡುತ್ತಾರೆ, ನಮ್ಮ ಮಕ್ಕಳನ್ನು ನೋಡಿಕೊಳ್ಳುತ್ತಾರೆ, ನಮ್ಮ ಕಾರುಗಳನ್ನು ಓಡಿಸುತ್ತಾರೆ, ನಮ್ಮ ಕೆಲಸಗಳನ್ನು ಮಾಡುತ್ತಾರೆ, ಕಚೇರಿಗಳಲ್ಲಿ ಸಹಾಯ ಮಾಡುತ್ತಾರೆ ಮತ್ತು ಇನ್ನೂ ಹೆಚ್ಚಿನ ಕೆಲಸಗಳನ್ನು ಮಾಡುತ್ತಾರೆ. ನಾವು ಅವರಿಲ್ಲದೆ ಬದುಕಲು ಸಾಧ್ಯವಿಲ್ಲ. ನಾವು ಯಾವಾಗಲೂ ಅವರಿಗೆ ಕೃತಜ್ಞರಾಗಿರುತ್ತೇವೆ. ಆದರೆ ಪ್ರತಿ ನಾಣ್ಯಕ್ಕೂ ಯಾವಾಗಲೂ ಎರಡು ಮುಖಗಳಿರುತ್ತವೆ. ಆದ್ದರಿಂದ ನಾವು ಯಾರನ್ನು ನೇಮಿಸಿಕೊಳ್ಳುತ್ತಿದ್ದೇವೆ, ಯಾರನ್ನು ನಮ್ಮ ಮನೆಗೆ ಬಿಡುತ್ತಿದ್ದೇವೆ ಎಂಬುದು ನಮಗೆ ತಿಳಿದಿರುವುದು ಬಹಳ ಮುಖ್ಯ” ಎಂದು ಅಡ್ಮಿನ್ ಹೇಳಿಕೊಂಡಿದ್ದಾರೆ.

“ಮನೆ ನಮ್ಮ ವೈಯಕ್ತಿಕ ಜಾಗ. ಕಳ್ಳತನ ಮಾಡಿದವರು, ಯಾರೊಬ್ಬರ ಮಗುವನ್ನು ಹೊಡೆದವರು, ವೃದ್ಧ ದಂಪತಿಯನ್ನು ಕೊಂದವರು, ಜೈಲಿನಿಂದ ಹೊರಬಂದಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಬೇಕು. ಕೆಲಸಕ್ಕೆ ತೆಗೆದುಕೊಳ್ಳುವ ಮುನ್ನ ಈ ಹಿಂದೆ ಇವರು ಎಲ್ಲಿ ಕೆಲಸ ಮಾಡುತ್ತಿದ್ದರೆಂದು ತಿಳಿದು, ಅಲ್ಲಿನ ಮಾಲೀಕರಿಂದ ಪ್ರತಿಕ್ರಿಯೆ ಪಡೆಯಬೇಕು…”

– ಹೀಗೆ ಗ್ರೂಪ್‌ನ ಉದ್ದೇಶವನ್ನು ಅಡ್ಮಿನ್‌ ಬರೆದುಕೊಂಡಿದ್ದಾರೆ. ನಿತ್ಯವೂ ಒಂದಲ್ಲ ಒಂದು ಹೆಣ್ಣುಮಕ್ಕಳ ಫೋಟೋ ಹಾಕಿ ಅಭಿಪ್ರಾಯ ಕೇಳಲಾಗುತ್ತಿದೆ. ಎಲ್ಲೋ ಒಂದು ಕಡೆ ಆಗಿದ್ದನ್ನು ನೆಪವಾಗಿಟ್ಟುಕೊಂಡು ಮನೆಗೆಲಸಕ್ಕೆ ಸೇರುವ ಎಲ್ಲ ಹೆಣ್ಣು ಮಕ್ಕಳ ಮೇಲೆ ಅನುಮಾನಪಡುವುದು ಎಷ್ಟು ಸರಿ? ಅವರ ಫೋಟೋಗಳನ್ನು ಸಾರ್ವಜನಿಕ ವೇದಿಕೆಯಲ್ಲಿ ಹಾಕಿ ಅಭಿಪ್ರಾಯ ಕೇಳುವುದು ವಿಕೃತಿಯಲ್ಲವೇ?

ಈ ಖಾಸಗಿ ಗ್ರೂಪ್‌ನಲ್ಲಿದ್ದ ಒಬ್ಬರು ‘ನಾನುಗೌರಿ.ಕಾಂ’ಗೆ ಮಾಹಿತಿ ನೀಡಿದ್ದಾರೆ. ಗ್ರೂಪ್‌ನಲ್ಲಿ ಹಾಕಿರುವ ಫೋಟೋಗಳ ಸ್ಕ್ರೀನ್‌ಶಾಟ್‌ಗಳನ್ನು ನಮ್ಮೊಂದಿಗೆ ಹಂಚಿಕೊಂಡಿದ್ದಾರೆ. ಮನೆಗೆಲಸದವರ ಖಾಸಗಿತನ ಹಾಗೂ ಮಾನವ ಹಕ್ಕುಗಳಿಗೆ ಈ ಗ್ರೂಪ್‌ನಲ್ಲಿ ಬೆಲೆ ಇಲ್ಲವಾಗಿದೆ ಎಂದು ವಿಷಾದಿಸಿದ್ದಾರೆ.

ಕೆಲವು ಹೆಣ್ಣು ಮಕ್ಕಳ ಫೋಟೋವನ್ನು ಹಾಕಿ, ಇವರನ್ನು ಯಾರೂ ಕೆಲಸಕ್ಕೆ ತೆಗೆದುಕೊಳ್ಳಬೇಡಿ, ನಾವು ಬ್ಲಾಕ್‌ಲಿಸ್ಟ್‌ಗೆ ಹಾಕಿದ್ದೇವೆ ಎಂದು ಪೋಸ್ಟ್‌ ಮಾಡಲಾಗಿದೆ. ಇದನ್ನು ಪ್ರಶ್ನಿಸಿದವರನ್ನು ಗ್ರೂಪ್‌ನಿಂದ ಹೊರಹಾಕುವ ಕೆಲಸವೂ ನಡೆಯುತ್ತಿದೆ. ಹೆಚ್ಚಿನ ವಿವರ ಪಡೆಯಲು ನಾನುಗೌರಿ.ಕಾಂ ತಂಡವು ಗ್ರೂಪ್‌ಗೆ ಪ್ರವೇಶಿಸಲು ಯತ್ನಿಸಿತು. ಅಡ್ಮಿನ್‌ ಅವಕಾಶ ನೀಡದ ಕಾರಣ, ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ.

ಬದುಕಿನ ಅನಿವಾರ್ಯತೆಗೆ ಸಿಲುಕಿ ಮನೆಗೆಲಸಕ್ಕೆ ಹೋಗುವ ಹೆಣ್ಣುಮಕ್ಕಳ ಮೇಲೆ ಈ ರೀತಿಯ ಅಮಾನುಷವಾಗಿ ವರ್ತಿಸುವುದು ಜಗತ್ತಿನ ಯಾವ ಮೂಲೆಯಲ್ಲಿ ನಡೆದರೂ ಖಂಡನೀಯ. ಇದೇ ರೀತಿಯ ಖಾಸಗಿ ಗ್ರೂಪ್‌ಗಳು ಬೆಂಗಳೂರಿನಲ್ಲಿಯೂ ಇರಬಹುದು.

ಮಹಿಳೆಯರ ಹಕ್ಕುಗಳ ಪರವಾಗಿ ದನಿ ಜೋರಾಗುತ್ತಿರುವ ಈ ಹೊತ್ತಿನಲ್ಲಿ ಇಂತಹ ವಿದ್ಯಮಾನಗಳು ಬೆಳಕಿಗೆ ಬರುವುದು ಆತಂಕಕಾರಿ. ಈ ರೀತಿ ಪ್ರಕರಣಗಳು ಕಂಡು ಬಂದಲ್ಲಿ ಪ್ರಜ್ಞಾವಂತರು ರಿಪೋರ್ಟ್ ಮಾಡಬೇಕಾಗಿ ವಿನಂತಿ. ಸಾಮಾಜಿಕ ಮಾಧ್ಯಮಗಳು ಹೀಗೆಲ್ಲ ದುರ್ಬಳಕೆ ಆಗುವುದು ತಪ್ಪಬೇಕಿದೆ.

ಯಾವುದೇ ಜೀವನ ಭದ್ರತೆ ಇಲ್ಲದೆ ಅತ್ಯಂತ ಕಡಿಮೆ ಸಂಬಳಕ್ಕೆ ದುಡಿಯುತ್ತಿರುವ ಮನೆಗೆಲಸದ ಹೆಣ್ಣು ಮಕ್ಕಳನ್ನು ಇಷ್ಟು ಕ್ರೂರವಾಗಿ ನಡೆಸಿಕೊಳ್ಳುವುದು ದುರಾದೃಷ್ಟಕರ. ಆಧುನಿಕವಾಗಿ ಮುಂದುವರಿಯುತ್ತಿರುವ ಸಮಾಜವು ಇವುಗಳ ವಿರುದ್ಧ ದನಿ ಎತ್ತಬೇಕಿದೆ.


ಇದನ್ನೂ ಓದಿರಿ: ಇನ್ನೆಂದೂ ಆಗಿರದಷ್ಟು ಬಡತನ ಕಳೆದ 8 ವರ್ಷಗಳಲ್ಲಿ ಭಾರತದಲ್ಲಿ ಹೆಚ್ಚಳ: ಅಧ್ಯಯನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....