Homeಮುಖಪುಟಕೊರೊನಾ ತಡೆಯಲು ಬಟ್ಟೆಯಿಂದ ತಯಾರಿಸಿದ ಮಾಸ್ಕ್‌ಗಳನ್ನು ಧರಿಸಬಾರದೇ? ಪೋಸ್ಟ್‌ ಕಾರ್ಡ್‌ ಹರಡಿದ ಮೂರು ಮಹಾಸುಳ್ಳುಗಳು.

ಕೊರೊನಾ ತಡೆಯಲು ಬಟ್ಟೆಯಿಂದ ತಯಾರಿಸಿದ ಮಾಸ್ಕ್‌ಗಳನ್ನು ಧರಿಸಬಾರದೇ? ಪೋಸ್ಟ್‌ ಕಾರ್ಡ್‌ ಹರಡಿದ ಮೂರು ಮಹಾಸುಳ್ಳುಗಳು.

- Advertisement -
- Advertisement -

ಸುಳ್ಳು 1 : ಕೊರೊನಾ ಹರಡದಂತೆ ತಡೆಯಲು ಬಟ್ಟೆಯಿಂದ ತಯಾರಿಸಿದ ಮಾಸ್ಕ್‌ಗಳನ್ನು ಧರಿಸಬಾರದು.

ಹೀಗಂತ ಕನ್ನಡದ ಫೇಕ್‍ನ್ಯೂಸ್ ಹರಡುವ ಪೋಸ್ಟ್ ಕಾರ್ಡ್ ಕನ್ನಡ ವೆಬ್‍ಸೈಟ್ ತಿಳಿಸಿದೆ. ಕೇರಳದಲ್ಲಿ ಕೊರೊನಾ ಹರಡುತ್ತಿದ್ದಂತೆಯೇ ಮಾಸ್ಕ್‌ಗಳ ಕೊರತೆಯುಂಟಾಯಿತು. ಮಾರ್ಚ್ 14ರಂದು ಅಲ್ಲಿನ ಸಿಎಂ ಪಿಣರಾಯಿ ವಿಜಯನ್‍ರವರು ಹತ್ತಿ ಬಟ್ಟೆಯ ಮಾಸ್ಕ್‌ಗಳನ್ನು ಸಿದ್ಧಪಡಿಸುವಂತೆ ಆದೇಶಿಸಿದ್ದರು.

ಅಂದಿನಿಂದ ತಿರುವನಂತಪುರದ ಸೆಂಟ್ರಲ್ ಜೈಲಿನ ಕೈದಿಗಳು ದಿನವೊಂದಕ್ಕೆ ಎರಡು ಸಾವಿರ ಮಾಸ್ಕ್‍ಗಳನ್ನು ತಯಾರಿಸಿ ವಿತರಿಸುತ್ತಿದ್ದಾರೆ. ಇದನ್ನು ವಿರೋಧಿಸಿ ಪೋಸ್ಟ್ ಕಾರ್ಡ್ ಕನ್ನಡ ವೆಬ್‍ಸೈಟ್ ವಿಶ್ವ ಆರೋಗ್ಯ ಸಂಘಟನೆಯ ಸಲಹೆಯನ್ನು ತಿರಸ್ಕರಿಸಿ ಮಾಸ್ಕ್ ತಯಾರಿಸಿದ್ದಾರೆ ಎಂದು ದೂರಿದೆ.

ಸತ್ಯ: ಹತ್ತಿ ಬಟ್ಟೆಯ ಮಾಸ್ಕ್‌ಗಳು ಸುರಕ್ಷಿತವಾಗಿರುತ್ತವೆ ಮಾತ್ರವಲ್ಲ ಅದರಿಂದ ಯಾವುದೇ ತೊಂದರೆಯಿಲ್ಲ. ಅವುಗಳನ್ನು ಸುಲಭವಾಗಿ ಬಳಸಬಹುದು, ತೊಳೆದು ಮರುಬಳಕೆ ಸಹ ಮಾಡಬಹುದು. ವಿಶ್ವ ಆರೋಗ್ಯ ಸಂಸ್ಥೆ ಇದನ್ನು ಬಳಸಬಾರದೆಂದು ಎಲ್ಲಿಯೂ ಹೇಳಿಲ್ಲ. ಈ ಕುರಿತು ಡಬ್ಲೂಎಚ್‍ಓ ವೆಬ್‍ಸೈಟ್‍ನಲ್ಲಿ ತಿಳಿಸಿಲ್ಲ ಕೂಡ.

ಕೇರಳ ಸರ್ಕಾರವನ್ನು ಕಂಡರಾಗದ ಈ ವೆಬ್‍ಸೈಟ್ ಸುಳ್ಳುಗಳನ್ನು ಹರಡುತ್ತಿದೆ ಅಷ್ಟೇ.

ಸುಳ್ಳು 2: ಗಲಭೆ ಮಾಡುವುದು ನಮ್ಮ ಸ್ವಭಾವವಲ್ಲ, ಗಲಭೆ ಮಾಡುವವರನ್ನು ಜೈಲಿಗೆ ಹಾಕುವುದು ನಮ್ಮ ಸ್ವಭಾವ ; ಅಮಿತ್ ಶಾ

ಆದರೆ ವಾಸ್ತವ ಏನೆಂದರೆ 2002ರ ಗುಜರಾತ್ ಗಲಭೆಯ ಸಮಯದಲ್ಲಿ ಇದೇ ಅಮಿತ್ ಶಾ ಗುಜರಾತಿನ ಗೃಹ ಮಂತ್ರಿಯಾಗಿದ್ದರು. ಗಲಭೆಗೆ ಕುಮ್ಮಕ್ಕು ಕೊಟ್ಟ ಕಾರಣದಿಂದಾಗಿ ಶಾ ಮೇಲೆ ಹಲವಾರು ಪ್ರಕರಣಗಳಿದ್ದು ನಾನಾವತಿ ಆಯೋಗ ಈ ಕುರಿತು ತನಿಖೆ ನಡೆಸಿದೆ. ಈ ಕುರಿತು ಖ್ಯಾತ ಪತ್ರಕರ್ತೆ ರಾಣಾ ಅಯ್ಯೂಬ್ ಹೇಳುವುದು ಹೀಗೆ?

“2010ರಲ್ಲಿ ನಾನು ಈ ಕೊಲೆಗಳ ಬಗ್ಗೆ ವರದಿ ಮಾಡಿದ್ದೆ. ನಾನು ಶಾರ ದೂರವಾಣಿ ಕರೆಗಳ ದಾಖಲೆ ಮತ್ತು ಗುಜರಾತ್ ರಾಜ್ಯದ ಗುಪ್ತಚರ ಇಲಾಖೆಯ ಆಂತರಿಕ ದಾಖಲೆಯನ್ನೂ ಮುಂದಿಟ್ಟಿದ್ದೆ. ಕೊಲ್ಲಬೇಕಾದವರನ್ನು ಕೊಂಡೊಯ್ಯುತ್ತಿರುವಾಗಲೇ ಈತ ಅಧಿಕಾರಿಗಳ ಜೊತೆಯಲ್ಲಿ ಮಾತುಕತೆಯಲ್ಲಿ ತೊಡಗಿದ್ದುದನ್ನು ಈ ದಾಖಲೆಗಳು ಸಾಬೀತುಪಡಿಸುತ್ತಿದ್ದವು. ನನ್ನ ತನಿಖಾ ವರದಿ ಪ್ರಕಟವಾದ ಎರಡು ವಾರಗಳಲ್ಲಿ ಶಾ ಬಂಧನವಾಗಿತ್ತು. ಮೂರು ತಿಂಗಳು ಜೈಲಿನಲ್ಲಿದ್ದರು.

ಸಿಬಿಐ ಸೊಹ್ರಾಬುದ್ದೀನ್ ಮತ್ತು ಆತನ ಪತ್ನಿ ಕೌಸರ್ ಬೀ ಎಂಬ ಮುಸ್ಲಿಮರ ಕೊಲೆಯಲ್ಲಿನ ಪಾತ್ರದ ಬಗ್ಗೆ ಶಾ ವಿರುದ್ಧ ತನಿಖೆ ನಡೆಸುತ್ತಿತ್ತು. ಸುಪ್ರೀಂಕೋರ್ಟ್ ಕಣ್ಗಾವಲಿನಲ್ಲಿ ಶಾರನ್ನು ಈ ಅಪರಾಧದ ಮುಖ್ಯ ಆರೋಪಿ ಮತ್ತು ಸಂಚುಕೋರ ಎಂದು ಹೆಸರಿಸಲಾಗಿತ್ತು. ಅದಲ್ಲದೇ ಆತನನ್ನು ಭೂಗತ ಗೂಂಡಾಗಳು ಮತ್ತು ರಾಜಕಾರಣಿಗಳನ್ನು ಒಳಗೊಂಡ ವಸೂಲಿ ದಂಧೆಯ ಮುಖ್ಯಸ್ಥ ಎಂದೂ ಹೆಸರಿಸಿತ್ತು. ಈ ಆರೋಪಗಳು ಎಷ್ಟು ಗಂಭೀರವಾಗಿದ್ದವು ಎಂದರೆ, ಆತ ಸಾಕ್ಷಿಗಳ ಮೇಲೆ ಪ್ರಭಾವ ಬೀರದಂತೆ ಮತ್ತು ಬೆದರಿಸದಂತೆ ಸುಪ್ರೀಂಕೋರ್ಟ್ ಆತನನ್ನು ಎರಡು ವರ್ಷ ತನ್ನ ತವರು ರಾಜ್ಯ ಪ್ರವೇಶಿಸದಂತೆ ಗಡಿಪಾರು ಮಾಡಿತ್ತು.

ಸುಳ್ಳು 3 : ಮಾಂಸ ತಿಂದರೆ ಕೊರೊನಾ ಬರುತ್ತದೆಯೇ?

ಕನ್ನಡದ ಫೇಕ್‍ನ್ಯೂಸ್ ಹರಡುವ ಪೋಸ್ಟ್ ಕಾರ್ಡ್ ಕನ್ನಡ ವೆಬ್‍ಸೈಟ್ ಕೊರೊನಾ ಬಂದುದರಿಂದ ಹ್ಯಾಂಡ್‍ಷೇಕ್ ಬದಲು ನಮಸ್ಕರಿಸುತ್ತಿದ್ದಾರೆ, ಸಸ್ಯಹಾರಿಗಳಾಗುತ್ತಿದ್ದಾರೆ ಮತ್ತು ಹೆಣವನ್ನು ಹೂಳುವ ಬದಲು ಸುಡುತ್ತಿದ್ದಾರೆ ಎಂದು ವರದಿ ಮಾಡಿದೆ. ಈ ಮೂಲಕ ಅದು ಬ್ರಾಹ್ಮಣ್ಯದ ಶ್ರೇಷ್ಠತೆಯನ್ನು ಹೇರಲು ಪ್ರಯತ್ನಿಸುತ್ತಿದೆ ಅಷ್ಟೇ.

ಸತ್ಯ ಏನೆಂದರೇ ಮಾಂಸ ತಿನ್ನುವುದಕ್ಕೂ ಕೊರೊನಾಗೂ ಸಂಬಂಧವೇ ಇಲ್ಲ. ಮಾಂಸ ತಿನ್ನುವುದರಿಂದ ಕೊರೊನಾ ಬರುವುದಿಲ್ಲ.

ಇನ್ನು ಸತ್ತ ದೇಹವನ್ನು ಹೂಳುವುದರಿಂದ ಕೊರೊನಾ ಹರಡುವುದಿಲ್ಲ ಎಂದು ವೈದ್ಯರು ದೃಢಪಡಿಸಿದ್ದಾರೆ. ಕೊರೊನಾ ಭಯವನ್ನು ತಮ್ಮ ಧಾರ್ಮಿಕ ಮೌಢ್ಯಗಳನ್ನು ಹರಡಲು ಬಳಸುತ್ತಿದ್ದಾರೆ ಅಷ್ಟೇ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...