Homeಕರ್ನಾಟಕಅಪ್ಪು ಹೆಸರಲ್ಲಿ ಮುಸ್ಲಿಮರ ವಿರುದ್ಧ ದ್ವೇಶ ಬಿತ್ತಲು ಯತ್ನಿಸಿದ ಪೋಸ್ಟ್‌ಕಾರ್ಡ್; ಜನರಿಂದ ತರಾಟೆ

ಅಪ್ಪು ಹೆಸರಲ್ಲಿ ಮುಸ್ಲಿಮರ ವಿರುದ್ಧ ದ್ವೇಶ ಬಿತ್ತಲು ಯತ್ನಿಸಿದ ಪೋಸ್ಟ್‌ಕಾರ್ಡ್; ಜನರಿಂದ ತರಾಟೆ

- Advertisement -
- Advertisement -

ಬಿಜೆಪಿಯ ಪ್ರೊಪಗಾಂಡ ವೇದಿಕೆಯಾಗಿರುವ ಪೋಸ್ಟ್‌ಕಾರ್ಡ್ ಫೇಸ್‌ಬುಕ್‌ ಪೇಜ್‌ನಲ್ಲಿ ಇಂದು ಮಾಡಲಾಗಿರುವ ಪೋಸ್ಟ್‌ಗಳು ಜನರಿಂದ ಟೀಕೆಗೆ ಒಳಗಾಗಿವೆ. ಬಿಜೆಪಿ ಪರ ಪ್ರಚಾರ, ಕೋಮುದ್ವೇಷ, ಸುಳ್ಳು ಸುದ್ದಿಗಳ ಕಾರಣಕ್ಕೆ ಹೆಸರಾಗಿರುವ ಪೋಸ್ಟ್‌ ಕಾರ್ಡ್ ಹಾಗೂ ಅದರ ಸಂಪಾದಕ ಮಹೇಶ್‌ ವಿಕ್ರಂ ಹೆಗಡೆಯವರನ್ನು ಜನರು ತರಾಟೆಗೆ ತೆಗೆದುಕೊಂಡಿದ್ದಾರೆ.

ಹಠಾತ್ ನಿಧನರಾದ ಪವರ್‌ ಸ್ಟಾರ್‌ ಪುನೀತ್ ರಾಜ್‌ಕುಮಾರ್‌ ಅವರ ಅಗಲಿಕೆಯ ನೋವಿನ ನಡುವೆ ಇಂದು ಅವರು ಜನ್ಮದಿನ ಬಂದಿದೆ. ಪುನೀತ್‌ ಅವರ ಕೊನೆಯ ಸಿನಿಮಾ ‘ಜೇಮ್ಸ್‌’ ಕೂಡ ಬಿಡುಗಡೆಯಾಗಿದೆ. ಇದರ ನಡುವೆ ಮುಸ್ಲಿಂ ಸಮುದಾಯ ಹಿಜಾಬ್‌ ಹಕ್ಕಿಗಾಗಿ ಹೋರಾಟ ಮುಂದುವರಿಸಿದ್ದು, ತಮ್ಮ ವ್ಯಾಪಾರ ವಹಿವಾಟುಗಳನ್ನು ಬಂದ್‌ ಮಾಡಿ ಇಂದು ಪ್ರತಿಭಟಿಸಿದೆ.

ಆದರೆ ಪುನೀತ್‌ ಅವರ ಜನ್ಮದಿನಕ್ಕೂ ಮುಸ್ಲಿಂ ಸಮುದಾಯದ ಹೋರಾಟಕ್ಕೂ ಯಾವುದೇ ಸಂಬಂಧವಿಲ್ಲದಿದ್ದರೂ ಒಂದಕ್ಕೊಂದು ಸಂಬಂಧ ಕಲ್ಪಿಸಲು ಯತ್ನಿಸಿರುವ ಪೋಸ್ಟ್‌ ಕಾರ್ಡ್‌ಗೆ ಕನ್ನಡಿಗರು ಛೀಮಾರಿ ಹಾಕಿದ್ದಾರೆ. ಮುಸ್ಲಿಂ ಸಮುದಾಯದ ಬಂದ್‌ಗೆ ಸಂಬಂಧಿಸಿದಂತೆ ಇತರ ಪೋಸ್ಟರ್‌ಗಳನ್ನೂ ಪೋಸ್ಟ್‌ಕಾರ್ಡ್‌ನಲ್ಲಿ ಕಾಣಬಹುದು. ಪುನೀತ್ ರಾಜ್‌ಕುಮಾರ್‌ ಅವರ ಜನ್ಮದಿನವನ್ನು ಹಿಜಾಬ್‌ ಹೋರಾಟಕ್ಕೆ ತಳುಕು ಹಾಕಿರುವ ಎರಡು ಪೋಸ್ಟರ್‌ಗಳು ಈಗ ಚರ್ಚೆಗೆ ಗ್ರಾಸವಾಗಿವೆ. ಎಲ್ಲ ಜಾತಿ, ಧರ್ಮಗಳಾಚೆಗೆ ಆಲದ ಮರದಂತೆ ವಿಸ್ತರಿಸಿರುವ ಮೇರು ವ್ಯಕ್ತಿತ್ವ ಪುನೀತ್ ಅವರನ್ನು ತಮ್ಮ ಕೋಮು ಅಜೆಂಡಾಕ್ಕೆ ಪೋಸ್ಟ್‌ಕಾರ್ಡ್ ಬಳಸಲು ಯತ್ನಿಸಿರುವುದು ಎಷ್ಟು ಸರಿ ಎಂಬ ಪ್ರಶ್ನೆ ಎದ್ದಿದೆ.

“ಶಾಂತಿಧೂತರು ಎನಿಸಿಕೊಂಡವರಿಂದ ಪವರ್ ಸ್ಟಾರ್‌ ಪುನೀತ್ ರಾಜ್‌ಕುಮಾರ್‌ ಅವರಿಗೆ ಅವಮಾನ… ಅಪ್ಪು ಹುಟ್ಟಿದ ದಿನ ಇಂದು, ಇದೇ ದಿನ ಕರ್ನಾಟಕ ಬಂದ್ ಎಂಬುದಾಗಿ ಕರೆ ನೀಡಿ ಕನ್ನಡದ ಮಣ್ಣಿನ ಹೆಮ್ಮೆಯ ಮಗನಿಗೆ ಅವಮಾನ ಮಾಡಿದ ಮುಸಲ್ಮಾನರು” ಎಂದು  ಪೋಸ್ಟರ್‌ಗಳನ್ನು ಮಾಡಿ ಪೋಸ್ಟ್‌ ಮಾಡಿರುವ  ಪೋಸ್ಟ್‌ಕಾರ್ಡ್, ಜನರ ನಡುವೆ ದ್ವೇಷ ಬಿತ್ತಲು ಯತ್ನಿಸಿದೆ.

“ಊರಿಗೆ ಬೆಂಕಿ ಹಚ್ಚಿ ಚಳಿ ಕಾಯುವುದರಲ್ಲಿ ನಿಮಗಿಂತ ಜಾಣರು ಯಾರು ಇಲ್ಲ ಅಂತ ಎಲ್ಲರಿಗೂ ಗೊತ್ತು. ಅವರು ಅಪ್ಪು ಬಾಸ್‌ಗೆ ಅವಮಾನ ಮಾಡಿಲ್ಲ. ಇಷ್ಟ ಇರೋರು ತಮ್ಮ ಅಂಗಡಿಗಳನ್ನು ಬಂದ್ ಮಾಡಬಹುದು ಎಂದು ಕರೆ ಕೊಟ್ಟಿದ್ದಾರೆ‌. ಆದ್ರೆ ನೀವು ಮಾತ್ರ ಈ ವಿಷಯದಲ್ಲಿ ಅಪ್ಪು ಬಾಸ್‌ಗೆ ಅವಮಾನ ಮಾಡುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ” ಎಂದು ಅಮರ್‌ ಎಂಬವರು ಕಮೆಂಟ್ ಮಾಡಿದ್ದಾರೆ.

ಬಿಜೆಪಿ ಪ್ರೊಪಗಾಂಡಕ್ಕೆ ಬಳಕೆಯಾಗುತ್ತಿರುವ ‘ಕಾಶ್ಮೀರ್‌ ಫೈಲ್ಸ್‌’ ಸಿನಿಮಾಕ್ಕೆ ಅಪಾರ ಪ್ರಚಾರ ನೀಡುವುದರ ಜೊತೆಗೆ ರಾಜ್ಯ ಸರ್ಕಾರ ತೆರಿಗೆ ವಿನಾಯಿತಿಯನ್ನೂ ನೀಡಿರುವುದನ್ನು ಪ್ರಸ್ತಾಪಿಸಿರುವ ಜನರು, ಪುನೀತ್‌ ರಾಜ್‌ಕುಮಾರ್‌ ಅವರು ಕೊನೆಯ ಸಿನಿಮಾಕ್ಕೆ ಸರ್ಕಾರ ತೆರಿಗೆ ವಿನಾಯಿತಿ ಏಕೆ ನೀಡಿಲ್ಲ ಎಂದು ಪ್ರಶ್ನಿಸಿದ್ದಾರೆ.

“ಕಾಶ್ಮೀರ್ ಫೈಲ್ಸ್ ಸಿನೆಮಾ ತೆರಿಗೆ ವಿನಾಯಿತಿ ಕೊಟ್ಟು ಜೇಮ್ಸ್‌‌ಗೆ ವಿನಾಯಿತಿ ಕೊಡದೇ ಇರೋ ಸರ್ಕಾರ ಅಪ್ಪು ಸರ್‌ಗೆ ಅವಮಾನ ಮಾಡಿದೆ. ಇದರ ಬಗ್ಗೆ ಮಾತನಾಡಿ” ಎಂದು  ಮುಸ್ತಫಾ ಮೊಹಮದ್‌ ಹಾಗೂ ಐಜಿ ಚಿನ್ನಪ್ಪ ಎಂಬವರು ಆಗ್ರಹಿಸಿದ್ದಾರೆ.

“ಕೇವಲ ಮುಸಲ್ಮಾನರ ವಹಿವಾಟು ಸ್ವಯಂ ಪ್ರೇರಿತ ಬಂದ್ ಅಷ್ಟೇ. ರಾಜ್ ಫ್ಯಾಮಿಲಿ ನೆಪ ಮಾಡಿ ಬೆಂಕಿ ಹಚ್ಚಬೇಡಿ ಮಹೇಶ್ ವಿಕ್ರಂ ಹೆಗ್ಡೆ” ಎಂದು  ಸಫಾನ್ ಮೊಹಮ್ಮದ್ ವಿನಂತಿಸಿದ್ದಾರೆ.

ಹಿಜಾಬ್‌ ಧಾರ್ಮಿಕ ಹಕ್ಕಿನ ಭಾಗವಾಗಿಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಪ್ರಕರಣ ಸುಪ್ರೀಂ ಕೋರ್ಟ್ ಕದ ತಟ್ಟಿದೆ. ಇದರ ನಡುವೆ, ತಮ್ಮ ಧಾರ್ಮಿಕ ಹಕ್ಕಿಗಾಗಿ ಮುಸ್ಲಿಂ ಸಮುದಾಯಗಳು ಆಗ್ರಹಿಸುತ್ತಿವೆ. ತೀರ್ಪು ಬಂದ ಒಂದು ದಿನದ ಬಳಿಕ  ಬಂದ್ ಆಚರಿಸುವುದಾಗಿ ಮುಸ್ಲಿಂ ಮುಖಂಡರು ಹೇಳಿದ್ದರು.

ಕೋಮುದ್ವೇಷ: ರಿಪೋರ್ಟ್ ಮಾಡುವುದು ಹೇಗೆ?

ಕೋಮುದ್ವೇಷ ಹರಡುವುದು ಫೇಸ್‌ಬುಕ್‌ ಕಮ್ಯುನಿಟಿ ನಿಯಮಗಳ ಉಲ್ಲಂಘನೆಯಾಗಿರುತ್ತದೆ. ಹೀಗಾಗಿ ಸಂಬಂಧಪಟ್ಟ ಪೋಸ್ಟ್‌ನಲ್ಲಿ ಬಲಭಾಗದಲ್ಲಿನ ಮೂರು ಚುಕ್ಕೆಗಳನ್ನು ಕ್ಲಿಕ್ ಮಾಡಿ, ‘ರೀಪೋರ್ಟ್ ಪೋಸ್ಟ್‌’ ಆಯ್ಕೆ ಮಾಡಿದರೆ, ಯಾವ ಆಯಾಮದ ಪೋಸ್ಟ್‌ ಎಂದು ಫೇಸ್‌ಬುಕ್ ಕೇಳುತ್ತದೆ. ಪೋಸ್ಟ್‌ಗೆ ಸಂಬಂಧಿಸಿದ ಆಯಾಮಗಳನ್ನು (ಉದಾಹರಣೆಗೆ ‘hate speech’, violence) ಆಯ್ಕೆ ಮಾಡಿ ರಿಪೋರ್ಟ್ ಮಾಡಬಹುದು.


ಇದನ್ನೂ ಓದಿರಿ: ಕನ್ನಡ ಚಿತ್ರರಂಗಕ್ಕೆ ಹೊಸ ಕ್ರಿಯಾಶೀಲತೆ ತಂದುಕೊಟ್ಟ ’ಅಪ್ಪು ಡ್ಯಾನ್ಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. The judgement of the Karanataka High Court on Hijab shows how the facist BJP has hijacked the judiciary of the country. May God have mercy upon our land, sweet homeland, free Her from the clutches of the destructive forces. Jai Hind!

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...