Homeಮುಖಪುಟಕೊರೊನಾ ತಡೆಯಲು ಬಟ್ಟೆಯಿಂದ ತಯಾರಿಸಿದ ಮಾಸ್ಕ್‌ಗಳನ್ನು ಧರಿಸಬಾರದೇ? ಪೋಸ್ಟ್‌ ಕಾರ್ಡ್‌ ಹರಡಿದ ಮೂರು ಮಹಾಸುಳ್ಳುಗಳು.

ಕೊರೊನಾ ತಡೆಯಲು ಬಟ್ಟೆಯಿಂದ ತಯಾರಿಸಿದ ಮಾಸ್ಕ್‌ಗಳನ್ನು ಧರಿಸಬಾರದೇ? ಪೋಸ್ಟ್‌ ಕಾರ್ಡ್‌ ಹರಡಿದ ಮೂರು ಮಹಾಸುಳ್ಳುಗಳು.

- Advertisement -
- Advertisement -

ಸುಳ್ಳು 1 : ಕೊರೊನಾ ಹರಡದಂತೆ ತಡೆಯಲು ಬಟ್ಟೆಯಿಂದ ತಯಾರಿಸಿದ ಮಾಸ್ಕ್‌ಗಳನ್ನು ಧರಿಸಬಾರದು.

ಹೀಗಂತ ಕನ್ನಡದ ಫೇಕ್‍ನ್ಯೂಸ್ ಹರಡುವ ಪೋಸ್ಟ್ ಕಾರ್ಡ್ ಕನ್ನಡ ವೆಬ್‍ಸೈಟ್ ತಿಳಿಸಿದೆ. ಕೇರಳದಲ್ಲಿ ಕೊರೊನಾ ಹರಡುತ್ತಿದ್ದಂತೆಯೇ ಮಾಸ್ಕ್‌ಗಳ ಕೊರತೆಯುಂಟಾಯಿತು. ಮಾರ್ಚ್ 14ರಂದು ಅಲ್ಲಿನ ಸಿಎಂ ಪಿಣರಾಯಿ ವಿಜಯನ್‍ರವರು ಹತ್ತಿ ಬಟ್ಟೆಯ ಮಾಸ್ಕ್‌ಗಳನ್ನು ಸಿದ್ಧಪಡಿಸುವಂತೆ ಆದೇಶಿಸಿದ್ದರು.

ಅಂದಿನಿಂದ ತಿರುವನಂತಪುರದ ಸೆಂಟ್ರಲ್ ಜೈಲಿನ ಕೈದಿಗಳು ದಿನವೊಂದಕ್ಕೆ ಎರಡು ಸಾವಿರ ಮಾಸ್ಕ್‍ಗಳನ್ನು ತಯಾರಿಸಿ ವಿತರಿಸುತ್ತಿದ್ದಾರೆ. ಇದನ್ನು ವಿರೋಧಿಸಿ ಪೋಸ್ಟ್ ಕಾರ್ಡ್ ಕನ್ನಡ ವೆಬ್‍ಸೈಟ್ ವಿಶ್ವ ಆರೋಗ್ಯ ಸಂಘಟನೆಯ ಸಲಹೆಯನ್ನು ತಿರಸ್ಕರಿಸಿ ಮಾಸ್ಕ್ ತಯಾರಿಸಿದ್ದಾರೆ ಎಂದು ದೂರಿದೆ.

ಸತ್ಯ: ಹತ್ತಿ ಬಟ್ಟೆಯ ಮಾಸ್ಕ್‌ಗಳು ಸುರಕ್ಷಿತವಾಗಿರುತ್ತವೆ ಮಾತ್ರವಲ್ಲ ಅದರಿಂದ ಯಾವುದೇ ತೊಂದರೆಯಿಲ್ಲ. ಅವುಗಳನ್ನು ಸುಲಭವಾಗಿ ಬಳಸಬಹುದು, ತೊಳೆದು ಮರುಬಳಕೆ ಸಹ ಮಾಡಬಹುದು. ವಿಶ್ವ ಆರೋಗ್ಯ ಸಂಸ್ಥೆ ಇದನ್ನು ಬಳಸಬಾರದೆಂದು ಎಲ್ಲಿಯೂ ಹೇಳಿಲ್ಲ. ಈ ಕುರಿತು ಡಬ್ಲೂಎಚ್‍ಓ ವೆಬ್‍ಸೈಟ್‍ನಲ್ಲಿ ತಿಳಿಸಿಲ್ಲ ಕೂಡ.

ಕೇರಳ ಸರ್ಕಾರವನ್ನು ಕಂಡರಾಗದ ಈ ವೆಬ್‍ಸೈಟ್ ಸುಳ್ಳುಗಳನ್ನು ಹರಡುತ್ತಿದೆ ಅಷ್ಟೇ.

ಸುಳ್ಳು 2: ಗಲಭೆ ಮಾಡುವುದು ನಮ್ಮ ಸ್ವಭಾವವಲ್ಲ, ಗಲಭೆ ಮಾಡುವವರನ್ನು ಜೈಲಿಗೆ ಹಾಕುವುದು ನಮ್ಮ ಸ್ವಭಾವ ; ಅಮಿತ್ ಶಾ

ಆದರೆ ವಾಸ್ತವ ಏನೆಂದರೆ 2002ರ ಗುಜರಾತ್ ಗಲಭೆಯ ಸಮಯದಲ್ಲಿ ಇದೇ ಅಮಿತ್ ಶಾ ಗುಜರಾತಿನ ಗೃಹ ಮಂತ್ರಿಯಾಗಿದ್ದರು. ಗಲಭೆಗೆ ಕುಮ್ಮಕ್ಕು ಕೊಟ್ಟ ಕಾರಣದಿಂದಾಗಿ ಶಾ ಮೇಲೆ ಹಲವಾರು ಪ್ರಕರಣಗಳಿದ್ದು ನಾನಾವತಿ ಆಯೋಗ ಈ ಕುರಿತು ತನಿಖೆ ನಡೆಸಿದೆ. ಈ ಕುರಿತು ಖ್ಯಾತ ಪತ್ರಕರ್ತೆ ರಾಣಾ ಅಯ್ಯೂಬ್ ಹೇಳುವುದು ಹೀಗೆ?

“2010ರಲ್ಲಿ ನಾನು ಈ ಕೊಲೆಗಳ ಬಗ್ಗೆ ವರದಿ ಮಾಡಿದ್ದೆ. ನಾನು ಶಾರ ದೂರವಾಣಿ ಕರೆಗಳ ದಾಖಲೆ ಮತ್ತು ಗುಜರಾತ್ ರಾಜ್ಯದ ಗುಪ್ತಚರ ಇಲಾಖೆಯ ಆಂತರಿಕ ದಾಖಲೆಯನ್ನೂ ಮುಂದಿಟ್ಟಿದ್ದೆ. ಕೊಲ್ಲಬೇಕಾದವರನ್ನು ಕೊಂಡೊಯ್ಯುತ್ತಿರುವಾಗಲೇ ಈತ ಅಧಿಕಾರಿಗಳ ಜೊತೆಯಲ್ಲಿ ಮಾತುಕತೆಯಲ್ಲಿ ತೊಡಗಿದ್ದುದನ್ನು ಈ ದಾಖಲೆಗಳು ಸಾಬೀತುಪಡಿಸುತ್ತಿದ್ದವು. ನನ್ನ ತನಿಖಾ ವರದಿ ಪ್ರಕಟವಾದ ಎರಡು ವಾರಗಳಲ್ಲಿ ಶಾ ಬಂಧನವಾಗಿತ್ತು. ಮೂರು ತಿಂಗಳು ಜೈಲಿನಲ್ಲಿದ್ದರು.

ಸಿಬಿಐ ಸೊಹ್ರಾಬುದ್ದೀನ್ ಮತ್ತು ಆತನ ಪತ್ನಿ ಕೌಸರ್ ಬೀ ಎಂಬ ಮುಸ್ಲಿಮರ ಕೊಲೆಯಲ್ಲಿನ ಪಾತ್ರದ ಬಗ್ಗೆ ಶಾ ವಿರುದ್ಧ ತನಿಖೆ ನಡೆಸುತ್ತಿತ್ತು. ಸುಪ್ರೀಂಕೋರ್ಟ್ ಕಣ್ಗಾವಲಿನಲ್ಲಿ ಶಾರನ್ನು ಈ ಅಪರಾಧದ ಮುಖ್ಯ ಆರೋಪಿ ಮತ್ತು ಸಂಚುಕೋರ ಎಂದು ಹೆಸರಿಸಲಾಗಿತ್ತು. ಅದಲ್ಲದೇ ಆತನನ್ನು ಭೂಗತ ಗೂಂಡಾಗಳು ಮತ್ತು ರಾಜಕಾರಣಿಗಳನ್ನು ಒಳಗೊಂಡ ವಸೂಲಿ ದಂಧೆಯ ಮುಖ್ಯಸ್ಥ ಎಂದೂ ಹೆಸರಿಸಿತ್ತು. ಈ ಆರೋಪಗಳು ಎಷ್ಟು ಗಂಭೀರವಾಗಿದ್ದವು ಎಂದರೆ, ಆತ ಸಾಕ್ಷಿಗಳ ಮೇಲೆ ಪ್ರಭಾವ ಬೀರದಂತೆ ಮತ್ತು ಬೆದರಿಸದಂತೆ ಸುಪ್ರೀಂಕೋರ್ಟ್ ಆತನನ್ನು ಎರಡು ವರ್ಷ ತನ್ನ ತವರು ರಾಜ್ಯ ಪ್ರವೇಶಿಸದಂತೆ ಗಡಿಪಾರು ಮಾಡಿತ್ತು.

ಸುಳ್ಳು 3 : ಮಾಂಸ ತಿಂದರೆ ಕೊರೊನಾ ಬರುತ್ತದೆಯೇ?

ಕನ್ನಡದ ಫೇಕ್‍ನ್ಯೂಸ್ ಹರಡುವ ಪೋಸ್ಟ್ ಕಾರ್ಡ್ ಕನ್ನಡ ವೆಬ್‍ಸೈಟ್ ಕೊರೊನಾ ಬಂದುದರಿಂದ ಹ್ಯಾಂಡ್‍ಷೇಕ್ ಬದಲು ನಮಸ್ಕರಿಸುತ್ತಿದ್ದಾರೆ, ಸಸ್ಯಹಾರಿಗಳಾಗುತ್ತಿದ್ದಾರೆ ಮತ್ತು ಹೆಣವನ್ನು ಹೂಳುವ ಬದಲು ಸುಡುತ್ತಿದ್ದಾರೆ ಎಂದು ವರದಿ ಮಾಡಿದೆ. ಈ ಮೂಲಕ ಅದು ಬ್ರಾಹ್ಮಣ್ಯದ ಶ್ರೇಷ್ಠತೆಯನ್ನು ಹೇರಲು ಪ್ರಯತ್ನಿಸುತ್ತಿದೆ ಅಷ್ಟೇ.

ಸತ್ಯ ಏನೆಂದರೇ ಮಾಂಸ ತಿನ್ನುವುದಕ್ಕೂ ಕೊರೊನಾಗೂ ಸಂಬಂಧವೇ ಇಲ್ಲ. ಮಾಂಸ ತಿನ್ನುವುದರಿಂದ ಕೊರೊನಾ ಬರುವುದಿಲ್ಲ.

ಇನ್ನು ಸತ್ತ ದೇಹವನ್ನು ಹೂಳುವುದರಿಂದ ಕೊರೊನಾ ಹರಡುವುದಿಲ್ಲ ಎಂದು ವೈದ್ಯರು ದೃಢಪಡಿಸಿದ್ದಾರೆ. ಕೊರೊನಾ ಭಯವನ್ನು ತಮ್ಮ ಧಾರ್ಮಿಕ ಮೌಢ್ಯಗಳನ್ನು ಹರಡಲು ಬಳಸುತ್ತಿದ್ದಾರೆ ಅಷ್ಟೇ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...