Homeಮುಖಪುಟಮೋದಿ ಬಂದಮೇಲೆ ಭಾರತದ ಸಾಲದ ಪ್ರಮಾಣ ಇಳಿಕೆಯಾಗಿದೆಯೇ? ಈ ವರ್ಷ ಜಿಡಿಪಿ 10% ಗೆ ಏರಲಿದೆಯೇ?...

ಮೋದಿ ಬಂದಮೇಲೆ ಭಾರತದ ಸಾಲದ ಪ್ರಮಾಣ ಇಳಿಕೆಯಾಗಿದೆಯೇ? ಈ ವರ್ಷ ಜಿಡಿಪಿ 10% ಗೆ ಏರಲಿದೆಯೇ? ಸುಳ್ಳು ಹೇಳಿದ ಪೋಸ್ಟ್‌ ಕಾರ್ಡ್‌..

- Advertisement -
- Advertisement -

ಮೋದಿ ಬಂದಮೇಲೆ ಭಾರತದ ಸಾಲದ ಪ್ರಮಾಣ ಇಳಿಕೆಯಾಗಿದೆಯೇ?

2014ರ ಮೊದಲು ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಭಾರತದ ಸಾಲದ ಪ್ರಮಾಣ 52.2% ಇತ್ತು. ಈಗ ಮೋದಿ ಬಂದಮೇಲೆ 48.7% ಇಳಿದಿದೆ ಎಂದು ಫೇಕ್ ನ್ಯೂಸ್ ವೆಬ್‌ಸೈಟ್ ಪೋಸ್ಟ್ ಕಾರ್ಡ್ ಕನ್ನಡ ವರದಿ ಮಾಡಿದೆ.

ಇನ್ನು ಆ ಪೋಸ್ಟರ್‌ನಲ್ಲಿ ಕೆಲವೊಮ್ಮೆ ಮೋದಿ ಸರ್ಕಾರದ ಗ್ರಾಫ್‌ ಕೆಳಕೆ ಇಳಿಯುವುದೂ ಖುಷಿ ತರುತ್ತದೆ ಅಲ್ಲವೇ? ಎಂದು ಮತ್ತೊಂದು ಸಾಲು ಬರೆದಿದ್ದಾರೆ.

ಆದರೆ ಇದು ಸಂಪೂರ್ಣ ಸುಳ್ಳು ಸುದ್ದಿಯಾಗಿದ್ದು 2014ರಲ್ಲಿ 47 ಲಕ್ಷ ಕೋಟಿ ಇದ್ದ ಭಾರತದ ಸಾಲ ಈಗ ಮೋದಿ ಬಂದಮೇಲೆ 84 ಲಕ್ಷ ಕೋಟಿಗೇರಿದೆ. ಈ ಚಿತ್ರ ನೋಡಿ

ಇದು ಇದುವರೆಗಿನ ಲೇಟೆಸ್ಟ್‌ ಭಾರತದ ಒಟ್ಟಾರೆ ಸಾಲದ ಚಿತ್ರಣವನ್ನು ಮುಂದಿಡುತ್ತದೆ. ಅಂದರೆ ಭಾರತದ ಸಾಲದ ಪ್ರಮಾಣ ಮೋದಿ ಬಂದ ಮೇಲೆ ಹೆಚ್ಚುಕಮ್ಮಿ ಡಬಲ್‌ ಆಗಿದೆ. ಆದರೆ ಸದಾ ಸುಳ್ಳು ಹೇಳುತ್ತಾ ಜನರನ್ನು ದಿಕ್ಕತಪ್ಪಿಸುವ ಕೆಲಸ ಮಾಡುವ ಪೋಸ್ಟ್‌ ಕಾರ್ಡ್‌ ಕನ್ನಡ ಸುಳ್ಳು ಹೇಳಿ ಸಿಕ್ಕಿಬಿದ್ದಿದೆ. ಅವರ ಈ ಪೋಸ್ಟ್‌ ಅನ್ನು ಸಾವಿರಾರು ಜನ ಇಷ್ಟಪಟ್ಟರೆ ಅಲ್ಲಿಯೇ ಕೆಲವರು ಸತ್ಯದ ದಾಖಲೆಗಳನ್ನು ಹಾಕಿ ಜಾಡಿಸಿದ್ದಾರೆ.

ಈ ವರ್ಷ ಜಿಡಿಪಿ 10% ಗೆ ಏರಲಿದೆಯೇ? ಅಚ್ಚೇ ದಿನ ಬರಲಿವೆಯೇ?

ಅದೇ ಪೋಸ್ಟ್‌ ಕಾರ್ಡ್‌ ಇನ್ನೊಂದು ಪೋಸ್ಟರ್‌ನಲ್ಲಿ ಈ ವರ್ಷ ಜಿಡಿಪಿ 10% ಗೆ ಏರಲಿದೆ, ಅಚ್ಚೇ ದಿನ ಬರಲಿದೆ ಎಂದು ಹೇಳಿದೆ.

ಇದು ಕೂಡ ಶುದ್ಧ ಸುಳ್ಳು.. ಭಾರತದ ಆರ್ಥಿಕ ಪರಿಸ್ಥಿತಿ ದಿನೇದಿನೇ ಹದಗೆಡುತ್ತಿದೆ. ಲಾಭದಲ್ಲಿದ್ದ ಹಲವಾರು ಸರಕಾರಿ ಕಂಪನಿಗಳನ್ನು ಮಾರಲಾಗುತ್ತಿದೆ.

ಸರ್ಕಾರದ ಪರವಾಗಿರುವ ಆರ್ಥಿಕ ಸಲಹೆಗಾರ ಕೃಷ್ಣಮೂರ್ತಿ ಸುಬ್ರಮಣಿಯನ್ ಸಹ ಶೇ.6 ಜಿಡಿಪಿ ಏರಬಹುದು ಎಂದು ಅಂದಾಜಿಸಿದ್ದಾರೆ. ಆದರೆ ಅಮರ್ತ್ಯ ಸೇನ್, ಅಭಿಜಿತ್ ಬ್ಯಾನರ್ಜಿಯಂತಹ ಸರ್ಕಾರವನ್ನು ವಿರೋಧಿಸುವ ಆರ್ಥಿಕ ತಜ್ಞರು ಶೇ.5ರ ಮೇಲೆರಲು ಸಾಧ್ಯವಿಲ್ಲವೆಂದಿದ್ದಾರೆ.

ಒಟ್ಟಾರೆ ಬಿಜೆಪಿ ಪರವಾಗಿ ಕೆಲಸ ಮಾಡಲು ಈ ಪೋಸ್ಟ್‌ ಕಾರ್ಡ್‌ ತಾನೆಷ್ಟು ಸುಳ್ಳುಗಾರ ಎಂದು ತೋರಿಸಿಕೊಳ್ಳುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...