Homeಮುಖಪುಟವಿವಾದಕ್ಕೆ ಎಡೆಮಾಡಿಕೊಟ್ಟ ವಿದೇಶಿ ಕಂಪನಿಗಳ ಸಾಮಾಜಿಕ ಜಾಲತಾಣಗಳ ಪೋಸ್ಟ್‌

ವಿವಾದಕ್ಕೆ ಎಡೆಮಾಡಿಕೊಟ್ಟ ವಿದೇಶಿ ಕಂಪನಿಗಳ ಸಾಮಾಜಿಕ ಜಾಲತಾಣಗಳ ಪೋಸ್ಟ್‌

- Advertisement -
- Advertisement -

ಜಮ್ಮು ಕಾಶ್ಮೀರ ವಿಚಾರದಲ್ಲಿ ಬಹು-ರಾಷ್ಟ್ರೀಯ ಸಂಸ್ಥೆಗಳ ಬ್ರಾಂಡ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೆ ಪ್ರಕಟಿಸುವುದು ಮತ್ತು ಕ್ಷಮೆಯಾಚಿಸುವುದು ಕಳೆದ ಕೆಲವು ದಿನಗಳಿಂದ ಸುದ್ದಿಯಲ್ಲಿದೆ. ಮಾರುತಿ ಸುಜುಕಿ, ಫಿಜ್ಜಾ, ಡೊಮಿನೋಸ್, ಕಿಯಾ, ಕೆಎಫ್‌ಸಿ, ಹೋಂಡಾ ಮತ್ತು ಹ್ಯೂಂಡೈ ಸೇರಿದಂತೆ ಬಹುತೇಕ ಸಂಸ್ಥೆಗಳು ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಗಳಲ್ಲಿ ಪ್ರಕಟವಾದ ವಿಚಾರಗಳಿಗೆ ಸಂಬಂಧಿಸಿ ಭಾರತದ ಬಳಿ ಕ್ಷಮೆಯಾಚಿಸಿವೆ.

ಸೋಮವಾರದಂದು ಕೆಎಫ್‌ಸಿ ಇಂಡಿಯಾ, “ದೇಶದ ಹೊರಗಿನ ಕೆಲವು ಕೆಎಫ್‌ಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟವಾದ ಪೋಸ್ಟ್‌ಗಳ ಬಗ್ಗೆ ತೀವ್ರವಾಗಿ ಕ್ಷಮೆಯಾಚಿಸುತ್ತೇವೆ” ಎಂದು ಟ್ವೀಟ್ ಮಾಡಿದೆ. ಕೆಎಫ್‌ಸಿ ತನ್ನ ಅಧಿಕೃತ ಫೇಸ್ಬುಕ್ ಖಾತೆಯಲ್ಲಿ ಕಾಶ್ಮೀರ ಒಗ್ಗಟ್ಟಿನ ದಿನವನ್ನು ಬೆಂಬಲಿಸಿ ಹಾಕಿದ ಸಂದೇಶವನ್ನು ಪೋಸ್ಟಿಗೆ ಸಾಮಾಜಿಕ ಮಾಧ್ಯಮದಲ್ಲಿ ಬಳಕೆದಾರರು ಖಂಡಿಸಿದ್ದರು.

ಇದನ್ನೂ ಓದಿ: ಹಿಜಾಬ್‌‌ಗಾಗಿ ದನಿಯೆತ್ತಿದ ವಿದ್ಯಾರ್ಥಿನಿಯರ ಫೋನ್‌‌ ನಂಬರ್‌, ವಿಳಾಸ ಲೀಕ್‌ ಮಾಡಿದ ಉಡುಪಿ ಕಾಲೇಜು!

ಪಾಕಿಸ್ತಾನದ ಹ್ಯೂಂಡೈ ಡೀಲರ್‌ನ ಟ್ವಿಟರ್ ಖಾತೆಯು, “ಸ್ವಾತಂತ್ರ್ಯಕ್ಕಾಗಿ ಹೋರಾಟ” ಎಂದು ಮಾಡಿದ ಪೋಸ್ಟ್ ವಿವಾದಕ್ಕೆ ಎಡೆಮಾಡಿದ ನಂತರ, ಹ್ಯೂಂಡೈ ಮೋಟಾರ್ಸ್ “ಕಾಶ್ಮೀರ ಸಂಬಂಧಿಸಿ ಸಂಸ್ಥೆಯ ಅಧಿಕೃತವಲ್ಲದ ಅಭಿಪ್ರಾಯ ಸಾಮಾಜಿಕ ಮಾಧ್ಯಮದ ಹೇಳಿಕೆಗಳಿಂದ ಭಾರತೀಯರ ಭಾವನೆಗಳಿಗೆ ಧಕ್ಕೆಯಾಗಿರುವುದಕ್ಕಾಗಿ ವಿಷಾದ ವ್ಯಕ್ತಪಡಿಸುತ್ತಿದ್ದೇವೆ ಮತ್ತು ಈ ಕ್ರಮವು ಸಂಸ್ಥೆಯ ಜಾಗತಿಕ ನೀತಿಗೆ ವಿರುದ್ಧವಾಗಿದೆ” ಎಂದು ಸ್ಪಷ್ಟನೆ ನೀಡಿದ್ದಾರೆ.

ಫೆಬ್ರವರಿ 6 ರಂದು ಹ್ಯೂಂಡೈ‌‌ ಕಂಪೆನಿಯ ಭಾರತದಲ್ಲಿನ ಅಂಗಸಂಸ್ಥೆ ಕೂಡ ಕ್ಷಮೆಯಾಚಿಸಿದೆ, “ಭಾರತವು ಹ್ಯೂಂಡೈ ಬ್ರಾಂಡ್‌ಗೆ ಎರಡನೇ ನೆಲೆಯಾಗಿದೆ. ಈ ವಿಚಾರಗಳ ಸಂವಹನದ ಬಗ್ಗೆ ನಾವು ಶೂನ್ಯ ಸಹಿಷ್ಣುತೆ ನೀತಿ ಹೊಂದಿದ್ದೇವೆ ಮತ್ತು ಅಂತಹ ಯಾವುದೇ ದೃಷ್ಟಿಕೋನವನ್ನು ಬಲವಾಗಿ ಖಂಡಿಸುತ್ತೇವೆ” ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

ಇದನ್ನು ಅನುಸರಿಸಿ ಕೆಎಫ್‌ಸಿ, ಡೊಮಿನೋಸ್ ಸಂಸ್ಥೆಯೂ ತನ್ನ ಪಾಕಿಸ್ತಾನಿ ಹ್ಯಾಂಡಲ್‌ನಿಂದ ಕಾಶ್ಮೀರ ಕುರಿತ ಸಂದೇಶಕ್ಕಾಗಿ ಕ್ಷಮೆಯಾಚವಿಸಿದೆ. ಟ್ವಿಟ್ಟರ್‌ನಲ್ಲಿ #boycottdominos ಟ್ರೆಂಡ್‌ ಆದ ನಂತರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಾಗಿ ಡೊಮಿನೋಸ್ ಕಂಪನಿ ಕ್ಷಮೆಯಾಚಿಸಿದೆ. “ಕಳೆದ 25 ವರ್ಷಗಳಿಂದ ಭಾರತ ನಮಗೆ ತವರು ದೇಶವೆನ್ನುವಷ್ಟು ಆಪ್ತವಾಗಿದೆ ಮತ್ತು ಅದರ ಪರಂಪರೆಯನ್ನು ಶಾಶ್ವತವಾಗಿ ರಕ್ಷಿಸಲು ನಾವು ಬದ್ಧರಾಗಿದ್ದೇವೆ” ಎಂದು ಅದು ಹೇಳಿದೆ.

ಇದನ್ನೂ ಓದಿ: ಯುಪಿ ಕೇರಳವಾದರೆ ಅತ್ಯುತ್ತಮ ಶಿಕ್ಷಣ, ಆರೋಗ್ಯ, ಜೀವನಮಟ್ಟ ಸಿಗಲಿದೆ: ಆದಿತ್ಯನಾಥ್‌ಗೆ ಪಿಣರಾಯಿ ತಿರುಗೇಟು

ಮತ್ತೊಂದು ಅಂತರಾಷ್ಟ್ರೀಯ ಕಂಪೆನಿ ಪಿಜ್ಜಾ, ಪಿಜ್ಜಾ ಹಟ್‌ನ ಪಾಕಿಸ್ತಾನಿ ಹ್ಯಾಂಡಲ್ ಇನ್‌ಸ್ಟಾಗ್ರಾಂನಲ್ಲಿ ಬುಧವಾರ ಇದೇ ರೀತಿಯ ಕಾಶ್ಮಿರ ಪರ ಸಂದೇಶವನ್ನು ಪೋಸ್ಟ್ ಮಾಡಿದೆ. ನಂತರ ಕಂಪನಿಯ ಅಧಿಕೃತ ಖಾತೆಯಲ್ಲಿ, “ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುವ ಇಂತಹ ಪೋಸ್ಟ್‌ಗಳನ್ನು ಕ್ಷಮಿಸಲಾಗುವುದಿಲ್ಲ, ಬೆಂಬಲಿಸುವುದಿಲ್ಲ ಅಥವಾ ಒಪ್ಪುವುದಿಲ್ಲ” ಎಂದು ಹೇಳಿದೆ.

ಮಾರುತಿ ಸುಜುಕಿ ಸಂಸ್ಥೆಯೂ ಸಾಮಾಜಿಕ ಜಾಲತಾಣದಲ್ಲಾದ ತಪ್ಪಿಗೆ ಇಂತಹುದೇ ಸ್ಪಷ್ಟನೆ ನೀಡಿದೆ. “ಕಾರ್ಪೊರೇಟ್ ನೀತಿಯಂತೆ, ನಾವು ಪ್ರಪಂಚದ ಯಾವುದೇ ಭಾಗದಲ್ಲಿ ಯಾವುದೇ ರಾಜಕೀಯ ಅಥವಾ ಧಾರ್ಮಿಕ ಒಲವುಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಈ ವಿಷಯಗಳ ಕುರಿತು ನಮ್ಮ ವಿತರಕರು ಅಥವಾ ವ್ಯಾಪಾರ ಸಹವರ್ತಿಗಳಿಂದ ಅಂತಹ ಸಂವಹನವು ನಮ್ಮ ಕಂಪನಿಯ ಸ್ಥಾನವನ್ನು ಪ್ರತಿನಿಧಿಸುವುದಿಲ್ಲ ಅಥವಾ ನಮ್ಮಿಂದ ಅಧಿಕೃತವಾಗಿಲ್ಲ” ಎಂದು ಟ್ವೀಟ್ ಮಾಡಿದೆ.

ಇದನ್ನೂ ಓದಿ: ಸನಾತನಾ ಸಂಸ್ಥೆಯ ವಿರೇಂದ್ರಸಿನ್ಹ ತಾವ್ಡೆ ಸಮಾಜಕ್ಕೆ ಅಪಾಯಕಾರಿ: ಜಾಮೀನು ನೀಡದಂತೆ ಸಿಬಿಐ ಒತ್ತಾಯ

ದಕ್ಷಿಣ ಕೊರಿಯಾ ಮೂಲದ ಮತ್ತೊಂದು ಆಟೋಮೊಬೈಲ್ ತಯಾರಕ, ಕಿಯಾ ಬುಧವಾರದಂದು ಟ್ವೀಟ್ ಮಾಡಿದ್ದು “ಭಾರತದ ಹೊರಗಿರುವ ಕಿಯಾ ಸಂಸ್ಥೆಯ ಹ್ಯಾಂಡಲ್‌ಗಳು ಸ್ವತಂತ್ರ ಅಭಿವ್ಯಕ್ತಿಯಲ್ಲಿ ಸಂಸ್ಥೆಯ ಖಾತೆಗಳನ್ನು ಬಳಸಿಕೊಂಡು ಮಾಡಿರುವ ಹೇಳಿಕೆಯಾಗಿದೆ. ಅದು ಸಂಸ್ಥೆಯ ಅಭಿಪ್ರಾಯವಲ್ಲ. ಕಿಯಾ ಬ್ರ್ಯಾಂಡ್ ಗುರುತಿನ ಇಂತಹ ದುರುಪಯೋಗವನ್ನು ತಪ್ಪಿಸಲು ಕಠಿಣ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಇಂತಹ ಸಮಸ್ಯೆ ಮರುಕಳಿಸದಿರುವಂತೆ ತಡೆಯಲು ಪ್ರಕ್ರಿಯೆಗಳನ್ನು ಜಾರಿಗೆ ತಂದಿದ್ದೇವೆ” ಎಂದು ಹೇಳಿದೆ.

ದಕ್ಷಿಣ ಕೊರಿಯಾ ಮೂಲದ ಹ್ಯೂಂಡೈ ಮತ್ತು ಕಿಯಾ ಮೋಟಾರ್ಸ್ ಸಂಸ್ಥೆಗಳ ಪೋಸ್ಟ್‌ಗಳಿಗಾಗಿ ಆ ದೇಶದ ವಿದೇಶಾಂಗ ಸಚಿವ ಚುಂಗ್ ಇಯು ಯೋಂಗ್ ಅವರು ಭಾರತೀಯ ವಿದೇಶಾಂಗ ಸಚಿವ ಎಸ್ ಜೈಶಂಕರ್‌ರಿಗೆ ಕರೆ ಮಾಡಿ ಸ್ಪಷ್ಟನೆ ನೀಡಿದ್ದಾರೆ. ಸಾಮಾಜಿಕ ಮಾಧ್ಯಮಗಳ ಪೋಸ್ಟ್‌ಗಳಿಂದ ಭಾರತದ ಭಾವನೆಗಳಿಗೆ ಧಕ್ಕೆ ತಂದಿರುವುದಕ್ಕೆ ವಿಷಾದಿಸಿದ್ದಾರೆ ಮತ್ತು ಅಂತಹ ಪೋಸ್ಟ್‌ಗಳನ್ನು ಖಂಡಿಸುತ್ತೇವೆ ಎಂದು ದಕ್ಷಿಣ ಕೊರಿಯಾದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಭಾರತೀಯ ವಿದೇಶಾಂಗ ಸಚಿವಾಲಯದ ಅಧಿಕೃತ ವಕ್ತಾರ ಅರಿಂದಮ್ ಬಾಗ್ಚಿ, “ಕಾಶ್ಮೀರ ಒಗ್ಗಟ್ಟಿನ ದಿನ ಎಂದು ಕರೆಯಲ್ಪಡುವ ಸಾಮಾಜಿಕ ಮಾಧ್ಯಮ ಪೋಸ್ಟ್ ಅನ್ನು ಹ್ಯೂಂಡೈ ಸಂಸ್ಥೆಯ ಪಾಕಿಸ್ತಾನ ಘಟಕ ಮಾಡಿರುವುದನ್ನು ಗಮನಿಸಿದ್ದೇವೆ. 2022 ಫೆಬ್ರವರಿ 6ರ ಭಾನುವಾರದಂದು ಈ ಸಾಮಾಜಿಕ ಮಾಧ್ಯಮ ಪೋಸ್ಟ್ ಕಂಡ ತಕ್ಷಣ, ದಕ್ಷಿಣ ಕೊರಿಯಾ ರಾಜಧಾನಿ ಸಿಯೋಲ್‌ನಿಂದ ನಮ್ಮ ರಾಯಭಾರಿ ಹ್ಯೂಂಡೈ ಪ್ರಧಾನ ಕಚೇರಿಯನ್ನು ಸಂಪರ್ಕಿಸಿ ವಿವರಣೆ ಕೇಳಿದ್ದರು. ನಂತರ ಆಕ್ಷೇಪಾರ್ಹ ಪೋಸ್ಟ್ ತೆಗೆದುಹಾಕಲಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Hijab Live | ಹಿಜಾಬ್‌ ಲೈವ್‌ | ವಿಚಾರಣೆ ಸೋಮವಾರಕ್ಕೆ ಮುಂದೂಡಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...