Homeಮುಖಪುಟಮೋದಿ ಬಂದಮೇಲೆ ಭಾರತದ ಸಾಲದ ಪ್ರಮಾಣ ಇಳಿಕೆಯಾಗಿದೆಯೇ? ಈ ವರ್ಷ ಜಿಡಿಪಿ 10% ಗೆ ಏರಲಿದೆಯೇ?...

ಮೋದಿ ಬಂದಮೇಲೆ ಭಾರತದ ಸಾಲದ ಪ್ರಮಾಣ ಇಳಿಕೆಯಾಗಿದೆಯೇ? ಈ ವರ್ಷ ಜಿಡಿಪಿ 10% ಗೆ ಏರಲಿದೆಯೇ? ಸುಳ್ಳು ಹೇಳಿದ ಪೋಸ್ಟ್‌ ಕಾರ್ಡ್‌..

- Advertisement -
- Advertisement -

ಮೋದಿ ಬಂದಮೇಲೆ ಭಾರತದ ಸಾಲದ ಪ್ರಮಾಣ ಇಳಿಕೆಯಾಗಿದೆಯೇ?

2014ರ ಮೊದಲು ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಭಾರತದ ಸಾಲದ ಪ್ರಮಾಣ 52.2% ಇತ್ತು. ಈಗ ಮೋದಿ ಬಂದಮೇಲೆ 48.7% ಇಳಿದಿದೆ ಎಂದು ಫೇಕ್ ನ್ಯೂಸ್ ವೆಬ್‌ಸೈಟ್ ಪೋಸ್ಟ್ ಕಾರ್ಡ್ ಕನ್ನಡ ವರದಿ ಮಾಡಿದೆ.

ಇನ್ನು ಆ ಪೋಸ್ಟರ್‌ನಲ್ಲಿ ಕೆಲವೊಮ್ಮೆ ಮೋದಿ ಸರ್ಕಾರದ ಗ್ರಾಫ್‌ ಕೆಳಕೆ ಇಳಿಯುವುದೂ ಖುಷಿ ತರುತ್ತದೆ ಅಲ್ಲವೇ? ಎಂದು ಮತ್ತೊಂದು ಸಾಲು ಬರೆದಿದ್ದಾರೆ.

ಆದರೆ ಇದು ಸಂಪೂರ್ಣ ಸುಳ್ಳು ಸುದ್ದಿಯಾಗಿದ್ದು 2014ರಲ್ಲಿ 47 ಲಕ್ಷ ಕೋಟಿ ಇದ್ದ ಭಾರತದ ಸಾಲ ಈಗ ಮೋದಿ ಬಂದಮೇಲೆ 84 ಲಕ್ಷ ಕೋಟಿಗೇರಿದೆ. ಈ ಚಿತ್ರ ನೋಡಿ

ಇದು ಇದುವರೆಗಿನ ಲೇಟೆಸ್ಟ್‌ ಭಾರತದ ಒಟ್ಟಾರೆ ಸಾಲದ ಚಿತ್ರಣವನ್ನು ಮುಂದಿಡುತ್ತದೆ. ಅಂದರೆ ಭಾರತದ ಸಾಲದ ಪ್ರಮಾಣ ಮೋದಿ ಬಂದ ಮೇಲೆ ಹೆಚ್ಚುಕಮ್ಮಿ ಡಬಲ್‌ ಆಗಿದೆ. ಆದರೆ ಸದಾ ಸುಳ್ಳು ಹೇಳುತ್ತಾ ಜನರನ್ನು ದಿಕ್ಕತಪ್ಪಿಸುವ ಕೆಲಸ ಮಾಡುವ ಪೋಸ್ಟ್‌ ಕಾರ್ಡ್‌ ಕನ್ನಡ ಸುಳ್ಳು ಹೇಳಿ ಸಿಕ್ಕಿಬಿದ್ದಿದೆ. ಅವರ ಈ ಪೋಸ್ಟ್‌ ಅನ್ನು ಸಾವಿರಾರು ಜನ ಇಷ್ಟಪಟ್ಟರೆ ಅಲ್ಲಿಯೇ ಕೆಲವರು ಸತ್ಯದ ದಾಖಲೆಗಳನ್ನು ಹಾಕಿ ಜಾಡಿಸಿದ್ದಾರೆ.

ಈ ವರ್ಷ ಜಿಡಿಪಿ 10% ಗೆ ಏರಲಿದೆಯೇ? ಅಚ್ಚೇ ದಿನ ಬರಲಿವೆಯೇ?

ಅದೇ ಪೋಸ್ಟ್‌ ಕಾರ್ಡ್‌ ಇನ್ನೊಂದು ಪೋಸ್ಟರ್‌ನಲ್ಲಿ ಈ ವರ್ಷ ಜಿಡಿಪಿ 10% ಗೆ ಏರಲಿದೆ, ಅಚ್ಚೇ ದಿನ ಬರಲಿದೆ ಎಂದು ಹೇಳಿದೆ.

ಇದು ಕೂಡ ಶುದ್ಧ ಸುಳ್ಳು.. ಭಾರತದ ಆರ್ಥಿಕ ಪರಿಸ್ಥಿತಿ ದಿನೇದಿನೇ ಹದಗೆಡುತ್ತಿದೆ. ಲಾಭದಲ್ಲಿದ್ದ ಹಲವಾರು ಸರಕಾರಿ ಕಂಪನಿಗಳನ್ನು ಮಾರಲಾಗುತ್ತಿದೆ.

ಸರ್ಕಾರದ ಪರವಾಗಿರುವ ಆರ್ಥಿಕ ಸಲಹೆಗಾರ ಕೃಷ್ಣಮೂರ್ತಿ ಸುಬ್ರಮಣಿಯನ್ ಸಹ ಶೇ.6 ಜಿಡಿಪಿ ಏರಬಹುದು ಎಂದು ಅಂದಾಜಿಸಿದ್ದಾರೆ. ಆದರೆ ಅಮರ್ತ್ಯ ಸೇನ್, ಅಭಿಜಿತ್ ಬ್ಯಾನರ್ಜಿಯಂತಹ ಸರ್ಕಾರವನ್ನು ವಿರೋಧಿಸುವ ಆರ್ಥಿಕ ತಜ್ಞರು ಶೇ.5ರ ಮೇಲೆರಲು ಸಾಧ್ಯವಿಲ್ಲವೆಂದಿದ್ದಾರೆ.

ಒಟ್ಟಾರೆ ಬಿಜೆಪಿ ಪರವಾಗಿ ಕೆಲಸ ಮಾಡಲು ಈ ಪೋಸ್ಟ್‌ ಕಾರ್ಡ್‌ ತಾನೆಷ್ಟು ಸುಳ್ಳುಗಾರ ಎಂದು ತೋರಿಸಿಕೊಳ್ಳುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...