Homeಮುಖಪುಟಅನುಮಾನದ ರೋಗ: ಹೆಣ್ಣುಮಕ್ಕಳ ಫೋಟೋ ಎಫ್‌ಬಿಯಲ್ಲಿ ಪೋಸ್ಟ್‌ ಮಾಡಿ ವಿಕೃತಿ

ಅನುಮಾನದ ರೋಗ: ಹೆಣ್ಣುಮಕ್ಕಳ ಫೋಟೋ ಎಫ್‌ಬಿಯಲ್ಲಿ ಪೋಸ್ಟ್‌ ಮಾಡಿ ವಿಕೃತಿ

- Advertisement -
- Advertisement -

ಕೆಲವು ಹಣವಂತರ ಅಹಂಕಾರ ಹೇಗೆಲ್ಲ ಪ್ರದರ್ಶನವಾಗುತ್ತದೆ, ಮಾನವ ಹಕ್ಕುಗಳು ಹೇಗೆಲ್ಲ ಉಲ್ಲಂಘನೆಯಾಗುತ್ತವೆ ಎಂಬುದಕ್ಕೆ ತಾಜಾ ನಿದರ್ಶನವಾಗಿ ‘ಹೆಲ್ಪ್‌ಚೆಕ್ಕರ್‌ ಹೆಲ್ಪಿಂಗ್ ಟ್ರೀ’ ಎಂಬ ಫೇಸ್‌ಬುಕ್‌ ಗ್ರೂಪ್‌ನ ಚಟುವಟಿಕೆಗಳು ಕಾಣಿಸಿಕೊಂಡಿವೆ.

ಪ್ರೈವೇಟ್‌ ಗ್ರೂಪ್ ಆಗಿರುವ ‘HelpChecker – Helping Tree’ ಮನೆಗೆಲಸದ ಹೆಣ್ಣುಮಕ್ಕಳ ಫೋಟೋಗಳನ್ನು ಹಾಕಿ ವಿಕೃತಿ ಮೆರೆಯುತ್ತಿದೆ. 13,227 ಸದಸ್ಯರನ್ನು ಹೊಂದಿರುವ ಈ ಗ್ರೂಪ್‌ 2015ರಿಂದಲೂ ಚಾಲ್ತಿಯಲ್ಲಿದೆ. ಏಪ್ರಿಲ್‌ 15, 2015ರಂದು ಗ್ರೂಪ್‌ ರಚನೆಯಾಗಿದೆ. ಕಾಲಕಾಲಕ್ಕೆ ಹೆಸರನ್ನು ಬದಲಾಯಿಸಲಾಗಿದೆ.

HELPCHECKER- MOMS & DADS WATCH OUT FOR THESE, MOMS & DADS WATCH OUT FOR THESE- HELPCHECKER, HELPCHECKER – Domestic Diaries ಹೀಗೆ ಆಗಾಗ್ಗೆ ಹೆಸರುಗಳನ್ನು ಬದಲಾಯಿಸಲಾಗಿದೆ. ಈಗ ಹೆಲ್ಪ್‌ಚೆಕ್ಕರ್‌- ಹೆಲ್ಪಿಂಗ್ ಟ್ರೀ ಎಂಬ ಅಂದದ ಹೆಸರನ್ನು ಇಟ್ಟುಕೊಂಡಿದ್ದು, ಮಾಡುತ್ತಿರುವ ಪೋಸ್ಟ್‌ಗಳು ಮಾತ್ರ ಆಘಾತಕಾರಿಯಾಗಿವೆ. ರುತ್ವಿಕ್‌ ಚಟರ್ಜಿ ಮತ್ತು ರಾಚೆಲ್‌ ಫರ್ನಾಂಡೀಸ್‌ ಚಟರ್ಜಿ ಎಂಬವರು ಈ ಗ್ರೂಪ್‌ನ ಅಡ್ಮಿನ್‌ ಆಗಿದ್ದಾರೆ. ರುತ್ವಿಕ್‌ ಅವರು ಆಸ್ಟ್ರೇಲಿಯಾದ ಮೊನಷ ವಿವಿಯಲ್ಲಿ ಓದಿದವರೆಂದು ಪ್ರೊಫೈಲ್‌ ಹೇಳುತ್ತದೆ. ರಾಚೆಲ್ ಅವರು ಮುಂಬೈ ಮೂಲದವರಾಗಿದ್ದಾರೆ.

“ಅತ್ಯಂತ ಅನಿರೀಕ್ಷಿತ ಮೂಲಗಳಿಂದ ಸಹಾಯವು ಎಲ್ಲಾ ರೂಪಗಳಲ್ಲಿ ಬರಲಿದೆ. ಈ ಸಮುದಾಯವು ನಿಮಗೆ ಸರಿಯಾದ ಸಹಾಯವನ್ನು ನೀಡುತ್ತದೆ” ಎಂದು ಗ್ರೂಪ್‌‌ನ ಅಡ್ಮಿನ್ ಬರೆದುಕೊಂಡಿದ್ದಾರೆ.

“ಒಂದೆರಡು ವರ್ಷಗಳ ಹಿಂದೆ ನಾನು ತುಂಬಾ ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಎಂದು ತೋರುವ ದಾದಿಯನ್ನು ನೇಮಿಸಿಕೊಂಡಾಗ ಕೆಟ್ಟ ಅನುಭವವಾಯಿತು. ಆಕೆ ಕೋಪಗೊಳ್ಳುತ್ತಿದ್ದಳು, ನನ್ನ ಮಗನನ್ನು ಹಿಂಸಿಸಿದಳು. ಆಗ ನಾನು ಅರಿತುಕೊಂಡೆ, ನಮ್ಮ ಮನೆಗಳಿಗೆ ಯಾರನ್ನಾದರೂ ಕರೆತರುವ ಮೊದಲು ಅವರ ಎಲ್ಲ ಪೂರ್ವಪರವನ್ನು ತಿಳಿಯಬೇಕು ಎಂದು.”

ಇದನ್ನೂ ಓದಿರಿ: ಲಂಡನ್‌ನಲ್ಲಿ 300 ಎಕರೆ ಎಸ್ಟೇಟ್ ಖರೀದಿಸಿದ ಅಂಬಾನಿ: ಭಾರತ ಬಿಟ್ಟು ಹೋಗುವುದಿಲ್ಲ ಎಂದು ಸ್ಪಷ್ಟನೆ

“ಅವರು ನಮ್ಮ ಮನೆಗಳನ್ನು ಸ್ವಚ್ಛವಾಗಿಡುತ್ತಾರೆ, ಅವರು ನಮ್ಮ ಮೇಜಿನ ಮೇಲೆ ಬಿಸಿಬಿಸಿ ಊಟವಿಡುತ್ತಾರೆ, ನಮ್ಮ ಮಕ್ಕಳನ್ನು ನೋಡಿಕೊಳ್ಳುತ್ತಾರೆ, ನಮ್ಮ ಕಾರುಗಳನ್ನು ಓಡಿಸುತ್ತಾರೆ, ನಮ್ಮ ಕೆಲಸಗಳನ್ನು ಮಾಡುತ್ತಾರೆ, ಕಚೇರಿಗಳಲ್ಲಿ ಸಹಾಯ ಮಾಡುತ್ತಾರೆ ಮತ್ತು ಇನ್ನೂ ಹೆಚ್ಚಿನ ಕೆಲಸಗಳನ್ನು ಮಾಡುತ್ತಾರೆ. ನಾವು ಅವರಿಲ್ಲದೆ ಬದುಕಲು ಸಾಧ್ಯವಿಲ್ಲ. ನಾವು ಯಾವಾಗಲೂ ಅವರಿಗೆ ಕೃತಜ್ಞರಾಗಿರುತ್ತೇವೆ. ಆದರೆ ಪ್ರತಿ ನಾಣ್ಯಕ್ಕೂ ಯಾವಾಗಲೂ ಎರಡು ಮುಖಗಳಿರುತ್ತವೆ. ಆದ್ದರಿಂದ ನಾವು ಯಾರನ್ನು ನೇಮಿಸಿಕೊಳ್ಳುತ್ತಿದ್ದೇವೆ, ಯಾರನ್ನು ನಮ್ಮ ಮನೆಗೆ ಬಿಡುತ್ತಿದ್ದೇವೆ ಎಂಬುದು ನಮಗೆ ತಿಳಿದಿರುವುದು ಬಹಳ ಮುಖ್ಯ” ಎಂದು ಅಡ್ಮಿನ್ ಹೇಳಿಕೊಂಡಿದ್ದಾರೆ.

“ಮನೆ ನಮ್ಮ ವೈಯಕ್ತಿಕ ಜಾಗ. ಕಳ್ಳತನ ಮಾಡಿದವರು, ಯಾರೊಬ್ಬರ ಮಗುವನ್ನು ಹೊಡೆದವರು, ವೃದ್ಧ ದಂಪತಿಯನ್ನು ಕೊಂದವರು, ಜೈಲಿನಿಂದ ಹೊರಬಂದಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಬೇಕು. ಕೆಲಸಕ್ಕೆ ತೆಗೆದುಕೊಳ್ಳುವ ಮುನ್ನ ಈ ಹಿಂದೆ ಇವರು ಎಲ್ಲಿ ಕೆಲಸ ಮಾಡುತ್ತಿದ್ದರೆಂದು ತಿಳಿದು, ಅಲ್ಲಿನ ಮಾಲೀಕರಿಂದ ಪ್ರತಿಕ್ರಿಯೆ ಪಡೆಯಬೇಕು…”

– ಹೀಗೆ ಗ್ರೂಪ್‌ನ ಉದ್ದೇಶವನ್ನು ಅಡ್ಮಿನ್‌ ಬರೆದುಕೊಂಡಿದ್ದಾರೆ. ನಿತ್ಯವೂ ಒಂದಲ್ಲ ಒಂದು ಹೆಣ್ಣುಮಕ್ಕಳ ಫೋಟೋ ಹಾಕಿ ಅಭಿಪ್ರಾಯ ಕೇಳಲಾಗುತ್ತಿದೆ. ಎಲ್ಲೋ ಒಂದು ಕಡೆ ಆಗಿದ್ದನ್ನು ನೆಪವಾಗಿಟ್ಟುಕೊಂಡು ಮನೆಗೆಲಸಕ್ಕೆ ಸೇರುವ ಎಲ್ಲ ಹೆಣ್ಣು ಮಕ್ಕಳ ಮೇಲೆ ಅನುಮಾನಪಡುವುದು ಎಷ್ಟು ಸರಿ? ಅವರ ಫೋಟೋಗಳನ್ನು ಸಾರ್ವಜನಿಕ ವೇದಿಕೆಯಲ್ಲಿ ಹಾಕಿ ಅಭಿಪ್ರಾಯ ಕೇಳುವುದು ವಿಕೃತಿಯಲ್ಲವೇ?

ಈ ಖಾಸಗಿ ಗ್ರೂಪ್‌ನಲ್ಲಿದ್ದ ಒಬ್ಬರು ‘ನಾನುಗೌರಿ.ಕಾಂ’ಗೆ ಮಾಹಿತಿ ನೀಡಿದ್ದಾರೆ. ಗ್ರೂಪ್‌ನಲ್ಲಿ ಹಾಕಿರುವ ಫೋಟೋಗಳ ಸ್ಕ್ರೀನ್‌ಶಾಟ್‌ಗಳನ್ನು ನಮ್ಮೊಂದಿಗೆ ಹಂಚಿಕೊಂಡಿದ್ದಾರೆ. ಮನೆಗೆಲಸದವರ ಖಾಸಗಿತನ ಹಾಗೂ ಮಾನವ ಹಕ್ಕುಗಳಿಗೆ ಈ ಗ್ರೂಪ್‌ನಲ್ಲಿ ಬೆಲೆ ಇಲ್ಲವಾಗಿದೆ ಎಂದು ವಿಷಾದಿಸಿದ್ದಾರೆ.

ಕೆಲವು ಹೆಣ್ಣು ಮಕ್ಕಳ ಫೋಟೋವನ್ನು ಹಾಕಿ, ಇವರನ್ನು ಯಾರೂ ಕೆಲಸಕ್ಕೆ ತೆಗೆದುಕೊಳ್ಳಬೇಡಿ, ನಾವು ಬ್ಲಾಕ್‌ಲಿಸ್ಟ್‌ಗೆ ಹಾಕಿದ್ದೇವೆ ಎಂದು ಪೋಸ್ಟ್‌ ಮಾಡಲಾಗಿದೆ. ಇದನ್ನು ಪ್ರಶ್ನಿಸಿದವರನ್ನು ಗ್ರೂಪ್‌ನಿಂದ ಹೊರಹಾಕುವ ಕೆಲಸವೂ ನಡೆಯುತ್ತಿದೆ. ಹೆಚ್ಚಿನ ವಿವರ ಪಡೆಯಲು ನಾನುಗೌರಿ.ಕಾಂ ತಂಡವು ಗ್ರೂಪ್‌ಗೆ ಪ್ರವೇಶಿಸಲು ಯತ್ನಿಸಿತು. ಅಡ್ಮಿನ್‌ ಅವಕಾಶ ನೀಡದ ಕಾರಣ, ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ.

ಬದುಕಿನ ಅನಿವಾರ್ಯತೆಗೆ ಸಿಲುಕಿ ಮನೆಗೆಲಸಕ್ಕೆ ಹೋಗುವ ಹೆಣ್ಣುಮಕ್ಕಳ ಮೇಲೆ ಈ ರೀತಿಯ ಅಮಾನುಷವಾಗಿ ವರ್ತಿಸುವುದು ಜಗತ್ತಿನ ಯಾವ ಮೂಲೆಯಲ್ಲಿ ನಡೆದರೂ ಖಂಡನೀಯ. ಇದೇ ರೀತಿಯ ಖಾಸಗಿ ಗ್ರೂಪ್‌ಗಳು ಬೆಂಗಳೂರಿನಲ್ಲಿಯೂ ಇರಬಹುದು.

ಮಹಿಳೆಯರ ಹಕ್ಕುಗಳ ಪರವಾಗಿ ದನಿ ಜೋರಾಗುತ್ತಿರುವ ಈ ಹೊತ್ತಿನಲ್ಲಿ ಇಂತಹ ವಿದ್ಯಮಾನಗಳು ಬೆಳಕಿಗೆ ಬರುವುದು ಆತಂಕಕಾರಿ. ಈ ರೀತಿ ಪ್ರಕರಣಗಳು ಕಂಡು ಬಂದಲ್ಲಿ ಪ್ರಜ್ಞಾವಂತರು ರಿಪೋರ್ಟ್ ಮಾಡಬೇಕಾಗಿ ವಿನಂತಿ. ಸಾಮಾಜಿಕ ಮಾಧ್ಯಮಗಳು ಹೀಗೆಲ್ಲ ದುರ್ಬಳಕೆ ಆಗುವುದು ತಪ್ಪಬೇಕಿದೆ.

ಯಾವುದೇ ಜೀವನ ಭದ್ರತೆ ಇಲ್ಲದೆ ಅತ್ಯಂತ ಕಡಿಮೆ ಸಂಬಳಕ್ಕೆ ದುಡಿಯುತ್ತಿರುವ ಮನೆಗೆಲಸದ ಹೆಣ್ಣು ಮಕ್ಕಳನ್ನು ಇಷ್ಟು ಕ್ರೂರವಾಗಿ ನಡೆಸಿಕೊಳ್ಳುವುದು ದುರಾದೃಷ್ಟಕರ. ಆಧುನಿಕವಾಗಿ ಮುಂದುವರಿಯುತ್ತಿರುವ ಸಮಾಜವು ಇವುಗಳ ವಿರುದ್ಧ ದನಿ ಎತ್ತಬೇಕಿದೆ.


ಇದನ್ನೂ ಓದಿರಿ: ಇನ್ನೆಂದೂ ಆಗಿರದಷ್ಟು ಬಡತನ ಕಳೆದ 8 ವರ್ಷಗಳಲ್ಲಿ ಭಾರತದಲ್ಲಿ ಹೆಚ್ಚಳ: ಅಧ್ಯಯನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...