Homeನಿಜವೋ ಸುಳ್ಳೋಮುಖ್ಯಮಂತ್ರಿಗಳ ಎಚ್ಚರಿಕೆಯ ನಂತರವೂ ಸುಳ್ಳು ಸುದ್ದಿ ಹರಡುತ್ತಿರುವ ಪೋಸ್ಟ್‌ ಕಾರ್ಡ್‌ ಕನ್ನಡ: ಕ್ರಮ ಯಾವಾಗ?

ಮುಖ್ಯಮಂತ್ರಿಗಳ ಎಚ್ಚರಿಕೆಯ ನಂತರವೂ ಸುಳ್ಳು ಸುದ್ದಿ ಹರಡುತ್ತಿರುವ ಪೋಸ್ಟ್‌ ಕಾರ್ಡ್‌ ಕನ್ನಡ: ಕ್ರಮ ಯಾವಾಗ?

ತನ್ನ ಫೇಸ್‌ಬುಕ್‌ ಪೇಜ್‌ನಲ್ಲಿ ಮುಸ್ಲಿಮರ ವಿರುದ್ಧವಾಗಿ, ಮೋದಿಯವರ ಪರವಾಗಿ ಹಸಿ ಸುಳ್ಳುಗಳನ್ನು ಹರಡುವುದನ್ನು ಹೆಚ್ಚು ಮಾಡಿದೆ. ಈ ವಾರ ಅದು ಹರಡಿದ ಸುಳ್ಳುಗಳು ಮತ್ತು ಅವುಗಳ ಅಸಲಿಯತ್ತನ್ನು ನೋಡೋಣ ಬನ್ನಿ.

- Advertisement -
- Advertisement -

ಇಂದು ವಿಶ್ವಕ್ಕೆ ಕೊರೊನಾ ಹಬ್ಬಿದೆ. ಅದರ ವಿರುದ್ಧ ಹೋರಾಟ ನಡೆಯುತ್ತಿದೆ. ಆದರೆ ಬಹುತೇಕರು ಇಂದು ಹೇಳುತ್ತಿರುವುದೇನೆಂದರೆ “ಕೊರೊನಾ ತಡೆಯಬಹುದು. ಅದು ಒಂದಲ್ಲ ಒಂದು ದಿನ ನಾಶವಾಗುತ್ತದೆ. ಆದರೆ ಸುಳ್ಳು ಸುದ್ದಿಗಳನ್ನು ತಡೆಯಲಾಗದು” ಎಂಬುದಾಗಿದೆ. ಅಷ್ಟು ಬೃಹತ್‌ ಮಟ್ಟಕ್ಕೆ ಸುಳ್ಳು ಸುದ್ದಿ  ಬೆಳೆದುನಿಂತಿದೆ.

ಕೊರೊನಾ ವೈರಸ್‌ ರೀತಿ ಇನ್ನೊಂದು ವೈರಸ್‌ ಬೆಳೆದುನಿಂತಿದ್ದು ಸಮಾಜಕ್ಕೆ ಮಾರಕವಾಗಿದೆ. ಅದೇ ಕೋಮುದ್ವೇಷ ಮತ್ತು ಸುಳ್ಳು ಸುದ್ದಿಗಳಾಗಿವೆ. ಕೊರೊನಾ ಸಂಕಷ್ಟದಿಂದ ನಾವು ಮಹಾರಾಷ್ಟ್ರವನ್ನು ಕಾಪಾಡುತ್ತೇವೆ. ಆದರೆ ಸುಳ್ಳು ಸುದ್ದಿ ಹರಡುವವರನ್ನು ನಮ್ಮ ಸರ್ಕಾರ ಸುಮ್ಮನೆ ಬಿಡುವುದಿಲ್ಲ. ತಮಾಷೆಗಾದರೂ ಸುಳ್ಳು ಸುದ್ದಿ ಹಬ್ಬಿಸಬೇಡಿ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಕಿಡಿಕಾರಿದ್ದಾರೆ. ಈ ಕುರಿತು ಸಾಲು ಸಾಲು ಟ್ವೀಟ್‌ಗಳನ್ನು ಮಾಡಿದ್ದಾರೆ.

ಇನ್ನು ಕರ್ನಾಟಕದಲ್ಲಿ ಬಹುತೇಕ ಮುಖ್ಯವಾಹಿನಿ ಮಾಧ್ಯಮಗಳು ಕೊರೊನಾ ಬಂದಿರುವುದು ಮುಸ್ಲಿಮರಿಂದ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಸಂದರ್ಶನ ಮಾಡಿದ ಕನ್ನಡ ಎರಡು ಚಾನೆಲ್‌ಗಳು ಮುಸ್ಲಿಮರ ವಿರುದ್ಧ ಪ್ರಶ್ನೆ ಕೇಳಿದಾಗ ಯಡಿಯೂರಪ್ಪನವರು ಒಂದು ಕೋಮಿನ ವಿರುದ್ಧ ಮಾತಾಡಿದರೆ ಕ್ರಮ ಖಚಿತ ಎಂದು ಎಚ್ಚರಿಕೆ ನೀಡಿದ್ದಾರೆ.


ಇದನ್ನೂ ಓದಿ: ಯಾರೂ ಸಹ ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳ ಮೇಲೆ ಒಂದು ಶಬ್ಧ ಮಾತಾಡಕೂಡದು: ಯಡಿಯೂರಪ್ಪ


ಇಷ್ಟೆಲ್ಲ ಆದ ಮೇಲೂ ಸಹ ಕನ್ನಡದ ಫೇಕ್‌ ನ್ಯೂಸ್‌ ವೆಬ್‌ಸೈಟ್‌ ಎಂದೇ ಕುಖ್ಯಾತಿಯಾದ ಪೋಸ್ಟ್‌ಕಾರ್ಡ್‌ ಕನ್ನಡ ಮಾತ್ರ ತನ್ನ ಫೇಸ್‌ಬುಕ್‌ ಪೇಜ್‌ನಲ್ಲಿ ಮುಸ್ಲಿಮರ ವಿರುದ್ಧವಾಗಿ, ಮೋದಿಯವರ ಪರವಾಗಿ ಹಸಿ ಸುಳ್ಳುಗಳನ್ನು ಹರಡುವುದನ್ನು ಹೆಚ್ಚು ಮಾಡಿದೆ. ಈ ವಾರ ಅದು ಹರಡಿದ ಸುಳ್ಳುಗಳು ಮತ್ತು ಅವುಗಳ ಅಸಲಿಯತ್ತನ್ನು ನೋಡೋಣ ಬನ್ನಿ.

ಸುಳ್ಳು 1 : ಕೊರೊನಾ ಸೋಂಕಿತ ತಬ್ಲಿಘಿಗಳು ಬೆತ್ತಲು ಓಡಾಡಿದರು.  

ಉತ್ತರ ಪ್ರದೇಶದ ಗಾಜಿಯಾಬಾದ್, ಕಾನ್ಪುರ ಮೊದಲಾದೆಡೆ ಕ್ವಾರಂಟೈನ್‌ನಲ್ಲಿ ಬೆತ್ತಲೆ ಓಡಾಡಿದ ತಬ್ಲಿಘಿಗಳ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಯೋಗಿ ಆದಿತ್ಯನಾಥ್‌ರಂಥಾ ಖಡಕ್‌ ಮುಖ್ಯಮಂತ್ರಿ ಇದ್ದರೆ ಕೊರೋನಾ ನಿರ್ಮೂಲನೆ ಖಂಡಿತಾ ಸಾಧ್ಯ.

ಸತ್ಯ: ತಬ್ಲಿಘಿಗಳು ಬೆತ್ತಲೆ ಓಡಾಡಿದ್ದರೆ ಎಂದು ಮಾಧ್ಯಮಗಳು ತೋರಿಸಿದ ಆ ವಿಡಿಯೋ ಪಾಕಿಸ್ತಾನದ ಕರಾಚಿಯ ಮಸೀದಿಯೊಂದರಲ್ಲಿ ನಡೆದ ಘಟನೆಯಾಗಿದ್ದು ಈ ವಿಡಿಯೋವನ್ನು ಮೊದಲ ಬಾರಿಗೆ ಆಗಸ್ಟ್ 23, 2019ರಂದು ಯೂಟ್ಯೂಬ್‌ನಲ್ಲಿ ಪೋಸ್ಟ್ ಮಾಡಲಾಗಿದೆ. ಆ ವಿಡಿಯೋದಲ್ಲಿರುವ ವ್ಯಕ್ತಿ ಕರಾಚಿಯ ಪೋಲಿಸ್ ಕಮ್ಯಾಂಡೊ ಒಬ್ಬರ ಮಗನಾಗಿದ್ದು, ಆತನ ಹೆಸರು ಶಾಫಿಕ್ ಅಬ್ರೊ. ಆತ ಮನೋವೈಕಲ್ಯದಿಂದ ಬಳಲುತ್ತಿದ್ದು ಈ ಘಟನೆಯ ನಂತರ ಪೋಲಿಸರು ದಸ್ತಗಿರಿ ಮಾಡಿದ್ದರು ಎಂದು ಹಲವು ಫ್ಯಾಕ್ಟ್‌ ಚೆಕ್‌ ವೆಬ್‌ಸೈಟ್‌ಗಳು ವರದಿ ಮಾಡಿವೆ.

ಯೂಟ್ಯೂಬ್‌ನಲ್ಲಿ ವಿಡಿಯೋ. ದಿನಾಂಕ ಗಮನಿಸಿ

ವಿಡಿಯೋದಲ್ಲಿ ಚಿತ್ರತವಾಗಿರುವ ಮಸೀದಿಯ ಕರಾಚಿಯದ್ದು ಎಂಬುದಕ್ಕೆ ಮತ್ತೊಂದು ಸಾಕ್ಷಿ ಇಲ್ಲಿದೆ ನೋಡಿ.

ಸುಳ್ಳು 2: ಅಮೆರಿಕ ಭಾರತಕ್ಕೆ ಶರಣಾಗಿ ಸಹಾಯ ಕೇಳುತ್ತಿದೆ. ಭಾರತ ಮೂರು ಷರತ್ತುಗಳನ್ನು ಮುಂದಿಟ್ಟಿದೆ

ಅಂದು ಬಾರ್ಡ‌ರ್‌ನಲ್ಲಿ ಗುಂಡು ಹೊಡಿಯೋಕೂ ಅಮೆರಿಕಾ ಅಪ್ಪಣೆ ಕೇಳುತ್ತಿದ್ದ ನಾವು, ಇಂದು ಅಮೆರಿಕಾನೇ ಬಂದು ನಮ್ಮ ಸಹಾಯ ಕೇಳುವಂತೆ ದೇಶವನ್ನು ಅಭಿವೃದ್ಧಿ ಮಾಡಿದ ನರೇಂದ್ರ ಮೋದಿಯವರಿಗೆ ಧನ್ಯವಾದಗಳು ಎಂದು ಪೋಸ್ಟ್‌ ಕಾರ್ಡ್‌ ಹೇಳಿದೆ.

ಭಾರತ ಸರ್ಕಾರ ಹೈಡ್ರಾಕ್ಸಿಕ್ಲೋರೋಕ್ವಿನ್ ರಪ್ತು ಮಾಡಲು ಅಮೇರಿಕಾಗೆ ವಿಧಿಸಿದ ಷರತ್ತುಗಳು

1 ಭಾರತೀಯ ಔಷಧೀಯ ಕಂಪನಿಗಳಿಗೆ ಅಮೇರಿಕಾದಲ್ಲಿ ಮಾರುಕಟ್ಟೆಯನ್ನು ತೆರೆಯಬೇಕು.

2 FDA ಹೆಸರಿನಲ್ಲಿ ವಿಧಿಸಲಾದ ಎಲ್ಲಾ ನಿರ್ಬಂಧಗಳನ್ನು ತೆಗೆದುಹಾಕಬೇಕು.

3 ಇನ್ನು ಮುಂದೆ ಭಾರತೀಯ ಔಷಧಿಯ ಕಂಪನಿಗಳಿಗೆ ಯಾವುದೇ ತೊಂದರೆಯಾಗದಂತೆ ಕಾನೂನಿನ ಭದ್ರತೆ ಒದಗಿಸಬೇಕು

ಅಮೆರಿಕ ಈ ಮೂರು ಷರತ್ತುಗಳನ್ನು 24 ಘಂಟೆಯ ಒಳಗಾಗಿ ಒಪ್ಪಿಕೊಂಡಿತ್ತು.

ಭಾರತ ಈಗ ಯಾರಿಗೂ ಬಗ್ಗುವುದಿಲ್ಲ ಭಾರತದೆದುರು ಎಲ್ಲರೂ ಬಾಗಲೇಬೇಕು ಎಂದೂ ಸಹ ಪೋಸ್ಟ್‌ ಕಾರ್ಡ್‌ ಕೊಚ್ಚಿಕೊಂಡಿದೆ.

ಸತ್ಯ: ಇದು ಸಂಪೂರ್ಣ ಸುಳ್ಳಾಗಿದೆ. ಮೊದಲಿಗೆ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮಲೇರಿಯಾ ನಿರೋಧಕ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಗಳ ಮೇಲಿನ ರಫ್ತು ತೆರವುಗೊಳಿಸದಿದ್ದರೆ ಪ್ರತಿಕಾರ ತೆಗೆದುಕೊಳ್ಳಬೇಕಾಗುತ್ತದೆ ಎಂದು ಧಮಕಿ ಹಾಕಿದ್ದರು. ಅದಕ್ಕೆ ಬೆದರಿದ ಮೋದಿಯವರು ಕೂಡಲೇ ನಿರ್ಬಂಧ ತೆರವುಗೊಳಿಸಿದರು. ನಂತರವಷ್ಟೇ ಅಮೆರಿಕಾ ಭಾರತಕ್ಕೆ ಧನ್ಯವಾದ ಹೇಳಿದ್ದು.

ಟ್ರಂಪ್‌ರವರ ಮಾತುಗಳಲ್ಲೇ ಕೇಳಿ

ಸುಳ್ಳು 3:ಚೀನಾ ನಂಬರ್‌ ಒನ್‌ ಆಗಬೇಕೆಂದು ಜೈವಿಕ ಅಸ್ತ್ರ ಬಳಸಿ ಕೊರೊನಾ ಹರಡುತ್ತಿದೆ.

ಚೀನಾ ತನ್ನ ಸಾಮಾಜಿಕ ಹೊಣೆಗಾರಿಕೆಯನ್ನು ಮರೆತು ನಿಯಮಗಳ ಉಲ್ಲಂಘಿಸಿದೆ. ನಂಬರ್‌ ಒನ್‌ ಆಗಬೇಕೆಂದು ಜೈವಿಕ ಅಸ್ತ್ರ ಬಳಸಿ ಕೊರೊನಾ ಹರಡುತ್ತಿದೆ ಎಂದು ಇದೇ ಪೋಸ್ಟ್‌ ಕಾರ್ಡ್‌ ಕನ್ನಡ ಸುಳ್ಳು ಹಬ್ಬಿಸಿದೆ.

ಸತ್ಯ: ವೈರಸ್ ಅನ್ನು ವಿನ್ಯಾಸಗೊಳಿಸಲಾಗಿದೆ ಅಥವಾ ಉದ್ದೇಶಪೂರ್ವಕವಾಗಿ ಬಿಡುಗಡೆ ಮಾಡಲಾಗಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ” ಎಂದು ಸ್ವಿಟ್ಜರ್ಲೆಂಡ್‌ನ ಬಾಸೆಲ್ ವಿಶ್ವವಿದ್ಯಾಲಯದ ಆಣ್ವಿಕ ಸಾಂಕ್ರಾಮಿಕ ರೋಗಶಾಸ್ತ್ರಜ್ಞೆ ಎಮ್ಮಾ ಹಾಡ್‌ಕ್ರಾಫ್ಟ್ ಹೇಳುತ್ತಾರೆ.

ಕ್ಯಾಲಿಫೋರ್ನಿಯಾದ ಲಾ ಜೊಲ್ಲಾದಲ್ಲಿರುವ ಸ್ಕ್ರಿಪ್ಪ್ಸ್ ರಿಸರ್ಚ್ ಇನ್ಸ್ಟಿಟ್ಯೂಟ್ನ ಸಾಂಕ್ರಾಮಿಕ ರೋಗ ಸಂಶೋಧಕ ಆಂಡರ್ಸನ್ ಇದರ ಬಗ್ಗೆ ಸಂಶೋಧನೆ ನಡೆಸಿ ಇದು ಮಾನವ ನಿರ್ಮತವಲ್ಲ ನೈಸರ್ಗಿಕ ಎಂದು ಸಾರಿದ್ದಾರೆ. ಪೂರ್ಣ ವಿವರಕ್ಕೆ ಇಲ್ಲಿ ಕ್ಲಿಕ್‌ ಮಾಡಿ.

ಇನ್ನೊಂದು ಕಡೆ ಕೊರೊನಾ ವೈರಸ್ ತಯಾರಿಸಿ ಚೀನಾಕ್ಕೆ ಮಾರಾಟ ಮಾಡಿದ್ದಕ್ಕಾಗಿ ಯುಎಸ್ ಅಧಿಕಾರಿಗಳು ಹಾರ್ವರ್ಡ್ ಪ್ರಾಧ್ಯಾಪಕ ಡಾ. ಚಾರ್ಲ್ಸ್ ಲೈಬರ್ ಅವರನ್ನು ಬಂಧಿಸಿದ್ದಾರೆ ಎಂಬ ಸಂದೇಶವುಳ್ಳ ವಿಡಿಯೋ ಕ್ಲಿಪ್ ಫೇಸ್‌ಬುಕ್, ಟ್ವಿಟರ್ ಮತ್ತು ವಾಟ್ಸಾಪ್‌ನಲ್ಲಿ ಹರಿದಾಡುತ್ತಿದೆ.

ಡಾ. ಲೈಬರ್ ಅವರನ್ನು 2020 ರ ಜನವರಿಯಲ್ಲಿ ಯುಎಸ್ ಫೆಡರಲ್ ಅಧಿಕಾರಿಗಳು ಚೀನಾದಿಂದ ಪಡೆದ ಹಣದ ಮೇಲೆ “ಸುಳ್ಳು, ಕಾಲ್ಪನಿಕ ಮತ್ತು ಮೋಸದ ಹೇಳಿಕೆ ನೀಡಿದ್ದಕ್ಕಾಗಿ” ಬಂಧಿಸಿದ್ದರೆ ಹೊರತು ಅವರಿಗೂ ಕೊರೊನಾಗೂ ಸಂಬಂಧವಿಲ್ಲ.


ಇದನ್ನೂ ಓದಿ: ಕೊರೊನಾ ತಯಾರಿಸಿ ಚೈನಾಗೆ ಮಾರಿದ ಹಾರ್ವಡ್‌ ಪ್ರಾಧ್ಯಾಪಕನ ಬಂಧನ: ಮತ್ತೊಂದು ಸುಳ್ಳು ಸುದ್ದಿ


ಒಟ್ಟಿನಲ್ಲಿ ಪೋಸ್ಟ್‌ ಕಾರ್ಡ್‌ ಕನ್ನಡ ಕೋಮುದ್ವೇಷ ಹರಡುವ ಹಲವು ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡುತ್ತಲೇ ಇದೆ. ಆದರೂ ಸಹ ಅವರ ಮೇಲೆ ಕ್ರಮ ಕೈಗೊಳ್ಳಲು ಆಗಿಲ್ಲ ಏಕೆ?

ಅನಂತ್‌ ಕುಮಾರ್‌ ಹೆಗಡೆ, ಶೋಭಾ ಕರಂದ್ಲಾಚೆ ಮತ್ತು ಬಸನಗೌಡ ಯತ್ನಾಳ್‌ ಥರಹದ ಬಿಜೆಪಿಯ ಜನಪ್ರತಿನಿಧಿಗಳೆ ದಿನನಿತ್ಯ ಮುಸ್ಲಿಂ ಸಮಾಜದ ವಿರುದ್ಧ ಹೇಳಿಕೆ ಕೊಡುವ ಕೆಲಸ ಮಾಡುತ್ತಿದ್ದಾರೆ. ಇನ್ನು ಅವರ ಮೇಲೆ ಈ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದು ನಂಬಬೇಕೆ? ಸರಿ ಸರ್ಕಾರ ಮಾಡುತ್ತೋ ಬಿಡುತ್ತೋ. ಸುಳ್ಳು ಸುದ್ದಿಗಳ ವಿರುದ್ಧ ಹೋರಾಡಲು ನಾವೇನು ಮಾಡಬೇಕು ಯೋಚಿಸೋಣ ಅಲ್ಲವೇ?

ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚುವುದು ಹೇಗೆ?

ಕಾನೂನಿನ ವ್ಯಾಪ್ತಿಯಲ್ಲಿ ಪೋಲಿಸ್ ಮತ್ತು ಇತರ ತನಿಖಾ ಏಜೆನ್ಸಿಗಳು ಇದರ ಸತ್ಯಾಸತ್ಯತೆ ಪತ್ತೆಹಚ್ಚುವ ಕೆಲಸ ಮಾಡುತ್ತಿರುತ್ತವೆ. ಜನ ಸಾಮಾನ್ಯರು ಮಾಡಬೇಕಾಗಿರುವುದು ಇಷ್ಟೇ:

  • ಸುದ್ದಿ ಮೂಲ ಪರೀಕ್ಷಿಸಿ. ಸಂದೇಶವನ್ನು ಬಿಟ್ಟು ಅದರ ಮೂಲದ ಬಗ್ಗೆ ಹುಡುಕಿ. ಯಾರು ಇದನ್ನು ನಿಮಗೆ ಕಳುಹಿಸಿದ್ದಾರೆ ಅವರು ಕೇವಲ ಸ್ನೇಹಿತರೇ, ಯಾವುದೋ ಗುಂಪಿನ ಸದಸ್ಯರೇ, ನಂಬಿಕಸ್ಥರೇ ತಿಳಿಯಿರಿ.
  • ಜಾಲತಾಣದ ಉದ್ದೇಶವೇನು, ಅವರ ಸಂಪರ್ಕ ವಿಳಾಸ ದೂರವಾಣಿ ಸಂಖ್ಯೆ ಇದೆಯೇ ನೋಡಿ.
  • ಕೇವಲ ಸುದ್ದಿಯ ತಲೆಬರಹ ಓದಬೇಡಿ, ಅವು ರೋಚಕವಾಗಿರುತ್ತವೆ, ಇಡೀ ಸುದ್ದಿ ಓದಿ ನೋಡಿ.
  • ಸುದ್ದಿಯ ಲೇಖಕರ/ಪ್ರಕಾಶಕರ ಬಗ್ಗೆ ಸ್ವಲ್ಪ ಹುಡುಕಿ, ಅವರು ಪೂರ್ವಗ್ರಹಪೀಡಿತರಾಗಿರಬಹುದು.\
  • ಸುದ್ದಿಗೆ ಏನಾದರೂ ಬೆಂಬಲಿಸುವಂತಹ ಮೂಲದ ಲಿಂಕ್ ಇದ್ದರೆ ಅದನ್ನು ಜಾಲಿಸಿ ನೋಡಿ. ಪೂರಕವಾಗಿದೆಯೇ ಇಲ್ಲವೇ ಎಂದು. ಎಷ್ಟೋ ಬಾರಿ ಅಂತಹ ಜಾಲತಾಣವೇ ಇರುವುದಿಲ್ಲ.
  • ಕೇವಲ ಒರ್ವ ದೊಡ್ಡ ವ್ಯಕ್ತಿಯ ಭಾವಚಿತ್ರವಿದೆ ಮತ್ತು ಅದರೊಂದಿಗೆ ಏನೋ ಹೇಳಿಕೆ ಇದೆ ಎಂದ ಮಾತ್ರಕ್ಕೆ ಅದು ನಿಜವಾಗುವುದಿಲ್ಲ. ಚಾಣಕ್ಯ, ನಾಟ್ರಡ್ಯಾಮಸ್, ಚರ್ಚಿಲ್, ಮೆಕಾಲೆ ಮುಂತಾದವರ ಭಾವಚಿತ್ರದ ಜೊತೆ ಏನೇನೋ ಸಂದೇಶಗಳು ಹರಿದಾಡುತ್ತಿವೆ.
  • ಸುದ್ದಿಯ ದಿನಾಂಕ ನೋಡಿ. ಹಳೆಯ ಸುದ್ದಿಗಳು ಹೊಸ ತಲೆಬರಹದೊಂದಿಗೆ ಮತ್ತೆ ಮತ್ತೆ ಕಾಣಸಿಗುತ್ತವೆ.
  • ಸುದ್ದಿಯೋ ಕೇವಲ ತಮಾಷೆಯೋ ಸರಿಯಾಗಿ ನೋಡಿ. ಏಪ್ರಿಲ್ 1ರ ಸಂದೇಶಗಳು ವರ್ಷವಿಡೀ ಸುತ್ತುತ್ತಿರುತ್ತವೆ.
  • ನಿಮ್ಮ ಸ್ವಂತ ಪೂರ್ವನಿರ್ಧಾರಿತ ನಂಬಿಕೆಗಳು ಸುಳ್ಳನ್ನೇ ನಿಜ ಎಂದು ನಂಬುವಂತೆ ಮಾಡಬಹುದು. ಅದನ್ನು ಸರಿಪಡಿಸಿಕೊಳ್ಳಿ.
  • ತಜ್ಞರನ್ನು ಸಂಪರ್ಕಿಸಿ. ಸಂದೇಶ ನಿಜವೋ ಸುಳ್ಳೋ ಎಂದು ಸಂದೇಹವಿದ್ದಲ್ಲಿ ಅದನ್ನು ಮುಂದಕ್ಕೆ ಪಸರಿಸದೇ ಅದನ್ನು ನಂಬಿಕಸ್ಥ ಸತ್ಯಾಸತ್ಯತೆ ಪರಿಶೀಲಿಸುವ ಜಾಲತಾಣಗಳಿಗೆ ಕಳುಹಿಸಿ (ಆಲ್ಟ್-ನ್ಯೂಸ್, ಬೂಮ್‌ಲೈವ್‌, ಕ್ವಿಂಟ್‌ ವೆಬ್‌ಖೂಫ್‌, ಫ್ಯಾಕ್ಟ್-ಚೆಕರ್, ಎಸ್.ಎಂ.ಹೋಕ್ಸ್ ಸ್ಲೇಯರ್ ಇತ್ಯಾದಿ). ಸತ್ಯವನ್ನು ಬೆಂಬಲಿಸುವ ಜಾಲತಾಣಗಳನ್ನು ಬೆಂಬಲಿಸಿ.

ಸುಳ್ಳು ಸುದ್ದಿ/ಅಪಪ್ರಚಾರ ಪಸರಿಸಬೇಡಿ. ಇದರಿಂದ ದೇಶಕ್ಕೆ ಯಾವ ಪ್ರಯೋಜನವೂ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...