Homeಮುಖಪುಟಕೊರೊನಾ ತಡೆಯಲು ಬಟ್ಟೆಯಿಂದ ತಯಾರಿಸಿದ ಮಾಸ್ಕ್‌ಗಳನ್ನು ಧರಿಸಬಾರದೇ? ಪೋಸ್ಟ್‌ ಕಾರ್ಡ್‌ ಹರಡಿದ ಮೂರು ಮಹಾಸುಳ್ಳುಗಳು.

ಕೊರೊನಾ ತಡೆಯಲು ಬಟ್ಟೆಯಿಂದ ತಯಾರಿಸಿದ ಮಾಸ್ಕ್‌ಗಳನ್ನು ಧರಿಸಬಾರದೇ? ಪೋಸ್ಟ್‌ ಕಾರ್ಡ್‌ ಹರಡಿದ ಮೂರು ಮಹಾಸುಳ್ಳುಗಳು.

- Advertisement -
- Advertisement -

ಸುಳ್ಳು 1 : ಕೊರೊನಾ ಹರಡದಂತೆ ತಡೆಯಲು ಬಟ್ಟೆಯಿಂದ ತಯಾರಿಸಿದ ಮಾಸ್ಕ್‌ಗಳನ್ನು ಧರಿಸಬಾರದು.

ಹೀಗಂತ ಕನ್ನಡದ ಫೇಕ್‍ನ್ಯೂಸ್ ಹರಡುವ ಪೋಸ್ಟ್ ಕಾರ್ಡ್ ಕನ್ನಡ ವೆಬ್‍ಸೈಟ್ ತಿಳಿಸಿದೆ. ಕೇರಳದಲ್ಲಿ ಕೊರೊನಾ ಹರಡುತ್ತಿದ್ದಂತೆಯೇ ಮಾಸ್ಕ್‌ಗಳ ಕೊರತೆಯುಂಟಾಯಿತು. ಮಾರ್ಚ್ 14ರಂದು ಅಲ್ಲಿನ ಸಿಎಂ ಪಿಣರಾಯಿ ವಿಜಯನ್‍ರವರು ಹತ್ತಿ ಬಟ್ಟೆಯ ಮಾಸ್ಕ್‌ಗಳನ್ನು ಸಿದ್ಧಪಡಿಸುವಂತೆ ಆದೇಶಿಸಿದ್ದರು.

ಅಂದಿನಿಂದ ತಿರುವನಂತಪುರದ ಸೆಂಟ್ರಲ್ ಜೈಲಿನ ಕೈದಿಗಳು ದಿನವೊಂದಕ್ಕೆ ಎರಡು ಸಾವಿರ ಮಾಸ್ಕ್‍ಗಳನ್ನು ತಯಾರಿಸಿ ವಿತರಿಸುತ್ತಿದ್ದಾರೆ. ಇದನ್ನು ವಿರೋಧಿಸಿ ಪೋಸ್ಟ್ ಕಾರ್ಡ್ ಕನ್ನಡ ವೆಬ್‍ಸೈಟ್ ವಿಶ್ವ ಆರೋಗ್ಯ ಸಂಘಟನೆಯ ಸಲಹೆಯನ್ನು ತಿರಸ್ಕರಿಸಿ ಮಾಸ್ಕ್ ತಯಾರಿಸಿದ್ದಾರೆ ಎಂದು ದೂರಿದೆ.

ಸತ್ಯ: ಹತ್ತಿ ಬಟ್ಟೆಯ ಮಾಸ್ಕ್‌ಗಳು ಸುರಕ್ಷಿತವಾಗಿರುತ್ತವೆ ಮಾತ್ರವಲ್ಲ ಅದರಿಂದ ಯಾವುದೇ ತೊಂದರೆಯಿಲ್ಲ. ಅವುಗಳನ್ನು ಸುಲಭವಾಗಿ ಬಳಸಬಹುದು, ತೊಳೆದು ಮರುಬಳಕೆ ಸಹ ಮಾಡಬಹುದು. ವಿಶ್ವ ಆರೋಗ್ಯ ಸಂಸ್ಥೆ ಇದನ್ನು ಬಳಸಬಾರದೆಂದು ಎಲ್ಲಿಯೂ ಹೇಳಿಲ್ಲ. ಈ ಕುರಿತು ಡಬ್ಲೂಎಚ್‍ಓ ವೆಬ್‍ಸೈಟ್‍ನಲ್ಲಿ ತಿಳಿಸಿಲ್ಲ ಕೂಡ.

ಕೇರಳ ಸರ್ಕಾರವನ್ನು ಕಂಡರಾಗದ ಈ ವೆಬ್‍ಸೈಟ್ ಸುಳ್ಳುಗಳನ್ನು ಹರಡುತ್ತಿದೆ ಅಷ್ಟೇ.

ಸುಳ್ಳು 2: ಗಲಭೆ ಮಾಡುವುದು ನಮ್ಮ ಸ್ವಭಾವವಲ್ಲ, ಗಲಭೆ ಮಾಡುವವರನ್ನು ಜೈಲಿಗೆ ಹಾಕುವುದು ನಮ್ಮ ಸ್ವಭಾವ ; ಅಮಿತ್ ಶಾ

ಆದರೆ ವಾಸ್ತವ ಏನೆಂದರೆ 2002ರ ಗುಜರಾತ್ ಗಲಭೆಯ ಸಮಯದಲ್ಲಿ ಇದೇ ಅಮಿತ್ ಶಾ ಗುಜರಾತಿನ ಗೃಹ ಮಂತ್ರಿಯಾಗಿದ್ದರು. ಗಲಭೆಗೆ ಕುಮ್ಮಕ್ಕು ಕೊಟ್ಟ ಕಾರಣದಿಂದಾಗಿ ಶಾ ಮೇಲೆ ಹಲವಾರು ಪ್ರಕರಣಗಳಿದ್ದು ನಾನಾವತಿ ಆಯೋಗ ಈ ಕುರಿತು ತನಿಖೆ ನಡೆಸಿದೆ. ಈ ಕುರಿತು ಖ್ಯಾತ ಪತ್ರಕರ್ತೆ ರಾಣಾ ಅಯ್ಯೂಬ್ ಹೇಳುವುದು ಹೀಗೆ?

“2010ರಲ್ಲಿ ನಾನು ಈ ಕೊಲೆಗಳ ಬಗ್ಗೆ ವರದಿ ಮಾಡಿದ್ದೆ. ನಾನು ಶಾರ ದೂರವಾಣಿ ಕರೆಗಳ ದಾಖಲೆ ಮತ್ತು ಗುಜರಾತ್ ರಾಜ್ಯದ ಗುಪ್ತಚರ ಇಲಾಖೆಯ ಆಂತರಿಕ ದಾಖಲೆಯನ್ನೂ ಮುಂದಿಟ್ಟಿದ್ದೆ. ಕೊಲ್ಲಬೇಕಾದವರನ್ನು ಕೊಂಡೊಯ್ಯುತ್ತಿರುವಾಗಲೇ ಈತ ಅಧಿಕಾರಿಗಳ ಜೊತೆಯಲ್ಲಿ ಮಾತುಕತೆಯಲ್ಲಿ ತೊಡಗಿದ್ದುದನ್ನು ಈ ದಾಖಲೆಗಳು ಸಾಬೀತುಪಡಿಸುತ್ತಿದ್ದವು. ನನ್ನ ತನಿಖಾ ವರದಿ ಪ್ರಕಟವಾದ ಎರಡು ವಾರಗಳಲ್ಲಿ ಶಾ ಬಂಧನವಾಗಿತ್ತು. ಮೂರು ತಿಂಗಳು ಜೈಲಿನಲ್ಲಿದ್ದರು.

ಸಿಬಿಐ ಸೊಹ್ರಾಬುದ್ದೀನ್ ಮತ್ತು ಆತನ ಪತ್ನಿ ಕೌಸರ್ ಬೀ ಎಂಬ ಮುಸ್ಲಿಮರ ಕೊಲೆಯಲ್ಲಿನ ಪಾತ್ರದ ಬಗ್ಗೆ ಶಾ ವಿರುದ್ಧ ತನಿಖೆ ನಡೆಸುತ್ತಿತ್ತು. ಸುಪ್ರೀಂಕೋರ್ಟ್ ಕಣ್ಗಾವಲಿನಲ್ಲಿ ಶಾರನ್ನು ಈ ಅಪರಾಧದ ಮುಖ್ಯ ಆರೋಪಿ ಮತ್ತು ಸಂಚುಕೋರ ಎಂದು ಹೆಸರಿಸಲಾಗಿತ್ತು. ಅದಲ್ಲದೇ ಆತನನ್ನು ಭೂಗತ ಗೂಂಡಾಗಳು ಮತ್ತು ರಾಜಕಾರಣಿಗಳನ್ನು ಒಳಗೊಂಡ ವಸೂಲಿ ದಂಧೆಯ ಮುಖ್ಯಸ್ಥ ಎಂದೂ ಹೆಸರಿಸಿತ್ತು. ಈ ಆರೋಪಗಳು ಎಷ್ಟು ಗಂಭೀರವಾಗಿದ್ದವು ಎಂದರೆ, ಆತ ಸಾಕ್ಷಿಗಳ ಮೇಲೆ ಪ್ರಭಾವ ಬೀರದಂತೆ ಮತ್ತು ಬೆದರಿಸದಂತೆ ಸುಪ್ರೀಂಕೋರ್ಟ್ ಆತನನ್ನು ಎರಡು ವರ್ಷ ತನ್ನ ತವರು ರಾಜ್ಯ ಪ್ರವೇಶಿಸದಂತೆ ಗಡಿಪಾರು ಮಾಡಿತ್ತು.

ಸುಳ್ಳು 3 : ಮಾಂಸ ತಿಂದರೆ ಕೊರೊನಾ ಬರುತ್ತದೆಯೇ?

ಕನ್ನಡದ ಫೇಕ್‍ನ್ಯೂಸ್ ಹರಡುವ ಪೋಸ್ಟ್ ಕಾರ್ಡ್ ಕನ್ನಡ ವೆಬ್‍ಸೈಟ್ ಕೊರೊನಾ ಬಂದುದರಿಂದ ಹ್ಯಾಂಡ್‍ಷೇಕ್ ಬದಲು ನಮಸ್ಕರಿಸುತ್ತಿದ್ದಾರೆ, ಸಸ್ಯಹಾರಿಗಳಾಗುತ್ತಿದ್ದಾರೆ ಮತ್ತು ಹೆಣವನ್ನು ಹೂಳುವ ಬದಲು ಸುಡುತ್ತಿದ್ದಾರೆ ಎಂದು ವರದಿ ಮಾಡಿದೆ. ಈ ಮೂಲಕ ಅದು ಬ್ರಾಹ್ಮಣ್ಯದ ಶ್ರೇಷ್ಠತೆಯನ್ನು ಹೇರಲು ಪ್ರಯತ್ನಿಸುತ್ತಿದೆ ಅಷ್ಟೇ.

ಸತ್ಯ ಏನೆಂದರೇ ಮಾಂಸ ತಿನ್ನುವುದಕ್ಕೂ ಕೊರೊನಾಗೂ ಸಂಬಂಧವೇ ಇಲ್ಲ. ಮಾಂಸ ತಿನ್ನುವುದರಿಂದ ಕೊರೊನಾ ಬರುವುದಿಲ್ಲ.

ಇನ್ನು ಸತ್ತ ದೇಹವನ್ನು ಹೂಳುವುದರಿಂದ ಕೊರೊನಾ ಹರಡುವುದಿಲ್ಲ ಎಂದು ವೈದ್ಯರು ದೃಢಪಡಿಸಿದ್ದಾರೆ. ಕೊರೊನಾ ಭಯವನ್ನು ತಮ್ಮ ಧಾರ್ಮಿಕ ಮೌಢ್ಯಗಳನ್ನು ಹರಡಲು ಬಳಸುತ್ತಿದ್ದಾರೆ ಅಷ್ಟೇ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...