Homeಮುಖಪುಟಕೊರೊನಾ ತಡೆಯಲು ಬಟ್ಟೆಯಿಂದ ತಯಾರಿಸಿದ ಮಾಸ್ಕ್‌ಗಳನ್ನು ಧರಿಸಬಾರದೇ? ಪೋಸ್ಟ್‌ ಕಾರ್ಡ್‌ ಹರಡಿದ ಮೂರು ಮಹಾಸುಳ್ಳುಗಳು.

ಕೊರೊನಾ ತಡೆಯಲು ಬಟ್ಟೆಯಿಂದ ತಯಾರಿಸಿದ ಮಾಸ್ಕ್‌ಗಳನ್ನು ಧರಿಸಬಾರದೇ? ಪೋಸ್ಟ್‌ ಕಾರ್ಡ್‌ ಹರಡಿದ ಮೂರು ಮಹಾಸುಳ್ಳುಗಳು.

- Advertisement -
- Advertisement -

ಸುಳ್ಳು 1 : ಕೊರೊನಾ ಹರಡದಂತೆ ತಡೆಯಲು ಬಟ್ಟೆಯಿಂದ ತಯಾರಿಸಿದ ಮಾಸ್ಕ್‌ಗಳನ್ನು ಧರಿಸಬಾರದು.

ಹೀಗಂತ ಕನ್ನಡದ ಫೇಕ್‍ನ್ಯೂಸ್ ಹರಡುವ ಪೋಸ್ಟ್ ಕಾರ್ಡ್ ಕನ್ನಡ ವೆಬ್‍ಸೈಟ್ ತಿಳಿಸಿದೆ. ಕೇರಳದಲ್ಲಿ ಕೊರೊನಾ ಹರಡುತ್ತಿದ್ದಂತೆಯೇ ಮಾಸ್ಕ್‌ಗಳ ಕೊರತೆಯುಂಟಾಯಿತು. ಮಾರ್ಚ್ 14ರಂದು ಅಲ್ಲಿನ ಸಿಎಂ ಪಿಣರಾಯಿ ವಿಜಯನ್‍ರವರು ಹತ್ತಿ ಬಟ್ಟೆಯ ಮಾಸ್ಕ್‌ಗಳನ್ನು ಸಿದ್ಧಪಡಿಸುವಂತೆ ಆದೇಶಿಸಿದ್ದರು.

ಅಂದಿನಿಂದ ತಿರುವನಂತಪುರದ ಸೆಂಟ್ರಲ್ ಜೈಲಿನ ಕೈದಿಗಳು ದಿನವೊಂದಕ್ಕೆ ಎರಡು ಸಾವಿರ ಮಾಸ್ಕ್‍ಗಳನ್ನು ತಯಾರಿಸಿ ವಿತರಿಸುತ್ತಿದ್ದಾರೆ. ಇದನ್ನು ವಿರೋಧಿಸಿ ಪೋಸ್ಟ್ ಕಾರ್ಡ್ ಕನ್ನಡ ವೆಬ್‍ಸೈಟ್ ವಿಶ್ವ ಆರೋಗ್ಯ ಸಂಘಟನೆಯ ಸಲಹೆಯನ್ನು ತಿರಸ್ಕರಿಸಿ ಮಾಸ್ಕ್ ತಯಾರಿಸಿದ್ದಾರೆ ಎಂದು ದೂರಿದೆ.

ಸತ್ಯ: ಹತ್ತಿ ಬಟ್ಟೆಯ ಮಾಸ್ಕ್‌ಗಳು ಸುರಕ್ಷಿತವಾಗಿರುತ್ತವೆ ಮಾತ್ರವಲ್ಲ ಅದರಿಂದ ಯಾವುದೇ ತೊಂದರೆಯಿಲ್ಲ. ಅವುಗಳನ್ನು ಸುಲಭವಾಗಿ ಬಳಸಬಹುದು, ತೊಳೆದು ಮರುಬಳಕೆ ಸಹ ಮಾಡಬಹುದು. ವಿಶ್ವ ಆರೋಗ್ಯ ಸಂಸ್ಥೆ ಇದನ್ನು ಬಳಸಬಾರದೆಂದು ಎಲ್ಲಿಯೂ ಹೇಳಿಲ್ಲ. ಈ ಕುರಿತು ಡಬ್ಲೂಎಚ್‍ಓ ವೆಬ್‍ಸೈಟ್‍ನಲ್ಲಿ ತಿಳಿಸಿಲ್ಲ ಕೂಡ.

ಕೇರಳ ಸರ್ಕಾರವನ್ನು ಕಂಡರಾಗದ ಈ ವೆಬ್‍ಸೈಟ್ ಸುಳ್ಳುಗಳನ್ನು ಹರಡುತ್ತಿದೆ ಅಷ್ಟೇ.

ಸುಳ್ಳು 2: ಗಲಭೆ ಮಾಡುವುದು ನಮ್ಮ ಸ್ವಭಾವವಲ್ಲ, ಗಲಭೆ ಮಾಡುವವರನ್ನು ಜೈಲಿಗೆ ಹಾಕುವುದು ನಮ್ಮ ಸ್ವಭಾವ ; ಅಮಿತ್ ಶಾ

ಆದರೆ ವಾಸ್ತವ ಏನೆಂದರೆ 2002ರ ಗುಜರಾತ್ ಗಲಭೆಯ ಸಮಯದಲ್ಲಿ ಇದೇ ಅಮಿತ್ ಶಾ ಗುಜರಾತಿನ ಗೃಹ ಮಂತ್ರಿಯಾಗಿದ್ದರು. ಗಲಭೆಗೆ ಕುಮ್ಮಕ್ಕು ಕೊಟ್ಟ ಕಾರಣದಿಂದಾಗಿ ಶಾ ಮೇಲೆ ಹಲವಾರು ಪ್ರಕರಣಗಳಿದ್ದು ನಾನಾವತಿ ಆಯೋಗ ಈ ಕುರಿತು ತನಿಖೆ ನಡೆಸಿದೆ. ಈ ಕುರಿತು ಖ್ಯಾತ ಪತ್ರಕರ್ತೆ ರಾಣಾ ಅಯ್ಯೂಬ್ ಹೇಳುವುದು ಹೀಗೆ?

“2010ರಲ್ಲಿ ನಾನು ಈ ಕೊಲೆಗಳ ಬಗ್ಗೆ ವರದಿ ಮಾಡಿದ್ದೆ. ನಾನು ಶಾರ ದೂರವಾಣಿ ಕರೆಗಳ ದಾಖಲೆ ಮತ್ತು ಗುಜರಾತ್ ರಾಜ್ಯದ ಗುಪ್ತಚರ ಇಲಾಖೆಯ ಆಂತರಿಕ ದಾಖಲೆಯನ್ನೂ ಮುಂದಿಟ್ಟಿದ್ದೆ. ಕೊಲ್ಲಬೇಕಾದವರನ್ನು ಕೊಂಡೊಯ್ಯುತ್ತಿರುವಾಗಲೇ ಈತ ಅಧಿಕಾರಿಗಳ ಜೊತೆಯಲ್ಲಿ ಮಾತುಕತೆಯಲ್ಲಿ ತೊಡಗಿದ್ದುದನ್ನು ಈ ದಾಖಲೆಗಳು ಸಾಬೀತುಪಡಿಸುತ್ತಿದ್ದವು. ನನ್ನ ತನಿಖಾ ವರದಿ ಪ್ರಕಟವಾದ ಎರಡು ವಾರಗಳಲ್ಲಿ ಶಾ ಬಂಧನವಾಗಿತ್ತು. ಮೂರು ತಿಂಗಳು ಜೈಲಿನಲ್ಲಿದ್ದರು.

ಸಿಬಿಐ ಸೊಹ್ರಾಬುದ್ದೀನ್ ಮತ್ತು ಆತನ ಪತ್ನಿ ಕೌಸರ್ ಬೀ ಎಂಬ ಮುಸ್ಲಿಮರ ಕೊಲೆಯಲ್ಲಿನ ಪಾತ್ರದ ಬಗ್ಗೆ ಶಾ ವಿರುದ್ಧ ತನಿಖೆ ನಡೆಸುತ್ತಿತ್ತು. ಸುಪ್ರೀಂಕೋರ್ಟ್ ಕಣ್ಗಾವಲಿನಲ್ಲಿ ಶಾರನ್ನು ಈ ಅಪರಾಧದ ಮುಖ್ಯ ಆರೋಪಿ ಮತ್ತು ಸಂಚುಕೋರ ಎಂದು ಹೆಸರಿಸಲಾಗಿತ್ತು. ಅದಲ್ಲದೇ ಆತನನ್ನು ಭೂಗತ ಗೂಂಡಾಗಳು ಮತ್ತು ರಾಜಕಾರಣಿಗಳನ್ನು ಒಳಗೊಂಡ ವಸೂಲಿ ದಂಧೆಯ ಮುಖ್ಯಸ್ಥ ಎಂದೂ ಹೆಸರಿಸಿತ್ತು. ಈ ಆರೋಪಗಳು ಎಷ್ಟು ಗಂಭೀರವಾಗಿದ್ದವು ಎಂದರೆ, ಆತ ಸಾಕ್ಷಿಗಳ ಮೇಲೆ ಪ್ರಭಾವ ಬೀರದಂತೆ ಮತ್ತು ಬೆದರಿಸದಂತೆ ಸುಪ್ರೀಂಕೋರ್ಟ್ ಆತನನ್ನು ಎರಡು ವರ್ಷ ತನ್ನ ತವರು ರಾಜ್ಯ ಪ್ರವೇಶಿಸದಂತೆ ಗಡಿಪಾರು ಮಾಡಿತ್ತು.

ಸುಳ್ಳು 3 : ಮಾಂಸ ತಿಂದರೆ ಕೊರೊನಾ ಬರುತ್ತದೆಯೇ?

ಕನ್ನಡದ ಫೇಕ್‍ನ್ಯೂಸ್ ಹರಡುವ ಪೋಸ್ಟ್ ಕಾರ್ಡ್ ಕನ್ನಡ ವೆಬ್‍ಸೈಟ್ ಕೊರೊನಾ ಬಂದುದರಿಂದ ಹ್ಯಾಂಡ್‍ಷೇಕ್ ಬದಲು ನಮಸ್ಕರಿಸುತ್ತಿದ್ದಾರೆ, ಸಸ್ಯಹಾರಿಗಳಾಗುತ್ತಿದ್ದಾರೆ ಮತ್ತು ಹೆಣವನ್ನು ಹೂಳುವ ಬದಲು ಸುಡುತ್ತಿದ್ದಾರೆ ಎಂದು ವರದಿ ಮಾಡಿದೆ. ಈ ಮೂಲಕ ಅದು ಬ್ರಾಹ್ಮಣ್ಯದ ಶ್ರೇಷ್ಠತೆಯನ್ನು ಹೇರಲು ಪ್ರಯತ್ನಿಸುತ್ತಿದೆ ಅಷ್ಟೇ.

ಸತ್ಯ ಏನೆಂದರೇ ಮಾಂಸ ತಿನ್ನುವುದಕ್ಕೂ ಕೊರೊನಾಗೂ ಸಂಬಂಧವೇ ಇಲ್ಲ. ಮಾಂಸ ತಿನ್ನುವುದರಿಂದ ಕೊರೊನಾ ಬರುವುದಿಲ್ಲ.

ಇನ್ನು ಸತ್ತ ದೇಹವನ್ನು ಹೂಳುವುದರಿಂದ ಕೊರೊನಾ ಹರಡುವುದಿಲ್ಲ ಎಂದು ವೈದ್ಯರು ದೃಢಪಡಿಸಿದ್ದಾರೆ. ಕೊರೊನಾ ಭಯವನ್ನು ತಮ್ಮ ಧಾರ್ಮಿಕ ಮೌಢ್ಯಗಳನ್ನು ಹರಡಲು ಬಳಸುತ್ತಿದ್ದಾರೆ ಅಷ್ಟೇ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...