Homeಮುಖಪುಟ65 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಅಂಚೆ ಮತದಾನ: ಸಿಪಿಐ ವಿರೋಧ

65 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಅಂಚೆ ಮತದಾನ: ಸಿಪಿಐ ವಿರೋಧ

ಭಾರತ ಕಮ್ಯೂನಿಷ್ಟ್ ಪಕ್ಷವೂ ಕಾಂಗ್ರೆಸ್, ಸಿಪಿಐ(ಎಂ) ಮತ್ತು ಟಿಎಂಸಿಯ ಬೆಂಬಲದೊಂದಿಗೆ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದಿದೆ.

- Advertisement -
- Advertisement -

65 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಅಂಚೆ ಮತದಾನಕ್ಕೆ ಅವಕಾಶ ನೀಡುವ ಚುನಾವಣಾ ಆಯೋಗದ ನಿರ್ಧಾರವನ್ನು ಭಾರತ ಕಮ್ಯೂನಿಷ್ಟ್ ಪಕ್ಷವೂ ಕಾಂಗ್ರೆಸ್, ಸಿಪಿಐ(ಎಂ) ಮತ್ತು ಟಿಎಂಸಿಯ ಬೆಂಬಲದೊಂದಿಗೆ ಮುಖ್ಯ ಚುನಾವಣಾಧಿಕಾರಿ ಸುನಿಲ್ ಅರೋರಾ ಅವರಿಗೆ ಪತ್ರ ಬರೆದು ತಮ್ಮ ಪ್ರತಿಭಟನೆಯನ್ನು ದಾಖಲಿಸಿದೆ.

ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ ರಾಜಾ ಬಿಹಾರದಲ್ಲಿ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಚುನಾವಣಾ ಆಯೋಗ ಮಾಡಿದ ಈ ನಿರ್ಧಾರವು ಮುಕ್ತ ಮತ್ತು ನ್ಯಾಯಯುತ ಚುನಾವಣೆಯ ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಅಪಾಯಕ್ಕೆ ತಳ್ಳುತ್ತದೆ ಎಂದು ಆರೋಪಿಸಿದರು.

ಮುಖ್ಯ ಚುನಾವಣಾ ಆಯುಕ್ತರಿಗೆ ಬರೆದ ಪತ್ರದಲ್ಲಿ, ಚುನಾವಣಾ ಪ್ರಚಾರದ ಸಮಯದಲ್ಲಿ ಡಿಜಿಟಲ್ ಪ್ರಚಾರ ಮತ್ತು 65 ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಅಂಚೆ ಮತಪತ್ರದ ಅವಕಾಶದ ಬಗ್ಗೆ ವ್ಯಾಪಕ ಮತ್ತು ಪಾರದರ್ಶಕ ಸಮಾಲೋಚನೆ ನಡೆಸಬೇಕೆಂದು ರಾಜಾ ಒತ್ತಾಯಿಸಿದರು.

ಈ ಎರಡು ಪ್ರಸ್ತಾಪಗಳನ್ನು ಒಪ್ಪಿಕೊಂಡರೆ ಖಂಡಿತವಾಗಿಯೂ ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳ ಪ್ರಕ್ರಿಯೆಯನ್ನು ಹಾಗೂ ಪ್ರಜಾಪ್ರಭುತ್ವವನ್ನು ಅಪಾಯಕ್ಕೆ ತಳ್ಳುತ್ತದೆ. ನಮ್ಮ ವ್ಯವಸ್ಥೆಯ ಮೇಲೆ ಹಾನಿಕಾರಕ ಪರಿಣಾಮ ಬೀರುವ ಈ ಪ್ರಸ್ತಾಪಗಳನ್ನು ಕಾರ್ಯಗತಗೊಳಿಸಲು ಏಕಪಕ್ಷೀಯವಾಗಿ ಮುಂದುವರಿಯದಂತೆ ನಮ್ಮ ಪಕ್ಷ ಭಾರತೀಯ ಚುನಾವಣಾ ಆಯೋಗಕ್ಕೆ ಒತ್ತಾಯಿಸುತ್ತದೆ ಎಂದು ರಾಜಾ ಹೇಳಿದರು.

ಆದ್ದರಿಂದ, ಎಲ್ಲಾ ರಾಜಕೀಯ ಪಕ್ಷಗಳೊಂದಿಗೆ ವ್ಯಾಪಕ ಮತ್ತು ಪಾರದರ್ಶಕ ಸಮಾಲೋಚನೆಗಳನ್ನು ಪ್ರಾರಂಭಿಸಲು ನಮ್ಮ ಪಕ್ಷದ ಪರವಾಗಿ ನಾನು ನಿಮ್ಮನ್ನು ವಿನಂತಿಸುತ್ತೇನೆ. ರಾಷ್ಟ್ರದ ಹಿತಾಸಕ್ತಿಗಳು ಮತ್ತು ಅದರ ಭವಿಷ್ಯದ ಬಗ್ಗೆ ನಮ್ಮ ಅಭಿಪ್ರಾಯಗಳಿಗೆ ನೀವು ಸಕಾರಾತ್ಮಕ ಗಮನ ನೀಡುತ್ತೀರಿ ಎಂದು ನಾನು ಪ್ರಾಮಾಣಿಕವಾಗಿ ಭಾವಿಸುತ್ತೇನೆ ಎಂದು ಅವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಚುನಾವಣಾ ಪ್ರಚಾರದ ಸಮಯದಲ್ಲಿ ಡಿಜಿಟಲ್ ಪ್ರಚಾರವು ಅತ್ಯಂತ ದುಬಾರಿಯಾಗಲಿದೆ ಅವರು ಹೇಳಿದರು.

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕೂಡ ಈ ಕ್ರಮವು ಅನಿಯಂತ್ರಿತ, ಅಸಂವಿಧಾನಿಕ, ಮತದಾನದ ಗೌಪ್ಯತೆಯ ಉಲ್ಲಂಘನೆ ಎಂದು ಹೇಳಿದೆ.

ರಾಜಕೀಯ ಪಕ್ಷಗಳೊಂದಿಗೆ ಸಮರ್ಪಕ ಸಮಾಲೋಚನೆ ಇಲ್ಲದೆ ಹೊರಡಿಸಲಾದ ಈ ತಿದ್ದುಪಡಿಯು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ ಎಂದು ನಮ್ಮ ಪಕ್ಷ ಅಭಿಪ್ರಾಯಪಟ್ಟಿದೆ ಎಂದು ಪಕ್ಷವು ತನ್ನ ಪತ್ರದಲ್ಲಿ ತಿಳಿಸಿದೆ.

ರಾಜಕೀಯ ಪಕ್ಷಗಳನ್ನು ಸಂಪರ್ಕಿಸದೆ ಈ ಕ್ರಮ ಕೈಗೊಳ್ಳಲಾಗಿದೆ ಎಂಬ ಸಿಪಿಐ (ಎಂ) ಟೀಕೆಗೆ ಪ್ರತಿಕ್ರಿಯೆಯಾಗಿ, ಇದು ಸಾಂಕ್ರಾಮಿಕ ರೋಗದಿಂದ ಉಂಟಾದ ಅಸಾಧಾರಣ ಪರಿಸ್ಥಿತಿ ಮತ್ತು ಜನರು ವೈರಸ್‌ಗೆ ಒಡ್ಡಿಕೊಳ್ಳುವುದನ್ನು ಕಡಿಮೆ ಮಾಡುವುದು ಕಡ್ಡಾಯವಾಗಿದೆ ಎಂದು ಆಯೋಗ ಹೇಳಿದೆ. ಇದು ಅವರ ಮತದಾನದ ಹಕ್ಕನ್ನು ಕಸಿದುಕೊಳ್ಳುವುದಿಲ್ಲ ಎಂದು ತಿಳಿಸಿದೆ.

ಮತದಾನದ ನಿರ್ಧಾರ ತೆಗೆದುಕೊಳ್ಳುವ ಮೊದಲು ಬಿಹಾರದಲ್ಲಿ ರಾಜಕೀಯ ಪಕ್ಷಗಳೊಂದಿಗೆ ಸಭೆ ನಡೆಸಲಾಗಿದೆ ಎಂದು ಅದು ಸ್ಪಷ್ಟಪಡಿಸಿದೆ.

ಅಂಚೆ ಮತದಾನದ ಸೌಲಭ್ಯವನ್ನು 65 ವರ್ಷಕ್ಕಿಂತ ಮೇಲ್ಪಟ್ಟ ಮತದಾರರಿಗೆ ಮತ್ತು ವೈರಲ್ ಸೋಂಕಿನಿಂದ ಬಳಲುತ್ತಿರುವವರಿಗೆ ವಿಸ್ತರಿಸಲು ಕೇಂದ್ರವು ಇತ್ತೀಚೆಗೆ ಚುನಾವಣಾ ನಿಯಮಗಳಲ್ಲಿ ತಿದ್ದುಪಡಿಗಳನ್ನು ತಿಳಿಸಿತ್ತು.

ಕಾನೂನು ಮತ್ತು ನ್ಯಾಯ ಸಚಿವಾಲಯವು ಚುನಾವಣಾ ನಿಯಮಗಳ ನಡವಳಿಕೆಗೆ ತಿದ್ದುಪಡಿ ಸೂಚಿಸಿದ್ದು, ಇದು ಬಿಹಾರದಲ್ಲಿ ಮುಂಬರುವ 2020 ರ ವಿಧಾನಸಭಾ ಚುನಾವಣೆಯಲ್ಲಿ ಅಂಚೆ ಮತದಾನ ಸೌಲಭ್ಯವನ್ನು ವಿಸ್ತರಿಸುವಂತೆ ಮಾಡುತ್ತದೆ.


ಇದನ್ನೂ ಓದಿ: ಚುನಾವಣಾ ಆಯೋಗವೆಂಬ ಬಿಜೆಪಿ ಕಚೇರಿ…


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...