Homeಕರ್ನಾಟಕಬಿಜೆಪಿ ಪರವಾಗಿದ್ದ ಮತದಾನೋತ್ತರ ಸಮೀಕ್ಷೆಗಳು: ಮತದಾರರ ತೀರ್ಪು ಬೇರೆ

ಬಿಜೆಪಿ ಪರವಾಗಿದ್ದ ಮತದಾನೋತ್ತರ ಸಮೀಕ್ಷೆಗಳು: ಮತದಾರರ ತೀರ್ಪು ಬೇರೆ

- Advertisement -
- Advertisement -

– ಕೆ.ಈ.ಸಿದ್ದಯ್ಯ

ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭಾ ಚುನಾವಣೆಗಳು ಗೋದಿ ಮೀಡಿಯಾಗಳ ಸಮೀಕ್ಷೆಗಳನ್ನು ಹುಸಿಗೊಳಿಸಿವೆ. ಟೈಮ್ಸ್‌ ನೌ, ಎನ್.ಡಿ.ಟಿ.ವಿ, ಇಂಡಿಯಾ ಟುಡೆ, ಸಿಫೋರ್ ಹೀಗೆ ಎಲ್ಲಾ ಎಕ್ಸಿಟ್ ಪೋಲ್ ಗಳು ತಲೆಕೆಳಗಾಗುವಂತೆ ಮಾಡಿದ್ದಾರೆ ಮತದಾರರು. ಎರಡೂ ರಾಜ್ಯಗಳಲ್ಲಿ ಅತ್ಯಧಿಕ ಸ್ಥಾನಗಳನ್ನು ಪಡೆದು ಬಿಜೆಪಿ ಅಧಿಕಾರ ಹಿಡಿಯುತ್ತದೆ ಎಂದು ಹೇಳಿದ್ದಲ್ಲವೂ ಸುಳ್ಳಾಗಿವೆ.

ಹೌದು.. ಮತದಾನ ಪೂರ್ವ ಮತ್ತು ಮತದಾನೋತ್ತರ ಸಮೀಕ್ಷೆಗಳಲ್ಲಿ ಬಿಜೆಪಿಯೇ ಅಧಿಕಾರ ಹಿಡಿಯುತ್ತದೆ ಎಂದು ಹೇಳಲಾಗಿತ್ತು ಈಗ ಅದು ಉಲ್ಟಾ ಆಗಿದೆ. ಮಹಾರಾಷ್ಟ್ರದಲ್ಲಿ ಎಲ್ಲಾ ಎಕ್ಸಿಟ್ ಪೋಲ್ ಗಳು ಕಾಂಗ್ರೆಸ್-ಎನ್.ಸಿ.ಪಿ ಮೈತ್ರಿಕೂಟ 41 ರಿಂದ 81 ಸೀಟುಗಳನ್ನು ದಾಟುವುದಿಲ್ಲ ಎಂದು ನಂಬಿಸಿದ್ದವು. ಅಂದರೆ ಮನಸ್ಸಿಗೆ ಬಂದ ಅಂಕಿಗಳನ್ನು ತಮ್ಮ ಸಮೀಕ್ಷೆಗಳಲ್ಲಿ ಹೇಳಿದ್ದವು.

ಟೈಮ್ಸ್ ನೌ ಬಿಜೆಪಿ 230 ಸೀಟು ನೀಡಿದ್ದರೆ, ಎಬಿಪಿ-ಸಿ ಓಟರ್ 204, ರಿಪಬ್ಲಿಕ್ – ಜನ್ ಕಿ ಬಾತ್ ನಾವು ಯಾರಿಗೂ ಕಡಿಮೆ ಇಲ್ಲವೆಂಬಂತೆ 223 ಸೀಟು ನೀಡಿದ್ದವು. ಸಿ.ಎನ್‌.ಎನ್‌, ನ್ಯೂಸ್ 18 ಸುದ್ದಿ ಸಂಸ್ಥೆಗಳು ಇನ್ನೂ ಮುಂದೆ ಹೋಗಿ 243 ಸ್ಥಾನ ನೀಡಿದ್ದವು. ಟಿವಿ-9 ಮರಾಠಿ 197 ಮತ್ತು ಇಂಡಿಯಾ ಟುಡೆ-ಆಕ್ಸಿಸ್ 181 ಸ್ಥಾನ ನೀಡಿ, ಬಿಜೆಪಿಯನ್ನೇ ಬಹುಮತದೊಂದಿಗೆ ಗೆಲ್ಲುತ್ತದೆ ಎಂದು ಬಿಂಬಿಸಿ, ಉದಾರತೆ ತೋರಿದ್ದವು.

ಕಾಂಗ್ರೆಸ್-ಎನ್.ಸಿ.ಪಿ. ಮೈತ್ರಿಗೆ 41 ರಿಂದ 81 ಸ್ಥಾನಗಳನ್ನು ಮಾತ್ರ ನೀಡಿ, ಬಿಜೆಪಿ ಪಕ್ಷದ ಪರ ಪ್ರೇಮ ಮೆರೆದವು. ಕಾಂಗ್ರೆಸ್ ಅಧಿಕಾರ ಹಿಡಿಯುವುದಿಲ್ಲ. ಮೈತ್ರಿಗೆ ಯಾರೂ ನಾಯಕರಿಲ್ಲ ಎಂಬಂತೆಯೂ ರಾಷ್ಟ್ರೀಯ ಮೀಡಿಯಾಗಳು ಬಿಂಬಿಸಿದವು. ಜನಪರವಾಗಿದ್ದ ಎನ್.ಡಿ.ಟಿ.ವಿಯೂ ಗುಂಪಿನಲ್ಲಿ ಗೋವಿಂದ ಎಂದಿತು. ಸರಿಯಾದ ಸಮೀಕ್ಷೆ ನಡೆಸಬೇಕಾಗಿದ್ದ ಸುದ್ದಿ ಸಂಸ್ಥೆಗಳು, ಬಿಜೆಪಿಯ ನೆಟ್ಟಿಗರು, ಫೇಸ್ಬುಕ್ ಭಕ್ತರು ನೀಡುವ ಅಂಕಿ ಅಂಶಗಳೇ ಸತ್ಯವೆಂದು ತಿಳಿದು ತಮ್ಮ ವಿಮರ್ಶಕ, ವಿಶ್ಲೇಷಕ, ಕೂದಲು ಸೀಳುವ  ಬುದ್ದಿಯನ್ನು ಖರ್ಚು ಮಾಡಲು ಜಿಪುಣತನ ತೋರಿದವು.

ಇಂಡಿಯಾ ಟುಡೆ, ಟಿವಿ 9 ಮರಾಠಿ ಟಿವಿಗಳನ್ನು ಹೊರತುಪಡಿಸಿ ಉಳಿದೆಲ್ಲ ಸಮೀಕ್ಷೆಗಳು ಉಳಿದೆಲ್ಲವೂ ಕಾಂಗ್ರೆಸ್ ಮೈತ್ರಿಕೂಟಕ್ಕೆ ಕೇವಲ 60 ಸ್ಥಾನಗಳು ಬರುತ್ತವೆ ಎಂದು ಹೇಳಿದವು. ಈಗ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿ 104 ಸ್ಥಾನ ಗಳಿಸಿದ್ದರೆ, ಬಿಜೆಪಿ-ಶಿವಸೇನೆ ಮೈತ್ರಿ 157 ಸ್ಥಾನ ಪಡೆದು ಅಧಿಕಾರದ ಗದ್ದುಗೆ ಹಿಡಿಯಲು ಸಿದ್ಧತೆ ನಡೆಸಿವೆ. ಅಂದರೆ ಮಹಾರಾಷ್ಟ್ರದಲ್ಲಿ ಬಿಜೆಪಿ 103 ಸ್ಥಾನ, ಶಿವಸೇನೆ 56 ಸ್ಥಾನ ಪಡೆಯಲು ಶಕ್ತವಾಗಿವೆ. ಬಿಜೆಪಿ 200ರ ಗಡಿ ದಾಟುತ್ತದೆ ಎಂಬ ಸಮೀಕ್ಷೆಗಳ ಭವಿಷ್ಯ ನೆರೆಯಲ್ಲಿ ಕೊಚ್ಚಿ ಹೋಗಿದೆ.

ಹರಿಯಾಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸಮಬಲ ಹೋರಾಟ ನಡೆಸಿವೆ. ಇಲ್ಲಿ ಬಿಜೆಪಿ 40, ಕಾಂಗ್ರೆಸ್ 31, ಜನನಾಯಕ್ ಜನತಾ ಪಕ್ಷ ಮತ್ತು ಇತರರು ಸೇರಿ 19 ಸ್ಥಾನಗಳನ್ನು ಪಡೆದಿದ್ದಾರೆ. ಬಿಜೆಪಿ ಪಕ್ಷ ಕಾಂಗ್ರೆಸ್ ಗಿಂತ 9 ಸ್ಥಾನಗಳನ್ನು ಪಡೆದು ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಇಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಯಾವುದೇ ರಾಷ್ಟ್ರೀಯ ಪಕ್ಷ ಸರ್ಕಾರ ರಚನೆ ಮಾಡಬೇಕು ಎಂದರೆ ಜನನಾಯಕ್ ಜನತಾ ಪಕ್ಷದ ನೆರವು ಪಡೆಯಲೇಬೇಕು. ಹೀಗಾಗಿ ಜನನಾಯಕ್ ಜನತಾ ಪಕ್ಷ ಕಿಂಗ್ ಮೇಕರ್ ಆಗಿ ಹೊರ ಹೊಮ್ಮಿದೆ. ಹೀಗಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ಜನನಾಯಕ್ ಜನತಾ ಪಕ್ಷದ ಮುಖ್ಯಸ್ಥರನ್ನು ಸಂಪರ್ಕಿಸುವ ಪ್ರಯತ್ನಗಳು ಮುಂದುವರೆದಿವೆ.

ಜನನಾಯಕ್ ಜನತಾ ಪಕ್ಷ ಬೆಂಬಲಿಸಲು ಕೆಲವು ಷರತ್ತುಗಳನ್ನು ಮುಂದಿಟ್ಟಿದೆ. ಹರಿಯಾಣ ಜನತೆಗೆ ನೀಡಿರುವ ಭರವಸೆಗಳನ್ನು ಈಡೇರಿಸಲು ಮುಂದೆ ಬರುವ ಪಕ್ಷಕ್ಕೆ ಬೆಂಬಲಿಸುವುದಾಗಿ ಅದು ಘೋಷಿಸಿದೆ. ರಾಜ್ಯದಲ್ಲಿ ಶೇಕಡ 75ರಷ್ಟು ಯುವಕರಿಗೆ ಉದ್ಯೋಗ, ಮಹಿಳೆಯರಿಗೆ ಭದ್ರತೆ, ರೈತರ ಜೊತೆ ಸಭೆ ನಡೆಸಲು ಒಪ್ಪಿ ಅವರ ಬೇಡಿಕೆಗಳನ್ನು ಈಡೇರಿಸುವ ಪಕ್ಷವನ್ನು ಬೆಂಬಲ ಮಾಡುವುದಾಗಿ ಜನನಾಯಕ್ ಜನತಾ ಪಕ್ಷ ಷರತ್ತು ವಿಧಿಸಿದೆ. ಇದು ಈಡೇರಿಸುವ ಪಕ್ಷ ಅಧಿಕಾರದ ಗದ್ದುಗೆ ಹಿಡಿಯಲಿದೆ.

ಎರಡು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಮತದಾರ ರಾಷ್ಟ್ರೀಯ ಪಕ್ಷಗಳನ್ನು ಕಡೆಗಣಿಸಿದಂತೆ ಕಂಡು ಬರುತ್ತದೆ. ಪ್ರಾದೇಶಿಕ ಪಕ್ಷಗಳು ಪ್ರಾಬಲ್ಯ ಸಾಧಿಸಿರುವುದು ಫಲಿತಾಂಶಗಳಿಂದ ಗೊತ್ತಾಗುತ್ತದೆ. ಹರಿಯಾಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಓಟಕ್ಕೆ ಪಕ್ಷೇತರರು ಮತ್ತು ಜನನಾಯಕ್ ಜನತಾ ಪಕ್ಷ ಅಡ್ಡಿಪಡಿಸಿದೆ. ಆದರೆ ಮಹಾರಾಷ್ಟ್ರದಲ್ಲಿ ಎನ್.ಸಿ.ಪಿ. ಮತ್ತು ಶಿವಸೇನೆ ಹೆಚ್ಚು ಸ್ಥಾನಗಳನ್ನು ಪಡೆದಿವೆ. ಶಿವಸೇನೆ 56 ಮತ್ತು ಎನ್.ಸಿ.ಪಿ 53 ಸ್ಥಾನ ಪಡೆದು ಸಮಾನ ಪೈಪೋಟಿ ನೀಡಿವೆ.

ಚುನಾವಣಾ ಸಮಯದಲ್ಲಿ ಬಿಜೆಪಿ ಮತ್ತು ಶಿವಸೇನೆ ಪ್ರಮುಖವಾಗಿ ರಾಮ ಮಂದಿರ ನಿರ್ಮಾಣ, ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ 370 ನೇ ವಿಧಿ ರದ್ದು, ತ್ರಿವಳಿ ತಲಾಖ್, ಬಾಲಾಕೋಟ್ ದಾಳಿ, ಪಾಕ್  ಮತ್ತು ಭಯೋತ್ಪಾದಕ ವಿಷಯಗಳನ್ನೇ ಮುಂದೆ ಮಾಡಿ ಮತಯಾಚಿಸಿತು. ಆದರೆ ಇದಕ್ಕೆ ಮತದಾರ ಒಲಿದಿಲ್ಲ. ಜನರ ಭಾವನೆಗಳನ್ನು ವ್ಯಾಪಾರ ಮಾಡಿಕೊಂಡಿರುವ ಬಿಜೆಪಿಯ ಉತ್ಸಾಹ ಈ ಚುನಾವಣೆಯಲ್ಲಿ ಕುಗ್ಗಿ ಹೋಗುವಂತೆ ಮಾಡಿದೆ.

ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ 20 ಪ್ರಚಾರ ಸಭೆಗಳು, ಅಮಿತ್ 30 ಸಭೆ ನಡೆಸಿದರೂ ಹೆಚ್ಚು ಸ್ಥಾನವನ್ನು ತಂದು ಕೊಡುವಲ್ಲಿ ರಣತಂತ್ರಗಳನ್ನು ಹೆಣೆಯುವ ನಾಯಕರು ಸಂಪೂರ್ಣ ವಿಫಲರಾಗಿರುವುದು ಎದ್ದು ಕಾಣುತ್ತದೆ. ಶಿವಸೇನೆಯ ಮುಖವಾಣಿ ಸಾಮ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಪ್ರಸ್ತಾಪಿರುವ ವಿಷಯಗಳ ಬಗ್ಗೆ ಟೀಕೆ ವ್ಯಕ್ತವಾಗಿತ್ತು. ಮತ್ತು ಬಿಜೆಪಿ ಹೆಚ್ಚು ಸ್ಥಾನಗಳನ್ನು ಗೆಲ್ಲುವುದಿಲ್ಲ ಎಂದು ಹೇಳಲಾಗಿತ್ತು.

ವಿಶ್ವವ್ಯಾಪಿ ಗಮನ ಸೆಳೆದು ಪ್ರಶಸ್ತಿಗಳ ಮೇಲೆ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಳ್ಳುತ್ತಿರುವ 56 ಇಂಚಿನ ಎದೆಯ ಮೋದಿ ಮತ್ತು ಚಾಣಾಕ್ಷ್ಯನೆಂದೇ ಮಾಧ್ಯಮಗಳಿಂದ ಬಿಂಬಿಸಲ್ಪಟ್ಟಿರುವ ಅಮಿತ್ ಶಾ ಆಟಕ್ಕೆ ಮತದಾರ ಬ್ರೇಕ್ ಹಾಕಿರುವುದು ಫಲಿತಾಂಶದಿಂದ ಗೋಚರಿಸಿದೆ. ಈ ಬೆಳವಣಿಗೆಗಳು, ಫಲಿತಾಂಶ ಮುಂದೆ ಶುಭ ದಿನಗಳು ಬರಲಿವೆ ಎಂಬುದನ್ನು ಸೂಚಿಸುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...