Homeಕರ್ನಾಟಕಅಪ್ಪು ಹೆಸರಲ್ಲಿ ಮುಸ್ಲಿಮರ ವಿರುದ್ಧ ದ್ವೇಶ ಬಿತ್ತಲು ಯತ್ನಿಸಿದ ಪೋಸ್ಟ್‌ಕಾರ್ಡ್; ಜನರಿಂದ ತರಾಟೆ

ಅಪ್ಪು ಹೆಸರಲ್ಲಿ ಮುಸ್ಲಿಮರ ವಿರುದ್ಧ ದ್ವೇಶ ಬಿತ್ತಲು ಯತ್ನಿಸಿದ ಪೋಸ್ಟ್‌ಕಾರ್ಡ್; ಜನರಿಂದ ತರಾಟೆ

- Advertisement -
- Advertisement -

ಬಿಜೆಪಿಯ ಪ್ರೊಪಗಾಂಡ ವೇದಿಕೆಯಾಗಿರುವ ಪೋಸ್ಟ್‌ಕಾರ್ಡ್ ಫೇಸ್‌ಬುಕ್‌ ಪೇಜ್‌ನಲ್ಲಿ ಇಂದು ಮಾಡಲಾಗಿರುವ ಪೋಸ್ಟ್‌ಗಳು ಜನರಿಂದ ಟೀಕೆಗೆ ಒಳಗಾಗಿವೆ. ಬಿಜೆಪಿ ಪರ ಪ್ರಚಾರ, ಕೋಮುದ್ವೇಷ, ಸುಳ್ಳು ಸುದ್ದಿಗಳ ಕಾರಣಕ್ಕೆ ಹೆಸರಾಗಿರುವ ಪೋಸ್ಟ್‌ ಕಾರ್ಡ್ ಹಾಗೂ ಅದರ ಸಂಪಾದಕ ಮಹೇಶ್‌ ವಿಕ್ರಂ ಹೆಗಡೆಯವರನ್ನು ಜನರು ತರಾಟೆಗೆ ತೆಗೆದುಕೊಂಡಿದ್ದಾರೆ.

ಹಠಾತ್ ನಿಧನರಾದ ಪವರ್‌ ಸ್ಟಾರ್‌ ಪುನೀತ್ ರಾಜ್‌ಕುಮಾರ್‌ ಅವರ ಅಗಲಿಕೆಯ ನೋವಿನ ನಡುವೆ ಇಂದು ಅವರು ಜನ್ಮದಿನ ಬಂದಿದೆ. ಪುನೀತ್‌ ಅವರ ಕೊನೆಯ ಸಿನಿಮಾ ‘ಜೇಮ್ಸ್‌’ ಕೂಡ ಬಿಡುಗಡೆಯಾಗಿದೆ. ಇದರ ನಡುವೆ ಮುಸ್ಲಿಂ ಸಮುದಾಯ ಹಿಜಾಬ್‌ ಹಕ್ಕಿಗಾಗಿ ಹೋರಾಟ ಮುಂದುವರಿಸಿದ್ದು, ತಮ್ಮ ವ್ಯಾಪಾರ ವಹಿವಾಟುಗಳನ್ನು ಬಂದ್‌ ಮಾಡಿ ಇಂದು ಪ್ರತಿಭಟಿಸಿದೆ.

ಆದರೆ ಪುನೀತ್‌ ಅವರ ಜನ್ಮದಿನಕ್ಕೂ ಮುಸ್ಲಿಂ ಸಮುದಾಯದ ಹೋರಾಟಕ್ಕೂ ಯಾವುದೇ ಸಂಬಂಧವಿಲ್ಲದಿದ್ದರೂ ಒಂದಕ್ಕೊಂದು ಸಂಬಂಧ ಕಲ್ಪಿಸಲು ಯತ್ನಿಸಿರುವ ಪೋಸ್ಟ್‌ ಕಾರ್ಡ್‌ಗೆ ಕನ್ನಡಿಗರು ಛೀಮಾರಿ ಹಾಕಿದ್ದಾರೆ. ಮುಸ್ಲಿಂ ಸಮುದಾಯದ ಬಂದ್‌ಗೆ ಸಂಬಂಧಿಸಿದಂತೆ ಇತರ ಪೋಸ್ಟರ್‌ಗಳನ್ನೂ ಪೋಸ್ಟ್‌ಕಾರ್ಡ್‌ನಲ್ಲಿ ಕಾಣಬಹುದು. ಪುನೀತ್ ರಾಜ್‌ಕುಮಾರ್‌ ಅವರ ಜನ್ಮದಿನವನ್ನು ಹಿಜಾಬ್‌ ಹೋರಾಟಕ್ಕೆ ತಳುಕು ಹಾಕಿರುವ ಎರಡು ಪೋಸ್ಟರ್‌ಗಳು ಈಗ ಚರ್ಚೆಗೆ ಗ್ರಾಸವಾಗಿವೆ. ಎಲ್ಲ ಜಾತಿ, ಧರ್ಮಗಳಾಚೆಗೆ ಆಲದ ಮರದಂತೆ ವಿಸ್ತರಿಸಿರುವ ಮೇರು ವ್ಯಕ್ತಿತ್ವ ಪುನೀತ್ ಅವರನ್ನು ತಮ್ಮ ಕೋಮು ಅಜೆಂಡಾಕ್ಕೆ ಪೋಸ್ಟ್‌ಕಾರ್ಡ್ ಬಳಸಲು ಯತ್ನಿಸಿರುವುದು ಎಷ್ಟು ಸರಿ ಎಂಬ ಪ್ರಶ್ನೆ ಎದ್ದಿದೆ.

“ಶಾಂತಿಧೂತರು ಎನಿಸಿಕೊಂಡವರಿಂದ ಪವರ್ ಸ್ಟಾರ್‌ ಪುನೀತ್ ರಾಜ್‌ಕುಮಾರ್‌ ಅವರಿಗೆ ಅವಮಾನ… ಅಪ್ಪು ಹುಟ್ಟಿದ ದಿನ ಇಂದು, ಇದೇ ದಿನ ಕರ್ನಾಟಕ ಬಂದ್ ಎಂಬುದಾಗಿ ಕರೆ ನೀಡಿ ಕನ್ನಡದ ಮಣ್ಣಿನ ಹೆಮ್ಮೆಯ ಮಗನಿಗೆ ಅವಮಾನ ಮಾಡಿದ ಮುಸಲ್ಮಾನರು” ಎಂದು  ಪೋಸ್ಟರ್‌ಗಳನ್ನು ಮಾಡಿ ಪೋಸ್ಟ್‌ ಮಾಡಿರುವ  ಪೋಸ್ಟ್‌ಕಾರ್ಡ್, ಜನರ ನಡುವೆ ದ್ವೇಷ ಬಿತ್ತಲು ಯತ್ನಿಸಿದೆ.

“ಊರಿಗೆ ಬೆಂಕಿ ಹಚ್ಚಿ ಚಳಿ ಕಾಯುವುದರಲ್ಲಿ ನಿಮಗಿಂತ ಜಾಣರು ಯಾರು ಇಲ್ಲ ಅಂತ ಎಲ್ಲರಿಗೂ ಗೊತ್ತು. ಅವರು ಅಪ್ಪು ಬಾಸ್‌ಗೆ ಅವಮಾನ ಮಾಡಿಲ್ಲ. ಇಷ್ಟ ಇರೋರು ತಮ್ಮ ಅಂಗಡಿಗಳನ್ನು ಬಂದ್ ಮಾಡಬಹುದು ಎಂದು ಕರೆ ಕೊಟ್ಟಿದ್ದಾರೆ‌. ಆದ್ರೆ ನೀವು ಮಾತ್ರ ಈ ವಿಷಯದಲ್ಲಿ ಅಪ್ಪು ಬಾಸ್‌ಗೆ ಅವಮಾನ ಮಾಡುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ” ಎಂದು ಅಮರ್‌ ಎಂಬವರು ಕಮೆಂಟ್ ಮಾಡಿದ್ದಾರೆ.

ಬಿಜೆಪಿ ಪ್ರೊಪಗಾಂಡಕ್ಕೆ ಬಳಕೆಯಾಗುತ್ತಿರುವ ‘ಕಾಶ್ಮೀರ್‌ ಫೈಲ್ಸ್‌’ ಸಿನಿಮಾಕ್ಕೆ ಅಪಾರ ಪ್ರಚಾರ ನೀಡುವುದರ ಜೊತೆಗೆ ರಾಜ್ಯ ಸರ್ಕಾರ ತೆರಿಗೆ ವಿನಾಯಿತಿಯನ್ನೂ ನೀಡಿರುವುದನ್ನು ಪ್ರಸ್ತಾಪಿಸಿರುವ ಜನರು, ಪುನೀತ್‌ ರಾಜ್‌ಕುಮಾರ್‌ ಅವರು ಕೊನೆಯ ಸಿನಿಮಾಕ್ಕೆ ಸರ್ಕಾರ ತೆರಿಗೆ ವಿನಾಯಿತಿ ಏಕೆ ನೀಡಿಲ್ಲ ಎಂದು ಪ್ರಶ್ನಿಸಿದ್ದಾರೆ.

“ಕಾಶ್ಮೀರ್ ಫೈಲ್ಸ್ ಸಿನೆಮಾ ತೆರಿಗೆ ವಿನಾಯಿತಿ ಕೊಟ್ಟು ಜೇಮ್ಸ್‌‌ಗೆ ವಿನಾಯಿತಿ ಕೊಡದೇ ಇರೋ ಸರ್ಕಾರ ಅಪ್ಪು ಸರ್‌ಗೆ ಅವಮಾನ ಮಾಡಿದೆ. ಇದರ ಬಗ್ಗೆ ಮಾತನಾಡಿ” ಎಂದು  ಮುಸ್ತಫಾ ಮೊಹಮದ್‌ ಹಾಗೂ ಐಜಿ ಚಿನ್ನಪ್ಪ ಎಂಬವರು ಆಗ್ರಹಿಸಿದ್ದಾರೆ.

“ಕೇವಲ ಮುಸಲ್ಮಾನರ ವಹಿವಾಟು ಸ್ವಯಂ ಪ್ರೇರಿತ ಬಂದ್ ಅಷ್ಟೇ. ರಾಜ್ ಫ್ಯಾಮಿಲಿ ನೆಪ ಮಾಡಿ ಬೆಂಕಿ ಹಚ್ಚಬೇಡಿ ಮಹೇಶ್ ವಿಕ್ರಂ ಹೆಗ್ಡೆ” ಎಂದು  ಸಫಾನ್ ಮೊಹಮ್ಮದ್ ವಿನಂತಿಸಿದ್ದಾರೆ.

ಹಿಜಾಬ್‌ ಧಾರ್ಮಿಕ ಹಕ್ಕಿನ ಭಾಗವಾಗಿಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಪ್ರಕರಣ ಸುಪ್ರೀಂ ಕೋರ್ಟ್ ಕದ ತಟ್ಟಿದೆ. ಇದರ ನಡುವೆ, ತಮ್ಮ ಧಾರ್ಮಿಕ ಹಕ್ಕಿಗಾಗಿ ಮುಸ್ಲಿಂ ಸಮುದಾಯಗಳು ಆಗ್ರಹಿಸುತ್ತಿವೆ. ತೀರ್ಪು ಬಂದ ಒಂದು ದಿನದ ಬಳಿಕ  ಬಂದ್ ಆಚರಿಸುವುದಾಗಿ ಮುಸ್ಲಿಂ ಮುಖಂಡರು ಹೇಳಿದ್ದರು.

ಕೋಮುದ್ವೇಷ: ರಿಪೋರ್ಟ್ ಮಾಡುವುದು ಹೇಗೆ?

ಕೋಮುದ್ವೇಷ ಹರಡುವುದು ಫೇಸ್‌ಬುಕ್‌ ಕಮ್ಯುನಿಟಿ ನಿಯಮಗಳ ಉಲ್ಲಂಘನೆಯಾಗಿರುತ್ತದೆ. ಹೀಗಾಗಿ ಸಂಬಂಧಪಟ್ಟ ಪೋಸ್ಟ್‌ನಲ್ಲಿ ಬಲಭಾಗದಲ್ಲಿನ ಮೂರು ಚುಕ್ಕೆಗಳನ್ನು ಕ್ಲಿಕ್ ಮಾಡಿ, ‘ರೀಪೋರ್ಟ್ ಪೋಸ್ಟ್‌’ ಆಯ್ಕೆ ಮಾಡಿದರೆ, ಯಾವ ಆಯಾಮದ ಪೋಸ್ಟ್‌ ಎಂದು ಫೇಸ್‌ಬುಕ್ ಕೇಳುತ್ತದೆ. ಪೋಸ್ಟ್‌ಗೆ ಸಂಬಂಧಿಸಿದ ಆಯಾಮಗಳನ್ನು (ಉದಾಹರಣೆಗೆ ‘hate speech’, violence) ಆಯ್ಕೆ ಮಾಡಿ ರಿಪೋರ್ಟ್ ಮಾಡಬಹುದು.


ಇದನ್ನೂ ಓದಿರಿ: ಕನ್ನಡ ಚಿತ್ರರಂಗಕ್ಕೆ ಹೊಸ ಕ್ರಿಯಾಶೀಲತೆ ತಂದುಕೊಟ್ಟ ’ಅಪ್ಪು ಡ್ಯಾನ್ಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. The judgement of the Karanataka High Court on Hijab shows how the facist BJP has hijacked the judiciary of the country. May God have mercy upon our land, sweet homeland, free Her from the clutches of the destructive forces. Jai Hind!

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...