Homeಮುಖಪುಟಕೊರೊನಾ ತಡೆಯಲು ಬಟ್ಟೆಯಿಂದ ತಯಾರಿಸಿದ ಮಾಸ್ಕ್‌ಗಳನ್ನು ಧರಿಸಬಾರದೇ? ಪೋಸ್ಟ್‌ ಕಾರ್ಡ್‌ ಹರಡಿದ ಮೂರು ಮಹಾಸುಳ್ಳುಗಳು.

ಕೊರೊನಾ ತಡೆಯಲು ಬಟ್ಟೆಯಿಂದ ತಯಾರಿಸಿದ ಮಾಸ್ಕ್‌ಗಳನ್ನು ಧರಿಸಬಾರದೇ? ಪೋಸ್ಟ್‌ ಕಾರ್ಡ್‌ ಹರಡಿದ ಮೂರು ಮಹಾಸುಳ್ಳುಗಳು.

- Advertisement -
- Advertisement -

ಸುಳ್ಳು 1 : ಕೊರೊನಾ ಹರಡದಂತೆ ತಡೆಯಲು ಬಟ್ಟೆಯಿಂದ ತಯಾರಿಸಿದ ಮಾಸ್ಕ್‌ಗಳನ್ನು ಧರಿಸಬಾರದು.

ಹೀಗಂತ ಕನ್ನಡದ ಫೇಕ್‍ನ್ಯೂಸ್ ಹರಡುವ ಪೋಸ್ಟ್ ಕಾರ್ಡ್ ಕನ್ನಡ ವೆಬ್‍ಸೈಟ್ ತಿಳಿಸಿದೆ. ಕೇರಳದಲ್ಲಿ ಕೊರೊನಾ ಹರಡುತ್ತಿದ್ದಂತೆಯೇ ಮಾಸ್ಕ್‌ಗಳ ಕೊರತೆಯುಂಟಾಯಿತು. ಮಾರ್ಚ್ 14ರಂದು ಅಲ್ಲಿನ ಸಿಎಂ ಪಿಣರಾಯಿ ವಿಜಯನ್‍ರವರು ಹತ್ತಿ ಬಟ್ಟೆಯ ಮಾಸ್ಕ್‌ಗಳನ್ನು ಸಿದ್ಧಪಡಿಸುವಂತೆ ಆದೇಶಿಸಿದ್ದರು.

ಅಂದಿನಿಂದ ತಿರುವನಂತಪುರದ ಸೆಂಟ್ರಲ್ ಜೈಲಿನ ಕೈದಿಗಳು ದಿನವೊಂದಕ್ಕೆ ಎರಡು ಸಾವಿರ ಮಾಸ್ಕ್‍ಗಳನ್ನು ತಯಾರಿಸಿ ವಿತರಿಸುತ್ತಿದ್ದಾರೆ. ಇದನ್ನು ವಿರೋಧಿಸಿ ಪೋಸ್ಟ್ ಕಾರ್ಡ್ ಕನ್ನಡ ವೆಬ್‍ಸೈಟ್ ವಿಶ್ವ ಆರೋಗ್ಯ ಸಂಘಟನೆಯ ಸಲಹೆಯನ್ನು ತಿರಸ್ಕರಿಸಿ ಮಾಸ್ಕ್ ತಯಾರಿಸಿದ್ದಾರೆ ಎಂದು ದೂರಿದೆ.

ಸತ್ಯ: ಹತ್ತಿ ಬಟ್ಟೆಯ ಮಾಸ್ಕ್‌ಗಳು ಸುರಕ್ಷಿತವಾಗಿರುತ್ತವೆ ಮಾತ್ರವಲ್ಲ ಅದರಿಂದ ಯಾವುದೇ ತೊಂದರೆಯಿಲ್ಲ. ಅವುಗಳನ್ನು ಸುಲಭವಾಗಿ ಬಳಸಬಹುದು, ತೊಳೆದು ಮರುಬಳಕೆ ಸಹ ಮಾಡಬಹುದು. ವಿಶ್ವ ಆರೋಗ್ಯ ಸಂಸ್ಥೆ ಇದನ್ನು ಬಳಸಬಾರದೆಂದು ಎಲ್ಲಿಯೂ ಹೇಳಿಲ್ಲ. ಈ ಕುರಿತು ಡಬ್ಲೂಎಚ್‍ಓ ವೆಬ್‍ಸೈಟ್‍ನಲ್ಲಿ ತಿಳಿಸಿಲ್ಲ ಕೂಡ.

ಕೇರಳ ಸರ್ಕಾರವನ್ನು ಕಂಡರಾಗದ ಈ ವೆಬ್‍ಸೈಟ್ ಸುಳ್ಳುಗಳನ್ನು ಹರಡುತ್ತಿದೆ ಅಷ್ಟೇ.

ಸುಳ್ಳು 2: ಗಲಭೆ ಮಾಡುವುದು ನಮ್ಮ ಸ್ವಭಾವವಲ್ಲ, ಗಲಭೆ ಮಾಡುವವರನ್ನು ಜೈಲಿಗೆ ಹಾಕುವುದು ನಮ್ಮ ಸ್ವಭಾವ ; ಅಮಿತ್ ಶಾ

ಆದರೆ ವಾಸ್ತವ ಏನೆಂದರೆ 2002ರ ಗುಜರಾತ್ ಗಲಭೆಯ ಸಮಯದಲ್ಲಿ ಇದೇ ಅಮಿತ್ ಶಾ ಗುಜರಾತಿನ ಗೃಹ ಮಂತ್ರಿಯಾಗಿದ್ದರು. ಗಲಭೆಗೆ ಕುಮ್ಮಕ್ಕು ಕೊಟ್ಟ ಕಾರಣದಿಂದಾಗಿ ಶಾ ಮೇಲೆ ಹಲವಾರು ಪ್ರಕರಣಗಳಿದ್ದು ನಾನಾವತಿ ಆಯೋಗ ಈ ಕುರಿತು ತನಿಖೆ ನಡೆಸಿದೆ. ಈ ಕುರಿತು ಖ್ಯಾತ ಪತ್ರಕರ್ತೆ ರಾಣಾ ಅಯ್ಯೂಬ್ ಹೇಳುವುದು ಹೀಗೆ?

“2010ರಲ್ಲಿ ನಾನು ಈ ಕೊಲೆಗಳ ಬಗ್ಗೆ ವರದಿ ಮಾಡಿದ್ದೆ. ನಾನು ಶಾರ ದೂರವಾಣಿ ಕರೆಗಳ ದಾಖಲೆ ಮತ್ತು ಗುಜರಾತ್ ರಾಜ್ಯದ ಗುಪ್ತಚರ ಇಲಾಖೆಯ ಆಂತರಿಕ ದಾಖಲೆಯನ್ನೂ ಮುಂದಿಟ್ಟಿದ್ದೆ. ಕೊಲ್ಲಬೇಕಾದವರನ್ನು ಕೊಂಡೊಯ್ಯುತ್ತಿರುವಾಗಲೇ ಈತ ಅಧಿಕಾರಿಗಳ ಜೊತೆಯಲ್ಲಿ ಮಾತುಕತೆಯಲ್ಲಿ ತೊಡಗಿದ್ದುದನ್ನು ಈ ದಾಖಲೆಗಳು ಸಾಬೀತುಪಡಿಸುತ್ತಿದ್ದವು. ನನ್ನ ತನಿಖಾ ವರದಿ ಪ್ರಕಟವಾದ ಎರಡು ವಾರಗಳಲ್ಲಿ ಶಾ ಬಂಧನವಾಗಿತ್ತು. ಮೂರು ತಿಂಗಳು ಜೈಲಿನಲ್ಲಿದ್ದರು.

ಸಿಬಿಐ ಸೊಹ್ರಾಬುದ್ದೀನ್ ಮತ್ತು ಆತನ ಪತ್ನಿ ಕೌಸರ್ ಬೀ ಎಂಬ ಮುಸ್ಲಿಮರ ಕೊಲೆಯಲ್ಲಿನ ಪಾತ್ರದ ಬಗ್ಗೆ ಶಾ ವಿರುದ್ಧ ತನಿಖೆ ನಡೆಸುತ್ತಿತ್ತು. ಸುಪ್ರೀಂಕೋರ್ಟ್ ಕಣ್ಗಾವಲಿನಲ್ಲಿ ಶಾರನ್ನು ಈ ಅಪರಾಧದ ಮುಖ್ಯ ಆರೋಪಿ ಮತ್ತು ಸಂಚುಕೋರ ಎಂದು ಹೆಸರಿಸಲಾಗಿತ್ತು. ಅದಲ್ಲದೇ ಆತನನ್ನು ಭೂಗತ ಗೂಂಡಾಗಳು ಮತ್ತು ರಾಜಕಾರಣಿಗಳನ್ನು ಒಳಗೊಂಡ ವಸೂಲಿ ದಂಧೆಯ ಮುಖ್ಯಸ್ಥ ಎಂದೂ ಹೆಸರಿಸಿತ್ತು. ಈ ಆರೋಪಗಳು ಎಷ್ಟು ಗಂಭೀರವಾಗಿದ್ದವು ಎಂದರೆ, ಆತ ಸಾಕ್ಷಿಗಳ ಮೇಲೆ ಪ್ರಭಾವ ಬೀರದಂತೆ ಮತ್ತು ಬೆದರಿಸದಂತೆ ಸುಪ್ರೀಂಕೋರ್ಟ್ ಆತನನ್ನು ಎರಡು ವರ್ಷ ತನ್ನ ತವರು ರಾಜ್ಯ ಪ್ರವೇಶಿಸದಂತೆ ಗಡಿಪಾರು ಮಾಡಿತ್ತು.

ಸುಳ್ಳು 3 : ಮಾಂಸ ತಿಂದರೆ ಕೊರೊನಾ ಬರುತ್ತದೆಯೇ?

ಕನ್ನಡದ ಫೇಕ್‍ನ್ಯೂಸ್ ಹರಡುವ ಪೋಸ್ಟ್ ಕಾರ್ಡ್ ಕನ್ನಡ ವೆಬ್‍ಸೈಟ್ ಕೊರೊನಾ ಬಂದುದರಿಂದ ಹ್ಯಾಂಡ್‍ಷೇಕ್ ಬದಲು ನಮಸ್ಕರಿಸುತ್ತಿದ್ದಾರೆ, ಸಸ್ಯಹಾರಿಗಳಾಗುತ್ತಿದ್ದಾರೆ ಮತ್ತು ಹೆಣವನ್ನು ಹೂಳುವ ಬದಲು ಸುಡುತ್ತಿದ್ದಾರೆ ಎಂದು ವರದಿ ಮಾಡಿದೆ. ಈ ಮೂಲಕ ಅದು ಬ್ರಾಹ್ಮಣ್ಯದ ಶ್ರೇಷ್ಠತೆಯನ್ನು ಹೇರಲು ಪ್ರಯತ್ನಿಸುತ್ತಿದೆ ಅಷ್ಟೇ.

ಸತ್ಯ ಏನೆಂದರೇ ಮಾಂಸ ತಿನ್ನುವುದಕ್ಕೂ ಕೊರೊನಾಗೂ ಸಂಬಂಧವೇ ಇಲ್ಲ. ಮಾಂಸ ತಿನ್ನುವುದರಿಂದ ಕೊರೊನಾ ಬರುವುದಿಲ್ಲ.

ಇನ್ನು ಸತ್ತ ದೇಹವನ್ನು ಹೂಳುವುದರಿಂದ ಕೊರೊನಾ ಹರಡುವುದಿಲ್ಲ ಎಂದು ವೈದ್ಯರು ದೃಢಪಡಿಸಿದ್ದಾರೆ. ಕೊರೊನಾ ಭಯವನ್ನು ತಮ್ಮ ಧಾರ್ಮಿಕ ಮೌಢ್ಯಗಳನ್ನು ಹರಡಲು ಬಳಸುತ್ತಿದ್ದಾರೆ ಅಷ್ಟೇ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...