Homeಕರ್ನಾಟಕಅಪ್ಪು ಹೆಸರಲ್ಲಿ ಮುಸ್ಲಿಮರ ವಿರುದ್ಧ ದ್ವೇಶ ಬಿತ್ತಲು ಯತ್ನಿಸಿದ ಪೋಸ್ಟ್‌ಕಾರ್ಡ್; ಜನರಿಂದ ತರಾಟೆ

ಅಪ್ಪು ಹೆಸರಲ್ಲಿ ಮುಸ್ಲಿಮರ ವಿರುದ್ಧ ದ್ವೇಶ ಬಿತ್ತಲು ಯತ್ನಿಸಿದ ಪೋಸ್ಟ್‌ಕಾರ್ಡ್; ಜನರಿಂದ ತರಾಟೆ

- Advertisement -
- Advertisement -

ಬಿಜೆಪಿಯ ಪ್ರೊಪಗಾಂಡ ವೇದಿಕೆಯಾಗಿರುವ ಪೋಸ್ಟ್‌ಕಾರ್ಡ್ ಫೇಸ್‌ಬುಕ್‌ ಪೇಜ್‌ನಲ್ಲಿ ಇಂದು ಮಾಡಲಾಗಿರುವ ಪೋಸ್ಟ್‌ಗಳು ಜನರಿಂದ ಟೀಕೆಗೆ ಒಳಗಾಗಿವೆ. ಬಿಜೆಪಿ ಪರ ಪ್ರಚಾರ, ಕೋಮುದ್ವೇಷ, ಸುಳ್ಳು ಸುದ್ದಿಗಳ ಕಾರಣಕ್ಕೆ ಹೆಸರಾಗಿರುವ ಪೋಸ್ಟ್‌ ಕಾರ್ಡ್ ಹಾಗೂ ಅದರ ಸಂಪಾದಕ ಮಹೇಶ್‌ ವಿಕ್ರಂ ಹೆಗಡೆಯವರನ್ನು ಜನರು ತರಾಟೆಗೆ ತೆಗೆದುಕೊಂಡಿದ್ದಾರೆ.

ಹಠಾತ್ ನಿಧನರಾದ ಪವರ್‌ ಸ್ಟಾರ್‌ ಪುನೀತ್ ರಾಜ್‌ಕುಮಾರ್‌ ಅವರ ಅಗಲಿಕೆಯ ನೋವಿನ ನಡುವೆ ಇಂದು ಅವರು ಜನ್ಮದಿನ ಬಂದಿದೆ. ಪುನೀತ್‌ ಅವರ ಕೊನೆಯ ಸಿನಿಮಾ ‘ಜೇಮ್ಸ್‌’ ಕೂಡ ಬಿಡುಗಡೆಯಾಗಿದೆ. ಇದರ ನಡುವೆ ಮುಸ್ಲಿಂ ಸಮುದಾಯ ಹಿಜಾಬ್‌ ಹಕ್ಕಿಗಾಗಿ ಹೋರಾಟ ಮುಂದುವರಿಸಿದ್ದು, ತಮ್ಮ ವ್ಯಾಪಾರ ವಹಿವಾಟುಗಳನ್ನು ಬಂದ್‌ ಮಾಡಿ ಇಂದು ಪ್ರತಿಭಟಿಸಿದೆ.

ಆದರೆ ಪುನೀತ್‌ ಅವರ ಜನ್ಮದಿನಕ್ಕೂ ಮುಸ್ಲಿಂ ಸಮುದಾಯದ ಹೋರಾಟಕ್ಕೂ ಯಾವುದೇ ಸಂಬಂಧವಿಲ್ಲದಿದ್ದರೂ ಒಂದಕ್ಕೊಂದು ಸಂಬಂಧ ಕಲ್ಪಿಸಲು ಯತ್ನಿಸಿರುವ ಪೋಸ್ಟ್‌ ಕಾರ್ಡ್‌ಗೆ ಕನ್ನಡಿಗರು ಛೀಮಾರಿ ಹಾಕಿದ್ದಾರೆ. ಮುಸ್ಲಿಂ ಸಮುದಾಯದ ಬಂದ್‌ಗೆ ಸಂಬಂಧಿಸಿದಂತೆ ಇತರ ಪೋಸ್ಟರ್‌ಗಳನ್ನೂ ಪೋಸ್ಟ್‌ಕಾರ್ಡ್‌ನಲ್ಲಿ ಕಾಣಬಹುದು. ಪುನೀತ್ ರಾಜ್‌ಕುಮಾರ್‌ ಅವರ ಜನ್ಮದಿನವನ್ನು ಹಿಜಾಬ್‌ ಹೋರಾಟಕ್ಕೆ ತಳುಕು ಹಾಕಿರುವ ಎರಡು ಪೋಸ್ಟರ್‌ಗಳು ಈಗ ಚರ್ಚೆಗೆ ಗ್ರಾಸವಾಗಿವೆ. ಎಲ್ಲ ಜಾತಿ, ಧರ್ಮಗಳಾಚೆಗೆ ಆಲದ ಮರದಂತೆ ವಿಸ್ತರಿಸಿರುವ ಮೇರು ವ್ಯಕ್ತಿತ್ವ ಪುನೀತ್ ಅವರನ್ನು ತಮ್ಮ ಕೋಮು ಅಜೆಂಡಾಕ್ಕೆ ಪೋಸ್ಟ್‌ಕಾರ್ಡ್ ಬಳಸಲು ಯತ್ನಿಸಿರುವುದು ಎಷ್ಟು ಸರಿ ಎಂಬ ಪ್ರಶ್ನೆ ಎದ್ದಿದೆ.

“ಶಾಂತಿಧೂತರು ಎನಿಸಿಕೊಂಡವರಿಂದ ಪವರ್ ಸ್ಟಾರ್‌ ಪುನೀತ್ ರಾಜ್‌ಕುಮಾರ್‌ ಅವರಿಗೆ ಅವಮಾನ… ಅಪ್ಪು ಹುಟ್ಟಿದ ದಿನ ಇಂದು, ಇದೇ ದಿನ ಕರ್ನಾಟಕ ಬಂದ್ ಎಂಬುದಾಗಿ ಕರೆ ನೀಡಿ ಕನ್ನಡದ ಮಣ್ಣಿನ ಹೆಮ್ಮೆಯ ಮಗನಿಗೆ ಅವಮಾನ ಮಾಡಿದ ಮುಸಲ್ಮಾನರು” ಎಂದು  ಪೋಸ್ಟರ್‌ಗಳನ್ನು ಮಾಡಿ ಪೋಸ್ಟ್‌ ಮಾಡಿರುವ  ಪೋಸ್ಟ್‌ಕಾರ್ಡ್, ಜನರ ನಡುವೆ ದ್ವೇಷ ಬಿತ್ತಲು ಯತ್ನಿಸಿದೆ.

“ಊರಿಗೆ ಬೆಂಕಿ ಹಚ್ಚಿ ಚಳಿ ಕಾಯುವುದರಲ್ಲಿ ನಿಮಗಿಂತ ಜಾಣರು ಯಾರು ಇಲ್ಲ ಅಂತ ಎಲ್ಲರಿಗೂ ಗೊತ್ತು. ಅವರು ಅಪ್ಪು ಬಾಸ್‌ಗೆ ಅವಮಾನ ಮಾಡಿಲ್ಲ. ಇಷ್ಟ ಇರೋರು ತಮ್ಮ ಅಂಗಡಿಗಳನ್ನು ಬಂದ್ ಮಾಡಬಹುದು ಎಂದು ಕರೆ ಕೊಟ್ಟಿದ್ದಾರೆ‌. ಆದ್ರೆ ನೀವು ಮಾತ್ರ ಈ ವಿಷಯದಲ್ಲಿ ಅಪ್ಪು ಬಾಸ್‌ಗೆ ಅವಮಾನ ಮಾಡುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ” ಎಂದು ಅಮರ್‌ ಎಂಬವರು ಕಮೆಂಟ್ ಮಾಡಿದ್ದಾರೆ.

ಬಿಜೆಪಿ ಪ್ರೊಪಗಾಂಡಕ್ಕೆ ಬಳಕೆಯಾಗುತ್ತಿರುವ ‘ಕಾಶ್ಮೀರ್‌ ಫೈಲ್ಸ್‌’ ಸಿನಿಮಾಕ್ಕೆ ಅಪಾರ ಪ್ರಚಾರ ನೀಡುವುದರ ಜೊತೆಗೆ ರಾಜ್ಯ ಸರ್ಕಾರ ತೆರಿಗೆ ವಿನಾಯಿತಿಯನ್ನೂ ನೀಡಿರುವುದನ್ನು ಪ್ರಸ್ತಾಪಿಸಿರುವ ಜನರು, ಪುನೀತ್‌ ರಾಜ್‌ಕುಮಾರ್‌ ಅವರು ಕೊನೆಯ ಸಿನಿಮಾಕ್ಕೆ ಸರ್ಕಾರ ತೆರಿಗೆ ವಿನಾಯಿತಿ ಏಕೆ ನೀಡಿಲ್ಲ ಎಂದು ಪ್ರಶ್ನಿಸಿದ್ದಾರೆ.

“ಕಾಶ್ಮೀರ್ ಫೈಲ್ಸ್ ಸಿನೆಮಾ ತೆರಿಗೆ ವಿನಾಯಿತಿ ಕೊಟ್ಟು ಜೇಮ್ಸ್‌‌ಗೆ ವಿನಾಯಿತಿ ಕೊಡದೇ ಇರೋ ಸರ್ಕಾರ ಅಪ್ಪು ಸರ್‌ಗೆ ಅವಮಾನ ಮಾಡಿದೆ. ಇದರ ಬಗ್ಗೆ ಮಾತನಾಡಿ” ಎಂದು  ಮುಸ್ತಫಾ ಮೊಹಮದ್‌ ಹಾಗೂ ಐಜಿ ಚಿನ್ನಪ್ಪ ಎಂಬವರು ಆಗ್ರಹಿಸಿದ್ದಾರೆ.

“ಕೇವಲ ಮುಸಲ್ಮಾನರ ವಹಿವಾಟು ಸ್ವಯಂ ಪ್ರೇರಿತ ಬಂದ್ ಅಷ್ಟೇ. ರಾಜ್ ಫ್ಯಾಮಿಲಿ ನೆಪ ಮಾಡಿ ಬೆಂಕಿ ಹಚ್ಚಬೇಡಿ ಮಹೇಶ್ ವಿಕ್ರಂ ಹೆಗ್ಡೆ” ಎಂದು  ಸಫಾನ್ ಮೊಹಮ್ಮದ್ ವಿನಂತಿಸಿದ್ದಾರೆ.

ಹಿಜಾಬ್‌ ಧಾರ್ಮಿಕ ಹಕ್ಕಿನ ಭಾಗವಾಗಿಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಪ್ರಕರಣ ಸುಪ್ರೀಂ ಕೋರ್ಟ್ ಕದ ತಟ್ಟಿದೆ. ಇದರ ನಡುವೆ, ತಮ್ಮ ಧಾರ್ಮಿಕ ಹಕ್ಕಿಗಾಗಿ ಮುಸ್ಲಿಂ ಸಮುದಾಯಗಳು ಆಗ್ರಹಿಸುತ್ತಿವೆ. ತೀರ್ಪು ಬಂದ ಒಂದು ದಿನದ ಬಳಿಕ  ಬಂದ್ ಆಚರಿಸುವುದಾಗಿ ಮುಸ್ಲಿಂ ಮುಖಂಡರು ಹೇಳಿದ್ದರು.

ಕೋಮುದ್ವೇಷ: ರಿಪೋರ್ಟ್ ಮಾಡುವುದು ಹೇಗೆ?

ಕೋಮುದ್ವೇಷ ಹರಡುವುದು ಫೇಸ್‌ಬುಕ್‌ ಕಮ್ಯುನಿಟಿ ನಿಯಮಗಳ ಉಲ್ಲಂಘನೆಯಾಗಿರುತ್ತದೆ. ಹೀಗಾಗಿ ಸಂಬಂಧಪಟ್ಟ ಪೋಸ್ಟ್‌ನಲ್ಲಿ ಬಲಭಾಗದಲ್ಲಿನ ಮೂರು ಚುಕ್ಕೆಗಳನ್ನು ಕ್ಲಿಕ್ ಮಾಡಿ, ‘ರೀಪೋರ್ಟ್ ಪೋಸ್ಟ್‌’ ಆಯ್ಕೆ ಮಾಡಿದರೆ, ಯಾವ ಆಯಾಮದ ಪೋಸ್ಟ್‌ ಎಂದು ಫೇಸ್‌ಬುಕ್ ಕೇಳುತ್ತದೆ. ಪೋಸ್ಟ್‌ಗೆ ಸಂಬಂಧಿಸಿದ ಆಯಾಮಗಳನ್ನು (ಉದಾಹರಣೆಗೆ ‘hate speech’, violence) ಆಯ್ಕೆ ಮಾಡಿ ರಿಪೋರ್ಟ್ ಮಾಡಬಹುದು.


ಇದನ್ನೂ ಓದಿರಿ: ಕನ್ನಡ ಚಿತ್ರರಂಗಕ್ಕೆ ಹೊಸ ಕ್ರಿಯಾಶೀಲತೆ ತಂದುಕೊಟ್ಟ ’ಅಪ್ಪು ಡ್ಯಾನ್ಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. The judgement of the Karanataka High Court on Hijab shows how the facist BJP has hijacked the judiciary of the country. May God have mercy upon our land, sweet homeland, free Her from the clutches of the destructive forces. Jai Hind!

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....