Homeಮುಖಪುಟವಿವಾದಕ್ಕೆ ಎಡೆಮಾಡಿಕೊಟ್ಟ ವಿದೇಶಿ ಕಂಪನಿಗಳ ಸಾಮಾಜಿಕ ಜಾಲತಾಣಗಳ ಪೋಸ್ಟ್‌

ವಿವಾದಕ್ಕೆ ಎಡೆಮಾಡಿಕೊಟ್ಟ ವಿದೇಶಿ ಕಂಪನಿಗಳ ಸಾಮಾಜಿಕ ಜಾಲತಾಣಗಳ ಪೋಸ್ಟ್‌

- Advertisement -
- Advertisement -

ಜಮ್ಮು ಕಾಶ್ಮೀರ ವಿಚಾರದಲ್ಲಿ ಬಹು-ರಾಷ್ಟ್ರೀಯ ಸಂಸ್ಥೆಗಳ ಬ್ರಾಂಡ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೆ ಪ್ರಕಟಿಸುವುದು ಮತ್ತು ಕ್ಷಮೆಯಾಚಿಸುವುದು ಕಳೆದ ಕೆಲವು ದಿನಗಳಿಂದ ಸುದ್ದಿಯಲ್ಲಿದೆ. ಮಾರುತಿ ಸುಜುಕಿ, ಫಿಜ್ಜಾ, ಡೊಮಿನೋಸ್, ಕಿಯಾ, ಕೆಎಫ್‌ಸಿ, ಹೋಂಡಾ ಮತ್ತು ಹ್ಯೂಂಡೈ ಸೇರಿದಂತೆ ಬಹುತೇಕ ಸಂಸ್ಥೆಗಳು ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಗಳಲ್ಲಿ ಪ್ರಕಟವಾದ ವಿಚಾರಗಳಿಗೆ ಸಂಬಂಧಿಸಿ ಭಾರತದ ಬಳಿ ಕ್ಷಮೆಯಾಚಿಸಿವೆ.

ಸೋಮವಾರದಂದು ಕೆಎಫ್‌ಸಿ ಇಂಡಿಯಾ, “ದೇಶದ ಹೊರಗಿನ ಕೆಲವು ಕೆಎಫ್‌ಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟವಾದ ಪೋಸ್ಟ್‌ಗಳ ಬಗ್ಗೆ ತೀವ್ರವಾಗಿ ಕ್ಷಮೆಯಾಚಿಸುತ್ತೇವೆ” ಎಂದು ಟ್ವೀಟ್ ಮಾಡಿದೆ. ಕೆಎಫ್‌ಸಿ ತನ್ನ ಅಧಿಕೃತ ಫೇಸ್ಬುಕ್ ಖಾತೆಯಲ್ಲಿ ಕಾಶ್ಮೀರ ಒಗ್ಗಟ್ಟಿನ ದಿನವನ್ನು ಬೆಂಬಲಿಸಿ ಹಾಕಿದ ಸಂದೇಶವನ್ನು ಪೋಸ್ಟಿಗೆ ಸಾಮಾಜಿಕ ಮಾಧ್ಯಮದಲ್ಲಿ ಬಳಕೆದಾರರು ಖಂಡಿಸಿದ್ದರು.

ಇದನ್ನೂ ಓದಿ: ಹಿಜಾಬ್‌‌ಗಾಗಿ ದನಿಯೆತ್ತಿದ ವಿದ್ಯಾರ್ಥಿನಿಯರ ಫೋನ್‌‌ ನಂಬರ್‌, ವಿಳಾಸ ಲೀಕ್‌ ಮಾಡಿದ ಉಡುಪಿ ಕಾಲೇಜು!

ಪಾಕಿಸ್ತಾನದ ಹ್ಯೂಂಡೈ ಡೀಲರ್‌ನ ಟ್ವಿಟರ್ ಖಾತೆಯು, “ಸ್ವಾತಂತ್ರ್ಯಕ್ಕಾಗಿ ಹೋರಾಟ” ಎಂದು ಮಾಡಿದ ಪೋಸ್ಟ್ ವಿವಾದಕ್ಕೆ ಎಡೆಮಾಡಿದ ನಂತರ, ಹ್ಯೂಂಡೈ ಮೋಟಾರ್ಸ್ “ಕಾಶ್ಮೀರ ಸಂಬಂಧಿಸಿ ಸಂಸ್ಥೆಯ ಅಧಿಕೃತವಲ್ಲದ ಅಭಿಪ್ರಾಯ ಸಾಮಾಜಿಕ ಮಾಧ್ಯಮದ ಹೇಳಿಕೆಗಳಿಂದ ಭಾರತೀಯರ ಭಾವನೆಗಳಿಗೆ ಧಕ್ಕೆಯಾಗಿರುವುದಕ್ಕಾಗಿ ವಿಷಾದ ವ್ಯಕ್ತಪಡಿಸುತ್ತಿದ್ದೇವೆ ಮತ್ತು ಈ ಕ್ರಮವು ಸಂಸ್ಥೆಯ ಜಾಗತಿಕ ನೀತಿಗೆ ವಿರುದ್ಧವಾಗಿದೆ” ಎಂದು ಸ್ಪಷ್ಟನೆ ನೀಡಿದ್ದಾರೆ.

ಫೆಬ್ರವರಿ 6 ರಂದು ಹ್ಯೂಂಡೈ‌‌ ಕಂಪೆನಿಯ ಭಾರತದಲ್ಲಿನ ಅಂಗಸಂಸ್ಥೆ ಕೂಡ ಕ್ಷಮೆಯಾಚಿಸಿದೆ, “ಭಾರತವು ಹ್ಯೂಂಡೈ ಬ್ರಾಂಡ್‌ಗೆ ಎರಡನೇ ನೆಲೆಯಾಗಿದೆ. ಈ ವಿಚಾರಗಳ ಸಂವಹನದ ಬಗ್ಗೆ ನಾವು ಶೂನ್ಯ ಸಹಿಷ್ಣುತೆ ನೀತಿ ಹೊಂದಿದ್ದೇವೆ ಮತ್ತು ಅಂತಹ ಯಾವುದೇ ದೃಷ್ಟಿಕೋನವನ್ನು ಬಲವಾಗಿ ಖಂಡಿಸುತ್ತೇವೆ” ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

ಇದನ್ನು ಅನುಸರಿಸಿ ಕೆಎಫ್‌ಸಿ, ಡೊಮಿನೋಸ್ ಸಂಸ್ಥೆಯೂ ತನ್ನ ಪಾಕಿಸ್ತಾನಿ ಹ್ಯಾಂಡಲ್‌ನಿಂದ ಕಾಶ್ಮೀರ ಕುರಿತ ಸಂದೇಶಕ್ಕಾಗಿ ಕ್ಷಮೆಯಾಚವಿಸಿದೆ. ಟ್ವಿಟ್ಟರ್‌ನಲ್ಲಿ #boycottdominos ಟ್ರೆಂಡ್‌ ಆದ ನಂತರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಾಗಿ ಡೊಮಿನೋಸ್ ಕಂಪನಿ ಕ್ಷಮೆಯಾಚಿಸಿದೆ. “ಕಳೆದ 25 ವರ್ಷಗಳಿಂದ ಭಾರತ ನಮಗೆ ತವರು ದೇಶವೆನ್ನುವಷ್ಟು ಆಪ್ತವಾಗಿದೆ ಮತ್ತು ಅದರ ಪರಂಪರೆಯನ್ನು ಶಾಶ್ವತವಾಗಿ ರಕ್ಷಿಸಲು ನಾವು ಬದ್ಧರಾಗಿದ್ದೇವೆ” ಎಂದು ಅದು ಹೇಳಿದೆ.

ಇದನ್ನೂ ಓದಿ: ಯುಪಿ ಕೇರಳವಾದರೆ ಅತ್ಯುತ್ತಮ ಶಿಕ್ಷಣ, ಆರೋಗ್ಯ, ಜೀವನಮಟ್ಟ ಸಿಗಲಿದೆ: ಆದಿತ್ಯನಾಥ್‌ಗೆ ಪಿಣರಾಯಿ ತಿರುಗೇಟು

ಮತ್ತೊಂದು ಅಂತರಾಷ್ಟ್ರೀಯ ಕಂಪೆನಿ ಪಿಜ್ಜಾ, ಪಿಜ್ಜಾ ಹಟ್‌ನ ಪಾಕಿಸ್ತಾನಿ ಹ್ಯಾಂಡಲ್ ಇನ್‌ಸ್ಟಾಗ್ರಾಂನಲ್ಲಿ ಬುಧವಾರ ಇದೇ ರೀತಿಯ ಕಾಶ್ಮಿರ ಪರ ಸಂದೇಶವನ್ನು ಪೋಸ್ಟ್ ಮಾಡಿದೆ. ನಂತರ ಕಂಪನಿಯ ಅಧಿಕೃತ ಖಾತೆಯಲ್ಲಿ, “ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುವ ಇಂತಹ ಪೋಸ್ಟ್‌ಗಳನ್ನು ಕ್ಷಮಿಸಲಾಗುವುದಿಲ್ಲ, ಬೆಂಬಲಿಸುವುದಿಲ್ಲ ಅಥವಾ ಒಪ್ಪುವುದಿಲ್ಲ” ಎಂದು ಹೇಳಿದೆ.

ಮಾರುತಿ ಸುಜುಕಿ ಸಂಸ್ಥೆಯೂ ಸಾಮಾಜಿಕ ಜಾಲತಾಣದಲ್ಲಾದ ತಪ್ಪಿಗೆ ಇಂತಹುದೇ ಸ್ಪಷ್ಟನೆ ನೀಡಿದೆ. “ಕಾರ್ಪೊರೇಟ್ ನೀತಿಯಂತೆ, ನಾವು ಪ್ರಪಂಚದ ಯಾವುದೇ ಭಾಗದಲ್ಲಿ ಯಾವುದೇ ರಾಜಕೀಯ ಅಥವಾ ಧಾರ್ಮಿಕ ಒಲವುಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಈ ವಿಷಯಗಳ ಕುರಿತು ನಮ್ಮ ವಿತರಕರು ಅಥವಾ ವ್ಯಾಪಾರ ಸಹವರ್ತಿಗಳಿಂದ ಅಂತಹ ಸಂವಹನವು ನಮ್ಮ ಕಂಪನಿಯ ಸ್ಥಾನವನ್ನು ಪ್ರತಿನಿಧಿಸುವುದಿಲ್ಲ ಅಥವಾ ನಮ್ಮಿಂದ ಅಧಿಕೃತವಾಗಿಲ್ಲ” ಎಂದು ಟ್ವೀಟ್ ಮಾಡಿದೆ.

ಇದನ್ನೂ ಓದಿ: ಸನಾತನಾ ಸಂಸ್ಥೆಯ ವಿರೇಂದ್ರಸಿನ್ಹ ತಾವ್ಡೆ ಸಮಾಜಕ್ಕೆ ಅಪಾಯಕಾರಿ: ಜಾಮೀನು ನೀಡದಂತೆ ಸಿಬಿಐ ಒತ್ತಾಯ

ದಕ್ಷಿಣ ಕೊರಿಯಾ ಮೂಲದ ಮತ್ತೊಂದು ಆಟೋಮೊಬೈಲ್ ತಯಾರಕ, ಕಿಯಾ ಬುಧವಾರದಂದು ಟ್ವೀಟ್ ಮಾಡಿದ್ದು “ಭಾರತದ ಹೊರಗಿರುವ ಕಿಯಾ ಸಂಸ್ಥೆಯ ಹ್ಯಾಂಡಲ್‌ಗಳು ಸ್ವತಂತ್ರ ಅಭಿವ್ಯಕ್ತಿಯಲ್ಲಿ ಸಂಸ್ಥೆಯ ಖಾತೆಗಳನ್ನು ಬಳಸಿಕೊಂಡು ಮಾಡಿರುವ ಹೇಳಿಕೆಯಾಗಿದೆ. ಅದು ಸಂಸ್ಥೆಯ ಅಭಿಪ್ರಾಯವಲ್ಲ. ಕಿಯಾ ಬ್ರ್ಯಾಂಡ್ ಗುರುತಿನ ಇಂತಹ ದುರುಪಯೋಗವನ್ನು ತಪ್ಪಿಸಲು ಕಠಿಣ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಇಂತಹ ಸಮಸ್ಯೆ ಮರುಕಳಿಸದಿರುವಂತೆ ತಡೆಯಲು ಪ್ರಕ್ರಿಯೆಗಳನ್ನು ಜಾರಿಗೆ ತಂದಿದ್ದೇವೆ” ಎಂದು ಹೇಳಿದೆ.

ದಕ್ಷಿಣ ಕೊರಿಯಾ ಮೂಲದ ಹ್ಯೂಂಡೈ ಮತ್ತು ಕಿಯಾ ಮೋಟಾರ್ಸ್ ಸಂಸ್ಥೆಗಳ ಪೋಸ್ಟ್‌ಗಳಿಗಾಗಿ ಆ ದೇಶದ ವಿದೇಶಾಂಗ ಸಚಿವ ಚುಂಗ್ ಇಯು ಯೋಂಗ್ ಅವರು ಭಾರತೀಯ ವಿದೇಶಾಂಗ ಸಚಿವ ಎಸ್ ಜೈಶಂಕರ್‌ರಿಗೆ ಕರೆ ಮಾಡಿ ಸ್ಪಷ್ಟನೆ ನೀಡಿದ್ದಾರೆ. ಸಾಮಾಜಿಕ ಮಾಧ್ಯಮಗಳ ಪೋಸ್ಟ್‌ಗಳಿಂದ ಭಾರತದ ಭಾವನೆಗಳಿಗೆ ಧಕ್ಕೆ ತಂದಿರುವುದಕ್ಕೆ ವಿಷಾದಿಸಿದ್ದಾರೆ ಮತ್ತು ಅಂತಹ ಪೋಸ್ಟ್‌ಗಳನ್ನು ಖಂಡಿಸುತ್ತೇವೆ ಎಂದು ದಕ್ಷಿಣ ಕೊರಿಯಾದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಭಾರತೀಯ ವಿದೇಶಾಂಗ ಸಚಿವಾಲಯದ ಅಧಿಕೃತ ವಕ್ತಾರ ಅರಿಂದಮ್ ಬಾಗ್ಚಿ, “ಕಾಶ್ಮೀರ ಒಗ್ಗಟ್ಟಿನ ದಿನ ಎಂದು ಕರೆಯಲ್ಪಡುವ ಸಾಮಾಜಿಕ ಮಾಧ್ಯಮ ಪೋಸ್ಟ್ ಅನ್ನು ಹ್ಯೂಂಡೈ ಸಂಸ್ಥೆಯ ಪಾಕಿಸ್ತಾನ ಘಟಕ ಮಾಡಿರುವುದನ್ನು ಗಮನಿಸಿದ್ದೇವೆ. 2022 ಫೆಬ್ರವರಿ 6ರ ಭಾನುವಾರದಂದು ಈ ಸಾಮಾಜಿಕ ಮಾಧ್ಯಮ ಪೋಸ್ಟ್ ಕಂಡ ತಕ್ಷಣ, ದಕ್ಷಿಣ ಕೊರಿಯಾ ರಾಜಧಾನಿ ಸಿಯೋಲ್‌ನಿಂದ ನಮ್ಮ ರಾಯಭಾರಿ ಹ್ಯೂಂಡೈ ಪ್ರಧಾನ ಕಚೇರಿಯನ್ನು ಸಂಪರ್ಕಿಸಿ ವಿವರಣೆ ಕೇಳಿದ್ದರು. ನಂತರ ಆಕ್ಷೇಪಾರ್ಹ ಪೋಸ್ಟ್ ತೆಗೆದುಹಾಕಲಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Hijab Live | ಹಿಜಾಬ್‌ ಲೈವ್‌ | ವಿಚಾರಣೆ ಸೋಮವಾರಕ್ಕೆ ಮುಂದೂಡಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...