Homeಮುಖಪುಟವಿವಾದಕ್ಕೆ ಎಡೆಮಾಡಿಕೊಟ್ಟ ವಿದೇಶಿ ಕಂಪನಿಗಳ ಸಾಮಾಜಿಕ ಜಾಲತಾಣಗಳ ಪೋಸ್ಟ್‌

ವಿವಾದಕ್ಕೆ ಎಡೆಮಾಡಿಕೊಟ್ಟ ವಿದೇಶಿ ಕಂಪನಿಗಳ ಸಾಮಾಜಿಕ ಜಾಲತಾಣಗಳ ಪೋಸ್ಟ್‌

- Advertisement -
- Advertisement -

ಜಮ್ಮು ಕಾಶ್ಮೀರ ವಿಚಾರದಲ್ಲಿ ಬಹು-ರಾಷ್ಟ್ರೀಯ ಸಂಸ್ಥೆಗಳ ಬ್ರಾಂಡ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೆ ಪ್ರಕಟಿಸುವುದು ಮತ್ತು ಕ್ಷಮೆಯಾಚಿಸುವುದು ಕಳೆದ ಕೆಲವು ದಿನಗಳಿಂದ ಸುದ್ದಿಯಲ್ಲಿದೆ. ಮಾರುತಿ ಸುಜುಕಿ, ಫಿಜ್ಜಾ, ಡೊಮಿನೋಸ್, ಕಿಯಾ, ಕೆಎಫ್‌ಸಿ, ಹೋಂಡಾ ಮತ್ತು ಹ್ಯೂಂಡೈ ಸೇರಿದಂತೆ ಬಹುತೇಕ ಸಂಸ್ಥೆಗಳು ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಗಳಲ್ಲಿ ಪ್ರಕಟವಾದ ವಿಚಾರಗಳಿಗೆ ಸಂಬಂಧಿಸಿ ಭಾರತದ ಬಳಿ ಕ್ಷಮೆಯಾಚಿಸಿವೆ.

ಸೋಮವಾರದಂದು ಕೆಎಫ್‌ಸಿ ಇಂಡಿಯಾ, “ದೇಶದ ಹೊರಗಿನ ಕೆಲವು ಕೆಎಫ್‌ಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟವಾದ ಪೋಸ್ಟ್‌ಗಳ ಬಗ್ಗೆ ತೀವ್ರವಾಗಿ ಕ್ಷಮೆಯಾಚಿಸುತ್ತೇವೆ” ಎಂದು ಟ್ವೀಟ್ ಮಾಡಿದೆ. ಕೆಎಫ್‌ಸಿ ತನ್ನ ಅಧಿಕೃತ ಫೇಸ್ಬುಕ್ ಖಾತೆಯಲ್ಲಿ ಕಾಶ್ಮೀರ ಒಗ್ಗಟ್ಟಿನ ದಿನವನ್ನು ಬೆಂಬಲಿಸಿ ಹಾಕಿದ ಸಂದೇಶವನ್ನು ಪೋಸ್ಟಿಗೆ ಸಾಮಾಜಿಕ ಮಾಧ್ಯಮದಲ್ಲಿ ಬಳಕೆದಾರರು ಖಂಡಿಸಿದ್ದರು.

ಇದನ್ನೂ ಓದಿ: ಹಿಜಾಬ್‌‌ಗಾಗಿ ದನಿಯೆತ್ತಿದ ವಿದ್ಯಾರ್ಥಿನಿಯರ ಫೋನ್‌‌ ನಂಬರ್‌, ವಿಳಾಸ ಲೀಕ್‌ ಮಾಡಿದ ಉಡುಪಿ ಕಾಲೇಜು!

ಪಾಕಿಸ್ತಾನದ ಹ್ಯೂಂಡೈ ಡೀಲರ್‌ನ ಟ್ವಿಟರ್ ಖಾತೆಯು, “ಸ್ವಾತಂತ್ರ್ಯಕ್ಕಾಗಿ ಹೋರಾಟ” ಎಂದು ಮಾಡಿದ ಪೋಸ್ಟ್ ವಿವಾದಕ್ಕೆ ಎಡೆಮಾಡಿದ ನಂತರ, ಹ್ಯೂಂಡೈ ಮೋಟಾರ್ಸ್ “ಕಾಶ್ಮೀರ ಸಂಬಂಧಿಸಿ ಸಂಸ್ಥೆಯ ಅಧಿಕೃತವಲ್ಲದ ಅಭಿಪ್ರಾಯ ಸಾಮಾಜಿಕ ಮಾಧ್ಯಮದ ಹೇಳಿಕೆಗಳಿಂದ ಭಾರತೀಯರ ಭಾವನೆಗಳಿಗೆ ಧಕ್ಕೆಯಾಗಿರುವುದಕ್ಕಾಗಿ ವಿಷಾದ ವ್ಯಕ್ತಪಡಿಸುತ್ತಿದ್ದೇವೆ ಮತ್ತು ಈ ಕ್ರಮವು ಸಂಸ್ಥೆಯ ಜಾಗತಿಕ ನೀತಿಗೆ ವಿರುದ್ಧವಾಗಿದೆ” ಎಂದು ಸ್ಪಷ್ಟನೆ ನೀಡಿದ್ದಾರೆ.

ಫೆಬ್ರವರಿ 6 ರಂದು ಹ್ಯೂಂಡೈ‌‌ ಕಂಪೆನಿಯ ಭಾರತದಲ್ಲಿನ ಅಂಗಸಂಸ್ಥೆ ಕೂಡ ಕ್ಷಮೆಯಾಚಿಸಿದೆ, “ಭಾರತವು ಹ್ಯೂಂಡೈ ಬ್ರಾಂಡ್‌ಗೆ ಎರಡನೇ ನೆಲೆಯಾಗಿದೆ. ಈ ವಿಚಾರಗಳ ಸಂವಹನದ ಬಗ್ಗೆ ನಾವು ಶೂನ್ಯ ಸಹಿಷ್ಣುತೆ ನೀತಿ ಹೊಂದಿದ್ದೇವೆ ಮತ್ತು ಅಂತಹ ಯಾವುದೇ ದೃಷ್ಟಿಕೋನವನ್ನು ಬಲವಾಗಿ ಖಂಡಿಸುತ್ತೇವೆ” ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

ಇದನ್ನು ಅನುಸರಿಸಿ ಕೆಎಫ್‌ಸಿ, ಡೊಮಿನೋಸ್ ಸಂಸ್ಥೆಯೂ ತನ್ನ ಪಾಕಿಸ್ತಾನಿ ಹ್ಯಾಂಡಲ್‌ನಿಂದ ಕಾಶ್ಮೀರ ಕುರಿತ ಸಂದೇಶಕ್ಕಾಗಿ ಕ್ಷಮೆಯಾಚವಿಸಿದೆ. ಟ್ವಿಟ್ಟರ್‌ನಲ್ಲಿ #boycottdominos ಟ್ರೆಂಡ್‌ ಆದ ನಂತರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಾಗಿ ಡೊಮಿನೋಸ್ ಕಂಪನಿ ಕ್ಷಮೆಯಾಚಿಸಿದೆ. “ಕಳೆದ 25 ವರ್ಷಗಳಿಂದ ಭಾರತ ನಮಗೆ ತವರು ದೇಶವೆನ್ನುವಷ್ಟು ಆಪ್ತವಾಗಿದೆ ಮತ್ತು ಅದರ ಪರಂಪರೆಯನ್ನು ಶಾಶ್ವತವಾಗಿ ರಕ್ಷಿಸಲು ನಾವು ಬದ್ಧರಾಗಿದ್ದೇವೆ” ಎಂದು ಅದು ಹೇಳಿದೆ.

ಇದನ್ನೂ ಓದಿ: ಯುಪಿ ಕೇರಳವಾದರೆ ಅತ್ಯುತ್ತಮ ಶಿಕ್ಷಣ, ಆರೋಗ್ಯ, ಜೀವನಮಟ್ಟ ಸಿಗಲಿದೆ: ಆದಿತ್ಯನಾಥ್‌ಗೆ ಪಿಣರಾಯಿ ತಿರುಗೇಟು

ಮತ್ತೊಂದು ಅಂತರಾಷ್ಟ್ರೀಯ ಕಂಪೆನಿ ಪಿಜ್ಜಾ, ಪಿಜ್ಜಾ ಹಟ್‌ನ ಪಾಕಿಸ್ತಾನಿ ಹ್ಯಾಂಡಲ್ ಇನ್‌ಸ್ಟಾಗ್ರಾಂನಲ್ಲಿ ಬುಧವಾರ ಇದೇ ರೀತಿಯ ಕಾಶ್ಮಿರ ಪರ ಸಂದೇಶವನ್ನು ಪೋಸ್ಟ್ ಮಾಡಿದೆ. ನಂತರ ಕಂಪನಿಯ ಅಧಿಕೃತ ಖಾತೆಯಲ್ಲಿ, “ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುವ ಇಂತಹ ಪೋಸ್ಟ್‌ಗಳನ್ನು ಕ್ಷಮಿಸಲಾಗುವುದಿಲ್ಲ, ಬೆಂಬಲಿಸುವುದಿಲ್ಲ ಅಥವಾ ಒಪ್ಪುವುದಿಲ್ಲ” ಎಂದು ಹೇಳಿದೆ.

ಮಾರುತಿ ಸುಜುಕಿ ಸಂಸ್ಥೆಯೂ ಸಾಮಾಜಿಕ ಜಾಲತಾಣದಲ್ಲಾದ ತಪ್ಪಿಗೆ ಇಂತಹುದೇ ಸ್ಪಷ್ಟನೆ ನೀಡಿದೆ. “ಕಾರ್ಪೊರೇಟ್ ನೀತಿಯಂತೆ, ನಾವು ಪ್ರಪಂಚದ ಯಾವುದೇ ಭಾಗದಲ್ಲಿ ಯಾವುದೇ ರಾಜಕೀಯ ಅಥವಾ ಧಾರ್ಮಿಕ ಒಲವುಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಈ ವಿಷಯಗಳ ಕುರಿತು ನಮ್ಮ ವಿತರಕರು ಅಥವಾ ವ್ಯಾಪಾರ ಸಹವರ್ತಿಗಳಿಂದ ಅಂತಹ ಸಂವಹನವು ನಮ್ಮ ಕಂಪನಿಯ ಸ್ಥಾನವನ್ನು ಪ್ರತಿನಿಧಿಸುವುದಿಲ್ಲ ಅಥವಾ ನಮ್ಮಿಂದ ಅಧಿಕೃತವಾಗಿಲ್ಲ” ಎಂದು ಟ್ವೀಟ್ ಮಾಡಿದೆ.

ಇದನ್ನೂ ಓದಿ: ಸನಾತನಾ ಸಂಸ್ಥೆಯ ವಿರೇಂದ್ರಸಿನ್ಹ ತಾವ್ಡೆ ಸಮಾಜಕ್ಕೆ ಅಪಾಯಕಾರಿ: ಜಾಮೀನು ನೀಡದಂತೆ ಸಿಬಿಐ ಒತ್ತಾಯ

ದಕ್ಷಿಣ ಕೊರಿಯಾ ಮೂಲದ ಮತ್ತೊಂದು ಆಟೋಮೊಬೈಲ್ ತಯಾರಕ, ಕಿಯಾ ಬುಧವಾರದಂದು ಟ್ವೀಟ್ ಮಾಡಿದ್ದು “ಭಾರತದ ಹೊರಗಿರುವ ಕಿಯಾ ಸಂಸ್ಥೆಯ ಹ್ಯಾಂಡಲ್‌ಗಳು ಸ್ವತಂತ್ರ ಅಭಿವ್ಯಕ್ತಿಯಲ್ಲಿ ಸಂಸ್ಥೆಯ ಖಾತೆಗಳನ್ನು ಬಳಸಿಕೊಂಡು ಮಾಡಿರುವ ಹೇಳಿಕೆಯಾಗಿದೆ. ಅದು ಸಂಸ್ಥೆಯ ಅಭಿಪ್ರಾಯವಲ್ಲ. ಕಿಯಾ ಬ್ರ್ಯಾಂಡ್ ಗುರುತಿನ ಇಂತಹ ದುರುಪಯೋಗವನ್ನು ತಪ್ಪಿಸಲು ಕಠಿಣ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಇಂತಹ ಸಮಸ್ಯೆ ಮರುಕಳಿಸದಿರುವಂತೆ ತಡೆಯಲು ಪ್ರಕ್ರಿಯೆಗಳನ್ನು ಜಾರಿಗೆ ತಂದಿದ್ದೇವೆ” ಎಂದು ಹೇಳಿದೆ.

ದಕ್ಷಿಣ ಕೊರಿಯಾ ಮೂಲದ ಹ್ಯೂಂಡೈ ಮತ್ತು ಕಿಯಾ ಮೋಟಾರ್ಸ್ ಸಂಸ್ಥೆಗಳ ಪೋಸ್ಟ್‌ಗಳಿಗಾಗಿ ಆ ದೇಶದ ವಿದೇಶಾಂಗ ಸಚಿವ ಚುಂಗ್ ಇಯು ಯೋಂಗ್ ಅವರು ಭಾರತೀಯ ವಿದೇಶಾಂಗ ಸಚಿವ ಎಸ್ ಜೈಶಂಕರ್‌ರಿಗೆ ಕರೆ ಮಾಡಿ ಸ್ಪಷ್ಟನೆ ನೀಡಿದ್ದಾರೆ. ಸಾಮಾಜಿಕ ಮಾಧ್ಯಮಗಳ ಪೋಸ್ಟ್‌ಗಳಿಂದ ಭಾರತದ ಭಾವನೆಗಳಿಗೆ ಧಕ್ಕೆ ತಂದಿರುವುದಕ್ಕೆ ವಿಷಾದಿಸಿದ್ದಾರೆ ಮತ್ತು ಅಂತಹ ಪೋಸ್ಟ್‌ಗಳನ್ನು ಖಂಡಿಸುತ್ತೇವೆ ಎಂದು ದಕ್ಷಿಣ ಕೊರಿಯಾದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಭಾರತೀಯ ವಿದೇಶಾಂಗ ಸಚಿವಾಲಯದ ಅಧಿಕೃತ ವಕ್ತಾರ ಅರಿಂದಮ್ ಬಾಗ್ಚಿ, “ಕಾಶ್ಮೀರ ಒಗ್ಗಟ್ಟಿನ ದಿನ ಎಂದು ಕರೆಯಲ್ಪಡುವ ಸಾಮಾಜಿಕ ಮಾಧ್ಯಮ ಪೋಸ್ಟ್ ಅನ್ನು ಹ್ಯೂಂಡೈ ಸಂಸ್ಥೆಯ ಪಾಕಿಸ್ತಾನ ಘಟಕ ಮಾಡಿರುವುದನ್ನು ಗಮನಿಸಿದ್ದೇವೆ. 2022 ಫೆಬ್ರವರಿ 6ರ ಭಾನುವಾರದಂದು ಈ ಸಾಮಾಜಿಕ ಮಾಧ್ಯಮ ಪೋಸ್ಟ್ ಕಂಡ ತಕ್ಷಣ, ದಕ್ಷಿಣ ಕೊರಿಯಾ ರಾಜಧಾನಿ ಸಿಯೋಲ್‌ನಿಂದ ನಮ್ಮ ರಾಯಭಾರಿ ಹ್ಯೂಂಡೈ ಪ್ರಧಾನ ಕಚೇರಿಯನ್ನು ಸಂಪರ್ಕಿಸಿ ವಿವರಣೆ ಕೇಳಿದ್ದರು. ನಂತರ ಆಕ್ಷೇಪಾರ್ಹ ಪೋಸ್ಟ್ ತೆಗೆದುಹಾಕಲಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Hijab Live | ಹಿಜಾಬ್‌ ಲೈವ್‌ | ವಿಚಾರಣೆ ಸೋಮವಾರಕ್ಕೆ ಮುಂದೂಡಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....