Homeಕರ್ನಾಟಕಬಿಜೆಪಿ ಪರವಾಗಿದ್ದ ಮತದಾನೋತ್ತರ ಸಮೀಕ್ಷೆಗಳು: ಮತದಾರರ ತೀರ್ಪು ಬೇರೆ

ಬಿಜೆಪಿ ಪರವಾಗಿದ್ದ ಮತದಾನೋತ್ತರ ಸಮೀಕ್ಷೆಗಳು: ಮತದಾರರ ತೀರ್ಪು ಬೇರೆ

- Advertisement -
- Advertisement -

– ಕೆ.ಈ.ಸಿದ್ದಯ್ಯ

ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭಾ ಚುನಾವಣೆಗಳು ಗೋದಿ ಮೀಡಿಯಾಗಳ ಸಮೀಕ್ಷೆಗಳನ್ನು ಹುಸಿಗೊಳಿಸಿವೆ. ಟೈಮ್ಸ್‌ ನೌ, ಎನ್.ಡಿ.ಟಿ.ವಿ, ಇಂಡಿಯಾ ಟುಡೆ, ಸಿಫೋರ್ ಹೀಗೆ ಎಲ್ಲಾ ಎಕ್ಸಿಟ್ ಪೋಲ್ ಗಳು ತಲೆಕೆಳಗಾಗುವಂತೆ ಮಾಡಿದ್ದಾರೆ ಮತದಾರರು. ಎರಡೂ ರಾಜ್ಯಗಳಲ್ಲಿ ಅತ್ಯಧಿಕ ಸ್ಥಾನಗಳನ್ನು ಪಡೆದು ಬಿಜೆಪಿ ಅಧಿಕಾರ ಹಿಡಿಯುತ್ತದೆ ಎಂದು ಹೇಳಿದ್ದಲ್ಲವೂ ಸುಳ್ಳಾಗಿವೆ.

ಹೌದು.. ಮತದಾನ ಪೂರ್ವ ಮತ್ತು ಮತದಾನೋತ್ತರ ಸಮೀಕ್ಷೆಗಳಲ್ಲಿ ಬಿಜೆಪಿಯೇ ಅಧಿಕಾರ ಹಿಡಿಯುತ್ತದೆ ಎಂದು ಹೇಳಲಾಗಿತ್ತು ಈಗ ಅದು ಉಲ್ಟಾ ಆಗಿದೆ. ಮಹಾರಾಷ್ಟ್ರದಲ್ಲಿ ಎಲ್ಲಾ ಎಕ್ಸಿಟ್ ಪೋಲ್ ಗಳು ಕಾಂಗ್ರೆಸ್-ಎನ್.ಸಿ.ಪಿ ಮೈತ್ರಿಕೂಟ 41 ರಿಂದ 81 ಸೀಟುಗಳನ್ನು ದಾಟುವುದಿಲ್ಲ ಎಂದು ನಂಬಿಸಿದ್ದವು. ಅಂದರೆ ಮನಸ್ಸಿಗೆ ಬಂದ ಅಂಕಿಗಳನ್ನು ತಮ್ಮ ಸಮೀಕ್ಷೆಗಳಲ್ಲಿ ಹೇಳಿದ್ದವು.

ಟೈಮ್ಸ್ ನೌ ಬಿಜೆಪಿ 230 ಸೀಟು ನೀಡಿದ್ದರೆ, ಎಬಿಪಿ-ಸಿ ಓಟರ್ 204, ರಿಪಬ್ಲಿಕ್ – ಜನ್ ಕಿ ಬಾತ್ ನಾವು ಯಾರಿಗೂ ಕಡಿಮೆ ಇಲ್ಲವೆಂಬಂತೆ 223 ಸೀಟು ನೀಡಿದ್ದವು. ಸಿ.ಎನ್‌.ಎನ್‌, ನ್ಯೂಸ್ 18 ಸುದ್ದಿ ಸಂಸ್ಥೆಗಳು ಇನ್ನೂ ಮುಂದೆ ಹೋಗಿ 243 ಸ್ಥಾನ ನೀಡಿದ್ದವು. ಟಿವಿ-9 ಮರಾಠಿ 197 ಮತ್ತು ಇಂಡಿಯಾ ಟುಡೆ-ಆಕ್ಸಿಸ್ 181 ಸ್ಥಾನ ನೀಡಿ, ಬಿಜೆಪಿಯನ್ನೇ ಬಹುಮತದೊಂದಿಗೆ ಗೆಲ್ಲುತ್ತದೆ ಎಂದು ಬಿಂಬಿಸಿ, ಉದಾರತೆ ತೋರಿದ್ದವು.

ಕಾಂಗ್ರೆಸ್-ಎನ್.ಸಿ.ಪಿ. ಮೈತ್ರಿಗೆ 41 ರಿಂದ 81 ಸ್ಥಾನಗಳನ್ನು ಮಾತ್ರ ನೀಡಿ, ಬಿಜೆಪಿ ಪಕ್ಷದ ಪರ ಪ್ರೇಮ ಮೆರೆದವು. ಕಾಂಗ್ರೆಸ್ ಅಧಿಕಾರ ಹಿಡಿಯುವುದಿಲ್ಲ. ಮೈತ್ರಿಗೆ ಯಾರೂ ನಾಯಕರಿಲ್ಲ ಎಂಬಂತೆಯೂ ರಾಷ್ಟ್ರೀಯ ಮೀಡಿಯಾಗಳು ಬಿಂಬಿಸಿದವು. ಜನಪರವಾಗಿದ್ದ ಎನ್.ಡಿ.ಟಿ.ವಿಯೂ ಗುಂಪಿನಲ್ಲಿ ಗೋವಿಂದ ಎಂದಿತು. ಸರಿಯಾದ ಸಮೀಕ್ಷೆ ನಡೆಸಬೇಕಾಗಿದ್ದ ಸುದ್ದಿ ಸಂಸ್ಥೆಗಳು, ಬಿಜೆಪಿಯ ನೆಟ್ಟಿಗರು, ಫೇಸ್ಬುಕ್ ಭಕ್ತರು ನೀಡುವ ಅಂಕಿ ಅಂಶಗಳೇ ಸತ್ಯವೆಂದು ತಿಳಿದು ತಮ್ಮ ವಿಮರ್ಶಕ, ವಿಶ್ಲೇಷಕ, ಕೂದಲು ಸೀಳುವ  ಬುದ್ದಿಯನ್ನು ಖರ್ಚು ಮಾಡಲು ಜಿಪುಣತನ ತೋರಿದವು.

ಇಂಡಿಯಾ ಟುಡೆ, ಟಿವಿ 9 ಮರಾಠಿ ಟಿವಿಗಳನ್ನು ಹೊರತುಪಡಿಸಿ ಉಳಿದೆಲ್ಲ ಸಮೀಕ್ಷೆಗಳು ಉಳಿದೆಲ್ಲವೂ ಕಾಂಗ್ರೆಸ್ ಮೈತ್ರಿಕೂಟಕ್ಕೆ ಕೇವಲ 60 ಸ್ಥಾನಗಳು ಬರುತ್ತವೆ ಎಂದು ಹೇಳಿದವು. ಈಗ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿ 104 ಸ್ಥಾನ ಗಳಿಸಿದ್ದರೆ, ಬಿಜೆಪಿ-ಶಿವಸೇನೆ ಮೈತ್ರಿ 157 ಸ್ಥಾನ ಪಡೆದು ಅಧಿಕಾರದ ಗದ್ದುಗೆ ಹಿಡಿಯಲು ಸಿದ್ಧತೆ ನಡೆಸಿವೆ. ಅಂದರೆ ಮಹಾರಾಷ್ಟ್ರದಲ್ಲಿ ಬಿಜೆಪಿ 103 ಸ್ಥಾನ, ಶಿವಸೇನೆ 56 ಸ್ಥಾನ ಪಡೆಯಲು ಶಕ್ತವಾಗಿವೆ. ಬಿಜೆಪಿ 200ರ ಗಡಿ ದಾಟುತ್ತದೆ ಎಂಬ ಸಮೀಕ್ಷೆಗಳ ಭವಿಷ್ಯ ನೆರೆಯಲ್ಲಿ ಕೊಚ್ಚಿ ಹೋಗಿದೆ.

ಹರಿಯಾಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸಮಬಲ ಹೋರಾಟ ನಡೆಸಿವೆ. ಇಲ್ಲಿ ಬಿಜೆಪಿ 40, ಕಾಂಗ್ರೆಸ್ 31, ಜನನಾಯಕ್ ಜನತಾ ಪಕ್ಷ ಮತ್ತು ಇತರರು ಸೇರಿ 19 ಸ್ಥಾನಗಳನ್ನು ಪಡೆದಿದ್ದಾರೆ. ಬಿಜೆಪಿ ಪಕ್ಷ ಕಾಂಗ್ರೆಸ್ ಗಿಂತ 9 ಸ್ಥಾನಗಳನ್ನು ಪಡೆದು ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಇಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಯಾವುದೇ ರಾಷ್ಟ್ರೀಯ ಪಕ್ಷ ಸರ್ಕಾರ ರಚನೆ ಮಾಡಬೇಕು ಎಂದರೆ ಜನನಾಯಕ್ ಜನತಾ ಪಕ್ಷದ ನೆರವು ಪಡೆಯಲೇಬೇಕು. ಹೀಗಾಗಿ ಜನನಾಯಕ್ ಜನತಾ ಪಕ್ಷ ಕಿಂಗ್ ಮೇಕರ್ ಆಗಿ ಹೊರ ಹೊಮ್ಮಿದೆ. ಹೀಗಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ಜನನಾಯಕ್ ಜನತಾ ಪಕ್ಷದ ಮುಖ್ಯಸ್ಥರನ್ನು ಸಂಪರ್ಕಿಸುವ ಪ್ರಯತ್ನಗಳು ಮುಂದುವರೆದಿವೆ.

ಜನನಾಯಕ್ ಜನತಾ ಪಕ್ಷ ಬೆಂಬಲಿಸಲು ಕೆಲವು ಷರತ್ತುಗಳನ್ನು ಮುಂದಿಟ್ಟಿದೆ. ಹರಿಯಾಣ ಜನತೆಗೆ ನೀಡಿರುವ ಭರವಸೆಗಳನ್ನು ಈಡೇರಿಸಲು ಮುಂದೆ ಬರುವ ಪಕ್ಷಕ್ಕೆ ಬೆಂಬಲಿಸುವುದಾಗಿ ಅದು ಘೋಷಿಸಿದೆ. ರಾಜ್ಯದಲ್ಲಿ ಶೇಕಡ 75ರಷ್ಟು ಯುವಕರಿಗೆ ಉದ್ಯೋಗ, ಮಹಿಳೆಯರಿಗೆ ಭದ್ರತೆ, ರೈತರ ಜೊತೆ ಸಭೆ ನಡೆಸಲು ಒಪ್ಪಿ ಅವರ ಬೇಡಿಕೆಗಳನ್ನು ಈಡೇರಿಸುವ ಪಕ್ಷವನ್ನು ಬೆಂಬಲ ಮಾಡುವುದಾಗಿ ಜನನಾಯಕ್ ಜನತಾ ಪಕ್ಷ ಷರತ್ತು ವಿಧಿಸಿದೆ. ಇದು ಈಡೇರಿಸುವ ಪಕ್ಷ ಅಧಿಕಾರದ ಗದ್ದುಗೆ ಹಿಡಿಯಲಿದೆ.

ಎರಡು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಮತದಾರ ರಾಷ್ಟ್ರೀಯ ಪಕ್ಷಗಳನ್ನು ಕಡೆಗಣಿಸಿದಂತೆ ಕಂಡು ಬರುತ್ತದೆ. ಪ್ರಾದೇಶಿಕ ಪಕ್ಷಗಳು ಪ್ರಾಬಲ್ಯ ಸಾಧಿಸಿರುವುದು ಫಲಿತಾಂಶಗಳಿಂದ ಗೊತ್ತಾಗುತ್ತದೆ. ಹರಿಯಾಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಓಟಕ್ಕೆ ಪಕ್ಷೇತರರು ಮತ್ತು ಜನನಾಯಕ್ ಜನತಾ ಪಕ್ಷ ಅಡ್ಡಿಪಡಿಸಿದೆ. ಆದರೆ ಮಹಾರಾಷ್ಟ್ರದಲ್ಲಿ ಎನ್.ಸಿ.ಪಿ. ಮತ್ತು ಶಿವಸೇನೆ ಹೆಚ್ಚು ಸ್ಥಾನಗಳನ್ನು ಪಡೆದಿವೆ. ಶಿವಸೇನೆ 56 ಮತ್ತು ಎನ್.ಸಿ.ಪಿ 53 ಸ್ಥಾನ ಪಡೆದು ಸಮಾನ ಪೈಪೋಟಿ ನೀಡಿವೆ.

ಚುನಾವಣಾ ಸಮಯದಲ್ಲಿ ಬಿಜೆಪಿ ಮತ್ತು ಶಿವಸೇನೆ ಪ್ರಮುಖವಾಗಿ ರಾಮ ಮಂದಿರ ನಿರ್ಮಾಣ, ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ 370 ನೇ ವಿಧಿ ರದ್ದು, ತ್ರಿವಳಿ ತಲಾಖ್, ಬಾಲಾಕೋಟ್ ದಾಳಿ, ಪಾಕ್  ಮತ್ತು ಭಯೋತ್ಪಾದಕ ವಿಷಯಗಳನ್ನೇ ಮುಂದೆ ಮಾಡಿ ಮತಯಾಚಿಸಿತು. ಆದರೆ ಇದಕ್ಕೆ ಮತದಾರ ಒಲಿದಿಲ್ಲ. ಜನರ ಭಾವನೆಗಳನ್ನು ವ್ಯಾಪಾರ ಮಾಡಿಕೊಂಡಿರುವ ಬಿಜೆಪಿಯ ಉತ್ಸಾಹ ಈ ಚುನಾವಣೆಯಲ್ಲಿ ಕುಗ್ಗಿ ಹೋಗುವಂತೆ ಮಾಡಿದೆ.

ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ 20 ಪ್ರಚಾರ ಸಭೆಗಳು, ಅಮಿತ್ 30 ಸಭೆ ನಡೆಸಿದರೂ ಹೆಚ್ಚು ಸ್ಥಾನವನ್ನು ತಂದು ಕೊಡುವಲ್ಲಿ ರಣತಂತ್ರಗಳನ್ನು ಹೆಣೆಯುವ ನಾಯಕರು ಸಂಪೂರ್ಣ ವಿಫಲರಾಗಿರುವುದು ಎದ್ದು ಕಾಣುತ್ತದೆ. ಶಿವಸೇನೆಯ ಮುಖವಾಣಿ ಸಾಮ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಪ್ರಸ್ತಾಪಿರುವ ವಿಷಯಗಳ ಬಗ್ಗೆ ಟೀಕೆ ವ್ಯಕ್ತವಾಗಿತ್ತು. ಮತ್ತು ಬಿಜೆಪಿ ಹೆಚ್ಚು ಸ್ಥಾನಗಳನ್ನು ಗೆಲ್ಲುವುದಿಲ್ಲ ಎಂದು ಹೇಳಲಾಗಿತ್ತು.

ವಿಶ್ವವ್ಯಾಪಿ ಗಮನ ಸೆಳೆದು ಪ್ರಶಸ್ತಿಗಳ ಮೇಲೆ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಳ್ಳುತ್ತಿರುವ 56 ಇಂಚಿನ ಎದೆಯ ಮೋದಿ ಮತ್ತು ಚಾಣಾಕ್ಷ್ಯನೆಂದೇ ಮಾಧ್ಯಮಗಳಿಂದ ಬಿಂಬಿಸಲ್ಪಟ್ಟಿರುವ ಅಮಿತ್ ಶಾ ಆಟಕ್ಕೆ ಮತದಾರ ಬ್ರೇಕ್ ಹಾಕಿರುವುದು ಫಲಿತಾಂಶದಿಂದ ಗೋಚರಿಸಿದೆ. ಈ ಬೆಳವಣಿಗೆಗಳು, ಫಲಿತಾಂಶ ಮುಂದೆ ಶುಭ ದಿನಗಳು ಬರಲಿವೆ ಎಂಬುದನ್ನು ಸೂಚಿಸುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...