Homeಕರ್ನಾಟಕಬಿಜೆಪಿ ಪರವಾಗಿದ್ದ ಮತದಾನೋತ್ತರ ಸಮೀಕ್ಷೆಗಳು: ಮತದಾರರ ತೀರ್ಪು ಬೇರೆ

ಬಿಜೆಪಿ ಪರವಾಗಿದ್ದ ಮತದಾನೋತ್ತರ ಸಮೀಕ್ಷೆಗಳು: ಮತದಾರರ ತೀರ್ಪು ಬೇರೆ

- Advertisement -
- Advertisement -

– ಕೆ.ಈ.ಸಿದ್ದಯ್ಯ

ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭಾ ಚುನಾವಣೆಗಳು ಗೋದಿ ಮೀಡಿಯಾಗಳ ಸಮೀಕ್ಷೆಗಳನ್ನು ಹುಸಿಗೊಳಿಸಿವೆ. ಟೈಮ್ಸ್‌ ನೌ, ಎನ್.ಡಿ.ಟಿ.ವಿ, ಇಂಡಿಯಾ ಟುಡೆ, ಸಿಫೋರ್ ಹೀಗೆ ಎಲ್ಲಾ ಎಕ್ಸಿಟ್ ಪೋಲ್ ಗಳು ತಲೆಕೆಳಗಾಗುವಂತೆ ಮಾಡಿದ್ದಾರೆ ಮತದಾರರು. ಎರಡೂ ರಾಜ್ಯಗಳಲ್ಲಿ ಅತ್ಯಧಿಕ ಸ್ಥಾನಗಳನ್ನು ಪಡೆದು ಬಿಜೆಪಿ ಅಧಿಕಾರ ಹಿಡಿಯುತ್ತದೆ ಎಂದು ಹೇಳಿದ್ದಲ್ಲವೂ ಸುಳ್ಳಾಗಿವೆ.

ಹೌದು.. ಮತದಾನ ಪೂರ್ವ ಮತ್ತು ಮತದಾನೋತ್ತರ ಸಮೀಕ್ಷೆಗಳಲ್ಲಿ ಬಿಜೆಪಿಯೇ ಅಧಿಕಾರ ಹಿಡಿಯುತ್ತದೆ ಎಂದು ಹೇಳಲಾಗಿತ್ತು ಈಗ ಅದು ಉಲ್ಟಾ ಆಗಿದೆ. ಮಹಾರಾಷ್ಟ್ರದಲ್ಲಿ ಎಲ್ಲಾ ಎಕ್ಸಿಟ್ ಪೋಲ್ ಗಳು ಕಾಂಗ್ರೆಸ್-ಎನ್.ಸಿ.ಪಿ ಮೈತ್ರಿಕೂಟ 41 ರಿಂದ 81 ಸೀಟುಗಳನ್ನು ದಾಟುವುದಿಲ್ಲ ಎಂದು ನಂಬಿಸಿದ್ದವು. ಅಂದರೆ ಮನಸ್ಸಿಗೆ ಬಂದ ಅಂಕಿಗಳನ್ನು ತಮ್ಮ ಸಮೀಕ್ಷೆಗಳಲ್ಲಿ ಹೇಳಿದ್ದವು.

ಟೈಮ್ಸ್ ನೌ ಬಿಜೆಪಿ 230 ಸೀಟು ನೀಡಿದ್ದರೆ, ಎಬಿಪಿ-ಸಿ ಓಟರ್ 204, ರಿಪಬ್ಲಿಕ್ – ಜನ್ ಕಿ ಬಾತ್ ನಾವು ಯಾರಿಗೂ ಕಡಿಮೆ ಇಲ್ಲವೆಂಬಂತೆ 223 ಸೀಟು ನೀಡಿದ್ದವು. ಸಿ.ಎನ್‌.ಎನ್‌, ನ್ಯೂಸ್ 18 ಸುದ್ದಿ ಸಂಸ್ಥೆಗಳು ಇನ್ನೂ ಮುಂದೆ ಹೋಗಿ 243 ಸ್ಥಾನ ನೀಡಿದ್ದವು. ಟಿವಿ-9 ಮರಾಠಿ 197 ಮತ್ತು ಇಂಡಿಯಾ ಟುಡೆ-ಆಕ್ಸಿಸ್ 181 ಸ್ಥಾನ ನೀಡಿ, ಬಿಜೆಪಿಯನ್ನೇ ಬಹುಮತದೊಂದಿಗೆ ಗೆಲ್ಲುತ್ತದೆ ಎಂದು ಬಿಂಬಿಸಿ, ಉದಾರತೆ ತೋರಿದ್ದವು.

ಕಾಂಗ್ರೆಸ್-ಎನ್.ಸಿ.ಪಿ. ಮೈತ್ರಿಗೆ 41 ರಿಂದ 81 ಸ್ಥಾನಗಳನ್ನು ಮಾತ್ರ ನೀಡಿ, ಬಿಜೆಪಿ ಪಕ್ಷದ ಪರ ಪ್ರೇಮ ಮೆರೆದವು. ಕಾಂಗ್ರೆಸ್ ಅಧಿಕಾರ ಹಿಡಿಯುವುದಿಲ್ಲ. ಮೈತ್ರಿಗೆ ಯಾರೂ ನಾಯಕರಿಲ್ಲ ಎಂಬಂತೆಯೂ ರಾಷ್ಟ್ರೀಯ ಮೀಡಿಯಾಗಳು ಬಿಂಬಿಸಿದವು. ಜನಪರವಾಗಿದ್ದ ಎನ್.ಡಿ.ಟಿ.ವಿಯೂ ಗುಂಪಿನಲ್ಲಿ ಗೋವಿಂದ ಎಂದಿತು. ಸರಿಯಾದ ಸಮೀಕ್ಷೆ ನಡೆಸಬೇಕಾಗಿದ್ದ ಸುದ್ದಿ ಸಂಸ್ಥೆಗಳು, ಬಿಜೆಪಿಯ ನೆಟ್ಟಿಗರು, ಫೇಸ್ಬುಕ್ ಭಕ್ತರು ನೀಡುವ ಅಂಕಿ ಅಂಶಗಳೇ ಸತ್ಯವೆಂದು ತಿಳಿದು ತಮ್ಮ ವಿಮರ್ಶಕ, ವಿಶ್ಲೇಷಕ, ಕೂದಲು ಸೀಳುವ  ಬುದ್ದಿಯನ್ನು ಖರ್ಚು ಮಾಡಲು ಜಿಪುಣತನ ತೋರಿದವು.

ಇಂಡಿಯಾ ಟುಡೆ, ಟಿವಿ 9 ಮರಾಠಿ ಟಿವಿಗಳನ್ನು ಹೊರತುಪಡಿಸಿ ಉಳಿದೆಲ್ಲ ಸಮೀಕ್ಷೆಗಳು ಉಳಿದೆಲ್ಲವೂ ಕಾಂಗ್ರೆಸ್ ಮೈತ್ರಿಕೂಟಕ್ಕೆ ಕೇವಲ 60 ಸ್ಥಾನಗಳು ಬರುತ್ತವೆ ಎಂದು ಹೇಳಿದವು. ಈಗ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿ 104 ಸ್ಥಾನ ಗಳಿಸಿದ್ದರೆ, ಬಿಜೆಪಿ-ಶಿವಸೇನೆ ಮೈತ್ರಿ 157 ಸ್ಥಾನ ಪಡೆದು ಅಧಿಕಾರದ ಗದ್ದುಗೆ ಹಿಡಿಯಲು ಸಿದ್ಧತೆ ನಡೆಸಿವೆ. ಅಂದರೆ ಮಹಾರಾಷ್ಟ್ರದಲ್ಲಿ ಬಿಜೆಪಿ 103 ಸ್ಥಾನ, ಶಿವಸೇನೆ 56 ಸ್ಥಾನ ಪಡೆಯಲು ಶಕ್ತವಾಗಿವೆ. ಬಿಜೆಪಿ 200ರ ಗಡಿ ದಾಟುತ್ತದೆ ಎಂಬ ಸಮೀಕ್ಷೆಗಳ ಭವಿಷ್ಯ ನೆರೆಯಲ್ಲಿ ಕೊಚ್ಚಿ ಹೋಗಿದೆ.

ಹರಿಯಾಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸಮಬಲ ಹೋರಾಟ ನಡೆಸಿವೆ. ಇಲ್ಲಿ ಬಿಜೆಪಿ 40, ಕಾಂಗ್ರೆಸ್ 31, ಜನನಾಯಕ್ ಜನತಾ ಪಕ್ಷ ಮತ್ತು ಇತರರು ಸೇರಿ 19 ಸ್ಥಾನಗಳನ್ನು ಪಡೆದಿದ್ದಾರೆ. ಬಿಜೆಪಿ ಪಕ್ಷ ಕಾಂಗ್ರೆಸ್ ಗಿಂತ 9 ಸ್ಥಾನಗಳನ್ನು ಪಡೆದು ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಇಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಯಾವುದೇ ರಾಷ್ಟ್ರೀಯ ಪಕ್ಷ ಸರ್ಕಾರ ರಚನೆ ಮಾಡಬೇಕು ಎಂದರೆ ಜನನಾಯಕ್ ಜನತಾ ಪಕ್ಷದ ನೆರವು ಪಡೆಯಲೇಬೇಕು. ಹೀಗಾಗಿ ಜನನಾಯಕ್ ಜನತಾ ಪಕ್ಷ ಕಿಂಗ್ ಮೇಕರ್ ಆಗಿ ಹೊರ ಹೊಮ್ಮಿದೆ. ಹೀಗಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ಜನನಾಯಕ್ ಜನತಾ ಪಕ್ಷದ ಮುಖ್ಯಸ್ಥರನ್ನು ಸಂಪರ್ಕಿಸುವ ಪ್ರಯತ್ನಗಳು ಮುಂದುವರೆದಿವೆ.

ಜನನಾಯಕ್ ಜನತಾ ಪಕ್ಷ ಬೆಂಬಲಿಸಲು ಕೆಲವು ಷರತ್ತುಗಳನ್ನು ಮುಂದಿಟ್ಟಿದೆ. ಹರಿಯಾಣ ಜನತೆಗೆ ನೀಡಿರುವ ಭರವಸೆಗಳನ್ನು ಈಡೇರಿಸಲು ಮುಂದೆ ಬರುವ ಪಕ್ಷಕ್ಕೆ ಬೆಂಬಲಿಸುವುದಾಗಿ ಅದು ಘೋಷಿಸಿದೆ. ರಾಜ್ಯದಲ್ಲಿ ಶೇಕಡ 75ರಷ್ಟು ಯುವಕರಿಗೆ ಉದ್ಯೋಗ, ಮಹಿಳೆಯರಿಗೆ ಭದ್ರತೆ, ರೈತರ ಜೊತೆ ಸಭೆ ನಡೆಸಲು ಒಪ್ಪಿ ಅವರ ಬೇಡಿಕೆಗಳನ್ನು ಈಡೇರಿಸುವ ಪಕ್ಷವನ್ನು ಬೆಂಬಲ ಮಾಡುವುದಾಗಿ ಜನನಾಯಕ್ ಜನತಾ ಪಕ್ಷ ಷರತ್ತು ವಿಧಿಸಿದೆ. ಇದು ಈಡೇರಿಸುವ ಪಕ್ಷ ಅಧಿಕಾರದ ಗದ್ದುಗೆ ಹಿಡಿಯಲಿದೆ.

ಎರಡು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಮತದಾರ ರಾಷ್ಟ್ರೀಯ ಪಕ್ಷಗಳನ್ನು ಕಡೆಗಣಿಸಿದಂತೆ ಕಂಡು ಬರುತ್ತದೆ. ಪ್ರಾದೇಶಿಕ ಪಕ್ಷಗಳು ಪ್ರಾಬಲ್ಯ ಸಾಧಿಸಿರುವುದು ಫಲಿತಾಂಶಗಳಿಂದ ಗೊತ್ತಾಗುತ್ತದೆ. ಹರಿಯಾಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಓಟಕ್ಕೆ ಪಕ್ಷೇತರರು ಮತ್ತು ಜನನಾಯಕ್ ಜನತಾ ಪಕ್ಷ ಅಡ್ಡಿಪಡಿಸಿದೆ. ಆದರೆ ಮಹಾರಾಷ್ಟ್ರದಲ್ಲಿ ಎನ್.ಸಿ.ಪಿ. ಮತ್ತು ಶಿವಸೇನೆ ಹೆಚ್ಚು ಸ್ಥಾನಗಳನ್ನು ಪಡೆದಿವೆ. ಶಿವಸೇನೆ 56 ಮತ್ತು ಎನ್.ಸಿ.ಪಿ 53 ಸ್ಥಾನ ಪಡೆದು ಸಮಾನ ಪೈಪೋಟಿ ನೀಡಿವೆ.

ಚುನಾವಣಾ ಸಮಯದಲ್ಲಿ ಬಿಜೆಪಿ ಮತ್ತು ಶಿವಸೇನೆ ಪ್ರಮುಖವಾಗಿ ರಾಮ ಮಂದಿರ ನಿರ್ಮಾಣ, ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ 370 ನೇ ವಿಧಿ ರದ್ದು, ತ್ರಿವಳಿ ತಲಾಖ್, ಬಾಲಾಕೋಟ್ ದಾಳಿ, ಪಾಕ್  ಮತ್ತು ಭಯೋತ್ಪಾದಕ ವಿಷಯಗಳನ್ನೇ ಮುಂದೆ ಮಾಡಿ ಮತಯಾಚಿಸಿತು. ಆದರೆ ಇದಕ್ಕೆ ಮತದಾರ ಒಲಿದಿಲ್ಲ. ಜನರ ಭಾವನೆಗಳನ್ನು ವ್ಯಾಪಾರ ಮಾಡಿಕೊಂಡಿರುವ ಬಿಜೆಪಿಯ ಉತ್ಸಾಹ ಈ ಚುನಾವಣೆಯಲ್ಲಿ ಕುಗ್ಗಿ ಹೋಗುವಂತೆ ಮಾಡಿದೆ.

ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ 20 ಪ್ರಚಾರ ಸಭೆಗಳು, ಅಮಿತ್ 30 ಸಭೆ ನಡೆಸಿದರೂ ಹೆಚ್ಚು ಸ್ಥಾನವನ್ನು ತಂದು ಕೊಡುವಲ್ಲಿ ರಣತಂತ್ರಗಳನ್ನು ಹೆಣೆಯುವ ನಾಯಕರು ಸಂಪೂರ್ಣ ವಿಫಲರಾಗಿರುವುದು ಎದ್ದು ಕಾಣುತ್ತದೆ. ಶಿವಸೇನೆಯ ಮುಖವಾಣಿ ಸಾಮ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಪ್ರಸ್ತಾಪಿರುವ ವಿಷಯಗಳ ಬಗ್ಗೆ ಟೀಕೆ ವ್ಯಕ್ತವಾಗಿತ್ತು. ಮತ್ತು ಬಿಜೆಪಿ ಹೆಚ್ಚು ಸ್ಥಾನಗಳನ್ನು ಗೆಲ್ಲುವುದಿಲ್ಲ ಎಂದು ಹೇಳಲಾಗಿತ್ತು.

ವಿಶ್ವವ್ಯಾಪಿ ಗಮನ ಸೆಳೆದು ಪ್ರಶಸ್ತಿಗಳ ಮೇಲೆ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಳ್ಳುತ್ತಿರುವ 56 ಇಂಚಿನ ಎದೆಯ ಮೋದಿ ಮತ್ತು ಚಾಣಾಕ್ಷ್ಯನೆಂದೇ ಮಾಧ್ಯಮಗಳಿಂದ ಬಿಂಬಿಸಲ್ಪಟ್ಟಿರುವ ಅಮಿತ್ ಶಾ ಆಟಕ್ಕೆ ಮತದಾರ ಬ್ರೇಕ್ ಹಾಕಿರುವುದು ಫಲಿತಾಂಶದಿಂದ ಗೋಚರಿಸಿದೆ. ಈ ಬೆಳವಣಿಗೆಗಳು, ಫಲಿತಾಂಶ ಮುಂದೆ ಶುಭ ದಿನಗಳು ಬರಲಿವೆ ಎಂಬುದನ್ನು ಸೂಚಿಸುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...