Homeಮುಖಪುಟಹೈಕೋರ್ಟ್‌ ನ್ಯಾಯಾಧೀಶರ ವಿರುದ್ದ ಮಾನಹಾನಿ ಪೋಸ್ಟ್‌‌‌; ಮತ್ತೆ ಇಬ್ಬರನ್ನು ಬಂಧಿಸಿದ CBI

ಹೈಕೋರ್ಟ್‌ ನ್ಯಾಯಾಧೀಶರ ವಿರುದ್ದ ಮಾನಹಾನಿ ಪೋಸ್ಟ್‌‌‌; ಮತ್ತೆ ಇಬ್ಬರನ್ನು ಬಂಧಿಸಿದ CBI

- Advertisement -
- Advertisement -

ಅಧೀನ ನ್ಯಾಯಾಲಯದ ನ್ಯಾಯಾಧೀಶರು ಬೆದರಿಕೆಗಳ ಬಗ್ಗೆ ದೂರು ನೀಡಿದಾಗ ತನಿಖಾ ಸಂಸ್ಥೆಗಳು ಪ್ರತಿಕ್ರಿಯಿಸುವುದಿಲ್ಲ ಎಂದು ಭಾರತದ ಮುಖ್ಯ ನ್ಯಾಯಾಧೀಶರು ಹೇಳಿದ ಕೆಲವು ದಿನಗಳ ನಂತರ, ಆಂಧ್ರಪ್ರದೇಶ ಹೈಕೋರ್ಟ್ ನ್ಯಾಯಾಧೀಶರ ವಿರುದ್ಧ ಮಾನಹಾನಿಕರ ಪೋಸ್ಟ್‌ ಮಾಡಿದ ಇಬ್ಬರನ್ನು ಸಿಬಿಐ ಬಂಧಿಸಿದೆ.

ಒಟ್ಟಾರೆಯಾಗಿ, ಪ್ರಕರಣದಲ್ಲಿ ನ್ಯಾಯಾಧೀಶರನ್ನು ಅವಹೇಳನ ಮಾಡಿದ ಆರೋಪದಲ್ಲಿ ಐದು ಜನರನ್ನು ಇದುವರೆಗೂ ಬಂಧಿಸಲಾಗಿದೆ. ಪ್ರಕರಣದ ಮೊದಲ ಬಂಧನವನ್ನು ಕಳೆದ ತಿಂಗಳು ಜುಲೈ 9 ರಂದು ಸಿಬಿಐ ಮಾಡಿತ್ತು.

ಇದನ್ನೂ ಓದಿ: ಜಾರ್ಖಂಡ್ ನ್ಯಾಯಾಧೀಶರಿಗೆ ಆಟೋದಿಂದ ಗುದ್ದಿ ಸಾಯಿಸಿದ ದುಷ್ಕರ್ಮಿಗಳು: ಸಿಸಿಟಿವಿಯಲ್ಲಿ ಸೆರೆ

ನ್ಯಾಯಾಧೀಶರನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡಿದ್ದ ಆರೋಪಿಗಳು ನ್ಯಾಯಾಧೀಶರು ಮತ್ತು ನ್ಯಾಯಾಂಗದ ವಿರುದ್ಧ ಅವಹೇಳನಕಾರಿ ಪೋಸ್ಟ್‌ಗಳನ್ನು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಪ್ರಕರಣದ ನೋಂದಣಿಯ ನಂತರ, ಸಿಬಿಐ ಎಫ್ಐಆರ್‌ನಲ್ಲಿ ಹೆಸರಿಸಲಾದ 16 ಆರೋಪಿಗಳ ಪೈಕಿ 13 ಆರೋಪಿಗಳನ್ನು ವಿವಿಧ ಡಿಜಿಟಲ್ ವೇದಿಕೆಗಳಲ್ಲಿ ಪತ್ತೆ ಮಾಡಿದ್ದು, ಉಳಿದ ಮೂವರು ವಿದೇಶದಲ್ಲಿರುವುದು ಪತ್ತೆಯಾಗಿದೆ. ಸಿಬಿಐ ಇದುವರೆಗೆ 13 ಆರೋಪಿಗಳಲ್ಲಿ 11 ಜನರನ್ನು ವಿಚಾರಣೆ ನಡೆದಿದ್ದು, ಅವರಲ್ಲಿ 5 ಜನರನ್ನು ಬಂಧಿಸಿದೆ.

ಇತ್ತೀಚೆಗೆ ಜಾರ್ಖಂಡ್ ಜಿಲ್ಲಾ ನ್ಯಾಯಾಧೀಶರ ಹತ್ಯೆ ಪ್ರಕರಣವನ್ನು ನ್ಯಾಯಾಲಯ ಸ್ವಯಂ ಕೈಗೆತ್ತಿಕೊಂಡಿದ್ದು, ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರು ಶುಕ್ರವಾರ ತನಿಖಾ ಸಂಸ್ಥೆಗಳ ವಿರುದ್ಧ ಟೀಕೆ ಮಾಡಿದ್ದಾರೆ.

ಇದನ್ನೂ ಓದಿ: ಜಾಮೀನು ನೀಡದ ನ್ಯಾಯಾಧೀಶನ ಬರ್ಬರ ಕೊಲೆ: ಸುಮೊಟೋ ಪ್ರಕರಣದ ದಾಖಲಿಸಿದ ಸುಪ್ರೀಂ

“ಸಿಬಿಐ ಏನನ್ನೂ ಮಾಡಿಲ್ಲ. ನಾವು ಸಿಬಿಐ ಧೋರಣೆಯಲ್ಲಿ ಸ್ವಲ್ಪ ಬದಲಾವಣೆಯನ್ನು ನಿರೀಕ್ಷಿಸಿದ್ದೆವು ಆದರೆ ಯಾವುದೇ ಬದಲಾವಣೆಯಿಲ್ಲ. ಕ್ಷಮಿಸಿ, ಇದು ಪರಿಸ್ಥಿತಿ” ಎಂದು ರಮಣ ಅವರು ಹೇಳಿದ್ದರು.

ಜುಲೈ 28 ರಂದು ಜಾರ್ಖಂಡ್ ಜಿಲ್ಲಾ ನ್ಯಾಯಾಧೀಶ ಉತ್ತಮ್ ಆನಂದ್ (49) ಅವರು ಬೆಳಗಿನ ಜಾವ ಜಾಗಿಂಗ್‌ ಮಾಡುತ್ತಿದ್ದಾಗ ಆಟೋ ಡಿಕ್ಕಿ ಹೊಡೆದು ಕೊಲ್ಲಲ್ಪಟ್ಟರು. ಪ್ರಕರಣವು ಮೊದಲಿಗೆ ಹಿಟ್ ಅಂಡ್ ರನ್ ಎಂದು ಹೇಳಲಾಗಿತ್ತು, ಆದರೆ ಸಾಮಾಜಿಕ ಜಾಲತಾಣದಲ್ಲಿ ಘಟನೆಯ ಸಿಸಿ ಟಿವಿ ದೃಶ್ಯಾವಳಿಗಳು ವೈರಲ್ ಆದ ನಂತರ ಪ್ರಕರಣವು ಇನ್ನೊಂದು ಮಗ್ಗುಲಿಗೆ ಹೊರಳಿತು.

ಉತ್ತಮ್ ಆನಂದ್‌ ಅವರು ಧನ್ಬಾದ್‌ನ ಅನೇಕ ಮಾಫಿಯಾ ಹತ್ಯಾ ಪ್ರಕರಣಗಳನ್ನು ವಿಚಾರಣೆ ನಡೆಸುತ್ತಿದ್ದರು, ಅದರಲ್ಲಿ ಅವರು ಇಬ್ಬರು ದರೋಡೆಕೋರರ ಜಾಮೀನು ಕೋರಿಕೆಯನ್ನು ತಿರಸ್ಕರಿಸಿದ್ದರು.

ಇದನ್ನೂ ಓದಿ: ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಘಟನೆಗಳು ‘ಗಂಭೀರ’: ಸುಪ್ರೀಂಕೋರ್ಟ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...