Homeಮುಖಪುಟವಿವಾದಕ್ಕೆ ಎಡೆಮಾಡಿಕೊಟ್ಟ ವಿದೇಶಿ ಕಂಪನಿಗಳ ಸಾಮಾಜಿಕ ಜಾಲತಾಣಗಳ ಪೋಸ್ಟ್‌

ವಿವಾದಕ್ಕೆ ಎಡೆಮಾಡಿಕೊಟ್ಟ ವಿದೇಶಿ ಕಂಪನಿಗಳ ಸಾಮಾಜಿಕ ಜಾಲತಾಣಗಳ ಪೋಸ್ಟ್‌

- Advertisement -
- Advertisement -

ಜಮ್ಮು ಕಾಶ್ಮೀರ ವಿಚಾರದಲ್ಲಿ ಬಹು-ರಾಷ್ಟ್ರೀಯ ಸಂಸ್ಥೆಗಳ ಬ್ರಾಂಡ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೆ ಪ್ರಕಟಿಸುವುದು ಮತ್ತು ಕ್ಷಮೆಯಾಚಿಸುವುದು ಕಳೆದ ಕೆಲವು ದಿನಗಳಿಂದ ಸುದ್ದಿಯಲ್ಲಿದೆ. ಮಾರುತಿ ಸುಜುಕಿ, ಫಿಜ್ಜಾ, ಡೊಮಿನೋಸ್, ಕಿಯಾ, ಕೆಎಫ್‌ಸಿ, ಹೋಂಡಾ ಮತ್ತು ಹ್ಯೂಂಡೈ ಸೇರಿದಂತೆ ಬಹುತೇಕ ಸಂಸ್ಥೆಗಳು ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಗಳಲ್ಲಿ ಪ್ರಕಟವಾದ ವಿಚಾರಗಳಿಗೆ ಸಂಬಂಧಿಸಿ ಭಾರತದ ಬಳಿ ಕ್ಷಮೆಯಾಚಿಸಿವೆ.

ಸೋಮವಾರದಂದು ಕೆಎಫ್‌ಸಿ ಇಂಡಿಯಾ, “ದೇಶದ ಹೊರಗಿನ ಕೆಲವು ಕೆಎಫ್‌ಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟವಾದ ಪೋಸ್ಟ್‌ಗಳ ಬಗ್ಗೆ ತೀವ್ರವಾಗಿ ಕ್ಷಮೆಯಾಚಿಸುತ್ತೇವೆ” ಎಂದು ಟ್ವೀಟ್ ಮಾಡಿದೆ. ಕೆಎಫ್‌ಸಿ ತನ್ನ ಅಧಿಕೃತ ಫೇಸ್ಬುಕ್ ಖಾತೆಯಲ್ಲಿ ಕಾಶ್ಮೀರ ಒಗ್ಗಟ್ಟಿನ ದಿನವನ್ನು ಬೆಂಬಲಿಸಿ ಹಾಕಿದ ಸಂದೇಶವನ್ನು ಪೋಸ್ಟಿಗೆ ಸಾಮಾಜಿಕ ಮಾಧ್ಯಮದಲ್ಲಿ ಬಳಕೆದಾರರು ಖಂಡಿಸಿದ್ದರು.

ಇದನ್ನೂ ಓದಿ: ಹಿಜಾಬ್‌‌ಗಾಗಿ ದನಿಯೆತ್ತಿದ ವಿದ್ಯಾರ್ಥಿನಿಯರ ಫೋನ್‌‌ ನಂಬರ್‌, ವಿಳಾಸ ಲೀಕ್‌ ಮಾಡಿದ ಉಡುಪಿ ಕಾಲೇಜು!

ಪಾಕಿಸ್ತಾನದ ಹ್ಯೂಂಡೈ ಡೀಲರ್‌ನ ಟ್ವಿಟರ್ ಖಾತೆಯು, “ಸ್ವಾತಂತ್ರ್ಯಕ್ಕಾಗಿ ಹೋರಾಟ” ಎಂದು ಮಾಡಿದ ಪೋಸ್ಟ್ ವಿವಾದಕ್ಕೆ ಎಡೆಮಾಡಿದ ನಂತರ, ಹ್ಯೂಂಡೈ ಮೋಟಾರ್ಸ್ “ಕಾಶ್ಮೀರ ಸಂಬಂಧಿಸಿ ಸಂಸ್ಥೆಯ ಅಧಿಕೃತವಲ್ಲದ ಅಭಿಪ್ರಾಯ ಸಾಮಾಜಿಕ ಮಾಧ್ಯಮದ ಹೇಳಿಕೆಗಳಿಂದ ಭಾರತೀಯರ ಭಾವನೆಗಳಿಗೆ ಧಕ್ಕೆಯಾಗಿರುವುದಕ್ಕಾಗಿ ವಿಷಾದ ವ್ಯಕ್ತಪಡಿಸುತ್ತಿದ್ದೇವೆ ಮತ್ತು ಈ ಕ್ರಮವು ಸಂಸ್ಥೆಯ ಜಾಗತಿಕ ನೀತಿಗೆ ವಿರುದ್ಧವಾಗಿದೆ” ಎಂದು ಸ್ಪಷ್ಟನೆ ನೀಡಿದ್ದಾರೆ.

ಫೆಬ್ರವರಿ 6 ರಂದು ಹ್ಯೂಂಡೈ‌‌ ಕಂಪೆನಿಯ ಭಾರತದಲ್ಲಿನ ಅಂಗಸಂಸ್ಥೆ ಕೂಡ ಕ್ಷಮೆಯಾಚಿಸಿದೆ, “ಭಾರತವು ಹ್ಯೂಂಡೈ ಬ್ರಾಂಡ್‌ಗೆ ಎರಡನೇ ನೆಲೆಯಾಗಿದೆ. ಈ ವಿಚಾರಗಳ ಸಂವಹನದ ಬಗ್ಗೆ ನಾವು ಶೂನ್ಯ ಸಹಿಷ್ಣುತೆ ನೀತಿ ಹೊಂದಿದ್ದೇವೆ ಮತ್ತು ಅಂತಹ ಯಾವುದೇ ದೃಷ್ಟಿಕೋನವನ್ನು ಬಲವಾಗಿ ಖಂಡಿಸುತ್ತೇವೆ” ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

ಇದನ್ನು ಅನುಸರಿಸಿ ಕೆಎಫ್‌ಸಿ, ಡೊಮಿನೋಸ್ ಸಂಸ್ಥೆಯೂ ತನ್ನ ಪಾಕಿಸ್ತಾನಿ ಹ್ಯಾಂಡಲ್‌ನಿಂದ ಕಾಶ್ಮೀರ ಕುರಿತ ಸಂದೇಶಕ್ಕಾಗಿ ಕ್ಷಮೆಯಾಚವಿಸಿದೆ. ಟ್ವಿಟ್ಟರ್‌ನಲ್ಲಿ #boycottdominos ಟ್ರೆಂಡ್‌ ಆದ ನಂತರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಾಗಿ ಡೊಮಿನೋಸ್ ಕಂಪನಿ ಕ್ಷಮೆಯಾಚಿಸಿದೆ. “ಕಳೆದ 25 ವರ್ಷಗಳಿಂದ ಭಾರತ ನಮಗೆ ತವರು ದೇಶವೆನ್ನುವಷ್ಟು ಆಪ್ತವಾಗಿದೆ ಮತ್ತು ಅದರ ಪರಂಪರೆಯನ್ನು ಶಾಶ್ವತವಾಗಿ ರಕ್ಷಿಸಲು ನಾವು ಬದ್ಧರಾಗಿದ್ದೇವೆ” ಎಂದು ಅದು ಹೇಳಿದೆ.

ಇದನ್ನೂ ಓದಿ: ಯುಪಿ ಕೇರಳವಾದರೆ ಅತ್ಯುತ್ತಮ ಶಿಕ್ಷಣ, ಆರೋಗ್ಯ, ಜೀವನಮಟ್ಟ ಸಿಗಲಿದೆ: ಆದಿತ್ಯನಾಥ್‌ಗೆ ಪಿಣರಾಯಿ ತಿರುಗೇಟು

ಮತ್ತೊಂದು ಅಂತರಾಷ್ಟ್ರೀಯ ಕಂಪೆನಿ ಪಿಜ್ಜಾ, ಪಿಜ್ಜಾ ಹಟ್‌ನ ಪಾಕಿಸ್ತಾನಿ ಹ್ಯಾಂಡಲ್ ಇನ್‌ಸ್ಟಾಗ್ರಾಂನಲ್ಲಿ ಬುಧವಾರ ಇದೇ ರೀತಿಯ ಕಾಶ್ಮಿರ ಪರ ಸಂದೇಶವನ್ನು ಪೋಸ್ಟ್ ಮಾಡಿದೆ. ನಂತರ ಕಂಪನಿಯ ಅಧಿಕೃತ ಖಾತೆಯಲ್ಲಿ, “ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುವ ಇಂತಹ ಪೋಸ್ಟ್‌ಗಳನ್ನು ಕ್ಷಮಿಸಲಾಗುವುದಿಲ್ಲ, ಬೆಂಬಲಿಸುವುದಿಲ್ಲ ಅಥವಾ ಒಪ್ಪುವುದಿಲ್ಲ” ಎಂದು ಹೇಳಿದೆ.

ಮಾರುತಿ ಸುಜುಕಿ ಸಂಸ್ಥೆಯೂ ಸಾಮಾಜಿಕ ಜಾಲತಾಣದಲ್ಲಾದ ತಪ್ಪಿಗೆ ಇಂತಹುದೇ ಸ್ಪಷ್ಟನೆ ನೀಡಿದೆ. “ಕಾರ್ಪೊರೇಟ್ ನೀತಿಯಂತೆ, ನಾವು ಪ್ರಪಂಚದ ಯಾವುದೇ ಭಾಗದಲ್ಲಿ ಯಾವುದೇ ರಾಜಕೀಯ ಅಥವಾ ಧಾರ್ಮಿಕ ಒಲವುಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಈ ವಿಷಯಗಳ ಕುರಿತು ನಮ್ಮ ವಿತರಕರು ಅಥವಾ ವ್ಯಾಪಾರ ಸಹವರ್ತಿಗಳಿಂದ ಅಂತಹ ಸಂವಹನವು ನಮ್ಮ ಕಂಪನಿಯ ಸ್ಥಾನವನ್ನು ಪ್ರತಿನಿಧಿಸುವುದಿಲ್ಲ ಅಥವಾ ನಮ್ಮಿಂದ ಅಧಿಕೃತವಾಗಿಲ್ಲ” ಎಂದು ಟ್ವೀಟ್ ಮಾಡಿದೆ.

ಇದನ್ನೂ ಓದಿ: ಸನಾತನಾ ಸಂಸ್ಥೆಯ ವಿರೇಂದ್ರಸಿನ್ಹ ತಾವ್ಡೆ ಸಮಾಜಕ್ಕೆ ಅಪಾಯಕಾರಿ: ಜಾಮೀನು ನೀಡದಂತೆ ಸಿಬಿಐ ಒತ್ತಾಯ

ದಕ್ಷಿಣ ಕೊರಿಯಾ ಮೂಲದ ಮತ್ತೊಂದು ಆಟೋಮೊಬೈಲ್ ತಯಾರಕ, ಕಿಯಾ ಬುಧವಾರದಂದು ಟ್ವೀಟ್ ಮಾಡಿದ್ದು “ಭಾರತದ ಹೊರಗಿರುವ ಕಿಯಾ ಸಂಸ್ಥೆಯ ಹ್ಯಾಂಡಲ್‌ಗಳು ಸ್ವತಂತ್ರ ಅಭಿವ್ಯಕ್ತಿಯಲ್ಲಿ ಸಂಸ್ಥೆಯ ಖಾತೆಗಳನ್ನು ಬಳಸಿಕೊಂಡು ಮಾಡಿರುವ ಹೇಳಿಕೆಯಾಗಿದೆ. ಅದು ಸಂಸ್ಥೆಯ ಅಭಿಪ್ರಾಯವಲ್ಲ. ಕಿಯಾ ಬ್ರ್ಯಾಂಡ್ ಗುರುತಿನ ಇಂತಹ ದುರುಪಯೋಗವನ್ನು ತಪ್ಪಿಸಲು ಕಠಿಣ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಇಂತಹ ಸಮಸ್ಯೆ ಮರುಕಳಿಸದಿರುವಂತೆ ತಡೆಯಲು ಪ್ರಕ್ರಿಯೆಗಳನ್ನು ಜಾರಿಗೆ ತಂದಿದ್ದೇವೆ” ಎಂದು ಹೇಳಿದೆ.

ದಕ್ಷಿಣ ಕೊರಿಯಾ ಮೂಲದ ಹ್ಯೂಂಡೈ ಮತ್ತು ಕಿಯಾ ಮೋಟಾರ್ಸ್ ಸಂಸ್ಥೆಗಳ ಪೋಸ್ಟ್‌ಗಳಿಗಾಗಿ ಆ ದೇಶದ ವಿದೇಶಾಂಗ ಸಚಿವ ಚುಂಗ್ ಇಯು ಯೋಂಗ್ ಅವರು ಭಾರತೀಯ ವಿದೇಶಾಂಗ ಸಚಿವ ಎಸ್ ಜೈಶಂಕರ್‌ರಿಗೆ ಕರೆ ಮಾಡಿ ಸ್ಪಷ್ಟನೆ ನೀಡಿದ್ದಾರೆ. ಸಾಮಾಜಿಕ ಮಾಧ್ಯಮಗಳ ಪೋಸ್ಟ್‌ಗಳಿಂದ ಭಾರತದ ಭಾವನೆಗಳಿಗೆ ಧಕ್ಕೆ ತಂದಿರುವುದಕ್ಕೆ ವಿಷಾದಿಸಿದ್ದಾರೆ ಮತ್ತು ಅಂತಹ ಪೋಸ್ಟ್‌ಗಳನ್ನು ಖಂಡಿಸುತ್ತೇವೆ ಎಂದು ದಕ್ಷಿಣ ಕೊರಿಯಾದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಭಾರತೀಯ ವಿದೇಶಾಂಗ ಸಚಿವಾಲಯದ ಅಧಿಕೃತ ವಕ್ತಾರ ಅರಿಂದಮ್ ಬಾಗ್ಚಿ, “ಕಾಶ್ಮೀರ ಒಗ್ಗಟ್ಟಿನ ದಿನ ಎಂದು ಕರೆಯಲ್ಪಡುವ ಸಾಮಾಜಿಕ ಮಾಧ್ಯಮ ಪೋಸ್ಟ್ ಅನ್ನು ಹ್ಯೂಂಡೈ ಸಂಸ್ಥೆಯ ಪಾಕಿಸ್ತಾನ ಘಟಕ ಮಾಡಿರುವುದನ್ನು ಗಮನಿಸಿದ್ದೇವೆ. 2022 ಫೆಬ್ರವರಿ 6ರ ಭಾನುವಾರದಂದು ಈ ಸಾಮಾಜಿಕ ಮಾಧ್ಯಮ ಪೋಸ್ಟ್ ಕಂಡ ತಕ್ಷಣ, ದಕ್ಷಿಣ ಕೊರಿಯಾ ರಾಜಧಾನಿ ಸಿಯೋಲ್‌ನಿಂದ ನಮ್ಮ ರಾಯಭಾರಿ ಹ್ಯೂಂಡೈ ಪ್ರಧಾನ ಕಚೇರಿಯನ್ನು ಸಂಪರ್ಕಿಸಿ ವಿವರಣೆ ಕೇಳಿದ್ದರು. ನಂತರ ಆಕ್ಷೇಪಾರ್ಹ ಪೋಸ್ಟ್ ತೆಗೆದುಹಾಕಲಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Hijab Live | ಹಿಜಾಬ್‌ ಲೈವ್‌ | ವಿಚಾರಣೆ ಸೋಮವಾರಕ್ಕೆ ಮುಂದೂಡಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...