Homeಮುಖಪುಟಪಹಲ್ಗಾಮ್ ದಾಳಿಯ ಕುರಿತು ಪೋಸ್ಟ್‌: ಗಾಯಕಿ ನೇಹಾ ಸಿಂಗ್ ರಾಥೋಡ್ ವಿರುದ್ಧ 'ದೇಶದ್ರೋಹ' ಪ್ರಕರಣ ದಾಖಲು

ಪಹಲ್ಗಾಮ್ ದಾಳಿಯ ಕುರಿತು ಪೋಸ್ಟ್‌: ಗಾಯಕಿ ನೇಹಾ ಸಿಂಗ್ ರಾಥೋಡ್ ವಿರುದ್ಧ ‘ದೇಶದ್ರೋಹ’ ಪ್ರಕರಣ ದಾಖಲು

- Advertisement -
- Advertisement -

ಪಹಲ್ಗಾಮ್ ದುರಂತದ ನಂತರ ನಿರ್ದಿಷ್ಟ ಧಾರ್ಮಿಕ ಸಮುದಾಯವನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಪ್ರಚೋದನಕಾರಿ ಪೋಸ್ಟ್‌ಗಳನ್ನು ಹಾಕಿರುವುದರಿಂದ ದೇಶದ ಏಕತೆಗೆ ಹಾನಿಯಾಗಬಹುದು ಎಂಬ ದೂರಿನ ಮೇರೆಗೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ವಿರುದ್ಧ ಪೊಲೀಸರು ದೇಶದ್ರೋಹದ ಪ್ರಕರಣ ದಾಖಲಿಸಿದ್ದಾರೆ.

“ಎಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ವೇಳೆ ಬಹುತೇಕ ಪ್ರವಾಸಿಗರೇ ಆಗಿದ್ದ ಸಂತ್ರಸ್ತರ ಧರ್ಮವನ್ನು ಕೇಳಿ, ಅವರ ಮೇಲೆ ಗುಂಡು ಹಾರಿಸಿದ ಭಯೋತ್ಪಾದಕರ ಕೃತ್ಯದಿಂದ ಇಡೀ ದೇಶ ಶೋಕತಪ್ತವಾಗಿದ್ದು, ಈ ದುಷ್ಕರ್ಮಿಗಳ ರಕ್ತಕ್ಕಾಗಿ ಕಾತರಿಸುತ್ತಿದೆ‌. ಇಂತಹ ಪರಿಸ್ಥಿತಿಯಲ್ಲಿ ಗಾಯಕಿ ಹಾಗೂ ಕವಿಯತ್ರಿ ನೇಹಾ ಸಿಂಗ್ ರಾಥೋಡ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ರಾಷ್ಟ್ರೀಯ ಸಮಗ್ರತೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುವಂತಹ ಕೆಲವು ಆಕ್ಷೇಪಾರ್ಹ ಪೋಸ್ಟ್ ಗಳನ್ನು ಮಾಡಿದ್ದಾರೆ. ಅಲ್ಲದೆ, ಧರ್ಮವನ್ನಾಧರಿಸಿ, ಒಂದು ಸಮುದಾಯದ ವಿರುದ್ಧ ಮತ್ತೊಂದು ಸಮುದಾಯವನ್ನು ಪ್ರಚೋದಿಸುವ ಪ್ರಯತ್ನವನ್ನು ಪದೇ ಪದೇ ಮಾಡಿದ್ದಾರೆ” ಎಂದು ದೂರುದಾರ ಅಭಯ್ ಪ್ರತಾಪ್ ಸಿಂಗ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ವರದಿಯಾಗಿದೆ.

ಉತ್ತರ ಪ್ರದೇಶದ ಲಕ್ನೋದ ಹಜರತ್‌ಗಂಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರಿನ ಆಧಾರದ ಮೇಲೆ, ಪೊಲೀಸರು ಜಾನಪದ ಗಾಯಕಿ ನೇಹಾ ಸಿಂಗ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಹಲವು ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿದ್ದಾರೆ.ಇದರಲ್ಲಿ ಧರ್ಮಗಳ ನಡುವೆ ದ್ವೇಷವನ್ನು ಉತ್ತೇಜಿಸಲು ಪ್ರಯತ್ನಿಸುವುದು, ಸಾರ್ವಜನಿಕ ಶಾಂತಿಯನ್ನು ಕದಡುವುದು ಮತ್ತು ಭಾರತದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡುವುದು ಸೇರಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿಯೂ ನೇಹಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ವಸಾಹತುಶಾಹಿ ಯುಗದ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124Aನಲ್ಲಿ ನಿರ್ದಿಷ್ಟಪಡಿಸಿದಂತೆ ಬಿಎನ್‌ಎಸ್ ದೇಶದ್ರೋಹವನ್ನು ಸ್ಪಷ್ಟವಾಗಿ ಉಲ್ಲೇಖಿಸದಿದ್ದರೂ, ಹೊಸ ಕ್ರಿಮಿನಲ್ ಕೋಡ್ ಸೆಕ್ಷನ್ 152ರ ಅಡಿಯಲ್ಲಿ ದೇಶದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡುವ ಆರೋಪಗಳನ್ನು ದಾಖಲಿಸಲಾಗುತ್ತದೆ.

ಉತ್ತರ ಪ್ರದೇಶ| ತೀವ್ರ ಗಾಯಗಳಿಂದ ದಲಿತ ಅತ್ಯಾಚಾರ ಸಂತ್ರಸ್ತೆ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...