Homeಕರ್ನಾಟಕಅಪ್ಪು ಹೆಸರಲ್ಲಿ ಮುಸ್ಲಿಮರ ವಿರುದ್ಧ ದ್ವೇಶ ಬಿತ್ತಲು ಯತ್ನಿಸಿದ ಪೋಸ್ಟ್‌ಕಾರ್ಡ್; ಜನರಿಂದ ತರಾಟೆ

ಅಪ್ಪು ಹೆಸರಲ್ಲಿ ಮುಸ್ಲಿಮರ ವಿರುದ್ಧ ದ್ವೇಶ ಬಿತ್ತಲು ಯತ್ನಿಸಿದ ಪೋಸ್ಟ್‌ಕಾರ್ಡ್; ಜನರಿಂದ ತರಾಟೆ

- Advertisement -
- Advertisement -

ಬಿಜೆಪಿಯ ಪ್ರೊಪಗಾಂಡ ವೇದಿಕೆಯಾಗಿರುವ ಪೋಸ್ಟ್‌ಕಾರ್ಡ್ ಫೇಸ್‌ಬುಕ್‌ ಪೇಜ್‌ನಲ್ಲಿ ಇಂದು ಮಾಡಲಾಗಿರುವ ಪೋಸ್ಟ್‌ಗಳು ಜನರಿಂದ ಟೀಕೆಗೆ ಒಳಗಾಗಿವೆ. ಬಿಜೆಪಿ ಪರ ಪ್ರಚಾರ, ಕೋಮುದ್ವೇಷ, ಸುಳ್ಳು ಸುದ್ದಿಗಳ ಕಾರಣಕ್ಕೆ ಹೆಸರಾಗಿರುವ ಪೋಸ್ಟ್‌ ಕಾರ್ಡ್ ಹಾಗೂ ಅದರ ಸಂಪಾದಕ ಮಹೇಶ್‌ ವಿಕ್ರಂ ಹೆಗಡೆಯವರನ್ನು ಜನರು ತರಾಟೆಗೆ ತೆಗೆದುಕೊಂಡಿದ್ದಾರೆ.

ಹಠಾತ್ ನಿಧನರಾದ ಪವರ್‌ ಸ್ಟಾರ್‌ ಪುನೀತ್ ರಾಜ್‌ಕುಮಾರ್‌ ಅವರ ಅಗಲಿಕೆಯ ನೋವಿನ ನಡುವೆ ಇಂದು ಅವರು ಜನ್ಮದಿನ ಬಂದಿದೆ. ಪುನೀತ್‌ ಅವರ ಕೊನೆಯ ಸಿನಿಮಾ ‘ಜೇಮ್ಸ್‌’ ಕೂಡ ಬಿಡುಗಡೆಯಾಗಿದೆ. ಇದರ ನಡುವೆ ಮುಸ್ಲಿಂ ಸಮುದಾಯ ಹಿಜಾಬ್‌ ಹಕ್ಕಿಗಾಗಿ ಹೋರಾಟ ಮುಂದುವರಿಸಿದ್ದು, ತಮ್ಮ ವ್ಯಾಪಾರ ವಹಿವಾಟುಗಳನ್ನು ಬಂದ್‌ ಮಾಡಿ ಇಂದು ಪ್ರತಿಭಟಿಸಿದೆ.

ಆದರೆ ಪುನೀತ್‌ ಅವರ ಜನ್ಮದಿನಕ್ಕೂ ಮುಸ್ಲಿಂ ಸಮುದಾಯದ ಹೋರಾಟಕ್ಕೂ ಯಾವುದೇ ಸಂಬಂಧವಿಲ್ಲದಿದ್ದರೂ ಒಂದಕ್ಕೊಂದು ಸಂಬಂಧ ಕಲ್ಪಿಸಲು ಯತ್ನಿಸಿರುವ ಪೋಸ್ಟ್‌ ಕಾರ್ಡ್‌ಗೆ ಕನ್ನಡಿಗರು ಛೀಮಾರಿ ಹಾಕಿದ್ದಾರೆ. ಮುಸ್ಲಿಂ ಸಮುದಾಯದ ಬಂದ್‌ಗೆ ಸಂಬಂಧಿಸಿದಂತೆ ಇತರ ಪೋಸ್ಟರ್‌ಗಳನ್ನೂ ಪೋಸ್ಟ್‌ಕಾರ್ಡ್‌ನಲ್ಲಿ ಕಾಣಬಹುದು. ಪುನೀತ್ ರಾಜ್‌ಕುಮಾರ್‌ ಅವರ ಜನ್ಮದಿನವನ್ನು ಹಿಜಾಬ್‌ ಹೋರಾಟಕ್ಕೆ ತಳುಕು ಹಾಕಿರುವ ಎರಡು ಪೋಸ್ಟರ್‌ಗಳು ಈಗ ಚರ್ಚೆಗೆ ಗ್ರಾಸವಾಗಿವೆ. ಎಲ್ಲ ಜಾತಿ, ಧರ್ಮಗಳಾಚೆಗೆ ಆಲದ ಮರದಂತೆ ವಿಸ್ತರಿಸಿರುವ ಮೇರು ವ್ಯಕ್ತಿತ್ವ ಪುನೀತ್ ಅವರನ್ನು ತಮ್ಮ ಕೋಮು ಅಜೆಂಡಾಕ್ಕೆ ಪೋಸ್ಟ್‌ಕಾರ್ಡ್ ಬಳಸಲು ಯತ್ನಿಸಿರುವುದು ಎಷ್ಟು ಸರಿ ಎಂಬ ಪ್ರಶ್ನೆ ಎದ್ದಿದೆ.

“ಶಾಂತಿಧೂತರು ಎನಿಸಿಕೊಂಡವರಿಂದ ಪವರ್ ಸ್ಟಾರ್‌ ಪುನೀತ್ ರಾಜ್‌ಕುಮಾರ್‌ ಅವರಿಗೆ ಅವಮಾನ… ಅಪ್ಪು ಹುಟ್ಟಿದ ದಿನ ಇಂದು, ಇದೇ ದಿನ ಕರ್ನಾಟಕ ಬಂದ್ ಎಂಬುದಾಗಿ ಕರೆ ನೀಡಿ ಕನ್ನಡದ ಮಣ್ಣಿನ ಹೆಮ್ಮೆಯ ಮಗನಿಗೆ ಅವಮಾನ ಮಾಡಿದ ಮುಸಲ್ಮಾನರು” ಎಂದು  ಪೋಸ್ಟರ್‌ಗಳನ್ನು ಮಾಡಿ ಪೋಸ್ಟ್‌ ಮಾಡಿರುವ  ಪೋಸ್ಟ್‌ಕಾರ್ಡ್, ಜನರ ನಡುವೆ ದ್ವೇಷ ಬಿತ್ತಲು ಯತ್ನಿಸಿದೆ.

“ಊರಿಗೆ ಬೆಂಕಿ ಹಚ್ಚಿ ಚಳಿ ಕಾಯುವುದರಲ್ಲಿ ನಿಮಗಿಂತ ಜಾಣರು ಯಾರು ಇಲ್ಲ ಅಂತ ಎಲ್ಲರಿಗೂ ಗೊತ್ತು. ಅವರು ಅಪ್ಪು ಬಾಸ್‌ಗೆ ಅವಮಾನ ಮಾಡಿಲ್ಲ. ಇಷ್ಟ ಇರೋರು ತಮ್ಮ ಅಂಗಡಿಗಳನ್ನು ಬಂದ್ ಮಾಡಬಹುದು ಎಂದು ಕರೆ ಕೊಟ್ಟಿದ್ದಾರೆ‌. ಆದ್ರೆ ನೀವು ಮಾತ್ರ ಈ ವಿಷಯದಲ್ಲಿ ಅಪ್ಪು ಬಾಸ್‌ಗೆ ಅವಮಾನ ಮಾಡುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ” ಎಂದು ಅಮರ್‌ ಎಂಬವರು ಕಮೆಂಟ್ ಮಾಡಿದ್ದಾರೆ.

ಬಿಜೆಪಿ ಪ್ರೊಪಗಾಂಡಕ್ಕೆ ಬಳಕೆಯಾಗುತ್ತಿರುವ ‘ಕಾಶ್ಮೀರ್‌ ಫೈಲ್ಸ್‌’ ಸಿನಿಮಾಕ್ಕೆ ಅಪಾರ ಪ್ರಚಾರ ನೀಡುವುದರ ಜೊತೆಗೆ ರಾಜ್ಯ ಸರ್ಕಾರ ತೆರಿಗೆ ವಿನಾಯಿತಿಯನ್ನೂ ನೀಡಿರುವುದನ್ನು ಪ್ರಸ್ತಾಪಿಸಿರುವ ಜನರು, ಪುನೀತ್‌ ರಾಜ್‌ಕುಮಾರ್‌ ಅವರು ಕೊನೆಯ ಸಿನಿಮಾಕ್ಕೆ ಸರ್ಕಾರ ತೆರಿಗೆ ವಿನಾಯಿತಿ ಏಕೆ ನೀಡಿಲ್ಲ ಎಂದು ಪ್ರಶ್ನಿಸಿದ್ದಾರೆ.

“ಕಾಶ್ಮೀರ್ ಫೈಲ್ಸ್ ಸಿನೆಮಾ ತೆರಿಗೆ ವಿನಾಯಿತಿ ಕೊಟ್ಟು ಜೇಮ್ಸ್‌‌ಗೆ ವಿನಾಯಿತಿ ಕೊಡದೇ ಇರೋ ಸರ್ಕಾರ ಅಪ್ಪು ಸರ್‌ಗೆ ಅವಮಾನ ಮಾಡಿದೆ. ಇದರ ಬಗ್ಗೆ ಮಾತನಾಡಿ” ಎಂದು  ಮುಸ್ತಫಾ ಮೊಹಮದ್‌ ಹಾಗೂ ಐಜಿ ಚಿನ್ನಪ್ಪ ಎಂಬವರು ಆಗ್ರಹಿಸಿದ್ದಾರೆ.

“ಕೇವಲ ಮುಸಲ್ಮಾನರ ವಹಿವಾಟು ಸ್ವಯಂ ಪ್ರೇರಿತ ಬಂದ್ ಅಷ್ಟೇ. ರಾಜ್ ಫ್ಯಾಮಿಲಿ ನೆಪ ಮಾಡಿ ಬೆಂಕಿ ಹಚ್ಚಬೇಡಿ ಮಹೇಶ್ ವಿಕ್ರಂ ಹೆಗ್ಡೆ” ಎಂದು  ಸಫಾನ್ ಮೊಹಮ್ಮದ್ ವಿನಂತಿಸಿದ್ದಾರೆ.

ಹಿಜಾಬ್‌ ಧಾರ್ಮಿಕ ಹಕ್ಕಿನ ಭಾಗವಾಗಿಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಪ್ರಕರಣ ಸುಪ್ರೀಂ ಕೋರ್ಟ್ ಕದ ತಟ್ಟಿದೆ. ಇದರ ನಡುವೆ, ತಮ್ಮ ಧಾರ್ಮಿಕ ಹಕ್ಕಿಗಾಗಿ ಮುಸ್ಲಿಂ ಸಮುದಾಯಗಳು ಆಗ್ರಹಿಸುತ್ತಿವೆ. ತೀರ್ಪು ಬಂದ ಒಂದು ದಿನದ ಬಳಿಕ  ಬಂದ್ ಆಚರಿಸುವುದಾಗಿ ಮುಸ್ಲಿಂ ಮುಖಂಡರು ಹೇಳಿದ್ದರು.

ಕೋಮುದ್ವೇಷ: ರಿಪೋರ್ಟ್ ಮಾಡುವುದು ಹೇಗೆ?

ಕೋಮುದ್ವೇಷ ಹರಡುವುದು ಫೇಸ್‌ಬುಕ್‌ ಕಮ್ಯುನಿಟಿ ನಿಯಮಗಳ ಉಲ್ಲಂಘನೆಯಾಗಿರುತ್ತದೆ. ಹೀಗಾಗಿ ಸಂಬಂಧಪಟ್ಟ ಪೋಸ್ಟ್‌ನಲ್ಲಿ ಬಲಭಾಗದಲ್ಲಿನ ಮೂರು ಚುಕ್ಕೆಗಳನ್ನು ಕ್ಲಿಕ್ ಮಾಡಿ, ‘ರೀಪೋರ್ಟ್ ಪೋಸ್ಟ್‌’ ಆಯ್ಕೆ ಮಾಡಿದರೆ, ಯಾವ ಆಯಾಮದ ಪೋಸ್ಟ್‌ ಎಂದು ಫೇಸ್‌ಬುಕ್ ಕೇಳುತ್ತದೆ. ಪೋಸ್ಟ್‌ಗೆ ಸಂಬಂಧಿಸಿದ ಆಯಾಮಗಳನ್ನು (ಉದಾಹರಣೆಗೆ ‘hate speech’, violence) ಆಯ್ಕೆ ಮಾಡಿ ರಿಪೋರ್ಟ್ ಮಾಡಬಹುದು.


ಇದನ್ನೂ ಓದಿರಿ: ಕನ್ನಡ ಚಿತ್ರರಂಗಕ್ಕೆ ಹೊಸ ಕ್ರಿಯಾಶೀಲತೆ ತಂದುಕೊಟ್ಟ ’ಅಪ್ಪು ಡ್ಯಾನ್ಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. The judgement of the Karanataka High Court on Hijab shows how the facist BJP has hijacked the judiciary of the country. May God have mercy upon our land, sweet homeland, free Her from the clutches of the destructive forces. Jai Hind!

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...