Homeಕರ್ನಾಟಕಅಪ್ಪು ಹೆಸರಲ್ಲಿ ಮುಸ್ಲಿಮರ ವಿರುದ್ಧ ದ್ವೇಶ ಬಿತ್ತಲು ಯತ್ನಿಸಿದ ಪೋಸ್ಟ್‌ಕಾರ್ಡ್; ಜನರಿಂದ ತರಾಟೆ

ಅಪ್ಪು ಹೆಸರಲ್ಲಿ ಮುಸ್ಲಿಮರ ವಿರುದ್ಧ ದ್ವೇಶ ಬಿತ್ತಲು ಯತ್ನಿಸಿದ ಪೋಸ್ಟ್‌ಕಾರ್ಡ್; ಜನರಿಂದ ತರಾಟೆ

- Advertisement -
- Advertisement -

ಬಿಜೆಪಿಯ ಪ್ರೊಪಗಾಂಡ ವೇದಿಕೆಯಾಗಿರುವ ಪೋಸ್ಟ್‌ಕಾರ್ಡ್ ಫೇಸ್‌ಬುಕ್‌ ಪೇಜ್‌ನಲ್ಲಿ ಇಂದು ಮಾಡಲಾಗಿರುವ ಪೋಸ್ಟ್‌ಗಳು ಜನರಿಂದ ಟೀಕೆಗೆ ಒಳಗಾಗಿವೆ. ಬಿಜೆಪಿ ಪರ ಪ್ರಚಾರ, ಕೋಮುದ್ವೇಷ, ಸುಳ್ಳು ಸುದ್ದಿಗಳ ಕಾರಣಕ್ಕೆ ಹೆಸರಾಗಿರುವ ಪೋಸ್ಟ್‌ ಕಾರ್ಡ್ ಹಾಗೂ ಅದರ ಸಂಪಾದಕ ಮಹೇಶ್‌ ವಿಕ್ರಂ ಹೆಗಡೆಯವರನ್ನು ಜನರು ತರಾಟೆಗೆ ತೆಗೆದುಕೊಂಡಿದ್ದಾರೆ.

ಹಠಾತ್ ನಿಧನರಾದ ಪವರ್‌ ಸ್ಟಾರ್‌ ಪುನೀತ್ ರಾಜ್‌ಕುಮಾರ್‌ ಅವರ ಅಗಲಿಕೆಯ ನೋವಿನ ನಡುವೆ ಇಂದು ಅವರು ಜನ್ಮದಿನ ಬಂದಿದೆ. ಪುನೀತ್‌ ಅವರ ಕೊನೆಯ ಸಿನಿಮಾ ‘ಜೇಮ್ಸ್‌’ ಕೂಡ ಬಿಡುಗಡೆಯಾಗಿದೆ. ಇದರ ನಡುವೆ ಮುಸ್ಲಿಂ ಸಮುದಾಯ ಹಿಜಾಬ್‌ ಹಕ್ಕಿಗಾಗಿ ಹೋರಾಟ ಮುಂದುವರಿಸಿದ್ದು, ತಮ್ಮ ವ್ಯಾಪಾರ ವಹಿವಾಟುಗಳನ್ನು ಬಂದ್‌ ಮಾಡಿ ಇಂದು ಪ್ರತಿಭಟಿಸಿದೆ.

ಆದರೆ ಪುನೀತ್‌ ಅವರ ಜನ್ಮದಿನಕ್ಕೂ ಮುಸ್ಲಿಂ ಸಮುದಾಯದ ಹೋರಾಟಕ್ಕೂ ಯಾವುದೇ ಸಂಬಂಧವಿಲ್ಲದಿದ್ದರೂ ಒಂದಕ್ಕೊಂದು ಸಂಬಂಧ ಕಲ್ಪಿಸಲು ಯತ್ನಿಸಿರುವ ಪೋಸ್ಟ್‌ ಕಾರ್ಡ್‌ಗೆ ಕನ್ನಡಿಗರು ಛೀಮಾರಿ ಹಾಕಿದ್ದಾರೆ. ಮುಸ್ಲಿಂ ಸಮುದಾಯದ ಬಂದ್‌ಗೆ ಸಂಬಂಧಿಸಿದಂತೆ ಇತರ ಪೋಸ್ಟರ್‌ಗಳನ್ನೂ ಪೋಸ್ಟ್‌ಕಾರ್ಡ್‌ನಲ್ಲಿ ಕಾಣಬಹುದು. ಪುನೀತ್ ರಾಜ್‌ಕುಮಾರ್‌ ಅವರ ಜನ್ಮದಿನವನ್ನು ಹಿಜಾಬ್‌ ಹೋರಾಟಕ್ಕೆ ತಳುಕು ಹಾಕಿರುವ ಎರಡು ಪೋಸ್ಟರ್‌ಗಳು ಈಗ ಚರ್ಚೆಗೆ ಗ್ರಾಸವಾಗಿವೆ. ಎಲ್ಲ ಜಾತಿ, ಧರ್ಮಗಳಾಚೆಗೆ ಆಲದ ಮರದಂತೆ ವಿಸ್ತರಿಸಿರುವ ಮೇರು ವ್ಯಕ್ತಿತ್ವ ಪುನೀತ್ ಅವರನ್ನು ತಮ್ಮ ಕೋಮು ಅಜೆಂಡಾಕ್ಕೆ ಪೋಸ್ಟ್‌ಕಾರ್ಡ್ ಬಳಸಲು ಯತ್ನಿಸಿರುವುದು ಎಷ್ಟು ಸರಿ ಎಂಬ ಪ್ರಶ್ನೆ ಎದ್ದಿದೆ.

“ಶಾಂತಿಧೂತರು ಎನಿಸಿಕೊಂಡವರಿಂದ ಪವರ್ ಸ್ಟಾರ್‌ ಪುನೀತ್ ರಾಜ್‌ಕುಮಾರ್‌ ಅವರಿಗೆ ಅವಮಾನ… ಅಪ್ಪು ಹುಟ್ಟಿದ ದಿನ ಇಂದು, ಇದೇ ದಿನ ಕರ್ನಾಟಕ ಬಂದ್ ಎಂಬುದಾಗಿ ಕರೆ ನೀಡಿ ಕನ್ನಡದ ಮಣ್ಣಿನ ಹೆಮ್ಮೆಯ ಮಗನಿಗೆ ಅವಮಾನ ಮಾಡಿದ ಮುಸಲ್ಮಾನರು” ಎಂದು  ಪೋಸ್ಟರ್‌ಗಳನ್ನು ಮಾಡಿ ಪೋಸ್ಟ್‌ ಮಾಡಿರುವ  ಪೋಸ್ಟ್‌ಕಾರ್ಡ್, ಜನರ ನಡುವೆ ದ್ವೇಷ ಬಿತ್ತಲು ಯತ್ನಿಸಿದೆ.

“ಊರಿಗೆ ಬೆಂಕಿ ಹಚ್ಚಿ ಚಳಿ ಕಾಯುವುದರಲ್ಲಿ ನಿಮಗಿಂತ ಜಾಣರು ಯಾರು ಇಲ್ಲ ಅಂತ ಎಲ್ಲರಿಗೂ ಗೊತ್ತು. ಅವರು ಅಪ್ಪು ಬಾಸ್‌ಗೆ ಅವಮಾನ ಮಾಡಿಲ್ಲ. ಇಷ್ಟ ಇರೋರು ತಮ್ಮ ಅಂಗಡಿಗಳನ್ನು ಬಂದ್ ಮಾಡಬಹುದು ಎಂದು ಕರೆ ಕೊಟ್ಟಿದ್ದಾರೆ‌. ಆದ್ರೆ ನೀವು ಮಾತ್ರ ಈ ವಿಷಯದಲ್ಲಿ ಅಪ್ಪು ಬಾಸ್‌ಗೆ ಅವಮಾನ ಮಾಡುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ” ಎಂದು ಅಮರ್‌ ಎಂಬವರು ಕಮೆಂಟ್ ಮಾಡಿದ್ದಾರೆ.

ಬಿಜೆಪಿ ಪ್ರೊಪಗಾಂಡಕ್ಕೆ ಬಳಕೆಯಾಗುತ್ತಿರುವ ‘ಕಾಶ್ಮೀರ್‌ ಫೈಲ್ಸ್‌’ ಸಿನಿಮಾಕ್ಕೆ ಅಪಾರ ಪ್ರಚಾರ ನೀಡುವುದರ ಜೊತೆಗೆ ರಾಜ್ಯ ಸರ್ಕಾರ ತೆರಿಗೆ ವಿನಾಯಿತಿಯನ್ನೂ ನೀಡಿರುವುದನ್ನು ಪ್ರಸ್ತಾಪಿಸಿರುವ ಜನರು, ಪುನೀತ್‌ ರಾಜ್‌ಕುಮಾರ್‌ ಅವರು ಕೊನೆಯ ಸಿನಿಮಾಕ್ಕೆ ಸರ್ಕಾರ ತೆರಿಗೆ ವಿನಾಯಿತಿ ಏಕೆ ನೀಡಿಲ್ಲ ಎಂದು ಪ್ರಶ್ನಿಸಿದ್ದಾರೆ.

“ಕಾಶ್ಮೀರ್ ಫೈಲ್ಸ್ ಸಿನೆಮಾ ತೆರಿಗೆ ವಿನಾಯಿತಿ ಕೊಟ್ಟು ಜೇಮ್ಸ್‌‌ಗೆ ವಿನಾಯಿತಿ ಕೊಡದೇ ಇರೋ ಸರ್ಕಾರ ಅಪ್ಪು ಸರ್‌ಗೆ ಅವಮಾನ ಮಾಡಿದೆ. ಇದರ ಬಗ್ಗೆ ಮಾತನಾಡಿ” ಎಂದು  ಮುಸ್ತಫಾ ಮೊಹಮದ್‌ ಹಾಗೂ ಐಜಿ ಚಿನ್ನಪ್ಪ ಎಂಬವರು ಆಗ್ರಹಿಸಿದ್ದಾರೆ.

“ಕೇವಲ ಮುಸಲ್ಮಾನರ ವಹಿವಾಟು ಸ್ವಯಂ ಪ್ರೇರಿತ ಬಂದ್ ಅಷ್ಟೇ. ರಾಜ್ ಫ್ಯಾಮಿಲಿ ನೆಪ ಮಾಡಿ ಬೆಂಕಿ ಹಚ್ಚಬೇಡಿ ಮಹೇಶ್ ವಿಕ್ರಂ ಹೆಗ್ಡೆ” ಎಂದು  ಸಫಾನ್ ಮೊಹಮ್ಮದ್ ವಿನಂತಿಸಿದ್ದಾರೆ.

ಹಿಜಾಬ್‌ ಧಾರ್ಮಿಕ ಹಕ್ಕಿನ ಭಾಗವಾಗಿಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಪ್ರಕರಣ ಸುಪ್ರೀಂ ಕೋರ್ಟ್ ಕದ ತಟ್ಟಿದೆ. ಇದರ ನಡುವೆ, ತಮ್ಮ ಧಾರ್ಮಿಕ ಹಕ್ಕಿಗಾಗಿ ಮುಸ್ಲಿಂ ಸಮುದಾಯಗಳು ಆಗ್ರಹಿಸುತ್ತಿವೆ. ತೀರ್ಪು ಬಂದ ಒಂದು ದಿನದ ಬಳಿಕ  ಬಂದ್ ಆಚರಿಸುವುದಾಗಿ ಮುಸ್ಲಿಂ ಮುಖಂಡರು ಹೇಳಿದ್ದರು.

ಕೋಮುದ್ವೇಷ: ರಿಪೋರ್ಟ್ ಮಾಡುವುದು ಹೇಗೆ?

ಕೋಮುದ್ವೇಷ ಹರಡುವುದು ಫೇಸ್‌ಬುಕ್‌ ಕಮ್ಯುನಿಟಿ ನಿಯಮಗಳ ಉಲ್ಲಂಘನೆಯಾಗಿರುತ್ತದೆ. ಹೀಗಾಗಿ ಸಂಬಂಧಪಟ್ಟ ಪೋಸ್ಟ್‌ನಲ್ಲಿ ಬಲಭಾಗದಲ್ಲಿನ ಮೂರು ಚುಕ್ಕೆಗಳನ್ನು ಕ್ಲಿಕ್ ಮಾಡಿ, ‘ರೀಪೋರ್ಟ್ ಪೋಸ್ಟ್‌’ ಆಯ್ಕೆ ಮಾಡಿದರೆ, ಯಾವ ಆಯಾಮದ ಪೋಸ್ಟ್‌ ಎಂದು ಫೇಸ್‌ಬುಕ್ ಕೇಳುತ್ತದೆ. ಪೋಸ್ಟ್‌ಗೆ ಸಂಬಂಧಿಸಿದ ಆಯಾಮಗಳನ್ನು (ಉದಾಹರಣೆಗೆ ‘hate speech’, violence) ಆಯ್ಕೆ ಮಾಡಿ ರಿಪೋರ್ಟ್ ಮಾಡಬಹುದು.


ಇದನ್ನೂ ಓದಿರಿ: ಕನ್ನಡ ಚಿತ್ರರಂಗಕ್ಕೆ ಹೊಸ ಕ್ರಿಯಾಶೀಲತೆ ತಂದುಕೊಟ್ಟ ’ಅಪ್ಪು ಡ್ಯಾನ್ಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. The judgement of the Karanataka High Court on Hijab shows how the facist BJP has hijacked the judiciary of the country. May God have mercy upon our land, sweet homeland, free Her from the clutches of the destructive forces. Jai Hind!

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...