Homeಮುಖಪುಟವಿವಾದಕ್ಕೆ ಎಡೆಮಾಡಿಕೊಟ್ಟ ವಿದೇಶಿ ಕಂಪನಿಗಳ ಸಾಮಾಜಿಕ ಜಾಲತಾಣಗಳ ಪೋಸ್ಟ್‌

ವಿವಾದಕ್ಕೆ ಎಡೆಮಾಡಿಕೊಟ್ಟ ವಿದೇಶಿ ಕಂಪನಿಗಳ ಸಾಮಾಜಿಕ ಜಾಲತಾಣಗಳ ಪೋಸ್ಟ್‌

- Advertisement -
- Advertisement -

ಜಮ್ಮು ಕಾಶ್ಮೀರ ವಿಚಾರದಲ್ಲಿ ಬಹು-ರಾಷ್ಟ್ರೀಯ ಸಂಸ್ಥೆಗಳ ಬ್ರಾಂಡ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೆ ಪ್ರಕಟಿಸುವುದು ಮತ್ತು ಕ್ಷಮೆಯಾಚಿಸುವುದು ಕಳೆದ ಕೆಲವು ದಿನಗಳಿಂದ ಸುದ್ದಿಯಲ್ಲಿದೆ. ಮಾರುತಿ ಸುಜುಕಿ, ಫಿಜ್ಜಾ, ಡೊಮಿನೋಸ್, ಕಿಯಾ, ಕೆಎಫ್‌ಸಿ, ಹೋಂಡಾ ಮತ್ತು ಹ್ಯೂಂಡೈ ಸೇರಿದಂತೆ ಬಹುತೇಕ ಸಂಸ್ಥೆಗಳು ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಗಳಲ್ಲಿ ಪ್ರಕಟವಾದ ವಿಚಾರಗಳಿಗೆ ಸಂಬಂಧಿಸಿ ಭಾರತದ ಬಳಿ ಕ್ಷಮೆಯಾಚಿಸಿವೆ.

ಸೋಮವಾರದಂದು ಕೆಎಫ್‌ಸಿ ಇಂಡಿಯಾ, “ದೇಶದ ಹೊರಗಿನ ಕೆಲವು ಕೆಎಫ್‌ಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟವಾದ ಪೋಸ್ಟ್‌ಗಳ ಬಗ್ಗೆ ತೀವ್ರವಾಗಿ ಕ್ಷಮೆಯಾಚಿಸುತ್ತೇವೆ” ಎಂದು ಟ್ವೀಟ್ ಮಾಡಿದೆ. ಕೆಎಫ್‌ಸಿ ತನ್ನ ಅಧಿಕೃತ ಫೇಸ್ಬುಕ್ ಖಾತೆಯಲ್ಲಿ ಕಾಶ್ಮೀರ ಒಗ್ಗಟ್ಟಿನ ದಿನವನ್ನು ಬೆಂಬಲಿಸಿ ಹಾಕಿದ ಸಂದೇಶವನ್ನು ಪೋಸ್ಟಿಗೆ ಸಾಮಾಜಿಕ ಮಾಧ್ಯಮದಲ್ಲಿ ಬಳಕೆದಾರರು ಖಂಡಿಸಿದ್ದರು.

ಇದನ್ನೂ ಓದಿ: ಹಿಜಾಬ್‌‌ಗಾಗಿ ದನಿಯೆತ್ತಿದ ವಿದ್ಯಾರ್ಥಿನಿಯರ ಫೋನ್‌‌ ನಂಬರ್‌, ವಿಳಾಸ ಲೀಕ್‌ ಮಾಡಿದ ಉಡುಪಿ ಕಾಲೇಜು!

ಪಾಕಿಸ್ತಾನದ ಹ್ಯೂಂಡೈ ಡೀಲರ್‌ನ ಟ್ವಿಟರ್ ಖಾತೆಯು, “ಸ್ವಾತಂತ್ರ್ಯಕ್ಕಾಗಿ ಹೋರಾಟ” ಎಂದು ಮಾಡಿದ ಪೋಸ್ಟ್ ವಿವಾದಕ್ಕೆ ಎಡೆಮಾಡಿದ ನಂತರ, ಹ್ಯೂಂಡೈ ಮೋಟಾರ್ಸ್ “ಕಾಶ್ಮೀರ ಸಂಬಂಧಿಸಿ ಸಂಸ್ಥೆಯ ಅಧಿಕೃತವಲ್ಲದ ಅಭಿಪ್ರಾಯ ಸಾಮಾಜಿಕ ಮಾಧ್ಯಮದ ಹೇಳಿಕೆಗಳಿಂದ ಭಾರತೀಯರ ಭಾವನೆಗಳಿಗೆ ಧಕ್ಕೆಯಾಗಿರುವುದಕ್ಕಾಗಿ ವಿಷಾದ ವ್ಯಕ್ತಪಡಿಸುತ್ತಿದ್ದೇವೆ ಮತ್ತು ಈ ಕ್ರಮವು ಸಂಸ್ಥೆಯ ಜಾಗತಿಕ ನೀತಿಗೆ ವಿರುದ್ಧವಾಗಿದೆ” ಎಂದು ಸ್ಪಷ್ಟನೆ ನೀಡಿದ್ದಾರೆ.

ಫೆಬ್ರವರಿ 6 ರಂದು ಹ್ಯೂಂಡೈ‌‌ ಕಂಪೆನಿಯ ಭಾರತದಲ್ಲಿನ ಅಂಗಸಂಸ್ಥೆ ಕೂಡ ಕ್ಷಮೆಯಾಚಿಸಿದೆ, “ಭಾರತವು ಹ್ಯೂಂಡೈ ಬ್ರಾಂಡ್‌ಗೆ ಎರಡನೇ ನೆಲೆಯಾಗಿದೆ. ಈ ವಿಚಾರಗಳ ಸಂವಹನದ ಬಗ್ಗೆ ನಾವು ಶೂನ್ಯ ಸಹಿಷ್ಣುತೆ ನೀತಿ ಹೊಂದಿದ್ದೇವೆ ಮತ್ತು ಅಂತಹ ಯಾವುದೇ ದೃಷ್ಟಿಕೋನವನ್ನು ಬಲವಾಗಿ ಖಂಡಿಸುತ್ತೇವೆ” ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

ಇದನ್ನು ಅನುಸರಿಸಿ ಕೆಎಫ್‌ಸಿ, ಡೊಮಿನೋಸ್ ಸಂಸ್ಥೆಯೂ ತನ್ನ ಪಾಕಿಸ್ತಾನಿ ಹ್ಯಾಂಡಲ್‌ನಿಂದ ಕಾಶ್ಮೀರ ಕುರಿತ ಸಂದೇಶಕ್ಕಾಗಿ ಕ್ಷಮೆಯಾಚವಿಸಿದೆ. ಟ್ವಿಟ್ಟರ್‌ನಲ್ಲಿ #boycottdominos ಟ್ರೆಂಡ್‌ ಆದ ನಂತರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಾಗಿ ಡೊಮಿನೋಸ್ ಕಂಪನಿ ಕ್ಷಮೆಯಾಚಿಸಿದೆ. “ಕಳೆದ 25 ವರ್ಷಗಳಿಂದ ಭಾರತ ನಮಗೆ ತವರು ದೇಶವೆನ್ನುವಷ್ಟು ಆಪ್ತವಾಗಿದೆ ಮತ್ತು ಅದರ ಪರಂಪರೆಯನ್ನು ಶಾಶ್ವತವಾಗಿ ರಕ್ಷಿಸಲು ನಾವು ಬದ್ಧರಾಗಿದ್ದೇವೆ” ಎಂದು ಅದು ಹೇಳಿದೆ.

ಇದನ್ನೂ ಓದಿ: ಯುಪಿ ಕೇರಳವಾದರೆ ಅತ್ಯುತ್ತಮ ಶಿಕ್ಷಣ, ಆರೋಗ್ಯ, ಜೀವನಮಟ್ಟ ಸಿಗಲಿದೆ: ಆದಿತ್ಯನಾಥ್‌ಗೆ ಪಿಣರಾಯಿ ತಿರುಗೇಟು

ಮತ್ತೊಂದು ಅಂತರಾಷ್ಟ್ರೀಯ ಕಂಪೆನಿ ಪಿಜ್ಜಾ, ಪಿಜ್ಜಾ ಹಟ್‌ನ ಪಾಕಿಸ್ತಾನಿ ಹ್ಯಾಂಡಲ್ ಇನ್‌ಸ್ಟಾಗ್ರಾಂನಲ್ಲಿ ಬುಧವಾರ ಇದೇ ರೀತಿಯ ಕಾಶ್ಮಿರ ಪರ ಸಂದೇಶವನ್ನು ಪೋಸ್ಟ್ ಮಾಡಿದೆ. ನಂತರ ಕಂಪನಿಯ ಅಧಿಕೃತ ಖಾತೆಯಲ್ಲಿ, “ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುವ ಇಂತಹ ಪೋಸ್ಟ್‌ಗಳನ್ನು ಕ್ಷಮಿಸಲಾಗುವುದಿಲ್ಲ, ಬೆಂಬಲಿಸುವುದಿಲ್ಲ ಅಥವಾ ಒಪ್ಪುವುದಿಲ್ಲ” ಎಂದು ಹೇಳಿದೆ.

ಮಾರುತಿ ಸುಜುಕಿ ಸಂಸ್ಥೆಯೂ ಸಾಮಾಜಿಕ ಜಾಲತಾಣದಲ್ಲಾದ ತಪ್ಪಿಗೆ ಇಂತಹುದೇ ಸ್ಪಷ್ಟನೆ ನೀಡಿದೆ. “ಕಾರ್ಪೊರೇಟ್ ನೀತಿಯಂತೆ, ನಾವು ಪ್ರಪಂಚದ ಯಾವುದೇ ಭಾಗದಲ್ಲಿ ಯಾವುದೇ ರಾಜಕೀಯ ಅಥವಾ ಧಾರ್ಮಿಕ ಒಲವುಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಈ ವಿಷಯಗಳ ಕುರಿತು ನಮ್ಮ ವಿತರಕರು ಅಥವಾ ವ್ಯಾಪಾರ ಸಹವರ್ತಿಗಳಿಂದ ಅಂತಹ ಸಂವಹನವು ನಮ್ಮ ಕಂಪನಿಯ ಸ್ಥಾನವನ್ನು ಪ್ರತಿನಿಧಿಸುವುದಿಲ್ಲ ಅಥವಾ ನಮ್ಮಿಂದ ಅಧಿಕೃತವಾಗಿಲ್ಲ” ಎಂದು ಟ್ವೀಟ್ ಮಾಡಿದೆ.

ಇದನ್ನೂ ಓದಿ: ಸನಾತನಾ ಸಂಸ್ಥೆಯ ವಿರೇಂದ್ರಸಿನ್ಹ ತಾವ್ಡೆ ಸಮಾಜಕ್ಕೆ ಅಪಾಯಕಾರಿ: ಜಾಮೀನು ನೀಡದಂತೆ ಸಿಬಿಐ ಒತ್ತಾಯ

ದಕ್ಷಿಣ ಕೊರಿಯಾ ಮೂಲದ ಮತ್ತೊಂದು ಆಟೋಮೊಬೈಲ್ ತಯಾರಕ, ಕಿಯಾ ಬುಧವಾರದಂದು ಟ್ವೀಟ್ ಮಾಡಿದ್ದು “ಭಾರತದ ಹೊರಗಿರುವ ಕಿಯಾ ಸಂಸ್ಥೆಯ ಹ್ಯಾಂಡಲ್‌ಗಳು ಸ್ವತಂತ್ರ ಅಭಿವ್ಯಕ್ತಿಯಲ್ಲಿ ಸಂಸ್ಥೆಯ ಖಾತೆಗಳನ್ನು ಬಳಸಿಕೊಂಡು ಮಾಡಿರುವ ಹೇಳಿಕೆಯಾಗಿದೆ. ಅದು ಸಂಸ್ಥೆಯ ಅಭಿಪ್ರಾಯವಲ್ಲ. ಕಿಯಾ ಬ್ರ್ಯಾಂಡ್ ಗುರುತಿನ ಇಂತಹ ದುರುಪಯೋಗವನ್ನು ತಪ್ಪಿಸಲು ಕಠಿಣ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಇಂತಹ ಸಮಸ್ಯೆ ಮರುಕಳಿಸದಿರುವಂತೆ ತಡೆಯಲು ಪ್ರಕ್ರಿಯೆಗಳನ್ನು ಜಾರಿಗೆ ತಂದಿದ್ದೇವೆ” ಎಂದು ಹೇಳಿದೆ.

ದಕ್ಷಿಣ ಕೊರಿಯಾ ಮೂಲದ ಹ್ಯೂಂಡೈ ಮತ್ತು ಕಿಯಾ ಮೋಟಾರ್ಸ್ ಸಂಸ್ಥೆಗಳ ಪೋಸ್ಟ್‌ಗಳಿಗಾಗಿ ಆ ದೇಶದ ವಿದೇಶಾಂಗ ಸಚಿವ ಚುಂಗ್ ಇಯು ಯೋಂಗ್ ಅವರು ಭಾರತೀಯ ವಿದೇಶಾಂಗ ಸಚಿವ ಎಸ್ ಜೈಶಂಕರ್‌ರಿಗೆ ಕರೆ ಮಾಡಿ ಸ್ಪಷ್ಟನೆ ನೀಡಿದ್ದಾರೆ. ಸಾಮಾಜಿಕ ಮಾಧ್ಯಮಗಳ ಪೋಸ್ಟ್‌ಗಳಿಂದ ಭಾರತದ ಭಾವನೆಗಳಿಗೆ ಧಕ್ಕೆ ತಂದಿರುವುದಕ್ಕೆ ವಿಷಾದಿಸಿದ್ದಾರೆ ಮತ್ತು ಅಂತಹ ಪೋಸ್ಟ್‌ಗಳನ್ನು ಖಂಡಿಸುತ್ತೇವೆ ಎಂದು ದಕ್ಷಿಣ ಕೊರಿಯಾದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಭಾರತೀಯ ವಿದೇಶಾಂಗ ಸಚಿವಾಲಯದ ಅಧಿಕೃತ ವಕ್ತಾರ ಅರಿಂದಮ್ ಬಾಗ್ಚಿ, “ಕಾಶ್ಮೀರ ಒಗ್ಗಟ್ಟಿನ ದಿನ ಎಂದು ಕರೆಯಲ್ಪಡುವ ಸಾಮಾಜಿಕ ಮಾಧ್ಯಮ ಪೋಸ್ಟ್ ಅನ್ನು ಹ್ಯೂಂಡೈ ಸಂಸ್ಥೆಯ ಪಾಕಿಸ್ತಾನ ಘಟಕ ಮಾಡಿರುವುದನ್ನು ಗಮನಿಸಿದ್ದೇವೆ. 2022 ಫೆಬ್ರವರಿ 6ರ ಭಾನುವಾರದಂದು ಈ ಸಾಮಾಜಿಕ ಮಾಧ್ಯಮ ಪೋಸ್ಟ್ ಕಂಡ ತಕ್ಷಣ, ದಕ್ಷಿಣ ಕೊರಿಯಾ ರಾಜಧಾನಿ ಸಿಯೋಲ್‌ನಿಂದ ನಮ್ಮ ರಾಯಭಾರಿ ಹ್ಯೂಂಡೈ ಪ್ರಧಾನ ಕಚೇರಿಯನ್ನು ಸಂಪರ್ಕಿಸಿ ವಿವರಣೆ ಕೇಳಿದ್ದರು. ನಂತರ ಆಕ್ಷೇಪಾರ್ಹ ಪೋಸ್ಟ್ ತೆಗೆದುಹಾಕಲಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Hijab Live | ಹಿಜಾಬ್‌ ಲೈವ್‌ | ವಿಚಾರಣೆ ಸೋಮವಾರಕ್ಕೆ ಮುಂದೂಡಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...