Homeಕರ್ನಾಟಕಬಿಜೆಪಿ ಪರವಾಗಿದ್ದ ಮತದಾನೋತ್ತರ ಸಮೀಕ್ಷೆಗಳು: ಮತದಾರರ ತೀರ್ಪು ಬೇರೆ

ಬಿಜೆಪಿ ಪರವಾಗಿದ್ದ ಮತದಾನೋತ್ತರ ಸಮೀಕ್ಷೆಗಳು: ಮತದಾರರ ತೀರ್ಪು ಬೇರೆ

- Advertisement -
- Advertisement -

– ಕೆ.ಈ.ಸಿದ್ದಯ್ಯ

ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭಾ ಚುನಾವಣೆಗಳು ಗೋದಿ ಮೀಡಿಯಾಗಳ ಸಮೀಕ್ಷೆಗಳನ್ನು ಹುಸಿಗೊಳಿಸಿವೆ. ಟೈಮ್ಸ್‌ ನೌ, ಎನ್.ಡಿ.ಟಿ.ವಿ, ಇಂಡಿಯಾ ಟುಡೆ, ಸಿಫೋರ್ ಹೀಗೆ ಎಲ್ಲಾ ಎಕ್ಸಿಟ್ ಪೋಲ್ ಗಳು ತಲೆಕೆಳಗಾಗುವಂತೆ ಮಾಡಿದ್ದಾರೆ ಮತದಾರರು. ಎರಡೂ ರಾಜ್ಯಗಳಲ್ಲಿ ಅತ್ಯಧಿಕ ಸ್ಥಾನಗಳನ್ನು ಪಡೆದು ಬಿಜೆಪಿ ಅಧಿಕಾರ ಹಿಡಿಯುತ್ತದೆ ಎಂದು ಹೇಳಿದ್ದಲ್ಲವೂ ಸುಳ್ಳಾಗಿವೆ.

ಹೌದು.. ಮತದಾನ ಪೂರ್ವ ಮತ್ತು ಮತದಾನೋತ್ತರ ಸಮೀಕ್ಷೆಗಳಲ್ಲಿ ಬಿಜೆಪಿಯೇ ಅಧಿಕಾರ ಹಿಡಿಯುತ್ತದೆ ಎಂದು ಹೇಳಲಾಗಿತ್ತು ಈಗ ಅದು ಉಲ್ಟಾ ಆಗಿದೆ. ಮಹಾರಾಷ್ಟ್ರದಲ್ಲಿ ಎಲ್ಲಾ ಎಕ್ಸಿಟ್ ಪೋಲ್ ಗಳು ಕಾಂಗ್ರೆಸ್-ಎನ್.ಸಿ.ಪಿ ಮೈತ್ರಿಕೂಟ 41 ರಿಂದ 81 ಸೀಟುಗಳನ್ನು ದಾಟುವುದಿಲ್ಲ ಎಂದು ನಂಬಿಸಿದ್ದವು. ಅಂದರೆ ಮನಸ್ಸಿಗೆ ಬಂದ ಅಂಕಿಗಳನ್ನು ತಮ್ಮ ಸಮೀಕ್ಷೆಗಳಲ್ಲಿ ಹೇಳಿದ್ದವು.

ಟೈಮ್ಸ್ ನೌ ಬಿಜೆಪಿ 230 ಸೀಟು ನೀಡಿದ್ದರೆ, ಎಬಿಪಿ-ಸಿ ಓಟರ್ 204, ರಿಪಬ್ಲಿಕ್ – ಜನ್ ಕಿ ಬಾತ್ ನಾವು ಯಾರಿಗೂ ಕಡಿಮೆ ಇಲ್ಲವೆಂಬಂತೆ 223 ಸೀಟು ನೀಡಿದ್ದವು. ಸಿ.ಎನ್‌.ಎನ್‌, ನ್ಯೂಸ್ 18 ಸುದ್ದಿ ಸಂಸ್ಥೆಗಳು ಇನ್ನೂ ಮುಂದೆ ಹೋಗಿ 243 ಸ್ಥಾನ ನೀಡಿದ್ದವು. ಟಿವಿ-9 ಮರಾಠಿ 197 ಮತ್ತು ಇಂಡಿಯಾ ಟುಡೆ-ಆಕ್ಸಿಸ್ 181 ಸ್ಥಾನ ನೀಡಿ, ಬಿಜೆಪಿಯನ್ನೇ ಬಹುಮತದೊಂದಿಗೆ ಗೆಲ್ಲುತ್ತದೆ ಎಂದು ಬಿಂಬಿಸಿ, ಉದಾರತೆ ತೋರಿದ್ದವು.

ಕಾಂಗ್ರೆಸ್-ಎನ್.ಸಿ.ಪಿ. ಮೈತ್ರಿಗೆ 41 ರಿಂದ 81 ಸ್ಥಾನಗಳನ್ನು ಮಾತ್ರ ನೀಡಿ, ಬಿಜೆಪಿ ಪಕ್ಷದ ಪರ ಪ್ರೇಮ ಮೆರೆದವು. ಕಾಂಗ್ರೆಸ್ ಅಧಿಕಾರ ಹಿಡಿಯುವುದಿಲ್ಲ. ಮೈತ್ರಿಗೆ ಯಾರೂ ನಾಯಕರಿಲ್ಲ ಎಂಬಂತೆಯೂ ರಾಷ್ಟ್ರೀಯ ಮೀಡಿಯಾಗಳು ಬಿಂಬಿಸಿದವು. ಜನಪರವಾಗಿದ್ದ ಎನ್.ಡಿ.ಟಿ.ವಿಯೂ ಗುಂಪಿನಲ್ಲಿ ಗೋವಿಂದ ಎಂದಿತು. ಸರಿಯಾದ ಸಮೀಕ್ಷೆ ನಡೆಸಬೇಕಾಗಿದ್ದ ಸುದ್ದಿ ಸಂಸ್ಥೆಗಳು, ಬಿಜೆಪಿಯ ನೆಟ್ಟಿಗರು, ಫೇಸ್ಬುಕ್ ಭಕ್ತರು ನೀಡುವ ಅಂಕಿ ಅಂಶಗಳೇ ಸತ್ಯವೆಂದು ತಿಳಿದು ತಮ್ಮ ವಿಮರ್ಶಕ, ವಿಶ್ಲೇಷಕ, ಕೂದಲು ಸೀಳುವ  ಬುದ್ದಿಯನ್ನು ಖರ್ಚು ಮಾಡಲು ಜಿಪುಣತನ ತೋರಿದವು.

ಇಂಡಿಯಾ ಟುಡೆ, ಟಿವಿ 9 ಮರಾಠಿ ಟಿವಿಗಳನ್ನು ಹೊರತುಪಡಿಸಿ ಉಳಿದೆಲ್ಲ ಸಮೀಕ್ಷೆಗಳು ಉಳಿದೆಲ್ಲವೂ ಕಾಂಗ್ರೆಸ್ ಮೈತ್ರಿಕೂಟಕ್ಕೆ ಕೇವಲ 60 ಸ್ಥಾನಗಳು ಬರುತ್ತವೆ ಎಂದು ಹೇಳಿದವು. ಈಗ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿ 104 ಸ್ಥಾನ ಗಳಿಸಿದ್ದರೆ, ಬಿಜೆಪಿ-ಶಿವಸೇನೆ ಮೈತ್ರಿ 157 ಸ್ಥಾನ ಪಡೆದು ಅಧಿಕಾರದ ಗದ್ದುಗೆ ಹಿಡಿಯಲು ಸಿದ್ಧತೆ ನಡೆಸಿವೆ. ಅಂದರೆ ಮಹಾರಾಷ್ಟ್ರದಲ್ಲಿ ಬಿಜೆಪಿ 103 ಸ್ಥಾನ, ಶಿವಸೇನೆ 56 ಸ್ಥಾನ ಪಡೆಯಲು ಶಕ್ತವಾಗಿವೆ. ಬಿಜೆಪಿ 200ರ ಗಡಿ ದಾಟುತ್ತದೆ ಎಂಬ ಸಮೀಕ್ಷೆಗಳ ಭವಿಷ್ಯ ನೆರೆಯಲ್ಲಿ ಕೊಚ್ಚಿ ಹೋಗಿದೆ.

ಹರಿಯಾಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸಮಬಲ ಹೋರಾಟ ನಡೆಸಿವೆ. ಇಲ್ಲಿ ಬಿಜೆಪಿ 40, ಕಾಂಗ್ರೆಸ್ 31, ಜನನಾಯಕ್ ಜನತಾ ಪಕ್ಷ ಮತ್ತು ಇತರರು ಸೇರಿ 19 ಸ್ಥಾನಗಳನ್ನು ಪಡೆದಿದ್ದಾರೆ. ಬಿಜೆಪಿ ಪಕ್ಷ ಕಾಂಗ್ರೆಸ್ ಗಿಂತ 9 ಸ್ಥಾನಗಳನ್ನು ಪಡೆದು ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಇಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಯಾವುದೇ ರಾಷ್ಟ್ರೀಯ ಪಕ್ಷ ಸರ್ಕಾರ ರಚನೆ ಮಾಡಬೇಕು ಎಂದರೆ ಜನನಾಯಕ್ ಜನತಾ ಪಕ್ಷದ ನೆರವು ಪಡೆಯಲೇಬೇಕು. ಹೀಗಾಗಿ ಜನನಾಯಕ್ ಜನತಾ ಪಕ್ಷ ಕಿಂಗ್ ಮೇಕರ್ ಆಗಿ ಹೊರ ಹೊಮ್ಮಿದೆ. ಹೀಗಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ಜನನಾಯಕ್ ಜನತಾ ಪಕ್ಷದ ಮುಖ್ಯಸ್ಥರನ್ನು ಸಂಪರ್ಕಿಸುವ ಪ್ರಯತ್ನಗಳು ಮುಂದುವರೆದಿವೆ.

ಜನನಾಯಕ್ ಜನತಾ ಪಕ್ಷ ಬೆಂಬಲಿಸಲು ಕೆಲವು ಷರತ್ತುಗಳನ್ನು ಮುಂದಿಟ್ಟಿದೆ. ಹರಿಯಾಣ ಜನತೆಗೆ ನೀಡಿರುವ ಭರವಸೆಗಳನ್ನು ಈಡೇರಿಸಲು ಮುಂದೆ ಬರುವ ಪಕ್ಷಕ್ಕೆ ಬೆಂಬಲಿಸುವುದಾಗಿ ಅದು ಘೋಷಿಸಿದೆ. ರಾಜ್ಯದಲ್ಲಿ ಶೇಕಡ 75ರಷ್ಟು ಯುವಕರಿಗೆ ಉದ್ಯೋಗ, ಮಹಿಳೆಯರಿಗೆ ಭದ್ರತೆ, ರೈತರ ಜೊತೆ ಸಭೆ ನಡೆಸಲು ಒಪ್ಪಿ ಅವರ ಬೇಡಿಕೆಗಳನ್ನು ಈಡೇರಿಸುವ ಪಕ್ಷವನ್ನು ಬೆಂಬಲ ಮಾಡುವುದಾಗಿ ಜನನಾಯಕ್ ಜನತಾ ಪಕ್ಷ ಷರತ್ತು ವಿಧಿಸಿದೆ. ಇದು ಈಡೇರಿಸುವ ಪಕ್ಷ ಅಧಿಕಾರದ ಗದ್ದುಗೆ ಹಿಡಿಯಲಿದೆ.

ಎರಡು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಮತದಾರ ರಾಷ್ಟ್ರೀಯ ಪಕ್ಷಗಳನ್ನು ಕಡೆಗಣಿಸಿದಂತೆ ಕಂಡು ಬರುತ್ತದೆ. ಪ್ರಾದೇಶಿಕ ಪಕ್ಷಗಳು ಪ್ರಾಬಲ್ಯ ಸಾಧಿಸಿರುವುದು ಫಲಿತಾಂಶಗಳಿಂದ ಗೊತ್ತಾಗುತ್ತದೆ. ಹರಿಯಾಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಓಟಕ್ಕೆ ಪಕ್ಷೇತರರು ಮತ್ತು ಜನನಾಯಕ್ ಜನತಾ ಪಕ್ಷ ಅಡ್ಡಿಪಡಿಸಿದೆ. ಆದರೆ ಮಹಾರಾಷ್ಟ್ರದಲ್ಲಿ ಎನ್.ಸಿ.ಪಿ. ಮತ್ತು ಶಿವಸೇನೆ ಹೆಚ್ಚು ಸ್ಥಾನಗಳನ್ನು ಪಡೆದಿವೆ. ಶಿವಸೇನೆ 56 ಮತ್ತು ಎನ್.ಸಿ.ಪಿ 53 ಸ್ಥಾನ ಪಡೆದು ಸಮಾನ ಪೈಪೋಟಿ ನೀಡಿವೆ.

ಚುನಾವಣಾ ಸಮಯದಲ್ಲಿ ಬಿಜೆಪಿ ಮತ್ತು ಶಿವಸೇನೆ ಪ್ರಮುಖವಾಗಿ ರಾಮ ಮಂದಿರ ನಿರ್ಮಾಣ, ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ 370 ನೇ ವಿಧಿ ರದ್ದು, ತ್ರಿವಳಿ ತಲಾಖ್, ಬಾಲಾಕೋಟ್ ದಾಳಿ, ಪಾಕ್  ಮತ್ತು ಭಯೋತ್ಪಾದಕ ವಿಷಯಗಳನ್ನೇ ಮುಂದೆ ಮಾಡಿ ಮತಯಾಚಿಸಿತು. ಆದರೆ ಇದಕ್ಕೆ ಮತದಾರ ಒಲಿದಿಲ್ಲ. ಜನರ ಭಾವನೆಗಳನ್ನು ವ್ಯಾಪಾರ ಮಾಡಿಕೊಂಡಿರುವ ಬಿಜೆಪಿಯ ಉತ್ಸಾಹ ಈ ಚುನಾವಣೆಯಲ್ಲಿ ಕುಗ್ಗಿ ಹೋಗುವಂತೆ ಮಾಡಿದೆ.

ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ 20 ಪ್ರಚಾರ ಸಭೆಗಳು, ಅಮಿತ್ 30 ಸಭೆ ನಡೆಸಿದರೂ ಹೆಚ್ಚು ಸ್ಥಾನವನ್ನು ತಂದು ಕೊಡುವಲ್ಲಿ ರಣತಂತ್ರಗಳನ್ನು ಹೆಣೆಯುವ ನಾಯಕರು ಸಂಪೂರ್ಣ ವಿಫಲರಾಗಿರುವುದು ಎದ್ದು ಕಾಣುತ್ತದೆ. ಶಿವಸೇನೆಯ ಮುಖವಾಣಿ ಸಾಮ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಪ್ರಸ್ತಾಪಿರುವ ವಿಷಯಗಳ ಬಗ್ಗೆ ಟೀಕೆ ವ್ಯಕ್ತವಾಗಿತ್ತು. ಮತ್ತು ಬಿಜೆಪಿ ಹೆಚ್ಚು ಸ್ಥಾನಗಳನ್ನು ಗೆಲ್ಲುವುದಿಲ್ಲ ಎಂದು ಹೇಳಲಾಗಿತ್ತು.

ವಿಶ್ವವ್ಯಾಪಿ ಗಮನ ಸೆಳೆದು ಪ್ರಶಸ್ತಿಗಳ ಮೇಲೆ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಳ್ಳುತ್ತಿರುವ 56 ಇಂಚಿನ ಎದೆಯ ಮೋದಿ ಮತ್ತು ಚಾಣಾಕ್ಷ್ಯನೆಂದೇ ಮಾಧ್ಯಮಗಳಿಂದ ಬಿಂಬಿಸಲ್ಪಟ್ಟಿರುವ ಅಮಿತ್ ಶಾ ಆಟಕ್ಕೆ ಮತದಾರ ಬ್ರೇಕ್ ಹಾಕಿರುವುದು ಫಲಿತಾಂಶದಿಂದ ಗೋಚರಿಸಿದೆ. ಈ ಬೆಳವಣಿಗೆಗಳು, ಫಲಿತಾಂಶ ಮುಂದೆ ಶುಭ ದಿನಗಳು ಬರಲಿವೆ ಎಂಬುದನ್ನು ಸೂಚಿಸುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...