Homeಕರ್ನಾಟಕಅಪ್ಪು ಹೆಸರಲ್ಲಿ ಮುಸ್ಲಿಮರ ವಿರುದ್ಧ ದ್ವೇಶ ಬಿತ್ತಲು ಯತ್ನಿಸಿದ ಪೋಸ್ಟ್‌ಕಾರ್ಡ್; ಜನರಿಂದ ತರಾಟೆ

ಅಪ್ಪು ಹೆಸರಲ್ಲಿ ಮುಸ್ಲಿಮರ ವಿರುದ್ಧ ದ್ವೇಶ ಬಿತ್ತಲು ಯತ್ನಿಸಿದ ಪೋಸ್ಟ್‌ಕಾರ್ಡ್; ಜನರಿಂದ ತರಾಟೆ

- Advertisement -
- Advertisement -

ಬಿಜೆಪಿಯ ಪ್ರೊಪಗಾಂಡ ವೇದಿಕೆಯಾಗಿರುವ ಪೋಸ್ಟ್‌ಕಾರ್ಡ್ ಫೇಸ್‌ಬುಕ್‌ ಪೇಜ್‌ನಲ್ಲಿ ಇಂದು ಮಾಡಲಾಗಿರುವ ಪೋಸ್ಟ್‌ಗಳು ಜನರಿಂದ ಟೀಕೆಗೆ ಒಳಗಾಗಿವೆ. ಬಿಜೆಪಿ ಪರ ಪ್ರಚಾರ, ಕೋಮುದ್ವೇಷ, ಸುಳ್ಳು ಸುದ್ದಿಗಳ ಕಾರಣಕ್ಕೆ ಹೆಸರಾಗಿರುವ ಪೋಸ್ಟ್‌ ಕಾರ್ಡ್ ಹಾಗೂ ಅದರ ಸಂಪಾದಕ ಮಹೇಶ್‌ ವಿಕ್ರಂ ಹೆಗಡೆಯವರನ್ನು ಜನರು ತರಾಟೆಗೆ ತೆಗೆದುಕೊಂಡಿದ್ದಾರೆ.

ಹಠಾತ್ ನಿಧನರಾದ ಪವರ್‌ ಸ್ಟಾರ್‌ ಪುನೀತ್ ರಾಜ್‌ಕುಮಾರ್‌ ಅವರ ಅಗಲಿಕೆಯ ನೋವಿನ ನಡುವೆ ಇಂದು ಅವರು ಜನ್ಮದಿನ ಬಂದಿದೆ. ಪುನೀತ್‌ ಅವರ ಕೊನೆಯ ಸಿನಿಮಾ ‘ಜೇಮ್ಸ್‌’ ಕೂಡ ಬಿಡುಗಡೆಯಾಗಿದೆ. ಇದರ ನಡುವೆ ಮುಸ್ಲಿಂ ಸಮುದಾಯ ಹಿಜಾಬ್‌ ಹಕ್ಕಿಗಾಗಿ ಹೋರಾಟ ಮುಂದುವರಿಸಿದ್ದು, ತಮ್ಮ ವ್ಯಾಪಾರ ವಹಿವಾಟುಗಳನ್ನು ಬಂದ್‌ ಮಾಡಿ ಇಂದು ಪ್ರತಿಭಟಿಸಿದೆ.

ಆದರೆ ಪುನೀತ್‌ ಅವರ ಜನ್ಮದಿನಕ್ಕೂ ಮುಸ್ಲಿಂ ಸಮುದಾಯದ ಹೋರಾಟಕ್ಕೂ ಯಾವುದೇ ಸಂಬಂಧವಿಲ್ಲದಿದ್ದರೂ ಒಂದಕ್ಕೊಂದು ಸಂಬಂಧ ಕಲ್ಪಿಸಲು ಯತ್ನಿಸಿರುವ ಪೋಸ್ಟ್‌ ಕಾರ್ಡ್‌ಗೆ ಕನ್ನಡಿಗರು ಛೀಮಾರಿ ಹಾಕಿದ್ದಾರೆ. ಮುಸ್ಲಿಂ ಸಮುದಾಯದ ಬಂದ್‌ಗೆ ಸಂಬಂಧಿಸಿದಂತೆ ಇತರ ಪೋಸ್ಟರ್‌ಗಳನ್ನೂ ಪೋಸ್ಟ್‌ಕಾರ್ಡ್‌ನಲ್ಲಿ ಕಾಣಬಹುದು. ಪುನೀತ್ ರಾಜ್‌ಕುಮಾರ್‌ ಅವರ ಜನ್ಮದಿನವನ್ನು ಹಿಜಾಬ್‌ ಹೋರಾಟಕ್ಕೆ ತಳುಕು ಹಾಕಿರುವ ಎರಡು ಪೋಸ್ಟರ್‌ಗಳು ಈಗ ಚರ್ಚೆಗೆ ಗ್ರಾಸವಾಗಿವೆ. ಎಲ್ಲ ಜಾತಿ, ಧರ್ಮಗಳಾಚೆಗೆ ಆಲದ ಮರದಂತೆ ವಿಸ್ತರಿಸಿರುವ ಮೇರು ವ್ಯಕ್ತಿತ್ವ ಪುನೀತ್ ಅವರನ್ನು ತಮ್ಮ ಕೋಮು ಅಜೆಂಡಾಕ್ಕೆ ಪೋಸ್ಟ್‌ಕಾರ್ಡ್ ಬಳಸಲು ಯತ್ನಿಸಿರುವುದು ಎಷ್ಟು ಸರಿ ಎಂಬ ಪ್ರಶ್ನೆ ಎದ್ದಿದೆ.

“ಶಾಂತಿಧೂತರು ಎನಿಸಿಕೊಂಡವರಿಂದ ಪವರ್ ಸ್ಟಾರ್‌ ಪುನೀತ್ ರಾಜ್‌ಕುಮಾರ್‌ ಅವರಿಗೆ ಅವಮಾನ… ಅಪ್ಪು ಹುಟ್ಟಿದ ದಿನ ಇಂದು, ಇದೇ ದಿನ ಕರ್ನಾಟಕ ಬಂದ್ ಎಂಬುದಾಗಿ ಕರೆ ನೀಡಿ ಕನ್ನಡದ ಮಣ್ಣಿನ ಹೆಮ್ಮೆಯ ಮಗನಿಗೆ ಅವಮಾನ ಮಾಡಿದ ಮುಸಲ್ಮಾನರು” ಎಂದು  ಪೋಸ್ಟರ್‌ಗಳನ್ನು ಮಾಡಿ ಪೋಸ್ಟ್‌ ಮಾಡಿರುವ  ಪೋಸ್ಟ್‌ಕಾರ್ಡ್, ಜನರ ನಡುವೆ ದ್ವೇಷ ಬಿತ್ತಲು ಯತ್ನಿಸಿದೆ.

“ಊರಿಗೆ ಬೆಂಕಿ ಹಚ್ಚಿ ಚಳಿ ಕಾಯುವುದರಲ್ಲಿ ನಿಮಗಿಂತ ಜಾಣರು ಯಾರು ಇಲ್ಲ ಅಂತ ಎಲ್ಲರಿಗೂ ಗೊತ್ತು. ಅವರು ಅಪ್ಪು ಬಾಸ್‌ಗೆ ಅವಮಾನ ಮಾಡಿಲ್ಲ. ಇಷ್ಟ ಇರೋರು ತಮ್ಮ ಅಂಗಡಿಗಳನ್ನು ಬಂದ್ ಮಾಡಬಹುದು ಎಂದು ಕರೆ ಕೊಟ್ಟಿದ್ದಾರೆ‌. ಆದ್ರೆ ನೀವು ಮಾತ್ರ ಈ ವಿಷಯದಲ್ಲಿ ಅಪ್ಪು ಬಾಸ್‌ಗೆ ಅವಮಾನ ಮಾಡುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ” ಎಂದು ಅಮರ್‌ ಎಂಬವರು ಕಮೆಂಟ್ ಮಾಡಿದ್ದಾರೆ.

ಬಿಜೆಪಿ ಪ್ರೊಪಗಾಂಡಕ್ಕೆ ಬಳಕೆಯಾಗುತ್ತಿರುವ ‘ಕಾಶ್ಮೀರ್‌ ಫೈಲ್ಸ್‌’ ಸಿನಿಮಾಕ್ಕೆ ಅಪಾರ ಪ್ರಚಾರ ನೀಡುವುದರ ಜೊತೆಗೆ ರಾಜ್ಯ ಸರ್ಕಾರ ತೆರಿಗೆ ವಿನಾಯಿತಿಯನ್ನೂ ನೀಡಿರುವುದನ್ನು ಪ್ರಸ್ತಾಪಿಸಿರುವ ಜನರು, ಪುನೀತ್‌ ರಾಜ್‌ಕುಮಾರ್‌ ಅವರು ಕೊನೆಯ ಸಿನಿಮಾಕ್ಕೆ ಸರ್ಕಾರ ತೆರಿಗೆ ವಿನಾಯಿತಿ ಏಕೆ ನೀಡಿಲ್ಲ ಎಂದು ಪ್ರಶ್ನಿಸಿದ್ದಾರೆ.

“ಕಾಶ್ಮೀರ್ ಫೈಲ್ಸ್ ಸಿನೆಮಾ ತೆರಿಗೆ ವಿನಾಯಿತಿ ಕೊಟ್ಟು ಜೇಮ್ಸ್‌‌ಗೆ ವಿನಾಯಿತಿ ಕೊಡದೇ ಇರೋ ಸರ್ಕಾರ ಅಪ್ಪು ಸರ್‌ಗೆ ಅವಮಾನ ಮಾಡಿದೆ. ಇದರ ಬಗ್ಗೆ ಮಾತನಾಡಿ” ಎಂದು  ಮುಸ್ತಫಾ ಮೊಹಮದ್‌ ಹಾಗೂ ಐಜಿ ಚಿನ್ನಪ್ಪ ಎಂಬವರು ಆಗ್ರಹಿಸಿದ್ದಾರೆ.

“ಕೇವಲ ಮುಸಲ್ಮಾನರ ವಹಿವಾಟು ಸ್ವಯಂ ಪ್ರೇರಿತ ಬಂದ್ ಅಷ್ಟೇ. ರಾಜ್ ಫ್ಯಾಮಿಲಿ ನೆಪ ಮಾಡಿ ಬೆಂಕಿ ಹಚ್ಚಬೇಡಿ ಮಹೇಶ್ ವಿಕ್ರಂ ಹೆಗ್ಡೆ” ಎಂದು  ಸಫಾನ್ ಮೊಹಮ್ಮದ್ ವಿನಂತಿಸಿದ್ದಾರೆ.

ಹಿಜಾಬ್‌ ಧಾರ್ಮಿಕ ಹಕ್ಕಿನ ಭಾಗವಾಗಿಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಪ್ರಕರಣ ಸುಪ್ರೀಂ ಕೋರ್ಟ್ ಕದ ತಟ್ಟಿದೆ. ಇದರ ನಡುವೆ, ತಮ್ಮ ಧಾರ್ಮಿಕ ಹಕ್ಕಿಗಾಗಿ ಮುಸ್ಲಿಂ ಸಮುದಾಯಗಳು ಆಗ್ರಹಿಸುತ್ತಿವೆ. ತೀರ್ಪು ಬಂದ ಒಂದು ದಿನದ ಬಳಿಕ  ಬಂದ್ ಆಚರಿಸುವುದಾಗಿ ಮುಸ್ಲಿಂ ಮುಖಂಡರು ಹೇಳಿದ್ದರು.

ಕೋಮುದ್ವೇಷ: ರಿಪೋರ್ಟ್ ಮಾಡುವುದು ಹೇಗೆ?

ಕೋಮುದ್ವೇಷ ಹರಡುವುದು ಫೇಸ್‌ಬುಕ್‌ ಕಮ್ಯುನಿಟಿ ನಿಯಮಗಳ ಉಲ್ಲಂಘನೆಯಾಗಿರುತ್ತದೆ. ಹೀಗಾಗಿ ಸಂಬಂಧಪಟ್ಟ ಪೋಸ್ಟ್‌ನಲ್ಲಿ ಬಲಭಾಗದಲ್ಲಿನ ಮೂರು ಚುಕ್ಕೆಗಳನ್ನು ಕ್ಲಿಕ್ ಮಾಡಿ, ‘ರೀಪೋರ್ಟ್ ಪೋಸ್ಟ್‌’ ಆಯ್ಕೆ ಮಾಡಿದರೆ, ಯಾವ ಆಯಾಮದ ಪೋಸ್ಟ್‌ ಎಂದು ಫೇಸ್‌ಬುಕ್ ಕೇಳುತ್ತದೆ. ಪೋಸ್ಟ್‌ಗೆ ಸಂಬಂಧಿಸಿದ ಆಯಾಮಗಳನ್ನು (ಉದಾಹರಣೆಗೆ ‘hate speech’, violence) ಆಯ್ಕೆ ಮಾಡಿ ರಿಪೋರ್ಟ್ ಮಾಡಬಹುದು.


ಇದನ್ನೂ ಓದಿರಿ: ಕನ್ನಡ ಚಿತ್ರರಂಗಕ್ಕೆ ಹೊಸ ಕ್ರಿಯಾಶೀಲತೆ ತಂದುಕೊಟ್ಟ ’ಅಪ್ಪು ಡ್ಯಾನ್ಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. The judgement of the Karanataka High Court on Hijab shows how the facist BJP has hijacked the judiciary of the country. May God have mercy upon our land, sweet homeland, free Her from the clutches of the destructive forces. Jai Hind!

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...