Homeಕರ್ನಾಟಕಅಪ್ಪು ಹೆಸರಲ್ಲಿ ಮುಸ್ಲಿಮರ ವಿರುದ್ಧ ದ್ವೇಶ ಬಿತ್ತಲು ಯತ್ನಿಸಿದ ಪೋಸ್ಟ್‌ಕಾರ್ಡ್; ಜನರಿಂದ ತರಾಟೆ

ಅಪ್ಪು ಹೆಸರಲ್ಲಿ ಮುಸ್ಲಿಮರ ವಿರುದ್ಧ ದ್ವೇಶ ಬಿತ್ತಲು ಯತ್ನಿಸಿದ ಪೋಸ್ಟ್‌ಕಾರ್ಡ್; ಜನರಿಂದ ತರಾಟೆ

- Advertisement -
- Advertisement -

ಬಿಜೆಪಿಯ ಪ್ರೊಪಗಾಂಡ ವೇದಿಕೆಯಾಗಿರುವ ಪೋಸ್ಟ್‌ಕಾರ್ಡ್ ಫೇಸ್‌ಬುಕ್‌ ಪೇಜ್‌ನಲ್ಲಿ ಇಂದು ಮಾಡಲಾಗಿರುವ ಪೋಸ್ಟ್‌ಗಳು ಜನರಿಂದ ಟೀಕೆಗೆ ಒಳಗಾಗಿವೆ. ಬಿಜೆಪಿ ಪರ ಪ್ರಚಾರ, ಕೋಮುದ್ವೇಷ, ಸುಳ್ಳು ಸುದ್ದಿಗಳ ಕಾರಣಕ್ಕೆ ಹೆಸರಾಗಿರುವ ಪೋಸ್ಟ್‌ ಕಾರ್ಡ್ ಹಾಗೂ ಅದರ ಸಂಪಾದಕ ಮಹೇಶ್‌ ವಿಕ್ರಂ ಹೆಗಡೆಯವರನ್ನು ಜನರು ತರಾಟೆಗೆ ತೆಗೆದುಕೊಂಡಿದ್ದಾರೆ.

ಹಠಾತ್ ನಿಧನರಾದ ಪವರ್‌ ಸ್ಟಾರ್‌ ಪುನೀತ್ ರಾಜ್‌ಕುಮಾರ್‌ ಅವರ ಅಗಲಿಕೆಯ ನೋವಿನ ನಡುವೆ ಇಂದು ಅವರು ಜನ್ಮದಿನ ಬಂದಿದೆ. ಪುನೀತ್‌ ಅವರ ಕೊನೆಯ ಸಿನಿಮಾ ‘ಜೇಮ್ಸ್‌’ ಕೂಡ ಬಿಡುಗಡೆಯಾಗಿದೆ. ಇದರ ನಡುವೆ ಮುಸ್ಲಿಂ ಸಮುದಾಯ ಹಿಜಾಬ್‌ ಹಕ್ಕಿಗಾಗಿ ಹೋರಾಟ ಮುಂದುವರಿಸಿದ್ದು, ತಮ್ಮ ವ್ಯಾಪಾರ ವಹಿವಾಟುಗಳನ್ನು ಬಂದ್‌ ಮಾಡಿ ಇಂದು ಪ್ರತಿಭಟಿಸಿದೆ.

ಆದರೆ ಪುನೀತ್‌ ಅವರ ಜನ್ಮದಿನಕ್ಕೂ ಮುಸ್ಲಿಂ ಸಮುದಾಯದ ಹೋರಾಟಕ್ಕೂ ಯಾವುದೇ ಸಂಬಂಧವಿಲ್ಲದಿದ್ದರೂ ಒಂದಕ್ಕೊಂದು ಸಂಬಂಧ ಕಲ್ಪಿಸಲು ಯತ್ನಿಸಿರುವ ಪೋಸ್ಟ್‌ ಕಾರ್ಡ್‌ಗೆ ಕನ್ನಡಿಗರು ಛೀಮಾರಿ ಹಾಕಿದ್ದಾರೆ. ಮುಸ್ಲಿಂ ಸಮುದಾಯದ ಬಂದ್‌ಗೆ ಸಂಬಂಧಿಸಿದಂತೆ ಇತರ ಪೋಸ್ಟರ್‌ಗಳನ್ನೂ ಪೋಸ್ಟ್‌ಕಾರ್ಡ್‌ನಲ್ಲಿ ಕಾಣಬಹುದು. ಪುನೀತ್ ರಾಜ್‌ಕುಮಾರ್‌ ಅವರ ಜನ್ಮದಿನವನ್ನು ಹಿಜಾಬ್‌ ಹೋರಾಟಕ್ಕೆ ತಳುಕು ಹಾಕಿರುವ ಎರಡು ಪೋಸ್ಟರ್‌ಗಳು ಈಗ ಚರ್ಚೆಗೆ ಗ್ರಾಸವಾಗಿವೆ. ಎಲ್ಲ ಜಾತಿ, ಧರ್ಮಗಳಾಚೆಗೆ ಆಲದ ಮರದಂತೆ ವಿಸ್ತರಿಸಿರುವ ಮೇರು ವ್ಯಕ್ತಿತ್ವ ಪುನೀತ್ ಅವರನ್ನು ತಮ್ಮ ಕೋಮು ಅಜೆಂಡಾಕ್ಕೆ ಪೋಸ್ಟ್‌ಕಾರ್ಡ್ ಬಳಸಲು ಯತ್ನಿಸಿರುವುದು ಎಷ್ಟು ಸರಿ ಎಂಬ ಪ್ರಶ್ನೆ ಎದ್ದಿದೆ.

“ಶಾಂತಿಧೂತರು ಎನಿಸಿಕೊಂಡವರಿಂದ ಪವರ್ ಸ್ಟಾರ್‌ ಪುನೀತ್ ರಾಜ್‌ಕುಮಾರ್‌ ಅವರಿಗೆ ಅವಮಾನ… ಅಪ್ಪು ಹುಟ್ಟಿದ ದಿನ ಇಂದು, ಇದೇ ದಿನ ಕರ್ನಾಟಕ ಬಂದ್ ಎಂಬುದಾಗಿ ಕರೆ ನೀಡಿ ಕನ್ನಡದ ಮಣ್ಣಿನ ಹೆಮ್ಮೆಯ ಮಗನಿಗೆ ಅವಮಾನ ಮಾಡಿದ ಮುಸಲ್ಮಾನರು” ಎಂದು  ಪೋಸ್ಟರ್‌ಗಳನ್ನು ಮಾಡಿ ಪೋಸ್ಟ್‌ ಮಾಡಿರುವ  ಪೋಸ್ಟ್‌ಕಾರ್ಡ್, ಜನರ ನಡುವೆ ದ್ವೇಷ ಬಿತ್ತಲು ಯತ್ನಿಸಿದೆ.

“ಊರಿಗೆ ಬೆಂಕಿ ಹಚ್ಚಿ ಚಳಿ ಕಾಯುವುದರಲ್ಲಿ ನಿಮಗಿಂತ ಜಾಣರು ಯಾರು ಇಲ್ಲ ಅಂತ ಎಲ್ಲರಿಗೂ ಗೊತ್ತು. ಅವರು ಅಪ್ಪು ಬಾಸ್‌ಗೆ ಅವಮಾನ ಮಾಡಿಲ್ಲ. ಇಷ್ಟ ಇರೋರು ತಮ್ಮ ಅಂಗಡಿಗಳನ್ನು ಬಂದ್ ಮಾಡಬಹುದು ಎಂದು ಕರೆ ಕೊಟ್ಟಿದ್ದಾರೆ‌. ಆದ್ರೆ ನೀವು ಮಾತ್ರ ಈ ವಿಷಯದಲ್ಲಿ ಅಪ್ಪು ಬಾಸ್‌ಗೆ ಅವಮಾನ ಮಾಡುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ” ಎಂದು ಅಮರ್‌ ಎಂಬವರು ಕಮೆಂಟ್ ಮಾಡಿದ್ದಾರೆ.

ಬಿಜೆಪಿ ಪ್ರೊಪಗಾಂಡಕ್ಕೆ ಬಳಕೆಯಾಗುತ್ತಿರುವ ‘ಕಾಶ್ಮೀರ್‌ ಫೈಲ್ಸ್‌’ ಸಿನಿಮಾಕ್ಕೆ ಅಪಾರ ಪ್ರಚಾರ ನೀಡುವುದರ ಜೊತೆಗೆ ರಾಜ್ಯ ಸರ್ಕಾರ ತೆರಿಗೆ ವಿನಾಯಿತಿಯನ್ನೂ ನೀಡಿರುವುದನ್ನು ಪ್ರಸ್ತಾಪಿಸಿರುವ ಜನರು, ಪುನೀತ್‌ ರಾಜ್‌ಕುಮಾರ್‌ ಅವರು ಕೊನೆಯ ಸಿನಿಮಾಕ್ಕೆ ಸರ್ಕಾರ ತೆರಿಗೆ ವಿನಾಯಿತಿ ಏಕೆ ನೀಡಿಲ್ಲ ಎಂದು ಪ್ರಶ್ನಿಸಿದ್ದಾರೆ.

“ಕಾಶ್ಮೀರ್ ಫೈಲ್ಸ್ ಸಿನೆಮಾ ತೆರಿಗೆ ವಿನಾಯಿತಿ ಕೊಟ್ಟು ಜೇಮ್ಸ್‌‌ಗೆ ವಿನಾಯಿತಿ ಕೊಡದೇ ಇರೋ ಸರ್ಕಾರ ಅಪ್ಪು ಸರ್‌ಗೆ ಅವಮಾನ ಮಾಡಿದೆ. ಇದರ ಬಗ್ಗೆ ಮಾತನಾಡಿ” ಎಂದು  ಮುಸ್ತಫಾ ಮೊಹಮದ್‌ ಹಾಗೂ ಐಜಿ ಚಿನ್ನಪ್ಪ ಎಂಬವರು ಆಗ್ರಹಿಸಿದ್ದಾರೆ.

“ಕೇವಲ ಮುಸಲ್ಮಾನರ ವಹಿವಾಟು ಸ್ವಯಂ ಪ್ರೇರಿತ ಬಂದ್ ಅಷ್ಟೇ. ರಾಜ್ ಫ್ಯಾಮಿಲಿ ನೆಪ ಮಾಡಿ ಬೆಂಕಿ ಹಚ್ಚಬೇಡಿ ಮಹೇಶ್ ವಿಕ್ರಂ ಹೆಗ್ಡೆ” ಎಂದು  ಸಫಾನ್ ಮೊಹಮ್ಮದ್ ವಿನಂತಿಸಿದ್ದಾರೆ.

ಹಿಜಾಬ್‌ ಧಾರ್ಮಿಕ ಹಕ್ಕಿನ ಭಾಗವಾಗಿಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಪ್ರಕರಣ ಸುಪ್ರೀಂ ಕೋರ್ಟ್ ಕದ ತಟ್ಟಿದೆ. ಇದರ ನಡುವೆ, ತಮ್ಮ ಧಾರ್ಮಿಕ ಹಕ್ಕಿಗಾಗಿ ಮುಸ್ಲಿಂ ಸಮುದಾಯಗಳು ಆಗ್ರಹಿಸುತ್ತಿವೆ. ತೀರ್ಪು ಬಂದ ಒಂದು ದಿನದ ಬಳಿಕ  ಬಂದ್ ಆಚರಿಸುವುದಾಗಿ ಮುಸ್ಲಿಂ ಮುಖಂಡರು ಹೇಳಿದ್ದರು.

ಕೋಮುದ್ವೇಷ: ರಿಪೋರ್ಟ್ ಮಾಡುವುದು ಹೇಗೆ?

ಕೋಮುದ್ವೇಷ ಹರಡುವುದು ಫೇಸ್‌ಬುಕ್‌ ಕಮ್ಯುನಿಟಿ ನಿಯಮಗಳ ಉಲ್ಲಂಘನೆಯಾಗಿರುತ್ತದೆ. ಹೀಗಾಗಿ ಸಂಬಂಧಪಟ್ಟ ಪೋಸ್ಟ್‌ನಲ್ಲಿ ಬಲಭಾಗದಲ್ಲಿನ ಮೂರು ಚುಕ್ಕೆಗಳನ್ನು ಕ್ಲಿಕ್ ಮಾಡಿ, ‘ರೀಪೋರ್ಟ್ ಪೋಸ್ಟ್‌’ ಆಯ್ಕೆ ಮಾಡಿದರೆ, ಯಾವ ಆಯಾಮದ ಪೋಸ್ಟ್‌ ಎಂದು ಫೇಸ್‌ಬುಕ್ ಕೇಳುತ್ತದೆ. ಪೋಸ್ಟ್‌ಗೆ ಸಂಬಂಧಿಸಿದ ಆಯಾಮಗಳನ್ನು (ಉದಾಹರಣೆಗೆ ‘hate speech’, violence) ಆಯ್ಕೆ ಮಾಡಿ ರಿಪೋರ್ಟ್ ಮಾಡಬಹುದು.


ಇದನ್ನೂ ಓದಿರಿ: ಕನ್ನಡ ಚಿತ್ರರಂಗಕ್ಕೆ ಹೊಸ ಕ್ರಿಯಾಶೀಲತೆ ತಂದುಕೊಟ್ಟ ’ಅಪ್ಪು ಡ್ಯಾನ್ಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. The judgement of the Karanataka High Court on Hijab shows how the facist BJP has hijacked the judiciary of the country. May God have mercy upon our land, sweet homeland, free Her from the clutches of the destructive forces. Jai Hind!

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...