Homeಮುಖಪುಟಕೊರೊನಾ ತಡೆಯಲು ಬಟ್ಟೆಯಿಂದ ತಯಾರಿಸಿದ ಮಾಸ್ಕ್‌ಗಳನ್ನು ಧರಿಸಬಾರದೇ? ಪೋಸ್ಟ್‌ ಕಾರ್ಡ್‌ ಹರಡಿದ ಮೂರು ಮಹಾಸುಳ್ಳುಗಳು.

ಕೊರೊನಾ ತಡೆಯಲು ಬಟ್ಟೆಯಿಂದ ತಯಾರಿಸಿದ ಮಾಸ್ಕ್‌ಗಳನ್ನು ಧರಿಸಬಾರದೇ? ಪೋಸ್ಟ್‌ ಕಾರ್ಡ್‌ ಹರಡಿದ ಮೂರು ಮಹಾಸುಳ್ಳುಗಳು.

- Advertisement -
- Advertisement -

ಸುಳ್ಳು 1 : ಕೊರೊನಾ ಹರಡದಂತೆ ತಡೆಯಲು ಬಟ್ಟೆಯಿಂದ ತಯಾರಿಸಿದ ಮಾಸ್ಕ್‌ಗಳನ್ನು ಧರಿಸಬಾರದು.

ಹೀಗಂತ ಕನ್ನಡದ ಫೇಕ್‍ನ್ಯೂಸ್ ಹರಡುವ ಪೋಸ್ಟ್ ಕಾರ್ಡ್ ಕನ್ನಡ ವೆಬ್‍ಸೈಟ್ ತಿಳಿಸಿದೆ. ಕೇರಳದಲ್ಲಿ ಕೊರೊನಾ ಹರಡುತ್ತಿದ್ದಂತೆಯೇ ಮಾಸ್ಕ್‌ಗಳ ಕೊರತೆಯುಂಟಾಯಿತು. ಮಾರ್ಚ್ 14ರಂದು ಅಲ್ಲಿನ ಸಿಎಂ ಪಿಣರಾಯಿ ವಿಜಯನ್‍ರವರು ಹತ್ತಿ ಬಟ್ಟೆಯ ಮಾಸ್ಕ್‌ಗಳನ್ನು ಸಿದ್ಧಪಡಿಸುವಂತೆ ಆದೇಶಿಸಿದ್ದರು.

ಅಂದಿನಿಂದ ತಿರುವನಂತಪುರದ ಸೆಂಟ್ರಲ್ ಜೈಲಿನ ಕೈದಿಗಳು ದಿನವೊಂದಕ್ಕೆ ಎರಡು ಸಾವಿರ ಮಾಸ್ಕ್‍ಗಳನ್ನು ತಯಾರಿಸಿ ವಿತರಿಸುತ್ತಿದ್ದಾರೆ. ಇದನ್ನು ವಿರೋಧಿಸಿ ಪೋಸ್ಟ್ ಕಾರ್ಡ್ ಕನ್ನಡ ವೆಬ್‍ಸೈಟ್ ವಿಶ್ವ ಆರೋಗ್ಯ ಸಂಘಟನೆಯ ಸಲಹೆಯನ್ನು ತಿರಸ್ಕರಿಸಿ ಮಾಸ್ಕ್ ತಯಾರಿಸಿದ್ದಾರೆ ಎಂದು ದೂರಿದೆ.

ಸತ್ಯ: ಹತ್ತಿ ಬಟ್ಟೆಯ ಮಾಸ್ಕ್‌ಗಳು ಸುರಕ್ಷಿತವಾಗಿರುತ್ತವೆ ಮಾತ್ರವಲ್ಲ ಅದರಿಂದ ಯಾವುದೇ ತೊಂದರೆಯಿಲ್ಲ. ಅವುಗಳನ್ನು ಸುಲಭವಾಗಿ ಬಳಸಬಹುದು, ತೊಳೆದು ಮರುಬಳಕೆ ಸಹ ಮಾಡಬಹುದು. ವಿಶ್ವ ಆರೋಗ್ಯ ಸಂಸ್ಥೆ ಇದನ್ನು ಬಳಸಬಾರದೆಂದು ಎಲ್ಲಿಯೂ ಹೇಳಿಲ್ಲ. ಈ ಕುರಿತು ಡಬ್ಲೂಎಚ್‍ಓ ವೆಬ್‍ಸೈಟ್‍ನಲ್ಲಿ ತಿಳಿಸಿಲ್ಲ ಕೂಡ.

ಕೇರಳ ಸರ್ಕಾರವನ್ನು ಕಂಡರಾಗದ ಈ ವೆಬ್‍ಸೈಟ್ ಸುಳ್ಳುಗಳನ್ನು ಹರಡುತ್ತಿದೆ ಅಷ್ಟೇ.

ಸುಳ್ಳು 2: ಗಲಭೆ ಮಾಡುವುದು ನಮ್ಮ ಸ್ವಭಾವವಲ್ಲ, ಗಲಭೆ ಮಾಡುವವರನ್ನು ಜೈಲಿಗೆ ಹಾಕುವುದು ನಮ್ಮ ಸ್ವಭಾವ ; ಅಮಿತ್ ಶಾ

ಆದರೆ ವಾಸ್ತವ ಏನೆಂದರೆ 2002ರ ಗುಜರಾತ್ ಗಲಭೆಯ ಸಮಯದಲ್ಲಿ ಇದೇ ಅಮಿತ್ ಶಾ ಗುಜರಾತಿನ ಗೃಹ ಮಂತ್ರಿಯಾಗಿದ್ದರು. ಗಲಭೆಗೆ ಕುಮ್ಮಕ್ಕು ಕೊಟ್ಟ ಕಾರಣದಿಂದಾಗಿ ಶಾ ಮೇಲೆ ಹಲವಾರು ಪ್ರಕರಣಗಳಿದ್ದು ನಾನಾವತಿ ಆಯೋಗ ಈ ಕುರಿತು ತನಿಖೆ ನಡೆಸಿದೆ. ಈ ಕುರಿತು ಖ್ಯಾತ ಪತ್ರಕರ್ತೆ ರಾಣಾ ಅಯ್ಯೂಬ್ ಹೇಳುವುದು ಹೀಗೆ?

“2010ರಲ್ಲಿ ನಾನು ಈ ಕೊಲೆಗಳ ಬಗ್ಗೆ ವರದಿ ಮಾಡಿದ್ದೆ. ನಾನು ಶಾರ ದೂರವಾಣಿ ಕರೆಗಳ ದಾಖಲೆ ಮತ್ತು ಗುಜರಾತ್ ರಾಜ್ಯದ ಗುಪ್ತಚರ ಇಲಾಖೆಯ ಆಂತರಿಕ ದಾಖಲೆಯನ್ನೂ ಮುಂದಿಟ್ಟಿದ್ದೆ. ಕೊಲ್ಲಬೇಕಾದವರನ್ನು ಕೊಂಡೊಯ್ಯುತ್ತಿರುವಾಗಲೇ ಈತ ಅಧಿಕಾರಿಗಳ ಜೊತೆಯಲ್ಲಿ ಮಾತುಕತೆಯಲ್ಲಿ ತೊಡಗಿದ್ದುದನ್ನು ಈ ದಾಖಲೆಗಳು ಸಾಬೀತುಪಡಿಸುತ್ತಿದ್ದವು. ನನ್ನ ತನಿಖಾ ವರದಿ ಪ್ರಕಟವಾದ ಎರಡು ವಾರಗಳಲ್ಲಿ ಶಾ ಬಂಧನವಾಗಿತ್ತು. ಮೂರು ತಿಂಗಳು ಜೈಲಿನಲ್ಲಿದ್ದರು.

ಸಿಬಿಐ ಸೊಹ್ರಾಬುದ್ದೀನ್ ಮತ್ತು ಆತನ ಪತ್ನಿ ಕೌಸರ್ ಬೀ ಎಂಬ ಮುಸ್ಲಿಮರ ಕೊಲೆಯಲ್ಲಿನ ಪಾತ್ರದ ಬಗ್ಗೆ ಶಾ ವಿರುದ್ಧ ತನಿಖೆ ನಡೆಸುತ್ತಿತ್ತು. ಸುಪ್ರೀಂಕೋರ್ಟ್ ಕಣ್ಗಾವಲಿನಲ್ಲಿ ಶಾರನ್ನು ಈ ಅಪರಾಧದ ಮುಖ್ಯ ಆರೋಪಿ ಮತ್ತು ಸಂಚುಕೋರ ಎಂದು ಹೆಸರಿಸಲಾಗಿತ್ತು. ಅದಲ್ಲದೇ ಆತನನ್ನು ಭೂಗತ ಗೂಂಡಾಗಳು ಮತ್ತು ರಾಜಕಾರಣಿಗಳನ್ನು ಒಳಗೊಂಡ ವಸೂಲಿ ದಂಧೆಯ ಮುಖ್ಯಸ್ಥ ಎಂದೂ ಹೆಸರಿಸಿತ್ತು. ಈ ಆರೋಪಗಳು ಎಷ್ಟು ಗಂಭೀರವಾಗಿದ್ದವು ಎಂದರೆ, ಆತ ಸಾಕ್ಷಿಗಳ ಮೇಲೆ ಪ್ರಭಾವ ಬೀರದಂತೆ ಮತ್ತು ಬೆದರಿಸದಂತೆ ಸುಪ್ರೀಂಕೋರ್ಟ್ ಆತನನ್ನು ಎರಡು ವರ್ಷ ತನ್ನ ತವರು ರಾಜ್ಯ ಪ್ರವೇಶಿಸದಂತೆ ಗಡಿಪಾರು ಮಾಡಿತ್ತು.

ಸುಳ್ಳು 3 : ಮಾಂಸ ತಿಂದರೆ ಕೊರೊನಾ ಬರುತ್ತದೆಯೇ?

ಕನ್ನಡದ ಫೇಕ್‍ನ್ಯೂಸ್ ಹರಡುವ ಪೋಸ್ಟ್ ಕಾರ್ಡ್ ಕನ್ನಡ ವೆಬ್‍ಸೈಟ್ ಕೊರೊನಾ ಬಂದುದರಿಂದ ಹ್ಯಾಂಡ್‍ಷೇಕ್ ಬದಲು ನಮಸ್ಕರಿಸುತ್ತಿದ್ದಾರೆ, ಸಸ್ಯಹಾರಿಗಳಾಗುತ್ತಿದ್ದಾರೆ ಮತ್ತು ಹೆಣವನ್ನು ಹೂಳುವ ಬದಲು ಸುಡುತ್ತಿದ್ದಾರೆ ಎಂದು ವರದಿ ಮಾಡಿದೆ. ಈ ಮೂಲಕ ಅದು ಬ್ರಾಹ್ಮಣ್ಯದ ಶ್ರೇಷ್ಠತೆಯನ್ನು ಹೇರಲು ಪ್ರಯತ್ನಿಸುತ್ತಿದೆ ಅಷ್ಟೇ.

ಸತ್ಯ ಏನೆಂದರೇ ಮಾಂಸ ತಿನ್ನುವುದಕ್ಕೂ ಕೊರೊನಾಗೂ ಸಂಬಂಧವೇ ಇಲ್ಲ. ಮಾಂಸ ತಿನ್ನುವುದರಿಂದ ಕೊರೊನಾ ಬರುವುದಿಲ್ಲ.

ಇನ್ನು ಸತ್ತ ದೇಹವನ್ನು ಹೂಳುವುದರಿಂದ ಕೊರೊನಾ ಹರಡುವುದಿಲ್ಲ ಎಂದು ವೈದ್ಯರು ದೃಢಪಡಿಸಿದ್ದಾರೆ. ಕೊರೊನಾ ಭಯವನ್ನು ತಮ್ಮ ಧಾರ್ಮಿಕ ಮೌಢ್ಯಗಳನ್ನು ಹರಡಲು ಬಳಸುತ್ತಿದ್ದಾರೆ ಅಷ್ಟೇ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...