Homeಕರ್ನಾಟಕಬಿಜೆಪಿ ಪರವಾಗಿದ್ದ ಮತದಾನೋತ್ತರ ಸಮೀಕ್ಷೆಗಳು: ಮತದಾರರ ತೀರ್ಪು ಬೇರೆ

ಬಿಜೆಪಿ ಪರವಾಗಿದ್ದ ಮತದಾನೋತ್ತರ ಸಮೀಕ್ಷೆಗಳು: ಮತದಾರರ ತೀರ್ಪು ಬೇರೆ

- Advertisement -
- Advertisement -

– ಕೆ.ಈ.ಸಿದ್ದಯ್ಯ

ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭಾ ಚುನಾವಣೆಗಳು ಗೋದಿ ಮೀಡಿಯಾಗಳ ಸಮೀಕ್ಷೆಗಳನ್ನು ಹುಸಿಗೊಳಿಸಿವೆ. ಟೈಮ್ಸ್‌ ನೌ, ಎನ್.ಡಿ.ಟಿ.ವಿ, ಇಂಡಿಯಾ ಟುಡೆ, ಸಿಫೋರ್ ಹೀಗೆ ಎಲ್ಲಾ ಎಕ್ಸಿಟ್ ಪೋಲ್ ಗಳು ತಲೆಕೆಳಗಾಗುವಂತೆ ಮಾಡಿದ್ದಾರೆ ಮತದಾರರು. ಎರಡೂ ರಾಜ್ಯಗಳಲ್ಲಿ ಅತ್ಯಧಿಕ ಸ್ಥಾನಗಳನ್ನು ಪಡೆದು ಬಿಜೆಪಿ ಅಧಿಕಾರ ಹಿಡಿಯುತ್ತದೆ ಎಂದು ಹೇಳಿದ್ದಲ್ಲವೂ ಸುಳ್ಳಾಗಿವೆ.

ಹೌದು.. ಮತದಾನ ಪೂರ್ವ ಮತ್ತು ಮತದಾನೋತ್ತರ ಸಮೀಕ್ಷೆಗಳಲ್ಲಿ ಬಿಜೆಪಿಯೇ ಅಧಿಕಾರ ಹಿಡಿಯುತ್ತದೆ ಎಂದು ಹೇಳಲಾಗಿತ್ತು ಈಗ ಅದು ಉಲ್ಟಾ ಆಗಿದೆ. ಮಹಾರಾಷ್ಟ್ರದಲ್ಲಿ ಎಲ್ಲಾ ಎಕ್ಸಿಟ್ ಪೋಲ್ ಗಳು ಕಾಂಗ್ರೆಸ್-ಎನ್.ಸಿ.ಪಿ ಮೈತ್ರಿಕೂಟ 41 ರಿಂದ 81 ಸೀಟುಗಳನ್ನು ದಾಟುವುದಿಲ್ಲ ಎಂದು ನಂಬಿಸಿದ್ದವು. ಅಂದರೆ ಮನಸ್ಸಿಗೆ ಬಂದ ಅಂಕಿಗಳನ್ನು ತಮ್ಮ ಸಮೀಕ್ಷೆಗಳಲ್ಲಿ ಹೇಳಿದ್ದವು.

ಟೈಮ್ಸ್ ನೌ ಬಿಜೆಪಿ 230 ಸೀಟು ನೀಡಿದ್ದರೆ, ಎಬಿಪಿ-ಸಿ ಓಟರ್ 204, ರಿಪಬ್ಲಿಕ್ – ಜನ್ ಕಿ ಬಾತ್ ನಾವು ಯಾರಿಗೂ ಕಡಿಮೆ ಇಲ್ಲವೆಂಬಂತೆ 223 ಸೀಟು ನೀಡಿದ್ದವು. ಸಿ.ಎನ್‌.ಎನ್‌, ನ್ಯೂಸ್ 18 ಸುದ್ದಿ ಸಂಸ್ಥೆಗಳು ಇನ್ನೂ ಮುಂದೆ ಹೋಗಿ 243 ಸ್ಥಾನ ನೀಡಿದ್ದವು. ಟಿವಿ-9 ಮರಾಠಿ 197 ಮತ್ತು ಇಂಡಿಯಾ ಟುಡೆ-ಆಕ್ಸಿಸ್ 181 ಸ್ಥಾನ ನೀಡಿ, ಬಿಜೆಪಿಯನ್ನೇ ಬಹುಮತದೊಂದಿಗೆ ಗೆಲ್ಲುತ್ತದೆ ಎಂದು ಬಿಂಬಿಸಿ, ಉದಾರತೆ ತೋರಿದ್ದವು.

ಕಾಂಗ್ರೆಸ್-ಎನ್.ಸಿ.ಪಿ. ಮೈತ್ರಿಗೆ 41 ರಿಂದ 81 ಸ್ಥಾನಗಳನ್ನು ಮಾತ್ರ ನೀಡಿ, ಬಿಜೆಪಿ ಪಕ್ಷದ ಪರ ಪ್ರೇಮ ಮೆರೆದವು. ಕಾಂಗ್ರೆಸ್ ಅಧಿಕಾರ ಹಿಡಿಯುವುದಿಲ್ಲ. ಮೈತ್ರಿಗೆ ಯಾರೂ ನಾಯಕರಿಲ್ಲ ಎಂಬಂತೆಯೂ ರಾಷ್ಟ್ರೀಯ ಮೀಡಿಯಾಗಳು ಬಿಂಬಿಸಿದವು. ಜನಪರವಾಗಿದ್ದ ಎನ್.ಡಿ.ಟಿ.ವಿಯೂ ಗುಂಪಿನಲ್ಲಿ ಗೋವಿಂದ ಎಂದಿತು. ಸರಿಯಾದ ಸಮೀಕ್ಷೆ ನಡೆಸಬೇಕಾಗಿದ್ದ ಸುದ್ದಿ ಸಂಸ್ಥೆಗಳು, ಬಿಜೆಪಿಯ ನೆಟ್ಟಿಗರು, ಫೇಸ್ಬುಕ್ ಭಕ್ತರು ನೀಡುವ ಅಂಕಿ ಅಂಶಗಳೇ ಸತ್ಯವೆಂದು ತಿಳಿದು ತಮ್ಮ ವಿಮರ್ಶಕ, ವಿಶ್ಲೇಷಕ, ಕೂದಲು ಸೀಳುವ  ಬುದ್ದಿಯನ್ನು ಖರ್ಚು ಮಾಡಲು ಜಿಪುಣತನ ತೋರಿದವು.

ಇಂಡಿಯಾ ಟುಡೆ, ಟಿವಿ 9 ಮರಾಠಿ ಟಿವಿಗಳನ್ನು ಹೊರತುಪಡಿಸಿ ಉಳಿದೆಲ್ಲ ಸಮೀಕ್ಷೆಗಳು ಉಳಿದೆಲ್ಲವೂ ಕಾಂಗ್ರೆಸ್ ಮೈತ್ರಿಕೂಟಕ್ಕೆ ಕೇವಲ 60 ಸ್ಥಾನಗಳು ಬರುತ್ತವೆ ಎಂದು ಹೇಳಿದವು. ಈಗ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿ 104 ಸ್ಥಾನ ಗಳಿಸಿದ್ದರೆ, ಬಿಜೆಪಿ-ಶಿವಸೇನೆ ಮೈತ್ರಿ 157 ಸ್ಥಾನ ಪಡೆದು ಅಧಿಕಾರದ ಗದ್ದುಗೆ ಹಿಡಿಯಲು ಸಿದ್ಧತೆ ನಡೆಸಿವೆ. ಅಂದರೆ ಮಹಾರಾಷ್ಟ್ರದಲ್ಲಿ ಬಿಜೆಪಿ 103 ಸ್ಥಾನ, ಶಿವಸೇನೆ 56 ಸ್ಥಾನ ಪಡೆಯಲು ಶಕ್ತವಾಗಿವೆ. ಬಿಜೆಪಿ 200ರ ಗಡಿ ದಾಟುತ್ತದೆ ಎಂಬ ಸಮೀಕ್ಷೆಗಳ ಭವಿಷ್ಯ ನೆರೆಯಲ್ಲಿ ಕೊಚ್ಚಿ ಹೋಗಿದೆ.

ಹರಿಯಾಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸಮಬಲ ಹೋರಾಟ ನಡೆಸಿವೆ. ಇಲ್ಲಿ ಬಿಜೆಪಿ 40, ಕಾಂಗ್ರೆಸ್ 31, ಜನನಾಯಕ್ ಜನತಾ ಪಕ್ಷ ಮತ್ತು ಇತರರು ಸೇರಿ 19 ಸ್ಥಾನಗಳನ್ನು ಪಡೆದಿದ್ದಾರೆ. ಬಿಜೆಪಿ ಪಕ್ಷ ಕಾಂಗ್ರೆಸ್ ಗಿಂತ 9 ಸ್ಥಾನಗಳನ್ನು ಪಡೆದು ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಇಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಯಾವುದೇ ರಾಷ್ಟ್ರೀಯ ಪಕ್ಷ ಸರ್ಕಾರ ರಚನೆ ಮಾಡಬೇಕು ಎಂದರೆ ಜನನಾಯಕ್ ಜನತಾ ಪಕ್ಷದ ನೆರವು ಪಡೆಯಲೇಬೇಕು. ಹೀಗಾಗಿ ಜನನಾಯಕ್ ಜನತಾ ಪಕ್ಷ ಕಿಂಗ್ ಮೇಕರ್ ಆಗಿ ಹೊರ ಹೊಮ್ಮಿದೆ. ಹೀಗಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ಜನನಾಯಕ್ ಜನತಾ ಪಕ್ಷದ ಮುಖ್ಯಸ್ಥರನ್ನು ಸಂಪರ್ಕಿಸುವ ಪ್ರಯತ್ನಗಳು ಮುಂದುವರೆದಿವೆ.

ಜನನಾಯಕ್ ಜನತಾ ಪಕ್ಷ ಬೆಂಬಲಿಸಲು ಕೆಲವು ಷರತ್ತುಗಳನ್ನು ಮುಂದಿಟ್ಟಿದೆ. ಹರಿಯಾಣ ಜನತೆಗೆ ನೀಡಿರುವ ಭರವಸೆಗಳನ್ನು ಈಡೇರಿಸಲು ಮುಂದೆ ಬರುವ ಪಕ್ಷಕ್ಕೆ ಬೆಂಬಲಿಸುವುದಾಗಿ ಅದು ಘೋಷಿಸಿದೆ. ರಾಜ್ಯದಲ್ಲಿ ಶೇಕಡ 75ರಷ್ಟು ಯುವಕರಿಗೆ ಉದ್ಯೋಗ, ಮಹಿಳೆಯರಿಗೆ ಭದ್ರತೆ, ರೈತರ ಜೊತೆ ಸಭೆ ನಡೆಸಲು ಒಪ್ಪಿ ಅವರ ಬೇಡಿಕೆಗಳನ್ನು ಈಡೇರಿಸುವ ಪಕ್ಷವನ್ನು ಬೆಂಬಲ ಮಾಡುವುದಾಗಿ ಜನನಾಯಕ್ ಜನತಾ ಪಕ್ಷ ಷರತ್ತು ವಿಧಿಸಿದೆ. ಇದು ಈಡೇರಿಸುವ ಪಕ್ಷ ಅಧಿಕಾರದ ಗದ್ದುಗೆ ಹಿಡಿಯಲಿದೆ.

ಎರಡು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಮತದಾರ ರಾಷ್ಟ್ರೀಯ ಪಕ್ಷಗಳನ್ನು ಕಡೆಗಣಿಸಿದಂತೆ ಕಂಡು ಬರುತ್ತದೆ. ಪ್ರಾದೇಶಿಕ ಪಕ್ಷಗಳು ಪ್ರಾಬಲ್ಯ ಸಾಧಿಸಿರುವುದು ಫಲಿತಾಂಶಗಳಿಂದ ಗೊತ್ತಾಗುತ್ತದೆ. ಹರಿಯಾಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಓಟಕ್ಕೆ ಪಕ್ಷೇತರರು ಮತ್ತು ಜನನಾಯಕ್ ಜನತಾ ಪಕ್ಷ ಅಡ್ಡಿಪಡಿಸಿದೆ. ಆದರೆ ಮಹಾರಾಷ್ಟ್ರದಲ್ಲಿ ಎನ್.ಸಿ.ಪಿ. ಮತ್ತು ಶಿವಸೇನೆ ಹೆಚ್ಚು ಸ್ಥಾನಗಳನ್ನು ಪಡೆದಿವೆ. ಶಿವಸೇನೆ 56 ಮತ್ತು ಎನ್.ಸಿ.ಪಿ 53 ಸ್ಥಾನ ಪಡೆದು ಸಮಾನ ಪೈಪೋಟಿ ನೀಡಿವೆ.

ಚುನಾವಣಾ ಸಮಯದಲ್ಲಿ ಬಿಜೆಪಿ ಮತ್ತು ಶಿವಸೇನೆ ಪ್ರಮುಖವಾಗಿ ರಾಮ ಮಂದಿರ ನಿರ್ಮಾಣ, ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ 370 ನೇ ವಿಧಿ ರದ್ದು, ತ್ರಿವಳಿ ತಲಾಖ್, ಬಾಲಾಕೋಟ್ ದಾಳಿ, ಪಾಕ್  ಮತ್ತು ಭಯೋತ್ಪಾದಕ ವಿಷಯಗಳನ್ನೇ ಮುಂದೆ ಮಾಡಿ ಮತಯಾಚಿಸಿತು. ಆದರೆ ಇದಕ್ಕೆ ಮತದಾರ ಒಲಿದಿಲ್ಲ. ಜನರ ಭಾವನೆಗಳನ್ನು ವ್ಯಾಪಾರ ಮಾಡಿಕೊಂಡಿರುವ ಬಿಜೆಪಿಯ ಉತ್ಸಾಹ ಈ ಚುನಾವಣೆಯಲ್ಲಿ ಕುಗ್ಗಿ ಹೋಗುವಂತೆ ಮಾಡಿದೆ.

ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ 20 ಪ್ರಚಾರ ಸಭೆಗಳು, ಅಮಿತ್ 30 ಸಭೆ ನಡೆಸಿದರೂ ಹೆಚ್ಚು ಸ್ಥಾನವನ್ನು ತಂದು ಕೊಡುವಲ್ಲಿ ರಣತಂತ್ರಗಳನ್ನು ಹೆಣೆಯುವ ನಾಯಕರು ಸಂಪೂರ್ಣ ವಿಫಲರಾಗಿರುವುದು ಎದ್ದು ಕಾಣುತ್ತದೆ. ಶಿವಸೇನೆಯ ಮುಖವಾಣಿ ಸಾಮ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಪ್ರಸ್ತಾಪಿರುವ ವಿಷಯಗಳ ಬಗ್ಗೆ ಟೀಕೆ ವ್ಯಕ್ತವಾಗಿತ್ತು. ಮತ್ತು ಬಿಜೆಪಿ ಹೆಚ್ಚು ಸ್ಥಾನಗಳನ್ನು ಗೆಲ್ಲುವುದಿಲ್ಲ ಎಂದು ಹೇಳಲಾಗಿತ್ತು.

ವಿಶ್ವವ್ಯಾಪಿ ಗಮನ ಸೆಳೆದು ಪ್ರಶಸ್ತಿಗಳ ಮೇಲೆ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಳ್ಳುತ್ತಿರುವ 56 ಇಂಚಿನ ಎದೆಯ ಮೋದಿ ಮತ್ತು ಚಾಣಾಕ್ಷ್ಯನೆಂದೇ ಮಾಧ್ಯಮಗಳಿಂದ ಬಿಂಬಿಸಲ್ಪಟ್ಟಿರುವ ಅಮಿತ್ ಶಾ ಆಟಕ್ಕೆ ಮತದಾರ ಬ್ರೇಕ್ ಹಾಕಿರುವುದು ಫಲಿತಾಂಶದಿಂದ ಗೋಚರಿಸಿದೆ. ಈ ಬೆಳವಣಿಗೆಗಳು, ಫಲಿತಾಂಶ ಮುಂದೆ ಶುಭ ದಿನಗಳು ಬರಲಿವೆ ಎಂಬುದನ್ನು ಸೂಚಿಸುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...